ಮುಳುಗಿತೇ ಬೆಂಗಳೂರು?

ನೆನ್ನೆ ಸಂಜೆ ಮುಂಬೈಯಿಂದ ಕರೆ ಮಾಡಿದ್ದ ನನ್ನ ಸಹೋದ್ಯೋಗಿಯೊಬ್ಬರು ಎಂದಿನಂತೆ ಉಭಯ ಕುಶಲೋಪರಿ ವಿಚಾರಿಸಿದ ನಂತರ ಕೇಳಿದ ಮೂತ್ತ ಮೊದಲನೇ ಪ್ರಶ್ನೆಯೇ, ಕಳೆದ ಒಂದು ವಾರದಿಂದ ಬೆಂಗಳೂರು ಮುಳುಗಿ ಹೋಗಿದೆಯಂತೆ? ಈಗ ಪರಿಸ್ಥಿತಿ ಹೇಗಿದೆ? ಎಂಚು. ನಿಮಗೆ ಹೇಗೆ ಈ ವಿಷಯ ಗೊತ್ತಾಯಿತು? ಎಂದು ವಿಚಾರಿಸಿದಾಗ, ವಾಟ್ಸಾಪ್ ನಲ್ಲಿ ಬೆಂಗಳೂರಿನ ಹತ್ತು ಹಲವಾರು ವೀಡಿಯೋಗಳು ಹರಿದಾಡುತ್ತಿವೆ. ಅದನ್ನು ನೋಡಿ ಗೊತ್ತಾಯಿತು ಎಂದಾಗ, ಜನರು ಇಲಿ ಹೋಯ್ತು ಎಂದರೆ ಹುಲಿ ಹೋಯ್ತು ಎಂದು ಹೇಳ್ತಾರಲ್ಲಾ ಎಂದು ಮನಸ್ಸಿನಲ್ಲಿ ಅಂದು… Read More ಮುಳುಗಿತೇ ಬೆಂಗಳೂರು?

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ಸ್ವಾತಂತ್ರ್ಯ ಪೂರ್ವದ 1930ರ ಸಮಯದಲ್ಲಿ ಬೆಂಗಳೂರಿನಲ್ಲಿ ಬಹಳ ಕಾಲ ಮಳೆಯಿಲ್ಲದೇ ಬೀಕರ ಬರಗಾಲ ಉಂಟಾಗಿ ಜನರಿಗೆ ಮತ್ತು ದನಕರುಗಳಿಗೆ ಕುಡಿಯುವ ನೀರಿಗೂ ತೊಂದರೆಯುಂಟಾದಾಗ ನೀರಿನ  ಅಗತ್ಯವನ್ನು ಅರಿತ ಅಂದಿನ ಮೈಸೂರು ಸಂಸ್ಥಾನದ ಒಡೆಯರಾಗಿದ್ದ ಶ್ರೀ ನಾಲ್ಮಡಿ ಚಾಮರಾಜ ಒಡೆಯರ್ ಅವರು ಮುಖ್ಯ ಇಂಜೀನಿಯರ್ ಆಗಿದ್ದ ಶ್ರೀ ಸರ್.ಎಂ.ವಿಶ್ವೇಶ್ವರಯ್ಯನವರಿಗೆ ಇದಕ್ಕೊಂದು ಪರಿಹಾರವನ್ನು ನೀಡಲು ಸೂಚಿಸಿದ ಪರಿಣಾಮವೇ, ಬೆಂಗಳೂರಿನಿಂದ ಪಶ್ಚಿಮಕ್ಕೆ 35 ಕಿ.ಮೀ ದೂರದಲ್ಲಿರುವ ಮಾಗಡಿ ಬಳಿಯ ಅರ್ಕಾವತಿ ನದಿ ಮತ್ತು ಕುಮುದಾವತಿ ನದಿಯ ಸಂಗಮದಲ್ಲಿ ಈ ಬೃಹತ್ತಾದ ತಿಪ್ಪಗೊಂಡನಹಳ್ಳಿ… Read More ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ಕೆರೆ ತೊಣ್ಣೂರು/ತೊಂಡನೂರು ಕೆರೆ

ಮಂಡ್ಯಾ ಜಿಲ್ಲೆಯ ಸಕ್ಕರೆನಾಡು ಪಾಂಡವಪುರದಿಂದ ನಾಗಮಂಗಲದ ಕಡೆಗೆ ಸುಮಾರು 10 ಕಿ.ಮೀ ಗಳಷ್ಟು ದೂರ ಕ್ರಮಿಸಿದರೆ ಎಡಭಾಗದಲ್ಲಿ ತೊಂಡನೂರು ಎಂಬು ನಾಮಫಲಕ ಕಾಣಿಸುತ್ತದೆ. ನೋಡಲು ಅಷ್ಟೇನೂ ದೊಡ್ಡ ಊರಲ್ಲದಿದ್ದರೂ ಐತಿಹ್ಯವಾಗಿ ಬಹಳ ಪ್ರಮಾಖ್ಯತೆ ಪಡೆದಂತಹ ಊರಾಗಿದೆ. ಕೃಷಿ ಮತ್ತು ಹೈನು ಉದ್ಯಮ ಪ್ರಮುಖ ಉದ್ಯೋಗವಾಗಿದ್ದು ಊರಿಗೆ ಹೋಗುತ್ತಿದಂತೆಯೇ ಹಸುಗಳು ದಾರಿಗೆ ಅಡ್ಡಸಿಗುವುದಲ್ಲದೇ, ಹಾಲಿನ ಸಂಗ್ರಹದ ಕೇಂದ್ರವೂ ಧುತ್ತೆಂದು ಕಣ್ಣಿಗೆ ಬೀಳುತ್ತದೆ. ಆಚಾರ್ಯತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುಜಾಚಾರ್ಯರು, 11ನೇ ಶತಮಾನದಲ್ಲಿ ತಮಿಳು ನಾಡಿನ ಕ್ರಿಮಿಕಾಂತ ನೆಂಬ ಕ್ರೂರ ರಾಜ… Read More ಕೆರೆ ತೊಣ್ಣೂರು/ತೊಂಡನೂರು ಕೆರೆ

ಶೆಟ್ಟೀಕೆರೆ

ಭೌಗೋಳಿಕವಾಗಿ ಕಲ್ಪತರುನಾಡು ತುಮಕೂರಿನ ಭಾಗವಾಗಿ, ಆ ಜಿಲ್ಲೆಯ ತುತ್ತ ತುದಿಯಲ್ಲಿ , ತುಮಕೂರಿನಿಂದ ಸುಮಾರು 70 ಕಿಮೀ ದೂರದಲ್ಲಿರುವ, ಚಿಕ್ಕನಾಯಕನ ಹಳ್ಳಿಯಿಂದ ತಿಪಟೂರಿಗೆ ಹೋಗುವ ಮಾರ್ಗದ ಮಧ್ಯದಲ್ಲಿರುವ ಹೋಬಳಿಯೇ ಶೆಟ್ಟೀಕೆರೆ. ಹತ್ತಿರ ಹತ್ತಿರ ಸಾವಿರ ಮನೆಗಳು ಇರಬಹುದಾದ ಒಂದು ರೀತಿಯ ಸ್ಥಳೀಯ ವಾಣಿಜ್ಯ ನಗರಿ. ಸಾಂಪ್ರದಾಯಿಕವಾಗಿ ಹಾಸನ ಜಿಲ್ಲೆಯ ಸೊಗಡನ್ನು ಮೈದಳೆದಿರುವ ವಾಣಿಜ್ಯವಾಗಿ ಚಿತ್ರದುರ್ಗ ಜಿಲ್ಲೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಟ್ಟಣವೆಂದರೂ ತಪ್ಪಾಗಲಾರದು. ಬೆಂಗಳೂರಿನ ಕೃಷ್ಣರಾಜ ಪುರದಲ್ಲಿ ಎಲೆ ಮರಿಮಲ್ಲಪ್ಪ ಶೆಟ್ಟರು ಲೋಕ ಕಲ್ಯಾಣಕ್ಕಾಗಿ ವಿಶಾಲವಾದ ಕೆರೆಯನ್ನು… Read More ಶೆಟ್ಟೀಕೆರೆ

ಸೂಳೆ ಕೆರೆ (ಶಾಂತಿ ಸಾಗರ)

ಅರೇ ಇದೇನಿದು? ಈ ಕೆರೆಯ ಹೆಸರು ಹೀಗಿದೆಯಲ್ಲಾ? ಇಂತಹ ವಿಲಕ್ಷಣ ಹೆಸರಿನ ಕೆರೆ ಎಲ್ಲಿದೆ ಅಂತಾ ಯೋಚಿಸುತ್ತಿದ್ದೀರಾ? ಇದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಚನ್ನಗಿರಿಯಿಂದ ದಾವಣಗೆರೆಗೆ ಹೋಗುವ ಮಾರ್ಗದಲ್ಲಿ ಸುಮಾರು 18 ಕಿ.ಮೀ ದೂರದಲ್ಲಿದೆ. ಈ ಕೆರೆ ನೊಡುವುದಕ್ಕೆ ಅಗಾಧವಾದ ಸಾಗರದಂತೆಯೇ ಕಾಣುತ್ತದೆ. ಸರಿ ಸುಮಾರು 4416 ಎಕರೆ ವಿಸ್ತೀರ್ಣದ ಈ ಕೆರೆ, ಚಿತ್ರದುರ್ಗ ಪಟ್ಟಣವೂ ಸೇರಿದಂತೆ ಸುಮಾರು 15 ರಿಂದ 20 ಹಳ್ಳಿಗಳ 2000 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುತ್ತಿದೆ. ನಿಜ ಹೇಳಬೇಕೆಂದರ,… Read More ಸೂಳೆ ಕೆರೆ (ಶಾಂತಿ ಸಾಗರ)