ಇದ್ಯಾವುದಪ್ಪ ಹೊಸ ಕಥೆ, ಆಗಸ್ಟ್ 15 ಅಲ್ವಾ ನಮ್ಮ ಸ್ವಾತಂತ್ರೋತ್ಸವ? ಅಂತ ಅನಿಸುತ್ತಿದ್ದರೆ ಅದು ಆಶ್ಚರ್ಯ ಅಲ್ಲ, ಅವಮಾನ ನಿಮಗೆ ಎಂದು ತಿಳಿಯಿರಿ. 21-10-1943ರಂದೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟದ ಫಲವಾಗಿಯೇ ಭಾರತದ ಪ್ರಥಮ ಸರ್ಕಾರ ಆಜಾದ್ ಹಿಂದ್ ಸರ್ಕಾರ್ ಸ್ಥಾಪಿತವಾದ ದಿನ. ಹೌದು ನಮ್ಮ ದೇಶದ ಇತಹಾಸ ತಿಳಿಯದೆ ಇದ್ದರೆ ಅದು ಅವಮಾನವೇ ಸರಿ. ಆಗಂತ ನಾನೆನು ಸಾಚಾ ಅಲ್ಲ ನಾನು ಸಾಕಷ್ಟು ವಿಚಾರ ಈಗಷ್ಟೇ ತಿಳಿದುಕೊಳ್ಳುತ್ತಿರುವೆ. ಅವಮಾನ ನನ್ನ ಮನಸ್ಸಿಗೂ ಇದೆ. ಇಂತಹ ನೈಜ ಇತಿಹಾಸಗಳು ತಿಳಿಯದೇ ಇರುವುದಕ್ಕೆ ಕಾರಣ ನಾ ಹೇಳುವ ಅವಶ್ಯಕತೆ ಇಲ್ಲ ? ನಿಮಗೂ ತಿಳಿದಿರುತ್ತೆ.
ಬೋಸ್ ರವರಿಗೆ ಜೀವನಕ್ಕೆ ತಿರವು ನೀಡಿದ ಸಂದರ್ಶನ ಅಂದರೆ 1940ರ ಜೂನ್ 22ರಂದು ಆಗಾಗಲೇ ಕ್ರಾಂತಿಕಾರಿಗಳನ್ನು ಉತ್ಪಾದನೆ ಮಾಡುವ ಕಾರ್ಖಾನೆ ಸ್ಥಾಪಿಸಿದ್ದ ಕ್ರಾಂತಿರತ್ನ ನನ್ನ ಆರಾಧ್ಯ ವೀರ ಸಾವರ್ಕರ್ ರವರ ಬೇಟಿಮಾಡುವ ಸೌಭಾಗ್ಯ ದೊರೆಯಿತು. ಸಾವರ್ಕರ್ ಬೇಟಿಯ ಗಳಿಗೆಯಲ್ಲೆ ರಾಮಕೃಷ್ಣ ಪರಮಹಂಸರು ಸ್ವಾಮಿ ವಿವೇಕಾನಂದರಿಗೆ ಕಾಯುತ್ತಿದ್ದಂತೆ ಬೋಸ್ ರನ್ನು ಕಂಡ ತಕ್ಷಣ ನೀ ಎಂದು ಬರುವೆ ಎಂದು ಕಾಯುತ್ತಿದ್ದೆ ಕೊನೆಗೂ ಬಂದೆಯಲ್ಲ ಈಗ ಮುಂದಿನ ನಡೆ ಏನು ಎಂದು ವಿಚಾರಿಸಿದರು . ಬೋಸ್ ರವರು ನಾ ಬ್ರಿಟಿಷ್ ರ ಮೂರ್ತಿಗಳನ್ನು ದ್ವಂಸಗೊಳಿಸಬೇಕೆಂದಿರುವೆ ಎಂದಾಗ ಸಾವರ್ಕರ್ ಬೇಸರಗೊಂಡು ನೀ ಜೀವಂತವಿರುವ ಬ್ರಿಟಿಷ್ ರನ್ನೆ ಹೊಡೆಯವ ತಾಖತ್ ಇರುವಾಗ ಸತ್ತ ಹೆಣದಂತ್ತಿರುವ ಮೂರ್ತಿಯಾಕೆ?. ನೀ ಮೂರ್ತಿ ಹೊಡೆದರೆ ನಮ್ಮ ಹಣದಿಂದಲೆ ಮತ್ತೆರಡು ಕಟ್ಟಿಸುತ್ತಾರೆ ನೀ ಹೊಡೆಯುವಂತಿದ್ದರೆ ಜೀವಂತ ಆಂಗ್ಲ ಸಿಪಾಯಿಗಳನ್ನು ಹೊಡೆದು ದೇಶದಿಂದ ತೊಲಗಿಸು ಎಂದು ಹೇಳುತ್ತಾರೆ. ಸುಭಾಷರು ನಾ ಒಬ್ಬನೇ ಹೇಗೆ ಸಾಧ್ಯ ಎಂದೇಳಿದಾಗ. ಸಾವರ್ಕರ್ ರವರು ಜಪಾನ್ ದೇಶದಲ್ಲಿ ಈಗಾಗಲೇ ಭಾರತಸೇನೆಯನ್ನು ಸಿದ್ದಪಡಿಸುತ್ತಿದ್ದರೆ ರಾಸ್ ಬಿಹಾರಿ ಬೋಸ್ ರವರು. ನೀವು ಹೇಗಾದರು ಮಾಡಿ ಜಪಾನ್ ತಲುಪಿ ಅದರ ನೇತೃತ್ವ ತೆಗೆದುಕೊಂಡು ಆಂಗ್ಲ ಸಿಪಾಯಿಗಳ ಮೇಲೆ ಆಕ್ರಮಣಕ್ಕೆ ಬನ್ನಿ ನಾ ದೇಶದ ಒಳಗಡೆಯಿಂದ ಕ್ರಾಂತಿಕಾರಿಗಳನ್ನು ನಿಮ್ಮ ಸೇನೆ ಸೇರಲು ಪ್ರೇರೆಪಿಸುವೆ ಎಂದೇಳುತ್ತಾರೆ. ಹೇಳಿದ್ದೆ ತಡ ಮಹಾತ್ಮ ನೇತಾಜಿ ಬೋಸ್ ರವರು ಮರುಮಾತಾಡದೆ ಕಾರ್ಯಪ್ರವೃತ್ತರಾದರು. ಅಷ್ಟರಲ್ಲೇ ಬೋಸ್ ಜುಲೈ 2ರಂದು ಬಂಧನ, ರಾಜದ್ರೋಹದ ಆರೋಪ ಹೊರಿಸಿ ಗೃಹಬಂಧನ. ಇದೇ ಅವಕಾಶ ಎಂದು ಗಡ್ಡ ಮೀಸೆ ಬೆಳೆಸಿ ಗೃಹಬಂಧನದಿಂದ ಆಶ್ಚರ್ಯಕರ ರೀತಿಯ ಪಲಾಯನ ಇಲ್ಲಿಂದ ಶುರು ಆಗುತ್ತೆ ಪ್ರಪಂಚ ಬೆರಗಾಗುವ ನೇತಾಜಿರವರ ಸಾಹಸ
ಭಾರತೀಯ ಯುವಜನಾಂಗದ ಆಸೆ ಆಕಾಂಕ್ಷೆಗಳ ಮೂರ್ತಿವೆತ್ತ ರೂಪ. ಭಾರತಕ್ಕೆ ಪೂರ್ಣ ಸ್ವಾತಂತ್ಯ್ರ ತಂದುಕೊಡಲು ದೇಶದೊಳಗಡೆಯಷ್ಟೆ ಸಾಲದು ಹೊರದೇಶಗಳಲ್ಲೂ ಸಂಚರಿಸಿ ಭಾರತ ಭಕ್ತರ ಶಕ್ತಿ ಸಂಚಯಿಸಿ ಹೋರಾಡಲು ಚಿಂತಿಸಿದರು. ಯುದ್ಧಕಾಲದಲ್ಲಿ ಜರ್ಮನಿಯ ಪರವಾಗಿ ರಷ್ಯಾ ಇರುವುದರಿಂದ ಇಂಗ್ಲೆಂಡಿನ ಕೋಪಕ್ಕೊಳಗಾಗಿದ್ದು, ಶತ್ರುವಿನ ಶತ್ರು ನಮ್ಮ ಮಿತ್ರ ಎಂಬ ರಣನೀತಿಗನುಸಾರ ಅವರನ್ನು ಬಳಸಿಕೊಳ್ಳಲು ರಷ್ಯಾಕ್ಕೆ ಹಾರಲು ನಿರ್ಧಾರ. ಜಿಯಾಉದ್ದೀನ್ ಹೆಸರಲ್ಲಿ ಗಡ್ಡಾಮೀಸೆ ಬೆಳೆಸಿ ವೇಷ ಮರೆಸಿ ಪೇಷಾವರ್ ಮಾರ್ಗವಾಗಿ ಮಾರ್ಗದಲ್ಲಿ ಬಂದ ಅಡ್ಡಿಗಳನ್ನು ಚತುರತೆಯಿಂದ ನಿಭಾಯಿಸಿ ಕಾಬೂಲ್ ತಲುಪುತ್ತಾರೆ.
ಸ್ಥಳೀಯ ರೇಡಿಯೊ ವ್ಯಾಪಾರಿ ಉತ್ತಮಚಂದರು ಆಶ್ರಯ ನೀಡುತ್ತಾರೆ. (ಈ ಸತ್ಕಾರ್ಯಕ್ಕೆ ಪ್ರತಿಫಲವಾಗಿ ಅವರು ಜೈಲಿಗೂ ಹೋಗುತ್ತಾರೆ!). ರೋಮ್ ಅಥವಾ ಮಾಸ್ಕೋ ಪಾಸ್ ಪೋರ್ಟ್ ಗೆ ಪ್ರಯತ್ನಿಸುತ್ತಾರೆ. ಅಂತಿಮವಾಗಿ ಬರ್ಲಿನ್ಗೆ ಹೊರಟಾಗ ಅವರ ಪಾಸ್ ಪೋರ್ಟ್ ನಲ್ಲಿದ್ದ ಮೊಝಾತಿಓ (ಇಟಾಲಿಯನ್ ಹೆಸರು) ಹೆಸರಲ್ಲೇ ಮುಂದಿನ ಕಾರ್ಯ ನಡೆಸುತ್ತಾರೆ.
1941ರ ಜನವರಿ 15ರಂದು ಪ್ರಾರಂಭವಾದ ಅವರ ಪಲಾಯನ ಮಾರ್ಚ್ 28ಕ್ಕೆ ಮುಕ್ತಾಯವಾಯಿತು.
ಮಾರ್ಚ್ 28ಕ್ಕೆ ಬರ್ಲಿನ್ಗೆ ತಲುಪಿ ಹಿಟ್ಲರನ ಭೇಟಿ ಮಾಡಿದರು. ಮೊದಲ ಯುದ್ಧದಲ್ಲಿ ವಿಫಲವಾದ ಉದ್ದೇಶದ ಪೂರ್ತಿಗಾಗಿ ಕೆಳಬಿದ್ದ ಹೋರಾಟದ ಧ್ವಜವನ್ನು ಕೈಗೆತ್ತಿಕೊಂಡರು. ಸುತ್ತಲ ರಾಜ್ಯಗಳ ಸ್ವಾತಂತ್ರ ಕಬಳಿಸಿದ್ದ ಹಿಟ್ಲರರನೇನೂ ಉದಾತ್ತ ಉದ್ದೇಶದಿಂದ ಸಹಕರಿಸುವುದಿಲ್ಲ ಎಂದು ಸುಭಾಷರಿಗೆ ತಿಳಿದಿತ್ತು. ಆದರೆ ಬ್ರಿಟಿಷರಿಗೆ ಕ್ರಾಂತಿಕಾರಿಗಳು ಕಿರುಕುಳ ಕೊಡಲೆಂದು ಕೈ ಜೋಡಿಸವನೆಂಬಾಸೆಯಿತ್ತು. ಅದೂ ಅಲ್ಲದೆ ಲಿಬಿಯಾದಲ್ಲಿ ಯಶಸ್ವಿ ಯುದ್ಧ ಮಾಡುತ್ತಿದ್ದ ಸೈನಿಕರಲ್ಲಿ ಹೆಚ್ಚಿನವರು ಭಾರತೀಯರೆಂದು ಹಿಟ್ಲರನಿಗೆ ತಿಳಿದಿತ್ತು. ಅವರು ದಂಗೆ ಏಳಬೇಕೆಂಬುದು ಹಿಟ್ಲರನ ಇಚ್ಛೆ. ಇಷ್ಟಿದ್ದರೂ ಸ್ವಾಭಿಮಾನಿ ಸುಭಾಷರು ಸ್ಪಷ್ಪ ಮಾತುಗಳಲ್ಲಿ ಆತನಿಗೆ ಹೇಳಿದ್ದೆಂದರೆ ಜರ್ಮನ್ ರೇಡಿಯೋ ಬಿಟ್ಟುಕೊಡಬೇಕು, ತನ್ಮೂಲಕ ದೇಶಬಾಂಧವರ ಜಾಗೃತಿ ಮಾಡಬಹುದು. ವಶದಲ್ಲಿರುವ ಭಾರತೀಯ ಸೈನಿಕರನ್ನು ಒಪ್ಪಿಸಬೇಕು. ನಂತರ ಜರ್ಮನಿ ಮತ್ತು ಮಿತ್ರರಾಷ್ಟ್ರಗಳು ಕ್ರಾಂತಿ ಸೈನ್ಯಕ್ಕೆ ಸಹಕರಿಸುವುದಾಗಿ ಪ್ರಕಟಿಸಬೇಕು. ಮುಖ್ಯ ಕಛೇರಿಯಲ್ಲಿ ಭೇಟಿ. ನಕ್ಷೆ ತೋರಿಸಿ ದೂರದ ನೆಪವೊಡ್ಡಿ ಹಿಂದೆ ಸರಿದ ಹಿಟ್ಲರ್.
ಇಟಲಿ ವಿದೇಶ ಮಂತ್ರಿ ಕಿಯಾನೋ ಮೂಲಕ ಮುಸಲೋನಿ ಭೇಟಿ – ಮಾತುಕತೆ. ಆತ ರೋಮ್ ನಲ್ಲಿದ್ದು ಹಂಗಾಮಿ ಸರ್ಕಾರ ರಚಿಸಲು ಸಲಹೆ ನೀಡಿದ. ಆದರೆ ಸಿದ್ಧತೆ ಸಾಲದು, ಅದಲ್ಲದೇ ಏಷ್ಯಾ ಖಂಡದಲ್ಲಿ ಸ್ಥಾಪಿಸಿದಲ್ಲಿ ಮುಂದಿನ ಯೋಜನೆಗೆ ಸಹಕಾರಿ ಎಂಬುದು ಸುಭಾಷರ ನಿಲುವು. ಸಹಾಯಕ್ಕೆ ಸಿದ್ಧನೆಂದ ಮುಸಲೋನಿ.
ಈ ನಡುವೆ ಇಟಲಿ-ಜರ್ಮನಿಯ ಭಾರತೀಯ ಯುದ್ಧ ಕೈದಿಗಳ ಭೇಟಿ ಮುಂದುವರೆಯಿತು. ದೇಶಭಕ್ತಿ ಜಾಗೃತಿ, ಸ್ವತಂತ್ರ ಯೋಧರ ಶಿಬಿರ ಕಂಡು ಸುಭಾಷರಿಗೆ ಸಮಾಧಾನ. 3 ಬೆಟಾಲಿಯನ್ಗಳಾಗಿ ವಿಂಗಡನೆ. ಹೊಸ ಸೈನಿಕರು ಜರ್ಮನ್ ಸೈನ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಗುಪ್ತಚರರ ಕೆಲಸ ನಿರ್ವಹಿಸಿ ಬೆಟಾಲಿಯನ್ ಗಳು ವಾಯುವ್ಯ ಪ್ರಾಂತ ಪ್ರವೇಶಿಸಿದಾಗ ನಾಗರೀಕರು ಸಹಕರಿಸಲು ಸಿದ್ಧಗೊಳಿಸುವುದು. ವಾಯುವ್ಯ ಪ್ರಾಂತ ಕೈವಶವಾದಲ್ಲಿ ಭಾರತದಲ್ಲಿನ ಬ್ರಿಟಿಷ್ ರಕ್ಷಣಾ ವ್ಯೂಹ ಕುಸಿಯುವುದೆಂಬ ಯೋಚನೆ. ತಮ್ಮ ಕಚೇರಿಗೆ ಆಜಾದ್ ಹಿಂದುಸ್ತಾನ ಕೇಂದ್ರ’ ಎಂದು ಹೆಸರಿಟ್ಟರು.
1941 ಡಿಸೆಂಬರ್ ಮಧ್ಯದಲ್ಲಿ ‘ಆಜಾದ್ ಹಿಂದ್ ಆಕಾಶವಾಣಿ ನಿಲಯ ಆರಂಭಿಸಿದರು. ರಾಷ್ಟ್ರಗೀತೆಯ ನಂತರ ‘ಜೈ ಹಿಂದ್’ ಘೋಷಣೆ ಮೊಳಗಿಸಲಾಗುತ್ತಿತ್ತು. ಸಮವಸ್ತ್ರ ಧರಿಸಿದ ಸುಭಾಷರನ್ನು ಸೈನಿಕರು ಪ್ರೀತಿಯಿಂದ ‘ನೇತಾಜಿ’ ಎನ್ನಲಾರಂಭಿಸಿದರು. ಬ್ರಿಟಿಷ್ ಸೈನ್ಯ ಶಕ್ತಿಯನ್ನು ಸದೆಬಡಿಯುತ್ತಾ ಜಪಾನ್ ಸೈನ್ಯ ಹಾಂಕಾಂಗ್, ಈಸ್ಟ್ ಇಂಡೀಸ್, ಬರ್ಮಾ ಮುಂತಾದ ದೇಶಗಳನ್ನು ಗೆದ್ದು ಭಾರತದ ಪೂರ್ವಗಡಿ ತಲುಪಿತು. ಬ್ರಿಟಿಷ್ ಸಿಂಗಾಪುರ ಬಿಟ್ಟು ಬರ್ಮಾದೆಡೆ ಓಟ ಕೀಳುವುದನ್ನು ಕಂಡು ಸ್ವತಃ ಸುಭಾಷರೇ 1942 ಫೆ.22ರಂದು ಸ್ವತಃ ಆಕಾಶವಾಣಿ ಭಾಷಣ ಮಾಡಿದರು. ‘ನಾವಿದುವರೆಗೆ ಕಾದಿದ್ದ ಕ್ಷಣ ಬಂದಿದೆ. ಬ್ರಿಟಿಷ್ ಸಾಮ್ರಾಜ್ಯ ಮುರಿದು ಬೀಳುತ್ತಿದೆ. ಭಾರತ ಸ್ವಾತಂತ್ರ್ಯ ಸಮೀಪಿಸಿದೆ. ಬ್ರಿಟನ್ ಶತ್ರು ರಾಷ್ಟ್ರಗಳೆಲ್ಲಾ ಒಟ್ಟಾಗಿ ಸಾಮ್ರಾಜ್ಯದ ಅಂತಿಮ ವಿಸರ್ಜನೆ ಮಾಡೋಣ. ಇದಕ್ಕಾಗಿ ನಾವು ಬ್ರಿಟಿಷರ ವಿರುದ್ಧ ಯುದ್ಧ ಘೋಷಿಸಿದ್ದೇವೆ’ ಎಂದು ಭಾರತೀಯ ಸೈನಿಕರನ್ನು ಹುರಿದುಂಬಿಸಿದರು.
ಸುಭಾಷರೊಡನೆ ಚರ್ಚಿಸಲು ಜಪಾನ್ ಪ್ರಧಾನಿ ಟೋಜೋರಿಂದ ಆಹ್ವಾನ. ರಾಸ್ಬಿಹಾರಿಯವರೊಡನೆ ಸಹಭಾಗಿಯಾಗಲು ನಿಶ್ಚಯ. ಅವರು ಪೂರ್ವ ಏಷ್ಯಾದ ಭಾರತೀಯ ಕ್ರಾಂತಿಕಾರಿಗಳ ಸಮ್ಮೇಳನವನ್ನು ಬ್ಯಾಂಕಾಕ್ ನಲ್ಲಿ ಆಯೋಜಿಸಿದ್ದರು. ಸುಭಾಷರು ತಮ್ಮ ಸಂದೇಶದಲ್ಲಿ “ಜಗತ್ತಿನ ಭಾರತೀಯರೆಲ್ಲ ಒಗ್ಗೂಡಿ ಪರರನ್ನವಲಂಬಿಸದೇ ಸ್ವಾತಂತ್ರ್ಯಯುದ್ಧ ಆರಂಭಿಸುವ ಕಾಲಬಂದಿದೆ’ ಎಂದು ತಿಳಿಸಿದ್ದರು.
ಬ್ರಿಟಿಷರ ಅಪಪ್ರಚಾರಕ್ಕೆ ಬಲಿಯಾಗಿ ಕಾಂಗ್ರೆಸ್ ನವರೂ ತಮ್ಮ ವಿಷಯದಲ್ಲಿ ತಪ್ಪು ತಿಳಿದಿದ್ದು ಸುಭಾಷರಿಗೆ ನೋವುಂಟುಮಾಡಿತ್ತು. ಬಾನುಲಿ ಭಾಷಣದಲ್ಲಿ ಗುರಿ ಸಾಧನೆಗಾಗಿ ಜರ್ಮನ್-ಇಟಲಿ-ಜಪಾನ್ ಸಹಕಾರ ಕೇಳಿರುವೆ. ಅವರ ಹಸ್ತಕವಲ್ಲ. ಹಿಂದೂಸ್ಥಾನದ ಸ್ವಾತಂತ್ರ ಬಿಟ್ಟು ಬೇರಾವ ಶಬ್ದಗಳೂ ನನಗೆ ಪ್ರಿಯವಲ್ಲ. ಭಾರತ ಸ್ವತಂತ್ರಗೊಂಡ ತಕ್ಷಣವೇ ಮಾತೃಭೂಮಿಯ ಸೇವೆಗೆ ಓಡೋಡಿ ಬರುವೆ ಎಂದು ಸಾರಿದರು.
ತಮ್ಮ ಸ್ವತಂತ್ರ ಹಿಂದೂಸ್ಥಾನ ಕೇಂದ್ರಕ್ಕೆ ಕಾಂಗ್ರೆಸ್ ತಿರಂಗಿ ಧ್ವಜವನ್ನೇ ಆರಿಸಿಕೊಂಡಿದ್ದರು. ಚರಖದ ಬದಲು ಹಾರುವ ಹುಲಿಯ ಚಿತ್ರ ನಿರ್ಧರಿಸಿದ್ದರು. 1943 ಜನವರಿಯಲ್ಲಿ ಪ್ಯಾರಿಸ್ ಗೆ ಹೋಗಿದ್ದರು. ಜಪಾನ್ ಪ್ರಯಾಣ ನಿಶ್ಚಯವಾದುದು ತಿಳಿದು ಬರ್ಲಿನ್ ಗೆ ವಾಪಸ್ಸಾದರು. ಜನವರಿ 26ರಂದು ಭಾರತ ಸ್ವಾತಂತ್ರ ದಿನವನ್ನು 600 ಪ್ರಮುಖ ನಾಗರಿಕರೊಡನೆ ಆಚರಿಸಿದರು. 28ರಂದು ಭಾರತೀಯ ಸೈನಿಕರ ಮುಂದೆ ಕಡೇ ಭಾಷಣ- ಸ್ವತಂತ್ರ ಭಾರತದ ಚರಿತ್ರೆಯಲ್ಲಿ ನಿಮ್ಮ ಹೆಸರು ಸುವರ್ಣಾಕ್ಷರದಲ್ಲಿ ಬರೆಯಲ್ಪಡುವುದು. ಭಾರತ ಪ್ರವೇಶ ನಿಶ್ಚಿತ. ಜೈ ಹಿಂದ್
1943 ಫೆ.8 ಹ್ಯಾಂಬರ್ ಬಂದರಿನಿಂದ ಜಲಾಂತರ್ಗಾಮಿಗೆ ಹಾಸನ್ ರೊಡನೆ ಪ್ರವೇಶಿಸಿ ಜಪಾನ್ಗೆ ಜೂನ್ 13ರಂದು ಪರಿಶ್ರಮದ ಪ್ರಯಾಣದ ನಂತರ ರಾಜಧಾನಿಗೆ ಕಾಲಿಟ್ಟರು. ಈ ದೀರ್ಘ ಅವಧಿಯಲ್ಲಿ ‘ದಿ ಇಂಡಿಯನ್ ಸ್ಟ್ರಗಲ್’ನ ಹೊಸ ಆವೃತ್ತಿ ಸಿದ್ಧಪಡಿಸುತ್ತಿದ್ದರು. ಜಪಾನಿಗೆ ಸುಭಾಷರು ಬಂದುದು ಪೂರ್ವ ಏಷ್ಯಾದಲ್ಲಿ ಭಾರತೀಯರಿಗೆ ರೋಮಾಂಚನ ಉಂಟುಮಾಡಿತು. ಪ್ರಧಾನೀ ಟೋಜೋರೊಂದಿಗೆ ಮಾತುಕತೆಯಲ್ಲಿ ಆಜಾದ್ ಹಿಂದ್ ಸೈನ್ಯವು ಜಪಾನ್ ಸಹಕಾರದಿಂದ ಬ್ರಿಟಿಷರೊಡನೆ ಯುದ್ಧಮಾಡಿ ಆಡಳಿತ ಮಾಡುವುದು” ಎಂದು ಸ್ಪಷ್ಟಪಡಿಸಿದರು. ಜೂನ್ 16ರಂದು ಜಪಾನ್ ಸಂಸತ್ತಿನಲ್ಲಿ ಭಾರತೀಯರ ಪ್ರಯತ್ನಕ್ಕೆ ಬೆಂಬಲವಿದೆ ಎಂದು ಟೋಜೋ ಘೋಷಿಸಿದರು. ರಾಸ್ ಬಿಹಾರಿಯವರು ಈಗಾಗಲೇ ಸ್ಥಾಪಿಸಿದ ಅವರ ದಿ ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಕುರಿತು ನೇತಾಜಿ ತಿಳಿದುಕೊಂಡರು.
ಜೂನ್ 19ರಂದು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಕಾರ್ಯದ ರೂಪುರೇಷೆ ವಿವರಿಸಿದರು. ಪೂರ್ವ ಏಷ್ಯಾದ ಭಾರತೀಯರನ್ನುದ್ದೇಶಿಸಿ ಆಕಾಶವಾಣಿಯ ಮೂಲಕ ಎರಡು ಭಾಷಣ ಮಾಡಿದರು. ಬ್ರಿಟಿಷರ ಮತ್ತು ಕಾಂಗ್ರೆಸ್ ನ ಕೆಲವು ಹಳೆಯ ವಿರೋಧಿಗಳ ಅಪಪ್ರಚಾರಕ್ಕೆ ದೇಶಬಾಂಧವರು ಮೋಸ ಹೋಗಬಾರದೆಂದು ಜೂನ್ 24ರ ತಮ್ಮ ಟೋಕಿಯೋ ಭಾಷಣದಲ್ಲಿ ನನ್ನ ಮೇಲೆ ನಂಬಿಕೆಯಿಡಿ. ಯಾರ ಕುಟಿಲ ಪ್ರಯೋಭನೆಗೂ ಒಳಗಾಗಲಾರೆ. ಬ್ರಿಟಿಷರಿಗೆ ಪೆಟ್ಟು ನೀಡಿದ ದೇಶಗಳ ಸಹಾಯದಿಂದಲೇ ಸ್ವಾತಂತ್ರಗಳಿಸುವನೆಂಬ ಭ್ರಮೆ ನನಗಿಲ್ಲ. ನಮ್ಮ ರಕ್ತಚೆಲ್ಲಿಯೇ ಗಳಿಸುವ-ರಕ್ಷಿಸುವ ಜವಾಬ್ದಾರಿ ನಮ್ಮ ಮೇಲೆಯೇ ಇದೆ ಎಂದು ಘೋಷಿಸಿದರು.
ಜುಲೈ 2ರ ಸಿಂಗಾಪುರ ಭೇಟಿ ನೀಡಿ ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ನ ಅಧ್ಯಕ್ಷರಾಗಿ ಆಯ್ಕೆಯಾದರು. ಹೀಗೆ ಭಾರತದ ಹೊರಗೆ ಆರಂಭಿತ ಸಶಸ್ತ್ರ ಕ್ರಾಂತಿಯ ಸೇನಾಧಿಪತಿಯಾದರು. ಸೈನಿಕರ ಮೆಚ್ಚಿನ ನೇತಾಜಿಯಾದರು. ಜುಲೈ 5ರಂದು ಆಜಾದ್ ಹಿಂದ್ ಸೈನ್ಯದ ಶಸ್ತ್ರಧಾರಿ ವೀರಯೋಧರನ್ನುದ್ದೇಶಿಸಿ ಚಲೋ ದಿಲ್ಲಿ ಕರೆಕೊಟ್ಟರು. ಅವರ ಸುಪ್ರಸಿದ್ದ ತುಮ್ಮುಝೇ ಖೂನ್ದೋ ಮೈ ತುಝೆ ಆಜಾದ್_ದೂಂಗಾ! (ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ ಕೊಡುತ್ತೇನೆ! ಎಂದು ಘರ್ಜನೆ ಮೊಳಗಿದ್ದಿಲ್ಲೇ. ಜುಲೈ 6 ಆಜಾದ್ ಹಿಂದ್ ಸೇನೆಯ 60000 ಸಾವಿರ ಸೈನಿಕರ ಪೆರೇಡ್ ಗೆ ಜಪಾನ್ ಪ್ರಧಾನಿ ಟೋಜೋರರವರೂ ಬಂದಿದ್ದರು.
ಆಗಸ್ಟ್ ನಲ್ಲಿ ಬರ್ಮಾ ಸ್ವಾತಂತ್ರ್ಯೋತ್ಸವಕ್ಕಾಗಿ ರಂಗೂನ್ ಪ್ರಯಾಣ. ನಂತರ ಬ್ಯಾಂಕಾಕ್-ಸೈಹಾನ್ ಗೂ ಭೇಟಿ. ಸೈನ್ಯ ಬಲಪಡಿಸಲಿಕ್ಕಾಗಿ ಚರ್ಚೆ, ಪ್ರಯಾಣ, ಸಭೆ, ಸೈನಿಕರ ಪರೀಕ್ಷೆ, ಸಮಾಲೋಚನೆ, ಭಾಷಣ ಇತ್ಯಾದಿ ದಿನವಿಡೀ ಪರಿಶ್ರಮಿಸಿದರು. ಎಲ್ಲೆಡೆ ‘ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್’ ನ ಶಾಖೆ ತೆರೆದರು.
ಜಪಾನ್ ಸೇನೆಯ ಈಶಾನ್ಯ ಭಾರತದ ಇಂಫಾಲ್ ಪ್ರವೇಶ ಸಂದರ್ಭದಲ್ಲಿ ತಮ್ಮ ಸೈನ್ಯಕ್ಕೆ ಅವಕಾಶವಿಲ್ಲವೆಂದು ವಿರೋಧಿಸಿದಾಗ ಇದು ವಿಶ್ವಾಸಘಾತ. ಜಪಾನ್ ಪರಾಕ್ರಮದಿಂದ ಸಿಕ್ಕ ಸ್ವಾತಂತ್ರ್ಯ ಗುಲಾಮಗಿರಿಗಿಂತ ಹೇಯ. ನಮ್ಮ ದೇಶದ ಪ್ರತಿಷ್ಠೆಯ ಪ್ರಶ್ನೆ. ನಮ್ಮ ರಕ್ತಧಾರೆಯಿಂದಲೇ ಸ್ವಾತಂತ್ರ ಹೂವು ಅರಳಬೇಕು” ಎಂದು ಗುಡುಗಿದ್ದರು. ಮಲಯಾದಲ್ಲಿ ಸೈನಿಕರ ಪ್ರಶಿಕ್ಷಣ ಕೇಂದ್ರ ತೆರೆದು 3 ರೆಜಿಮೆಂಟ್ ಸ್ಥಾಪಿಸಿದರು. ಮೊದಲ ರೆಜೆಮೆಂಟ್ ಗೆ ‘ಸುಭಾಷ್ ರೆಜಿಮೆಂಟ್’, ಹುಡುಗರಿಗಾಗಿ ‘ಬಾಲಸೇನಾ’ ಮತ್ತು ಮಹಿಳೆಯರಿಗಾಗಿ ‘ಝಾನ್ಸಿ ರಾಣಿ ರೆಜಿಮೆಂಟ್’ ಎನ್ನಲಾಯಿತು. ‘ಬಹಾದ್ದೂರ್ ಘಟಕ’ ದ ಮೂಲಕ ಶತ್ರುವಿನ ಚಲನವಲನ ತಿಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಂಡರು.
ಬರ್ಮಾ-ಫಿಲಿಫೈನ್ಸ್ ನಂತೆಯೇ ತಮ್ಮ ಸೈನ್ಯಕ್ಕೂ ಸ್ವಾತಂತ್ರ್ಯ ಘೋಷಿಸಿ ಆಶ್ವಾಸನೆ ಪೂರೈಸಲು ಜಪಾನಿಗೆ ಕರೆಯಿತ್ತರು. ಆದರೆ ಕಾಯುತ್ತಾ ಕೂರಲಿಲ್ಲ. ಆಜಾದ್ ಹಿಂದ್ ಸರ್ಕಾರದ ಮಂತ್ರಿ ಮಂಡಲ ರಚಿಸಿದರು.
ಭಗವದ್ಗೀತೆಯನ್ನು ಸದಾ ಅಧ್ಯಯನ ಮಾಡುತ್ತಿದ್ದರು. ಸಾವರ್ಕರ್ ರ 1857ರ ಸ್ವಾತಂತ್ರ ಗ್ರಂಥದ ವಿಶೇಷ ಆವೃತ್ತಿ ಪ್ರಕಟಿಸಿ ಸೇನೆಯ ಉಪಯೋಗಕ್ಕೆ ಮೀಸಲಿಟ್ಟಿದ್ದರು.
1943 ಅಕ್ಟೋಬರ್ 21 ಸಿಂಗಾಪುರದ ಕೆಥೆ ಥಿಯೇಟರ್ ನಲ್ಲಿ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮಹಾದಂಡಾಧಿಪತಿ ವೇಷದಲ್ಲಿದ್ದ ನೇತಾಜಿ ಸುಭಾಷ್ ಚಂದ್ರ ಬೋಸರು ಕುಶಾಲು ತೋಪುಗಳ ಸೆಲ್ಯೂಟ ನಡುವೆ ‘ಆಜಾ಼ದ್ ಹಿಂದ್ ಸರ್ಕಾರ’ ಸ್ಥಾಪನೆಯನ್ನು ಘೋಷಿಸಿದರು-ಪ್ರತಿಜ್ಞೆ ಸ್ವೀಕರಿಸಿದರು. ತಮ್ಮದೇ ನೋಟು ಮುದ್ರಿಸಲು ಟೋಕಿಯೋ ಟಂಕಸಾಲೆಗೆ ಒಪ್ಪಿಸಲಾಯ್ತು. ರಾಷ್ಟ್ರಭಾಷೆ ಹಿಂದುಸ್ಥಾನಿ ಭಾರತದ ಧ್ವಜವಾಗಿ ತ್ರಿವರ್ಣ ಧ್ವಜ, ಪರಸ್ಪರ ವಂದಿಸುವಾಗ ಜೈಹಿಂದ್ ಘೋಷಣೆ… ತೀರ್ಮಾನಿಸಲಾಯ್ತು. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ BBCಯಲ್ಲಿ ಈ ವಿಷಯ ಪ್ರಮುಖ ಸುದ್ದಿಯಾಗಿ ಬಿತ್ತರಗೊಂಡಿತು. ಸುಭಾಷ್ ಚಂದ್ರ ಬೋಸರು ಆ ಸರ್ಕಾರದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಸುಭಾಷರೊಂದಿಗೆ ಸಚಿವ ಸಂಪುಟದ ಸದಸ್ಯರೂ ಸಹಾ ಪ್ರಮಾಣ ವಚನ ಸ್ವೀಕರಿಸಿ ಸುಭಾಷರಿಗೆ ತಮ್ಮ ನಿಷ್ಠೆಯನ್ನು ಘೋಷಿಸುತ್ತಾರೆ.
ರಾಸ್ ಬಿಹಾರಿ ಬೋಸರು ಸರ್ಕಾರದ ಸರ್ವೋಚ್ಛ ಸಲಹೆಗಾರರಾಗಿಯೂ, ಕ್ಯಾಪ್ಟನ್ ಲಕ್ಷ್ಮಿ ಸೆಹೆಗಲ್ ಮಹಿಳಾ ಸಂಘಟನಾ ಮಂತ್ರಿಯಾಗಿಯೂ, ಲೆಫ್ಟಿನೆಂಟ್ ಕರ್ನಲ್ ಚಟರ್ಜಿರವರು ವಿತ್ತ ಸಚಿವರಾಗಿಯೂ, ಮಾಹಿತಿ ಹಾಗೂ ಪ್ರಚಾರ ಖಾತೆ ಸಚಿವರಾಗಿ ಎಸ್. ಎ. ಅಯ್ಯರ್ ರವರೂ, ಸರ್ಕಾರದ ಕಾರ್ಯದರ್ಶಿಯಾಗಿ ಸಹಾಯ್ ರವರೂ, ಕಾನೂನು ಸಲಹೆಗಾರರಾಗಿ ಎ. ಎನ್. ಸರ್ಕಾರ್ ರವರೂ, ಸೇನೆಯ ಬೇರೆ ಬೇರೆ ವಿಭಾಗಗಳ ಮುಖ್ಯಸ್ಥರುಗಳೂ ಅಂದು ಸುಭಾಷರೊಂದಿಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಯುದ್ಧ ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಯನ್ನು ಸುಭಾಷರು ತಮ್ಮ ಬಳಿಯೇ ಇಟ್ಟುಕೊಳ್ಳುತ್ತಾರೆ. ಪೂರ್ವ ಏಷ್ಯಾದಲ್ಲಿ ನೆಲೆಸಿದ್ದ ಇಪ್ಪತ್ತು ಲಕ್ಷ ಜನ ಭಾರತೀಯರು ಮತ್ತು 50,000 ಕ್ಕೂ ಹೆಚ್ಚು ಆಜಾದ್ ಹಿಂದ್ ಫೌಜ್ ನ ಸೈನಿಕರು ಸುಭಾಷರನ್ನು ತಮ್ಮ ನಾಯಕನೆಂದು ಸ್ವೀಕರಿಸುತ್ತಾರೆ. ಹೊಸ ಸರ್ಕಾರಕ್ಕೆ ನಿಷ್ಠೆಯನ್ನು ವ್ಯಕ್ತಪಡಿಸುತ್ತಾರೆ. ಜನರು ದೇಶದ ಪೂರ್ಣ ಸ್ವಾತಂತ್ರ್ಯಕ್ಕಾಗಿ ತನು ಮನ ಧನಗಳನ್ನು ಅರ್ಪಿಸಲು ಸಿದ್ಧರಾದರೆ, ಸೈನಿಕರು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಯುದ್ಧದಲ್ಲಿ ಪ್ರಾಣ ಕೊಡಲು ಸಿದ್ಧವಿರುವುದಾಗಿ ಪ್ರಮಾಣ ಮಾಡುತ್ತಾರೆ.
ಅಜಾದ್ ಹಿಂದ್ ಸರ್ಕಾರ ರಚನೆಯಾದ ಕೇವಲ ಎರಡೇ ದಿನಗಳಲ್ಲಿ ಜಪಾನ್ ಆ ಸರ್ಕಾರಕ್ಕೆ ಮಾನ್ಯತೆ ನೀಡಿತು. ಕೂಡಲೇ ಜಪಾನ್ ಸೇರಿದಂತೆ ಚೀನಾ,ರಷ್ಯ, ಪ್ರಾನ್ಸ, ಸಿಂಗಪುರ,ಬರ್ಮಾ, ಜರ್ಮನಿ, ಕ್ರೋಷಿಯಾ, ಫಿಲಿಫೈನ್ಸ್, ನಾನ್ ಕಿಂಗ್,ಥೈಲ್ಯಾಂಡ್, ಕ್ರೋವೇಷಿಯಾ, ಸಯಾಂ, ಇಟಲಿ, ಮಾಂಚುಕುವೋನಂಥಾ ರಾಷ್ಟ್ರಗಳು ಆಜಾದ್ ಹಿಂದ್ ಸರ್ಕಾರವನ್ನು ಭಾರತ ಸರ್ಕಾರವೆಂದು ಸುಭಾಷರನ್ನು ಭಾರತದ ಪ್ರಧಾನ ಮಂತ್ರಿಯೆಂದು ಮಾನ್ಯತೆ ನೀಡಿದವು. ಈ ಎಲ್ಲಾ ದೇಶಗಳಲ್ಲೂ ದೂತವಾಸವನ್ನು ಸ್ಥಾಪಿಸಿ, ತನ್ನದೇ ಆದ ಅಂಚೇ ಚೀಟಿ,ಬ್ಯಾಂಕ್, ನ್ಯಾಯಾಂಗ ವ್ಯವಸ್ಥೆ, ಛಾಪಕಾಗದ, ನಾಣ್ಯ ಕರೆನ್ಸಿ ನೋಟುಗಳನ್ನು ಮುದ್ರಿಸಿ ಜೊತೆಗೆ ಜಪಾನ್ ದೇಶಕ್ಕೆ 100ಕೋಟಿ ಎನ್ (ಎನ್. ಜಪಾನ್ ದೇಶದ ಕರೆನ್ಸಿ ಹೆಸರು) ಸಾಲ ನೀಡಿತ್ತು ಆಜಾದ್ ಹಿಂದ್ ಸರ್ಕಾರ!.
ಅಂದು ನೇತಾಜಿ ರವರ ಪ್ರಮಾಣ ವಚನ ಹೀಗಿತ್ತು
ಸುಭಾಷ್ ಚಂದ್ರ ಬೋಸ್ ಎಂಬ ಹೆಸರಿನ ನಾನು ಈಶ್ವರನ ಮೇಲೆ ಆಣೆ ಮಾಡುತ್ತಾ ಶಪಥ ಮಾಡುತ್ತೇನೆ. ಹಿಂದುಸ್ಥಾನ ಮತ್ತು ನನ್ನ ಮೂವತ್ತೆಂಟು ಕೋಟಿ ದೇಶಬಾಂಧವರನ್ನು ದಾಸ್ಯದಿಂದ ಮುಕ್ತಗೊಳಿಸುವುದಕ್ಕಾಗಿ ನನ್ನ ಜೀವನದ ಕೊನೆಯ ಕ್ಷಣದವರೆಗೆ ಸ್ವಾತಂತ್ರ್ಯ ಯುದ್ಧದ ಪುಣ್ಯಜ್ವಾಲೆಯನ್ನು ಪ್ರಜ್ವಲಿಸುತ್ತೇನೆ. ಹಿಂದುಸ್ಥಾನದ ಸೇವಕನಾಗಿ ನನ್ನ ದೇಶಬಾಂಧವರಾದ ಬಂಧು ಭಗಿನಿಯರ ಸೇವೆ ಮಾಡುವುದು ನನ್ನ ಪರಮ ಕರ್ತವ್ಯವೆಂದು ಭಾವಿಸುತ್ತೇನೆ. ಸ್ವಾತಂತ್ರ್ಯ ದೊರೆತ ನಂತರ ದೇಶದ ರಕ್ಷಣೆಗಾಗಿ ನನ್ನ ರಕ್ತದ ಪ್ರತಿ ಹನಿಯನ್ನು ಅರ್ಪಿಸುತ್ತೇನೆ.
ನೇತಾಜಿ ಸುಭಾಷ್ ಚಂದ್ರ ಬೋಸರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವಾಗ ವಾತಾವರಣ ತೀವ್ರ ಭಾವೋತ್ಕರ್ಷದಿಂದ ಕೂಡಿತ್ತು. ದೇಶ ವಿದೇಶಗಳ ಅನೇಕ ಗಣ್ಯರೂ, ಪ್ರತಿನಿಧಿಗಳು ಈ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲು ಆಗಮಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ಎದ್ದು ನಿಂತು ಒಟ್ಟಾಗಿ ರಾಷ್ಟ್ರಗೀತೆ ಹಾಡಿದರು. ಭಾರತದಲ್ಲಿ ವಾಸಿಸುತ್ತಿದ್ದ ಜನಸಾಮಾನ್ಯರ ಮೇಲೂ ಸಿಂಗಪುರದಲ್ಲಿ ನಡೆದ ಈ ಘಟನೆ ಅತ್ಯಂತ ಮಹತ್ವದ ಪರಿಣಾಮ ಬೀರಿತು. ಸುಭಾಷರ ದನಿಯನ್ನು ರೇಡಿಯೋದಲ್ಲಿ ಕೇಳಿದ ಜನ ಭಾರತವನ್ನು ಬ್ರಿಟೀಷರ ಕಪಿಮುಷ್ಠಿಯಿಂದ ಬಿಡುಗಡೆಗೊಳಿಸಲು ನೇತಾಜಿ ಬಂದೇ ಬರುವರೆಂದು ನಂಬಿದರು. ನೇತಾಜಿಯವರ ಪ್ರತಿ ನಡೆ ಪ್ರತಿ ನುಡಿಯೂ ಅವರಿಗೆ ರೋಮಾಂಚನವನ್ನುಂಟು ಮಾಡುತ್ತಿತ್ತು.
ಸುಭಾಷರು ಹೆಸರಿಗೆ ಮಾತ್ರ ಒಂದು ಸರ್ಕಾರ ರಚಿಸಿ ಸುಮ್ಮನೆ ಕೈ ಕಟ್ಟಿ ಕೂರಲಿಲ್ಲ. ಒಂದು ದೇಶಕ್ಕೆ ಮತ್ತು ಜವಾಬ್ದಾರಿಯುತ ಸರ್ಕಾರಕ್ಕೆ ಇರಬೇಕಾದ ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ, ರಾಷ್ಟ್ರ ಭಾಷೆಯನ್ನು ನಿರ್ಧರಿಸಿದರು. ರಾಷ್ಟ್ರೀಯ ಸೈನ್ಯವನ್ನು ಕಟ್ಟಿ , ವಶಪಡಿಸಿಕೊಂಡ ರಾಜ್ಯಗಳಿಗೆ ರಾಜ್ಯಪಾಲರು, ಆಡಳಿತ ಪ್ರತಿನಿಧಿಗಳು, ಸೈನ್ಯಾಧಿಕಾರಿಗಳು, ಕಮಿಷನರುಗಳು, ಎಲ್ಲರನ್ನೂ ನೇಮಿಸಿದರು.
ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸುಭಾಷರು ಕೇವಲ ಎರಡೇ ದಿನಗಳಲ್ಲಿ ಇಂಗ್ಲೆಂಡ್ ಮತ್ತು ಅಮೆರಿಕಾ ದೇಶಗಳ ಮೇಲೆ ಯುದ್ಧ ಘೋಷಿಸಿದರು. ಜಪಾನಿ ಸೈನ್ಯದ ಸಹಕಾರದೊಂದಿಗೆ “ಚಲೋ ದಿಲ್ಲಿ” ಘೋಷಣೆ ಮಾಡಿ, ಬರ್ಮಾ ಮೂಲಕ ಭಾರತದ ಗಡಿಯೊಳಕ್ಕೆ ನುಗ್ಗುತ್ತಾರೆ. ಮಣಿಪುರ ಇಂಫಾಲ್ ಗಳನ್ನು ವಶಪಡಿಸಿಕೊಂಡ ಐ ಎನ್ ಎ ಅಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ರಾಷ್ಟ್ರ ಗೀತೆಯನ್ನು ಹಾಡಿ ಮಾತೃಭೂಮಿಯ ಭೂಭಾಗವನ್ನು ವಿಮೋಚನೆಗೊಳಿಸಿತು. ಸುಭಾಷರು ಯುದ್ಧಭೂಮಿಯ ಮುಂಚೂಣಿಯಲ್ಲಿ ನಿಂತು ಸೈನಿಕರನ್ನು ಹುರಿದುಂಬಿಸಿ ನಮ್ಮ ಪಾಲಿಗೆ ಅಸಾಧ್ಯವೆನಿಸಿದ್ದ ಜಯವನ್ನು ತಮ್ಮ ಪಾಲಿನದನ್ನಾಗಿಸಿಕೊಂಡರು.
ಅಂಡಮಾನ್-ನಿಕೋಬಾರ್ ದ್ವೀಪಗಳು ಸಮುದ್ರ ಯುದ್ಧಕ್ಕೆ ಮಹತ್ವಪೂರ್ಣವಾದುದಾಗಿತ್ತು. ಇದನ್ನು ತಮಗೆ ನೀಡಿದಾಗಲೇ ‘ಸಹಕಾರ’ದ ಮಾತಿಗೆ ನಿಜಾರ್ಥವೆಂದು ಟೋಜೋರಿಗೆ ಸ್ಪಷ್ಟಪಡಿಸಿದರು. ನವೆಂಬರ್ 5ರ ಟೋಕಿಯೋ ಸಮ್ಮೇಳನದಲ್ಲಿ ವೀಕ್ಷಕರಾಗಿ ಭಾಗವಹಿಸಿ ಮಾಡಿದ್ದ ಸುಭಾಷರ ಭಾಷಣದ ಭಾರತ ಸ್ವಾತಂತ್ರ್ಯಗೊಂಡರೆ ಪೂರ್ವ ಏಷ್ಯಾದಲ್ಲಿ ಆಂಗ್ಲೋ-ಅಮೇರಿಕನ್ ಸಾಮ್ರಾಜ್ಯಕ್ಕೆ ಚರಮಗೀತೆ ಹಾಡಿದಂತೆ ಎಂಬ ಸ್ಪಷ್ಟ ನುಡಿಗಳ ಪ್ರಭಾವದಿಂದಾಗಿ ಜಪಾನ್ ಅಧೀನದಲ್ಲಿದ್ದ ಎರಡು ದ್ವೀಪಗಳನ್ನು ಸುಭಾಷರಿಗೆ ಬಿಟ್ಟುಕೊಡಲಾಯಿತು. ತಕ್ಷಣವೇ ‘ಶಹೀದ್’ ಮತ್ತು ಸ್ವರಾಜ್ಯ’ ದ್ವೀಪವೆಂದು ನಾಮಕರಣ ಮಾಡಿದರು. ಡಿಸೆಂಬರ್ 29ರಂದು ಸುಭಾಷರು (ಅಂಡಮಾನ್) ಶಹೀದ್ ದ್ವೀಪಕ್ಕೆ ಭೇಟಿಯಿತ್ತು ಕ್ರಾಂತಿಕಾರರ ವಾಸ್ತವ್ಯದಿಂದ ಪುನೀತವಾದ ಸೆಲ್ಯೂಲರ್ ಜೈಲನ್ನು ಸಂದರ್ಶಿಸಿ ಪುಳಕಿತರಾದರು. ವೀರಸಾವರ್ಕರ್‘ಸೈನಿಕೀಕರಣ’ ಕಾರ್ಯಕ್ರಮದಿಂದಲೇ ತಮ್ಮ ಸೇನೆಗೆ ಸೈನಿಕರು ದೊರೆತದ್ದೆಂದು ತಿಳಿಸಿದರು. ಪೌರಾಡಳಿತವನ್ನು ಆಜಾ಼ದ್ ಹಿಂದ್ ಸರ್ಕಾರದ ಪರವಾಗಿ ನೋಡಿಕೊಳ್ಳಲು ಲೆ.ಕ.ಲೋಕನಾಥನ್ ರನ್ನು ಚೀಫ್ ಕಮೀಷನರ್ ಆಗಿ ನೇಮಿಸಿದರು.
1944 ಮಾರ್ಚ್ 19ರಂದು ಆಜಾದ್ ಹಿಂದ್ ಸೈನ್ಯ ಜಪಾನ್ ಸೇನೆಯೊಡನೆ ಭಾರತದ ಗಡಿ ಪ್ರವೇಶಿಸಿತು. ವರವಾದ ಪ್ರದೇಶಗಳ ಮೇಲೆ ಆಜಾದ್ ಹಿಂದ್ ಸರ್ಕಾರದ ಅಧಿಕಾರವಿರುತ್ತದೆಯೆಂದು’ 2 ದಿನಗಳ ನಂತರ ಜಪಾನ್ ಸಂಸತ್ತಿನಲ್ಲಿ ಟೋಜೋ ಘೋಷಿಸಿದರು. ಏಪ್ರಿಲ್ 7ರಂದು ‘ಇಂಫಾಲ’ ದ ಮೇಲೆ ಯುದ್ಧ ಪ್ರಾರಂಭವಾಯಿತು. ಮೊಯ್ ರಾಂಗ್ ಪ್ರದೇಶವನ್ನು ಮುಕ್ತಗೊಳಿಸಿ INA ಧ್ವಜ ನೆಡಲಾಯಿತು. ಹೀಗೆ ಭಾರತ ನೆಲದಲ್ಲಿ ಮೊದಲ ವಿಜಯ ಪ್ರಾಪ್ತಿಯಾಯಿತು. ಭಾರತ ಭೂಮಿಯ ಮೇಲೆ ಮೊದಲು INA ಸೈನಿಕರ ರಕ್ತ ಚೆಲ್ಲಬೇಕೆಂದೂ, ಸ್ವಾತಂತ್ರ್ಯ ಯುದ್ಧದ ಜನಕರೆಂಬ ಕೀರ್ತಿ ತಮ್ಮದಾಗಬೇಕೆಂಬ ಸುಭಾಷರ ಆಶಯ ಪೂರ್ತಿಯಾಯ್ತು. ಜಪಾನ್ ಜನರಲ್ ಮತಾಗುಚಿಯ ಆತುರದ ಯೋಚನೆಗಳು ಅಡ್ಡಿಯಾಯ್ತು. ದುರ್ಗಮ ಪರ್ವತ ಪ್ರದೇಶ, ಆಹಾರ ಸಾಮಗ್ರಿ-ಸೈನ್ಯ ಸಾಗಾಣಿಕೆಯ ಪರಿಶ್ರಮ, ಸಮೀಪವಿದ್ದ ಮಳೆಗಳ ಇವುಗಳ ಬಗ್ಗೆ ಗಂಭೀರ ಯೋಚನೆಯ ಕೊರತೆಯಿತ್ತು. ಇಂಫಾಲ್-ಕೊಹಿಯಾ ರಸ್ತೆ ಧ್ವಂಸ ಬೇಡ. ಬ್ರಿಟಿಷ್ ಸೈನ್ಯ ಅಲ್ಲೇ ಉಳಿದು ಸಹಾಯ ದೊರೆತಲ್ಲಿ ತಮಗೆ ಅಡ್ಡಿ ಬಂದ ಸುಭಾಷರ ಸಲಹೆಗೆ ಮತಾಗುಚಿ ಕಿವಿಗೊಡಲಿಲ್ಲ. ಬ್ರಿಟಿಷರ ಹತಾಶೆಯ ಮೋಸದ ನುಡಿಗಳಿಗೆ ಮತಾಗುಚಿ ಬಲಿಯಾಗಿದ್ದ.
ಪರಿಸ್ಥಿತಿ ಕಠಿಣವಾಗಿದ್ದರೂ ಸುಭಾಷರ ಸೈನ್ಯ ಮುನ್ನುಗುತ್ತಿತ್ತು. ಆದರೆ 1944 ಜುಲೈ 26ರಂದು ಜಪಾನ್ ಸೋತು ಯುದ್ಧ ನಿಲ್ಲಿಸಿರುವುದಾಗಿ ಘೋಷಿಸಿಬಿಟ್ಟಿತು. ಹವಾಮಾನ ಅನುಕೂಲವಾದಾಗ ಮತ್ತಷ್ಟು ಬಲವಾದ ಸೈನ್ಯ ನಿರ್ಮಿಸಿ ಹೋರಾಡೋಣ ಎಂದು ಆಲೋಚಿಸಿ, ಸೂಕ್ಷ್ಮ ಅವಲೋಕನದಿಂದಾಗಿ ರಷ್ಯಾದ ಸಹಕಾರ ಪಡೆಯಲು ಸುಭಾಷರು ಚಿಂತಿಸಿದರು.
ಕ್ಯಾಪ್ಟನ್ ಇಝುಮಿ (ಜಪಾನ್ ಸೈನ್ಯಾಧಿಕಾರಿ)-‘INA ಸೈನಿಕರ ಪರಾಕ್ರಮ ಚಿರಸ್ಮರಣೀಯವಾದದ್ದು’ ಎಂದು ಬರೆದಿಟ್ಟಿದ್ದಾನೆ.
ನೇತಾಜಿ ಸುಭಾಷರ ಕಡೆಯ ಸಂದೇಶಗಳಲ್ಲಿ INA ಗೆ ‘ನಮ್ಮ ಸೋಲು ತಾತ್ಕಾಲಿಕ. ದಿಲ್ಲಿಗೆ ಹೋಗಲು ಅನೇಕ ಮಾರ್ಗಗಳಿವೆ. ಜಗತ್ತಿನ ಯಾವ ಶಕ್ತಿಯು ಹಿಂದೂಸ್ಥಾನವನ್ನು ಗುಲಾಮಗಿರಿಯಲ್ಲಿಡಲು ಸಾಧ್ಯವಿಲ್ಲವೆಂದು ನಂಬಿ’ ಎಂದು ಕರೆಕೊಟ್ಟು ಸೈನಿಕರನ್ನು ಹುರಿದುಂಬಿಸಿದರು.
ಭಾರತದ ನಿಜ ಸಾಮರ್ಥ್ಯವನ್ನು ಎಚ್ಚರಿಸಿ ಶತ್ರುವಿಗೆ ಅವರ ರೀತಿಯಲ್ಲೇ ಉತ್ತರಿಸಲು ದೇಶದೊಳಗೆ ‘ತಮ್ಮವರದೇ’ ವಿರೋಧವನ್ನು ಎದುರಿಸಿ ಶ್ರಮಿಸಿದ ಸುಭಾಷರ ಪ್ರಯತ್ನಗಳು ನೈಜ ದೇಶಭಕ್ತರಿಗೆ ಅತ್ಯದ್ಭುತವಾಗಿ ಕಂಡುಬರುವುದು ಸಹಜ. ಆದರೆ ಪರಿಸ್ಥಿತಿಗಳು ತಮ್ಮ ಶೌರ್ಯ-ಪರಾಕ್ರಮಕ್ಕೆ ಸಹಕಾರಿಯಾಗಿಲ್ಲವೆಂದರಿತು ವೀರ ಸಾವರ್ಕರ್ ರ ಸಲಹೆಯಂತೆ ಬ್ರಿಟಿಷರ ಕಣ್ತಪ್ಪಿಸಿ, ಅವರ ತಂತ್ರಕ್ಕೆ ಚಳ್ಳೆಹಣ್ಣು ತಿನ್ನಿಸಿ, ರೋಚಕವಾಗಿ ಪಲಾಯನ ಮಾಡಿದ ಸುಭಾಷರ ಶೌರ್ಯಗಾಥೆ. ಯುವಜನಾಂಗಕ್ಕೆ ರೋಮಾಂಚನ ಉಂಟುಮಾಡುವುದು ನಿಶ್ಚಿತ. ಬ್ರಿಟಿಷರನ್ನು ಬಗ್ಗು ಬಡಿಯಲು ವಿವಿಧ ದೇಶಗಳಲ್ಲಿ ಸಂಚರಿಸಿ-ಅಲ್ಲಿನ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟು ಯುದ್ಧ ಕೈದಿಗಳಾಗಿ ಜೈಲಿನಲ್ಲಿದ್ದ-ಅಲ್ಲಲ್ಲಿನ ಸೈನ್ಯದ ಸೇವೆಯಲ್ಲಿದ್ದ ಭಾರತೀಯ ಸೈನಿಕರನ್ನು ಸಂಘಟಿಸಿ, ಆಧುನಿಕ ಸೈನಿಕ ಶಿಕ್ಷಣ ಕೊಟ್ಟು ಆಜಾದ್ ಹಿಂದ್ ಫೌಜ್-Indian National Army ಸ್ಥಾಪಿಸಿದ ನೇತಾಜಿ ಸುಭಾಷ್ ಚಂದ್ರ ಬೋಸರ ಪ್ರಯತ್ನದ 75ನೇ ವಾರ್ಷಿಕೋತ್ಸವ ಸ್ಮರಣೆ ಮಾಡಿಕೊಳ್ಳಬೇಕಾದ್ದು ಯುವ ಭಾರತದ ಕರ್ತವ್ಯವಾಗಲಿ. 21 ಅಕ್ಟೋಬರ್ ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪ ದಿನವಾಗಲಿ ಎಂದು ಕಾರ್ಯರೂಪಕ್ಕೆ ತರುವ ಪ್ರಯತ್ನ ಪಡುವ.
ಕನ್ನಡಿಗರಾಗಿ ಹೆಮ್ಮೆ ಪಡಲು ಸಾವಿರಾರು ಸಂಖ್ಯೆಯಲ್ಲಿ ಆಜಾದ್ ಹಿಂದ್ ಸರ್ಕಾರದಲ್ಲಿ ಮತ್ತು ಸೇನೆಯಲ್ಲಿ ಸೇರಿದ್ದರು ಅವರಲ್ಲಿ ಪ್ರಮುಖರಾದ , ಕ್ಯಾಪ್ಟನ್ ಲಕ್ಷ್ಮಿ ಸೆಹೆಗಲ್ ಮಹಿಳಾ ಸಂಘಟನಾ ಮಂತ್ರಿಯಾಗಿಯೂ ಮತ್ತು ಮಹಿಳೆಯರ ಝಾನ್ಸಿ ಸೇನೆಯ ನೇತೃತ್ವವಹಿಸಿದ್ದರು ಹಾಗೂ ಅತ್ತಾವರ ಎಲ್ಲಪ್ಪ ರವರು ನೇತಾಜಿ ಮಾರ್ಗದರ್ಶನದಲ್ಲಿ ಆಜಾದ್ ಹಿಂದ್ ಬ್ಯಾಂಕ್ ಪ್ರಾರಂಭಿಸಿದರು.
ಈಗ ನಾವು ಒಂದು ಪ್ರತಿಜ್ಞೆ ಮಾಡುವ ಇನ್ನೂ ಮುಂದೆ ನಾವೆಲ್ಲ ಒಬ್ಬರಿಗೊಬ್ಬರು ಭೇಟಿಯಾದಾಗ #ಜೈಹಿಂದ್ ಘೋಷಣೆ ಮಾಡುವ.
ಜೈ ಆಜಾದ್ ಹಿಂದ್ ಸರ್ಕಾರ
ಜೈ ನೇತಾಜಿ
ಜೈ ಹಿಂದ್
ವಂದೇಮಾತರಂ
ಇತಿಹಾಸ ಸರಿಯಾಗಿ ತಿಳಿಯದ ಹಲವರು ಕೇವಲ ಗಾಂಧೀ ನೆಹರು ಅವರ ಅಹಿಂಸಾ ಹೋರಾಟದಿಂದ ಮಾತ್ರವೇ ನಮ್ಮ ದೇಶಕ್ಕೆ ಸ್ವಾತಂತ್ರ ದೊರಕಿತು ಎಂದು ಹೇಳುವಾಗ, ಚಾಪೇಕರ್ ಸಹೋದರರು ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್, ಮದನ್ ಲಾಲ್ ಡಿಂಗ್ರಾ, ವೀರ ಸಾವರ್ಕರ್ ಮುಂತಾದ ಲಕ್ಷಾಂತರ ತ್ಯಾಗ ಬಲಿದಾನಗಳ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ ದೊರಕಿದೆ ಎಂಬುದನ್ನು ಎಲ್ಲರಿಗೂ ತಿಳಿಹೇಳೋಣ
ವಂದೇಮಾತರಂ ಸೋಮಶಂಕರ್ ಅವರು ಬರೆದಿರುವ ಈ ಅದ್ಬುತ ಲೇಖನವನ್ನು ಎಲ್ಲರಿಗೂ ತಲುಪುಸುವ ನಿಟ್ಟಿನಿಂದ ನನ್ನ ಬ್ಲಾಗಿನಲ್ಲಿ ಇದನ್ನು ಪ್ರಕಟಿಸಿದ್ದೇನೆ. ಲೇಖನ ಓದಿ ನಿಜವಾದ ಇತಿಹಾಸ ಅರಿತ ನಂತರ ಅದನ್ನು ನಮ್ಮ ಬಂಧು ಮಿತ್ರರಿಗೂ ತಿಳಿಸುವ ಪ್ರಯತ್ನ ಮಾಡೋಣ
ಏನಂತೀರೀ?
ಜೈ ಹಿಂದ್
LikeLike
Bharat matha ki jai
Jai hind
LikeLike
[…] ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಆಜಾದ್ ಹಿಂದ್ ಸರ್ಕಾರ್ ಲೇಖನವನ್ನು ಓದುವ ಮೂಲಕ ತಿಳಿದು ಕೊಳ್ಳ […]
LikeLike