ಪುನರ್ಜನ್ಮ

ಶಂಕರ ಮೊನ್ನೆ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನಕ್ಕೆ ಸರದಿಯ ಸಾಲಿನಲ್ಲಿ ನಿಂತಿದ್ದಾಗಲೇ,  ಶಂಕರಾಚಾರ್ಯವಿರಚಿತ ಎಂ.ಎಸ್. ಸುಬ್ಬಲಕ್ಷ್ಮಿಯವರ ಸುಶ್ರಾವ್ಯ ಕಂಠದ ಭಜಗೋವಿಂದಂ ಭಜಗೋವಿಂದಂ ಶ್ಲೋಕ ಕೇಳುತ್ತಲೇ ಅವನಿಗೆ ತಾನು ಸಣ್ಣನಿದ್ದಾಗ ಅವನ ತಾತ ಆ ಶ್ಲೋಕಗಳನ್ನು ಹೇಳಿಕೊಡುತ್ತಿದ್ದದ್ದು  ಮತ್ತು ಅದರ ಜೊತೆ ಹೇಳಿದ ಸುಂದರ ಪ್ರಸಂಗವೊಂದು ನೆನಪಿಗೆ ಬಂತು.  ಆಗ  ಶಂಕರನಿಗೆ ಏಳೆಂಟು ವರ್ಷಗಳಿರಬಹುದು . ಪರೀಕ್ಷೆ ಮುಗಿದು ಬೇಸಿಗೆ ರಜಾ ಬಂದಿತೆಂದರೆ ತಾತನ ಮನೆಗೆ ಹೋಗುವುದಕ್ಕೆ ಅವನಿಗೆ ಪಂಚ ಪ್ರಾಣ. ಅದೇ ರೀತೀ ಅವನ ತಾತನೂ ಅಷ್ಟೇ.… Read More ಪುನರ್ಜನ್ಮ

ನೆರೆಹೊರೆ

ಮೊನ್ನೆ ರಾತ್ರಿ ವಾಯುವಿಹಾರಕ್ಕೆಂದು ಹೋಗುತ್ತಿದ್ದಾಗ  ದಾರಿಯಲ್ಲಿ ನನ್ನ ಸ್ನೇಹಿತರೊಬ್ಬರು ಸಿಕ್ಕಿ, ಇದೇನು ಇಷ್ಟು ಹೊತ್ತಿನಲ್ಲಿ ಈ ಕಡೆಯಲ್ಲಿ ಎಂದಾಗ, ಏನೂ ಇಲ್ಲಾ ಸಾರ್, ಇಲ್ಲೇ ಪಕ್ಕದ ರಸ್ತೆಯಲ್ಲಿರುವ ನಮ್ಮ ಸ್ನೇಹಿತರೊಬ್ಬರು ಊರಿಗೆ ಹೋಗಿದ್ದಾರೆ. ಅದಕ್ಕಾಗಿ ಅವರ ಮನೆಯಲ್ಲಿ ರಾತ್ರಿ ಹೊತ್ತು ಮಲಗಲು ಹೇಳಿದ್ದಾರೆ. ಅದಕ್ಕಾಗಿ  ಹೋಗುತ್ತಿದ್ದೇನೆ.  ಕಾಲ ಸರಿಯಿಲ್ಲ ನೋಡಿ ಎಂದರು. ಅದಕ್ಕೆ ನಾನು ಹೌದು ಸಾರ್ ಎಂದು ಹೂಂ ಗುಟ್ಟಿ ನನ್ನ ವಾಯುವಿಹಾರ ಮುಂದುವರಿಸಿ ಹಾಗೇ ಯೋಚಿಸುತ್ತಿದ್ದಾಗ, ಅರೇ ಹೌದಲ್ಲಾ, ಈ ಪದ್ದತಿ ಈಗ ಅಪರೂಪವಾಗಿದೆಯಲ್ಲಾ … Read More ನೆರೆಹೊರೆ

ಕಾಫೀ ಪುರಾಣ

ಶಂಕರನ ಮನೆಯವರು ಒಟ್ಟು ಕುಟುಂಬದವರು.  ಮನೆಯಲ್ಲಿ ಮಕ್ಕಳ ಸಂಖ್ಯೆಯೂ ಅಧಿಕವೇ. ಹಾಗೆಯೇ ಮನೆಗೆ ಬಂದು  ಹೋಗುವವರು ತುಸು ಹೆಚ್ಚೇ.  ಬಂದವರಿಗೆ ಕಾಫೀ ತಿಂಡಿ, ಊಟೋಪಚಾರ ಮಾಡುವುದು ಅವರ ಮನೆಯಲ್ಲಿ  ನಡೆದು ಬಂದ ಸಂಪ್ರದಾಯ. ಹಾಗೆ ಪ್ರತೀ ಬಾರಿ ಕಾಫೀ ಮಾಡಿದಾಗಲೂ ಮಕ್ಕಳೂ ಕಾಫಿ ಕುಡಿಯಲು ಬಯಸುವುದು ಸಹಜ.  ಹಾಗಾಗಿ ಸುಮ್ಮನೆ ಬಂದು ಹೋದವರೆಲ್ಲರ ಜೊತೆಯೂ ಕಾಫಿ ಕುಡಿಯುತ್ತಾ ಹೋದರೆ ಮಕ್ಕಳಿಗೆ ಕಾಫಿ ಚಟವಾಗುತ್ತದೆ ಎಂದು ತಮ್ಮ ಮುಂದಿನ ಪೀಳಿಗೆಯ ಮಕ್ಕಳಿಗೆ ಕಾಫೀ ಅಭ್ಯಾಸ ಮಾಡಿಸದೇ ಇದ್ದರೆ ಮಕ್ಕಳ… Read More ಕಾಫೀ ಪುರಾಣ

ನಿರ್ಮಲ ಸೀತಾರಾಮನ್ ಅವರ ಸಂವಾದ ಕಾರ್ಯಕ್ರಮ

ಬೆಂಗಳೂರಿನ ವಿದ್ಯಾರಣ್ಯಪುರದ ಚಿಂತಕರ ಚಾವಡಿಯ ಆಶ್ರಯದಲ್ಲಿ ಇಂದು ದ್ವಾರಕ ಕನ್ವೆಂಷನ್ ಹಾಲ್ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಕಿಕ್ಕಿರಿದು ತುಂಬಿದ್ದ ದೇಶಭಕ್ತ ಆಭಿಮಾನಿಗಳ ಸಮ್ಮುಖದಲ್ಲಿ ಅತ್ಯಂತ ಸ್ಪೂರ್ತಿದಾಯಕವಾಗಿ ನರೆವೇರಿತು. ನಿರ್ಮಲ ಸೀತಾರಾಮ್ ಅವರು ಕಾರ್ಯಕ್ರಮಕ್ಕೆ ಆಗಮಿಸುವವರೆಗೂ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂದಿನ ಮನ್ ಕೀ ಬಾತ್  ಮುದ್ರಿತ ಕಾರ್ಯಾಕ್ರಮವನ್ನು ತದೇಕ ಚಿತ್ತದಿಂದ ಆಲಿಸುತ್ತಿದ್ದ  ನೆರೆದಿದ್ದ ನೂರಾರು  ಕಾರ್ಯಕರ್ತರು, ನಿರ್ಮಲಾ ಸೀತಾರಾಮನ್ ಅವರು ಆಗಮಿಸುತ್ತಿದ್ದಂತೆಯೇ ಮುಗಿಲು ಮುಟ್ಟುವ ಹಾಗೇ ಬೊಲೋ ಭಾರತ್ ಮಾತಾ ಕೀ ಜೈ ಮತ್ತು… Read More ನಿರ್ಮಲ ಸೀತಾರಾಮನ್ ಅವರ ಸಂವಾದ ಕಾರ್ಯಕ್ರಮ

ಆಂಬ್ಯುಲೆನ್ಸ್ ಬಂತು ದಾರಿ ಕೊಡಿ

ನಾವುಗಳು ಎಂತಹದ್ದೇ ಟ್ರಾಫಿಕ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ  ಆಂಬ್ಯುಲೆನ್ಸ್ ಶಬ್ಧ ಕೇಳಿದ ತಕ್ಷಣ ಎಲ್ಲರೂ ಅಕ್ಕ ಪಕ್ಕಕ್ಕೆ ಕಷ್ಟ ಪಟ್ಟಾದರೂ ಸರಿದು ಆಂಬ್ಯುಲೆನ್ಸ್ ಹೋಗಲು ಜಾಗ ಮಾಡಿ ಕೊಡುತ್ತೇವೆ. ಅಕಸ್ಮಾತ್ ಯಾರಾದರೂ ಜಾಗ ಮಾಡಿ ಕೊಡಲು ತಡ ಮಾಡಿದಲ್ಲಿ ಅವರ ಮೇಲೆ ಜೋರು ಮಾಡಿಯಾದರೂ ಆಂಬ್ಯುಲೆನ್ಸ್ ಹೋಗಲು ಅನುವು ಮಾಡಿಕೊಡುತ್ತೇವೆ.  ಏಕೆಂದೆರೆ,  ಆ ಆಂಬ್ಯುಲೆನ್ಸ್ ಗಾಡಿಯಲ್ಲಿ ಯಾವುದೋ ಒಂದು ಜೀವ  ಜೀವನ್ಮರಣ ಸ್ಥಿತಿಯಲ್ಲಿರುತ್ತದೆ. ಆ ಜೀವಕ್ಕೆ  ಸರಿಯಾದ ಸಮಯದಲ್ಲಿ ಆಸ್ಪತ್ರೆಗೆ ತಲುಪಿ ಸೂಕ್ತವಾದ ಚಿಕಿತ್ಸೆ ದೊರೆತು ಚೇತರಿಸಿಕೊಳ್ಳಬಹುದೇನೋ ಎನ್ನುವ… Read More ಆಂಬ್ಯುಲೆನ್ಸ್ ಬಂತು ದಾರಿ ಕೊಡಿ

1983 ಕ್ರಿಕೆಟ್ ವರ್ಲ್ಡಕಪ್, ಭಾರತದ ಯಶೋಗಾಥೆ

ಜೂನ್‌ 25, 1983, ಆಗ ನಾನು‌ ಎಂಟನೇ‌ ತರಗತಿಯಲ್ಲಿ‌ ಓದುತ್ತಿದೆ.‌ ಸಾಧಾರಣ ಮಧ್ಯಮ ಕುಟುಂಬದವರಾಗಿದ್ದ ನಮಗೆ ಸ್ವಂತ‌ ಟಿವಿ ಹೊಂದುವುದು ಕಷ್ಟಕರವಾದ ದಿನವದು. ಅಲ್ಲೋ ಇಲ್ಲೋ ಒಬ್ಬೊಬ್ಬರ ‌ಮನೆಯಲ್ಲಿ, ಕೋನಾರ್ಕ್ ಅಥವಾ ಸಾಲಿಡೇರ್ ಅಥವಾ ಡಯೋನೋರಾ ಅಥವಾ ಬಿಪಿಎಲ್ ಕಂಪನಿಗಳ ಕಪ್ಪು ಬಿಳಿಪಿನ ಟಿವಿ ಇರುತ್ತಿದ್ದ ಕಾಲವದು. ಮೂಗಿಗಿಂತ ಮೂಗಿನ ನತ್ತೇ ಭಾರವೆಂಬಂತೆ, ಟಿವಿಗಿಂತ ಆಂಟೆನಾ ಬಾರೀ ದೊಡ್ಡದಾಗಿರುತ್ತಿತ್ತು. ಮನೆಯ ಮೇಲಿನ ಆಂಟೆನಾದ ಗಾತ್ರದಿಂದಲೇ ಮನೆಯವರ ಸಿರಿತನ ಗುರುತಿಸುತ್ತಿದ್ದ ಕಾಲವದು. ಶಾಲೆ ಮುಗಿಸಿ ಮನೆಗೆ ಬಂದ ನನಗೆ… Read More 1983 ಕ್ರಿಕೆಟ್ ವರ್ಲ್ಡಕಪ್, ಭಾರತದ ಯಶೋಗಾಥೆ

ಗಮಕ ವಿದ್ವಾನ್ ಶ್ರೀ ಬಾ. ನಂ. ಶಿವಮೂರ್ತಿ

ಅಮ್ಮ ಸೊಂಟದಲ್ಲಿ ಮಗುವನ್ನಿಟ್ಟುಕೊಂಡು ತಾನು ಕಾಣುವ ಸಂಪತ್ತನ್ನು ತೋರಿಸಿದರೆ, ಅಪ್ಪ ಹೆಗಲ ಮೇಲೆ ಮಕ್ಕಳನ್ನು ಹೊತ್ತು ತಾನು ಕಾಣದಿರುವ ಜಗತ್ತೂ ಸಹಾ ಮಕ್ಕಳಿಗೆ ಕಾಣುವಂತಾಗಲಿ ಎಂದು ತೋರಿಸುತ್ತಾರೆ ಎನ್ನುವುದನ್ನು ಅಕ್ಷರಶಃ ಪಾಲಿಸಿ, ತಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಪ್ರದಾಯ, ಸ್ವಾಭಿಮಾನ ದೇಶಾಭಿಮಾನ ಕಲಿಸಿದ ಆದ್ಯ ಗುರು ನಮ್ಮ ತಂದೆ ಶ್ರೀ ಬಾ.ನಂ. ಶಿವಮೂರ್ತಿಗಳ ಸಂಸ್ಮರಣಾ ದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಗಮಕ ವಿದ್ವಾನ್ ಶ್ರೀ ಬಾ. ನಂ. ಶಿವಮೂರ್ತಿ

ಹಸಿವು

ಅದೊಂದು ಶನಿವಾರದ ದಿನ.  ಬೆಳಿಗ್ಗೆ ಶಂಕರ ಕಛೇರಿಗೆ ಹೊರಡಲು ಅನುವಾಗಿ ತಿಂಡಿ ತಿನ್ನುತ್ತಿದ್ದ. ಅಡುಗೆ ಮನೆಯೊಳಗೆ ಅವನ ಮಡದಿ ಮಯೂರಿ ಮಗ ಸಮೀರನೊಂದಿಗೆ ಏನೋ ಸಮಾಧಾನ ಮಾಡುತ್ತಿದ್ದಳು ಆದರೆ ಅದನ್ನು ಕೇಳಲು ತಯಾರಿಲ್ಲದ ಮಗ, ಸ್ವಲ್ಪ ಹೆಚ್ಚಾಗಿಯೇ ಕಿರಿಕಿರಿ ಮಾಡುತ್ತಿದ್ದ. ಮೊದ ಮೊದಲು  ಅಮ್ಮಾ ಮಗನ ನಡುವಿನ ವಿಷಯಕ್ಕೆ ತಾನೇಕೇ ಹೋಗುವುದು ಎಂದು ಸುಮ್ಮನಿದ್ದರೂ, ಮಡದಿಯು ಪರಿಪರಿಯಾಗಿ ಸಂತೈಸಲು ಪ್ರಯತ್ನಿಸಿದ್ದರೂ ಒಪ್ಪಿಕೊಳ್ಳದೆ ಪಿರಿಪಿರಿ ಮಾಡುತ್ತಿದ್ದ ಮಗನನ್ನು ಕಂಡ ಶಂಕರ, ಏನದು? ಏನಾಗ್ತಾ ಇದೇ? ಎಂದು ತುಸು ಎತ್ತರದ… Read More ಹಸಿವು

ಅಹಂ

ಅದೊಂದು ಮಧ್ಯಮ ವರ್ಗದ ಕುಟುಂಬ. ಯಜಮಾನರು ಖಾಸಗೀ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯೊಡತಿ ಅಪ್ಪಟ ಗೃಹಿಣಿ. ಇರುವ ಒಬ್ಬನೇ ಒಬ್ಬ ಮಗನನ್ನು ಹೊಟ್ಟೆ, ಬಟ್ಟೆ ಕಟ್ಟಿ  ಸಾಕಿ ಸಲಹಿ ಒಳ್ಳೆಯ ವಿದ್ಯಾವಂತನನ್ನಾಗಿ ಮಾಡಿದರು. ಆ ಹುಡುಗನೂ ಅಷ್ಟೇ  ತಂಬಾ ಬುದ್ಧಿವಂತ. ಕಠಿಣ ಪರಿಶ್ರಮದಿಂದ ಓದಿ ಐದಂಕಿ ಸಂಬಳ ಪಡೆಯುವಷ್ಟು ಎತ್ತರಕ್ಕೆ ಬೆಳೆದ. ವಯಸ್ಸಿಗೆ ಬಂದ ಮಗನಿಗೆ ವಧು ಅನ್ವೇಷಣೆಗಾಗಿ ವಧುವರ ಕೇಂದ್ರಕ್ಕೆ  ಹೋಗಿದ್ದರು. ಅದೇ  ಸಮಯಕ್ಕೆ  ಊರಿನ ಮತ್ತೊಂದು ಭಾಗದಲ್ಲಿದ್ದ ಇನ್ನೊಂದು ಮಧ್ಯಮ ವರ್ಗದ ಕುಟುಂಬದ ಒಬ್ಬಳೇ … Read More ಅಹಂ