ಶತಾಯುಷಿ V/S ಅಲ್ಪಾಯುಷಿ

ಈ ತಿಂಗಳಿನ ಸಂಪದ ಸಾಲು ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶತಾಯುಷಿಗಳಾಗಿದ್ದ ನಮ್ಮ ಪೂರ್ವಜರ ವಂಶವಾಹಿನಿಯಲ್ಲಿ ನಾವೇಕೇ ಅಲ್ಪಾಯುಷಿಗಳಾಗುತ್ತಿದ್ದೇವೆ ಮತ್ತು ಮತ್ತೆ ಆರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಹೇಗೆ ಪಡೆದುಕೊಳ್ಳಬಹುದು ಎಂಬೆಲ್ಲಾ ಕುರಿತಾದ, ಆಬಾಲವೃದ್ಧರಾದಿಯಾಗಿ ಎಲ್ಲರೂ ಓದಲೇ ತಿಳಿಯಲೇ ಬೇಕಾದ ಮಾಹಿತಿ ಇದೋ ನಿಮಗಾಗಿ… Read More ಶತಾಯುಷಿ V/S ಅಲ್ಪಾಯುಷಿ

ಡಾ. ವಿಜಯಲಕ್ಷ್ಮಿ ದೇಶಮಾನೆ

ಗುಲ್ಬರ್ಗಾದ ಕೊಳಗೇರಿಯ ದಲಿತ ವರ್ಗದ ತರಕಾರಿ ಮಾರುತ್ತಿದ್ದ ಹೆಣ್ಣುಮಗಳು, ಕಿತ್ತು ತಿನ್ನುವ ಬಡತನ, ಅಪಮಾನ, ಸಾಮಾಜಿಕ ಅಸಡ್ಡೆಯ ನಡುವೆಯೂ ಈ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿ, ಜನ ಸೇವೆಯೇ ಜನಾರ್ದನ ಸೇವೆ ಎಂದು ನೊಂದವರ ಕಂಬನಿ ಒರೆಸುವುದೇ ದೈವಾರಾಧನೆ ಎಂದು ತಿಳಿದು ಸಮಾಜಕ್ಕಾಗಿಯೇ ತಮ್ಮ ಬದುಕನ್ನೇ ಮೀಸಲಾಗಿಟ್ಟಿರುವ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿಯಾಗಿರುವ ನಮ್ಮ ಹೆಮ್ಮೆಯ ಡಾ. ವಿಜಯಲಕ್ಷ್ಮಿ ದೇಶಮಾನೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಡಾ. ವಿಜಯಲಕ್ಷ್ಮಿ ದೇಶಮಾನೆ

ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ

ನಾಯಿಗಳು ಕಂಬ ಇಲ್ಲವೇ ವಾಹನಗಳ ಟೈರಿನ ಮೇಲೇಕೆ ಮೂತ್ರ ವಿಸರ್ಜಿಸುತ್ತವೆ

ಮನುಷ್ಯ ಸಂಘ ಜೀವಿ. ಹಾಗಾಗಿ ಆತ ಒಬ್ಬಂಟಿಯಾಗಿರದೇ ಹೆಚ್ಚು ಜನರು ಇರುವ ಪ್ರದೇಶದಲ್ಲಿ ವಾಸಿಸುತ್ತಾನೆ. ಅದೇ ರೀತಿ ಅನೇಕ ಪ್ರಾಣಿಗಳನ್ನು ಪಳಗಿಸಿಕೊಂಡು ತನ್ನ ಸಾಕುಪ್ರಾಣಿಗಳಾಗಿಸಿಕೊಂಡು ಅವುಗಳನ್ನು ತನ್ನ ದೈನಂದಿನ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಾನೆ. ಹಾಗೆ ಸಾಕು ಪ್ರಾಣಿಗಳೆಂದಾಗ ಥಟ್ ಎಂದು ನೆನಪಾಗೋದೇ ನಾಯಿಗಳು. ಸ್ವಾಮಿ ನಿಷ್ಟೆಗೆ ಮತ್ತೊಂದು ಹೆಸರೇ ನಾಯಿಗಳು ಆಗಿರುವಾಗ, ಬಹುತೇಕರು ತಮ್ಮ ಮನೆಯಲ್ಲಿ ನಾಯಿಗಳನ್ನು ಮುದ್ದಾಗಿ ಸಾಕಿರುತ್ತಾರೆ. ಅದೇಷ್ಟೋ ಮನೆಗಳಲ್ಲಿ ನಾಯಿಗಳನ್ನು ತಮ್ಮ ಮನೆಯ ಒಬ್ಬ ಸದಸ್ಯರಂತೆಯೇ ಪ್ರೀತಿಸುತ್ತಾರೆ ಮತ್ತು ಅವುಗಳ ಅಗಲಿದಾಗ ತಮ್ಮ ಒಡಹುಟ್ಟಿದವರನ್ನು… Read More ನಾಯಿಗಳು ಕಂಬ ಇಲ್ಲವೇ ವಾಹನಗಳ ಟೈರಿನ ಮೇಲೇಕೆ ಮೂತ್ರ ವಿಸರ್ಜಿಸುತ್ತವೆ

ವಿಶ್ವ ಜನಸಂಖ್ಯಾ ದಿನ

ಈ ಭೂಮಿಯಲ್ಲಿ ಜಾಗತಿಕವಾಗಿ ಅತ್ಯಂತ ವೇಗವಾಗಿ ಹೆಚ್ಚಾಗುತ್ತಿರುವ ಜನಸಂಖ್ಯೆ 1987ರ ಜುಲೈ 11ರಂದು ವಿಶ್ವದ ಜನಸಂಖ್ಯೆ 5 ಬಿಲಿಯನ್ ತಲುದಾಗ ಎಚ್ಚರಿಕೆಯ ಗಂಟೆಯಾಗಿ ಆ ದಿನವನ್ನು ವಿಶ್ವ ಜನಸಂಖ್ಯಾ ದಿನ ಎಂದು ಕರೆದು, ವಿಶ್ವದಲ್ಲಿ ಜನಸಂಖ್ಖಾ ಸ್ಪೋಟದ ಕುರಿತಾದ ವಿವಿಧ ಸಮಸ್ಯೆಗಳ ಬಗ್ಗೆ ವಿಶ್ವ ಸಮುದಾಯದ ಗಮನ ಸೆಳೆಯುವ ಆಶಯದಿಂದ ಈ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆರಂಭಿಸಲಾಯಿತು. ವಿಶ್ವದ ಬಹುತೇಕ ಕಡೆಗಳಲ್ಲಿ ಕಳೆದ ಒಂದು ಶತಮಾನದಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಇಂದು ಜಗತ್ತಿನಲ್ಲಿ ಸೀಮಿತವಾಗಿ ಲಭ್ಯವಿರುವ ಸಂಪನ್ಮೂಲಗಳ… Read More ವಿಶ್ವ ಜನಸಂಖ್ಯಾ ದಿನ

ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ಅಡುಗೆ ಮನೆ (Kitchen Room) ಕೇವಲ ಮನೆಯ ಒಂದು ಕೋಣೆಯಲ್ಲ. ಅದು ಇಡೀ ಕುಟುಂಬದ (Family) ಸದಸ್ಯರನ್ನು ಬೆಸೆದಿಟ್ಟುಕೊಳ್ಳುವ ಕೊಂಡಿ, ಮನೆಯ ಆರೋಗ್ಯದ ಕೇಂದ್ರ & ಶಕ್ತಿ ಕೇಂದ್ರವೂ ಹೌದು. ಮನೆಯ ಅಡುಗೆ ಮನೆಯಲ್ಲಿ ನಿತ್ಯವೂ ಮೂರು ಬಾರಿ ಒಲೆ ಉರಿಯುತ್ತಿದೆ ಎಂದರೆ ಆದೊಂದು ಆರೋಗ್ಯಕರ ಕುಟುಂಬ ಎಂದರು ತಪ್ಪಾಗದು. ಇತ್ತೀಚಿನವರೆಗೂ ಅಡುಗೆ ಮನೆಯ ಡಬ್ಬಿಗಳೇ ಭಾರತೀಯ ಗೃಹಿಣಿಯರ ಉಳಿತಾಯದ ಕೇಂದ್ರವೂ ಆಗಿದ್ದು, ಕುಟುಂಬಕ್ಕೆ ಅತ್ಯಾವಶ್ಯಕತೆ ಬಿದ್ದಾಗ ಅಲ್ಲಿನ ಸಾಸಿವೆ ಡಬ್ಬಿ, ಗಸಗಸೆ ಡಬ್ಬಿಯಲ್ಲಿ ಉಳಿಸಿ ಭದ್ರವಾಗಿ… Read More ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಊಟ ತನ್ನಿಷ್ಟ, ನೋಟ ಪರರಿಷ್ಟ

ಕೆಲವು ವರ್ಷಗಳ ಹಿಂದೆ ನಿಜಕ್ಕೂ ನಮ್ಮ ಬಹುತೇಕರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ. ದುಡಿಯುವ ಕೈ ಎರಡಾದರೇ ಕುಳಿತು ತಿನ್ನುವ ಕೈ ಹತ್ತಾರು ಇರುತ್ತಿತ್ತು. ಸರಿಯಾಗಿ ಎರಡು ಹೊತ್ತು ಹೊಟ್ಟೆ ತುಂಬಾ ಊಟವೂ ಇಲ್ಲದಿರುವಂತಹ ಸಂಧರ್ಭವೂ ಇತ್ತು. ಆದರೂ ನಮ್ಮ ಅಜ್ಜ-ಅಜ್ಜಿಯರ ಆಯಸ್ಸು 80-90 ರ ಆಸುಪಾಸಿನಲ್ಲಿಯೇ ಇರುತ್ತಿತ್ತು. ಆಷ್ಟು ವರ್ಷಗಳ ಕಾಲ ಅವರು ಕಷ್ಟದಲ್ಲೇ ಜೀವಿಸಿದರೂ ಅವರಿಗೆಂದೂ ಬಿಪಿ, ಶುಗರ್, ಕಿಡ್ನಿ ತೊಂದರೆಯಾಗಲಿ ಇರಲೇ ಇಲ್ಲ. ಹೃದಯಾಘಾತ ಎನ್ನುವುದನ್ನು ಕೇಳೇ ಇರಲಿಲ್ಲ ಅವರೆಲ್ಲರೂ ಗಂಡಾ ಗುಂಡೀ… Read More ಊಟ ತನ್ನಿಷ್ಟ, ನೋಟ ಪರರಿಷ್ಟ