ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ವಂಶವಾಹಿ ಸಂಸ್ಕಾರ (ಜೀನ್ಸ್)

ಮನೆಯಲ್ಲಿರುವ ಚಿಕ್ಕ ಮಕ್ಕಳು ಮನೆಯಲ್ಲಿರುವ ಅಜ್ಜಿ ತಾತ, ಅಪ್ಪಾ ಅಮ್ಮಾ ಅಣ್ಣ ಅಕ್ಕಾ ಅವರನ್ನು ನೋಡಿಯೇ ಕಲಿತುಕೊಳ್ಳುತ್ತಾರೆ. ಹಾಗಾಗಿಯೇ ಚಿಕ್ಕ ಮಕ್ಕಳ ಮುಂದೆ ಸದಾ ಕಾಲವೂ ಸಾಧ್ಯವಾದಷ್ಟೂ ಒಳ್ಳೆಯ ಸಂಸ್ಕಾರವಂತರಾಗಿಯೇ ವ್ಯವಹರಿಸುವುದನ್ನು ಎಲ್ಲೆಡೆಯಲ್ಲಿಯೂ ನೋಡಬಹುದಾಗಿದೆ. ಚಿಕ್ಕ ಮಕ್ಕಳೂ ತಮಗೇ ಅರಿವಿಲ್ಲದಂತೆಯೇ ಮನೆಯಲ್ಲಿರುವ ದೊಡ್ಡವರ ಸ್ವಭಾವವನ್ನು ಯಥವತ್ತಾಗಿ ಅಳವಡಿಸಿಕೊಂಡಿರುತ್ತಾರೆ. ಅಂತಹದೇ ಒಂದು ಸುಂದರ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ. ಹೇಳಿ ಕೇಳಿ ನಮ್ಮದು ಸಂಪ್ರದಾಯಸ್ಥ ಕುಟುಂಬ. ಕಲೆ, ಸಂಗೀತ ಮತ್ತು ಸಾಹಿತ್ಯ ಎನ್ನುವುದು ನಮ್ಮ ಕುಟುಂಬದಲ್ಲಿ ಹಾಸು ಹೊಕ್ಕಾಗಿದೆ.… Read More ವಂಶವಾಹಿ ಸಂಸ್ಕಾರ (ಜೀನ್ಸ್)

ಜ್ಞಾನಚೂರ್ಣ ನಶ್ಯ

ಬಹುಶಃ ಇಂದಿನ ಕಾಲದಲ್ಲಿ ಯಾವುದೇ ಚಟವಿಲ್ಲದವರು ಸಿಗುವುದೇ ಅಪರೂಪ ಎಂದರೂ ತಪ್ಪಾಗಲಾರದೇನೋ?. ಇಂದಿನ ಬಹುತೇಕ ಹುಡುಗರು ಕಾಲೇಜು ಮೆಟ್ಟಿಲು ಹತ್ತುವುದರೊಳಗೇ ಬೀಡಿ ಇಲ್ಲವೇ ಸಿಗರೇಟ್ ಈ ರೀತಿ ಯಾವುದಾದರೂಂದು ತಂಬಾಕಿನ ಉತ್ಪನ್ನಕ್ಕೆ ದಾಸರಾಗಿ ಹೋಗುತ್ತಿರುವುದು ನಿಜಕ್ಕೂ ಬೇಸರ ಸಂಗತಿ. ಆದರೆ ಇವೆರೆಡರ ಹೊರತಾಗಿಯೂ ತಂಬಾಕಿನಿಂದ ತಯಾರಾದ ಹೊಗೆರಹಿತ ಸಣ್ಣದಾಗಿ ನಶೆ ಏರಿಸುವ ವಸ್ತುವೇ ನಶ್ಯ ಇಲ್ಲವೇ ನಸ್ಯ ಎಂದೂ ಕರೆಯುತ್ತಾರೆ.. ಇಂತಹ ನಶ್ಯದ ಕುರಿತಾದ ಕೆಲವು ಮೋಜಿನ ಪ್ರಸಂಗಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ನನಗೆ ತಿಳಿದಂತೆ, ನಶ್ಯಕ್ಕೂ ನಮ್ಮ… Read More ಜ್ಞಾನಚೂರ್ಣ ನಶ್ಯ

ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಅದೊಂದು ಕುಗ್ರಾಮ. ಹೆಸರಿಗಷ್ಟೇ ಅಗ್ರಹಾರ ಎಂದಿದ್ದರೂ, ಇದ್ದದ್ದು ಎಂಕ, ನಾಣಿ, ಸೀನ ಅಂತಾ ಹತ್ತಾರು ಸಂಪ್ರದಾಯಸ್ಥರ ಮನೆ. ಕೃಷಿ ಪ್ರಧಾನವಾಗಿದ್ದ ಆ ಊರಿನಲ್ಲಿ ಶಾಸ್ತ್ರೀಯ ಸಂಗೀತ ಮತ್ತು ಸಾಹಿತ್ಯದ ಗಂಧವೇ ಇಲ್ಲದಿದ್ದರೂ ಜನಪದ ಸಾಹಿತ್ಯಕ್ಕೇನು ಕೊರತೆ ಇರಲಿಲ್ಲ. ಅಂತಹ ಊರಿನಲ್ಲೊಂದು ಅನರ್ಘ್ಯ ರತ್ನದಂತೆ, ತಾಯಿಯ ಕಡೆಯ ದೂರ ಸಂಬಧಿಯೊಬ್ಬರು ಮಾಡುತ್ತಿದ್ದ ಗಮಕ ವಾಚನದಿಂದ ಆಕರ್ಷಿತರಾಗಿ, ಮಹಾಭಾರತದ ಏಕಲವ್ಯನಂತೆ, ದೈವದತ್ತವಾದ ಶರೀರ ಮತ್ತು ಶಾರೀರದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹರಿಕಥೆ, ಗಮಕ ವಾಚನ, ವ್ಯಾಖ್ಯಾನವಲ್ಲದೇ, ನಾಟಕದ ಮಟ್ಟುಗಳು ಮತ್ತು… Read More ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ

ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ನಾನು ಚಿಕ್ಕವನಿದ್ದಾಗ, ರಥೋತ್ಸವಕ್ಕೆಂದು ನಮ್ಮೂರು ಬಾಳಗಂಚಿಗೆ ಹೋಗುತ್ತಿದ್ದೆ. ಊರಿಗೆ ಹೋದ ತಕ್ಷಣ ಅಕ್ಷರಶಃ ನಮ್ಮ ತಾತ ಗಮಕಿ ನಂಜುಂಡಯ್ಯನವರ ಬಾಲವಾಗಿ ಬಿಡುತ್ತಿದ್ದೆ. ರಾತ್ರಿ ಒಟ್ಟಿಗೆ ಒಂದೇ ಹಾಸಿಯಲ್ಲಿ ಮಲಗಿ, ಬೆಳಿಗ್ಗೆ ಎದ್ದು ಅವರ ಕೈಯಲ್ಲೇ ಸ್ನಾನ ಮಾಡಿಸಿಕೊಂಡು ಅವರ ಜೊತೆಯಲ್ಲಿಯೇ ಪೂಜೆಗೆ ಕುಳಿತು ಕೊಂಡು ಪೂಜೆಯ ಕಡೆಯಲ್ಲಿ ಮಂಗಳಾರತಿ ಮಾಡುವಾಗ ದೇವರ ಮನೆಯಿಂದ ಹೊರಬಂದು ಹಜಾರದ ಸಣ್ಣ ಗೂಡಿನಲ್ಲಿದ್ದ ಗಣೇಶನಿಗೂ ಮತ್ತು ಅದರ ಮೇಲೆ ಸಾಲಾಗಿ ತೂಗುಹಾಕಿದ್ದ ದೇವರ ಫೋಟೋಗಳು, ಶಂಕರಾಚಾರ್ಯರುಗಳು, ಶೃಂಗೇರೀ ಜಗದ್ಗುರುಗಳ ಜೊತೆ ಕಪ್ಪು… Read More ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ

ಅಣ್ಣಾ, ಮತ್ತೆ ಯಾವಾಗ ಸಿಗೋಣ?

ಜಗಣ್ಣಾ, ನಮಸ್ಕಾರ. ಎಲ್ಲಿದ್ದೀಯಾ? ಹೇಗಿದ್ದೀಯಾ? ಅಂತಾ ಫೋನ್ ಮಾಡಿದ್ರೆ, ಹಾಂ!! ಹೇಳಣ್ಣಾ, ಇಲ್ಲೇ ಕೆಲ್ಸದ್ ಮೇಲೆ ಇದ್ದೀನಿ. ಅಂತಾ ಶುರುವಾಗುತ್ತಿದ್ದ ನಮ್ಮ ಫೋನ್ ಸಂಭಾಷಣೆ ಕನಿಷ್ಟ ಪಕ್ಷ ಅರ್ಧ ಘಂಟೆಯವರೆಗೂ ನಡೆದು, ನಮ್ಮಿಬ್ಬರ ಕೆಲಸಕಾರ್ಯಗಳು, ನಂತರ ನಮ್ಮಿಬ್ಬರ ಮನೆಯವರೆಲ್ಲರ ಯೋಗಕ್ಷೇಮ ಅದಾದ ನಂತರ ನಮ್ಮ ಸಂಬಂಧೀಕರು, ನಮ್ಮೂರಿನ ಕುತೂಹಲಕಾರಿ ವಿಷಯಗಳನ್ನು ವಿಚಾರಿಸಿಕೊಂಡ ನಂತರ, ಒಂದೋ ನಾನು ಆಫೀಸ್ ತಲುಪಿರಬೇಕು ಇಲ್ಲವೇ ನಮ್ಮಿಬ್ಬರಿಗೆ ಬೇರಾವುದೋ ಕರೆ ಬಂದಾಗ, ಸರಿ ಅಣ್ಣಾ ಮತ್ತೇ ಸಿಗೋಣ ಎಂದು ಮಾತು ಮುಗಿಸಿ ಮತ್ತೊಂದು… Read More ಅಣ್ಣಾ, ಮತ್ತೆ ಯಾವಾಗ ಸಿಗೋಣ?

ಬಾಳಗಂಚಿ ಹೊನ್ನಾದೇವಿ ಹಬ್ಬ

ಹಿಂದಿನ ಲೇಖನದಲ್ಲಿ ನಮ್ಮೂರಿನ ಚೋಮನ ಹಬ್ಬದ ಬಗ್ಗೆ ತಿಳಿದುಕೊಂಡಿದ್ದೆವು. ಇಂದು ನಮ್ಮ ಊರಿನ ಗ್ರಾಮ ದೇವತೆ, ಹೊನ್ನಾದೇವಿ ಅಥವಾ ಹೊನ್ನಮ್ಮ ಅಥವಾ ಸ್ವರ್ಣಾಂಬಾ ದೇವಿಯ ಊರ ಹಬ್ಬದ ಬಗ್ಗೆ ತಿಳಿದುಕೊಳ್ಳೊಣ. ಸಾವಿರಾರು ವರ್ಷಗಳಷ್ಟು ಪುರಾತನ ಇತಿಹಾಸ ಹೊಂದಿರುವ ನಮ್ಮ ಬಾಳಗಂಚಿ ಗ್ರಾಮವನ್ನು ಹೊಯ್ಸಳರ ದೊರೆ ವಿಷ್ಣುವರ್ಧನನ ವಂಶಸ್ಥ ನಾರಸಿಂಹದೇವ 76 ವೃತ್ತಿನಿರತ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟಿದ್ದ ಎಂಬ ಬಗ್ಗೆ 1256ರಲ್ಲಿ ಬರೆಸಿದ ತಾಮ್ರ ಶಾಸನ ಸಾರುತ್ತದೆ. ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಎಂದೇ ಖ್ಯಾತರಾಗಿದ್ದ ಹಾಗೂ ವಿಜಯನಗರ ಸಾಮ್ರಾಜ್ಯದ… Read More ಬಾಳಗಂಚಿ ಹೊನ್ನಾದೇವಿ ಹಬ್ಬ