ಭಾರತೀಯ ಜ್ಯೋತಿಷ್ಯದ ಪ್ರಕಾರ ಬಿಜೆಪಿ ಪಕ್ಷದ ಭವಿಷ್ಯವೇನು?

ಇಂಡಿಯನ್ ಕೌನ್ಸಿಲ್ ಆಫ್ ಜ್ಯೋತಿಷ್ಯ ವಿಜ್ಞಾನದಲ್ಲಿ (1997) ಎಮ್ಎ ಮಾಡಿರುವಂತಹ ವೈದಿಕ ಜ್ಯೋತಿಷ್ಯವನ್ನು ಅಭ್ಯಾಸ ಮಾಡುತ್ತಿರುವ, ಶ್ರೀಯುತರಾದ ರಾಜೀವ್ ಸೇಥಿ ಅವರು ಹೇಳುವ ಪ್ರಕಾರ ಇಂಟರ್ನೆಟ್ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವು 6/4/1980 ರಂದು ದೆಹಲಿಯಲ್ಲಿ ಬೆಳಿಗ್ಗೆ 11.45 ಕ್ಕೆ ರಚನೆಯಾಯಿತು ಎಂದು ತಿಳಿಯಬರುತ್ತದೆ. ಇದನ್ನೇ ಮೂಲವಾಗಿಟ್ಟುಕೊಂಡು ಲೆಕ್ಕ ಹಾಕಿದಲ್ಲಿ, ಬಿಜೆಪಿ 23/02/2019 ರಿಂದ 16/08/2020 ರವರೆಗೆ ಚಂದ್ರ ಮಹಾದಾಶ-ರಾಹು ಭುಕ್ತಿ ನಡೆಸುತ್ತಿದೆ. ಚಂದ್ರ ಮತ್ತು ರಾಹು ಪರಸ್ಪರ ಶತೃಗಳು ಮತ್ತು ಅವರ ದಶಾ-ಅಂತರ್ದಶಾ ಸರಿಯಾಗಿಲ್ಲದ… Read More ಭಾರತೀಯ ಜ್ಯೋತಿಷ್ಯದ ಪ್ರಕಾರ ಬಿಜೆಪಿ ಪಕ್ಷದ ಭವಿಷ್ಯವೇನು?

ಡಿಸೆಂಬರ್ 31 ಆ ಕರಾಳ ರಾತ್ರಿ

ಡಿಸೆಂಬರ್ 31 ಮತ್ತು ಜನವರಿ 1 ಅಂತ ನೆನಪಿಸಿಕೊಂಡರೆ ಬಹುತೇಕರಿಗೆ ರೋಮಾಂಚನವಾಗುತ್ತದೆ. ಅನೇಕರು ಒಂದು ವಾರಕ್ಕಿಂತಲೂ ಮುಂಚೆಯೇ, ಆ ದಿನಗಳು ಮತ್ತು ಆ ದಿನವನ್ನು ಹೇಗೆ ಸಂಭ್ರಮಿಸಬೇಕು ಅಂತ ನಾನಾ ರೀತಿಯ ತಯಾರಿಗಳನ್ನು ಮಾಡಿಕೊಳ್ತಾ ಇದ್ರೇ ನಮಗೆ ಮಾತ್ರ ಆ ಕರಾಳ ನೆನಪನ್ನು ಹೇಗೆ ಮರೆಯುವುದಪ್ಪಾ ಅಂತಾ ಇರ್ತೀವಿ. ಅದೇನಪ್ಪಾ ಅಂತಹ ಕರಾಳ ನೆನಪು ಅಂತೀರಾ? ತಡೀರೀ ನಾನೂ ಹೇಳ್ತಾ ಹೋಗೀನಿ. ನೀವು ಕೇಳ್ತಾ ಹೋಗಿ. ಕೆಲ ವರ್ಷಗಳ ಹಿಂದೆ ಡಿಸೆಂಬರ್ 31 ಗುರುವಾರ, ಜನವರಿ 1… Read More ಡಿಸೆಂಬರ್ 31 ಆ ಕರಾಳ ರಾತ್ರಿ

ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ

ಮೊನ್ನೆ ಪೇಜಾವರ ಶ್ರೀಗಳು ವಿಧಿವಶರಾದಾಗ ಅವರ ಬಗ್ಗೆಯೇ ನಮ್ಮ ಸ್ನೇಹಿತರೆಲ್ಲಾ ಸೇರಿ ಅವರ ಸಾನಿಧ್ಯದ ನೆನಪನ್ನು ಮೆಲುಕು ಹಾಕುತ್ತಿದ್ದಾಗ ಶ್ರೀ ನಮ್ಮ ಜಾಲಹಳ್ಳಿಯ ವಿನಾಯಕ ಸೇವಾ ಮಂಡಳಿಯ ಗಣೇಶೋತ್ಸವಕ್ಕೆ ಬಂದದ್ದು ಅಲ್ಲಿ ನಮಗೆ ಮಾರ್ಗದರ್ಶನ ಮಾಡಿದ್ದರ ಕುರಿತು ಮಾತನಾಡುತ್ತಿದ್ದಾಗ, ಅದೇ ಸಮಯದಲ್ಲಿ ಆದಿಚುಂಚನಗಿರಿಯ ಮಠಾಧೀಶರಾಗಿದ್ದ ಶ್ರೀ ಶ್ರೀ ಶ್ರೀ ಬಾಲಗಂಗಾಧರ ಸ್ವಾಮಿಗಳ ಕುರಿತಂತೆಯೂ ವಿಷಯ ಪ್ರಸ್ತಾಪವಾಗಿ ಅವರು ಜಾಲಹಳ್ಳಿಗೆ ಬಂದಿದ್ದಾಗ ನಡೆದ ಒಂದು ವಿಶಿಷ್ಟ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡದ್ದು ಸದ್ಯದ ಪರಿಸ್ಥಿತಿಗೆ ಪ್ರಸ್ತುತವಾಗಿರುವ ಕಾರಣ ನಿಮ್ಮೊಂದಿಗೆ ಹಂಚಿಕೊಳ್ಳಲು… Read More ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ

ಕರ್ನಾಟಕ ರತ್ನ ಸಾಹಸಸಿಂಹ ವಿಷ್ಣುವರ್ಧನ್

ಕನ್ನಡ ಚಿತ್ರರಂಗ ಕಂಡ ಆತ್ಯಂತ ಸುರದ್ರೂಪಿ ಮತ್ತು ಪ್ರತಿಭಾವಂತ ಆದರೆ ಅಷ್ಟೇ ದುರದೃಷ್ಟವಂತ ನಟ ಎಂದೇ ಜನಜನಿತವಾಗಿದ್ದ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ, ಸಾಧನೆ ಮತ್ತು ಅವರು ಅನುಭವಿಸಿದ ನೋವು ನಲಿವುಗಳ ಸಮಗ್ರ ಚಿತ್ರಣ ಇದೋ ನಿಮಗಾಗಿ

ನಿಮ್ಮವನೇ ಉಮಾಸುತ… Read More ಕರ್ನಾಟಕ ರತ್ನ ಸಾಹಸಸಿಂಹ ವಿಷ್ಣುವರ್ಧನ್

ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಉಡುಪಿ ಅಂದ ತಕ್ಷಣ ನಮಗೆ ನೆನಪಾಗೋದು ಶ್ರೀಕೃಷ್ಣ ಪರಮಾತ್ಮ ಕನಕನ ಕಿಂಡಿ, ಆಷ್ಟ ಮಠಗಳು ಮತ್ತು ಅಲ್ಲಿನ ದಾಸೋಹ. ಇವೆಲ್ಲವ್ವಕ್ಕೂ ಕಳಸ ಪ್ರಾಯವಾಗಿ, ಇಡೀ ದೇಶಕ್ಕೆ ಉಡುಪಿಯನ್ನು ಹೆಚ್ಚಾಗಿ ಪರಿಚಯಿಸಿದ ಮತ್ತು ದೇಶಾದ್ಯಂತ ಎಲ್ಲೇ ಧಾರ್ಮಿಕ ಚಟುವಟಿಕೆಗಳು ನಡೆಯಲಿ ಆಥವಾ ಧರ್ಮಾಧಾರಿತ ಯಾವುದೇ ಸಮಸ್ಯೆಗಳಾದಲ್ಲಿ ಅದಕ್ಕೆ ಪರಿಹಾರವಾಗಿ ಉಡುಪಿಯತ್ತಲೇ ಮುಖಮಾಡುವ ಹಾಗೆ ಮಾಡಿದ ಕೀರ್ತಿ ಪೇಜಾವರ ಶ್ರೀಗಳಾದ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥರಿಗೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ. ಕೇವಲ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ… Read More ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ದಾಸಯ್ಯ

ಬಿಳಿ ಪಂಚೆ, ಬಿಳಿ ಜುಬ್ಬಾ ಅಥವಾ ಷರಾಯಿ ಹಾಕಿಕೊಂಡು ತಲೆಯಮೇಲೆ ಸುತ್ತಿದ ಒಂದು ಪೇಟ ಹಣೆಯಲ್ಲಿ ಒಂದು ಅಥವಾ ಮೂರು ಗೆರೆಗಳ ನಾಮ ಹಾಕಿಕೊಂಡು ಎಡಗೈಯಲ್ಲಿ ಉರಿಯುತ್ತಿರುವ ದೀಪದ ಕಂಬ, ಬಲಗೈಯ್ಯಿಗೆ ಜಾಗಟೆ ಕಟ್ಟಿಕೊಂಡು ಕೈಗಳಲ್ಲಿ ಕೆಲವೊಮ್ಮೆ ಕಹಳೆ ಮತ್ತು ಹೆಚ್ಚಿನ ಬಾರಿ ಶಂಖವನ್ನು ಇಟ್ಟುಕೊಂಡು ಎರಡೂ ತೋಳುಗಳಿಗೆ ಜೋಳಿಗೆ ಏರಿಸಿಕೊಂಡು ಎಲ್ಲರ ಮನೆಯ ಮುಂದೆ ಬಂದು ನಿಂತು ವೇಂಕಟರಮಣ ಸ್ವಾಮಿ ಪಾದಕ್ಕೆ ಗೋವಿಂದಾ! ಗೋವಿಂದಾ!! ಆಂಜನೇಯ ವರದಸ್ವಾಮಿ ಗೋವಿಂದಾ!! ಗೋವಿಂದಾ!! ಎಂದು ಜೋರಾಗಿ ಭಗವಂತನ ನಾಮ… Read More ದಾಸಯ್ಯ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಕನಕಗಿರಿ ಕನಕಾಚಲಪತಿ

ಕಾಲಿದ್ದವರು ಹಂಪೆ ಸುತ್ತಿ ನೋಡಬೇಕು ಮತ್ತು ಕಣ್ಣಿದ್ದವರು ಕನಕಗಿರಿ ನೋಡಬೇಕು ಎಂಬ ನಾನ್ನುಡಿ ಉತ್ತರ ಕರ್ನಾಟಕದಲ್ಲಿ ಬಹಳ ಪ್ರಚಲಿತವಾಗಿದೆ. ಅಂದಿನ ಕಾಲದ ವಿಜಯನಗರದ ಗತವೈಭವ ಇಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಂಚಿಹೋಗಿವೆ. ಹಂಪೆಯಿಂದ ಸುಮಾರು 30 ಕಿ.ಮಿ ದೂರದಲ್ಲಿರುವ ಕೊಪ್ಪಳ ಜಿಲ್ಲೆಯ ಪ್ರಮುಖ ತಾಲ್ಲೂಕ್ ಕೇಂದ್ರವೇ ಕನಕಗಿರಿ. ಇಲ್ಲಿನ ಕನಕಾಚಲಪತಿ ದೇವಸ್ಥಾನದಿಂದಾಗಿ ಇದು ಐತಿಹಾಸಿಕ ಸ್ಥಳವಾಗಿದೆ. ಈ ಶ್ರೀಕ್ಷೇತ್ರವನ್ನು ಎರಡನೆ ತಿರುಪತಿ ಎಂಬ ನಂಬಿಕೆ ಇರುವ ಕಾರಣ ಹಂಪೆಗೆ ಬರುವ ಬಹುತೇಕ ಪ್ರವಾಸಿಗರು ಇಲ್ಲಿಯೂ ಬೇಟಿ… Read More ಕನಕಗಿರಿ ಕನಕಾಚಲಪತಿ

ಅನ್ನದಾತ ಸುಖೀಭವ

ನಾವೆಲ್ಲಾ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗ ಶ್ರೀ ಸತ್ಯಾರ್ಥಿ ಚನ್ನಬಸಪ್ಪ ಹೊಸಮನಿ ಅವರ ಅನ್ನದಾತ ಪದ್ಯವನ್ನು ಓದಿಯೇ ಇರುತ್ತೇವೆ. ನಮ್ಮೆಲ್ಲರ ಅನ್ನದಾತರಾದ ರೈತರನ್ನು ಇದಕ್ಕಿಂತಲೂ ಉತ್ತಮವಾಗಿ ವರ್ಣಿಸಲು ಸಾಧ್ಯವೇ ಇಲ್ಲವೇನೋ ಎನ್ನುವಷ್ಟರ ಮಟ್ಟಿಗೆ ಮನಮುಟ್ಟುವಂತಿದೆ ಈ ಪದ್ಯ. ಇವನೆ ನೋಡು ಅನ್ನದಾತ ಹೊಲದಿ ದುಡಿದೇ ದುಡಿವನುನಾಡ ಜನರು ಬದುಕಲೆಂದು ದವಸ ಧಾನ್ಯ ಬೆಳೆವನು ಮಳೆಯ ಗುಡುಗು ಚಳಿಯ ನಡುಗು ಬಿಸಿಲ ಬೇಗೆ ಸಹಿಸುತಬೆವರು ಸುರಿಸಿ ಕಷ್ಟ ಸಹಿಸಿ ಒಂದೇ ಸವನೆ ದುಡಿಯುತ ಗಟ್ಟಿ ದೇಹ ದೊಡ್ಡ ಮನಸು ದೇವನಿಂದ… Read More ಅನ್ನದಾತ ಸುಖೀಭವ