ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ದೇವರ ಮೊಸಳೆ ಬಬಿಯಾ

ಕೇರಳದ ಕಾಸರಗೋಡಿನ ಕುಂಬಳೆ ಸಮೀಪದಲ್ಲಿರುವ ಸರೋವರ ಕ್ಷೇತ್ರ ಅನಂತಪುರದ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಬಬಿಯಾ ಎಂಬ ಮೊಸಳೆ ದಿನಾಂಕ 9.10.2022ರ ಭಾನುವಾರ ರಾತ್ರಿಯಂದು ವಯೋಸಹಜವಾಗಿ ಕೊನೆಯುಸಿರೆಳೆದಿರುವುದು ಅಪಾರ ಭಕ್ತಾದಿಗಳಿಗೆ ನೋವನ್ನುಂಟುಮಾಡಿದೆ.

ಬಬಿಯಾ ಎಂದರೆ ಯಾರು? ಏನಿದರ ವಿಶೇಷತೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ದೇವರ ಮೊಸಳೆ ಬಬಿಯಾ

ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಒಂದು ಕಾಲಕ್ಕೆ ಕರ್ನಾಟಕದ ಭಾಗವಾಗಿದ್ದ ಮತ್ತು ಈಗಲೂ ಕನ್ನಡಿಗರೇ ಹೆಚ್ಚಾಗಿರುವ, ಪ್ರಸ್ತುತ ಮಹಾರಾಷ್ಟ್ರ ರಾಜ್ಯದ ಭಾಗವಾಗಿರುವ ಸೊಲ್ಲಾಪುರ ಜಿಲ್ಲೆಯ ಭೀಮಾ ನದಿಯ ತಟದಲ್ಲಿರುವ ಹಿಂದೂಗಳ ಪವಿತ್ರ ಶ್ರೀಕ್ಷೇತ್ರವೇ ಪಂಢರಾಪುರವಾಗಿದ್ದು ಅಲ್ಲಿ ಪ್ರಭು ಪಾಂಡುರಂಗ ವಿಠ್ಥಲ ಇಟ್ಟಿಕೆಯ ಮೇಲೆ ನಿಂತು ಭಕ್ತರನ್ನು ಅನುಗ್ರಹಿಸುತ್ತಿದ್ದಾನೆ. ಪಂಢರಾಪುರದಲ್ಲಿ ಭೀಮಾ ನದಿಯು ಅರ್ಧಚಂದ್ರಾಕಾರದಲ್ಲಿ ಹರಿಯುವುದರಿಂದ ಅದನ್ನು ಚಂದ್ರಭಾಗಾ ನದಿ ಎಂದೂ ಕರೆಯುತ್ತಾರಲ್ಲದೇ, ಆಶಾಢ ಮಾಸದ ಏಕಾದಶಿಯಂತೆ ಅಲ್ಲಿ ನಡೆಯುವ ಯಾತ್ರೆಯಲ್ಲಿ ದೇಶವಿದೇಶಗಳಿಂದ ಸುಮಾರು 5-6 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ರುಕ್ಮಿಣಿ ಸಮೇತ ಪಾಂಡುರಂಗನ… Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ಹುಸ್ಕೂರು ಮದ್ದೂರಮ್ಮ ಜಾತ್ರೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು… Read More ಹುಸ್ಕೂರು ಮದ್ದೂರಮ್ಮ ಜಾತ್ರೆ

ಸೌತಡ್ಕ ಶ್ರೀ ಮಹಾಗಣಪತಿ

ಸಾಮಾನ್ಯವಾಗಿ ಒಂದು ಪುರಾತನ ದೇವಸ್ಥಾನ ಎಂದ ತಕ್ಷಣವೇ ನಮ್ಮ ಮನಸ್ಸಿನಲ್ಲಿ ಮೂಡುವುದೇ ವಿಶಾಲವಾದ ಪ್ರದೇಶದಲ್ಲಿ ಎತ್ತರವಾದ ರಾಜಗೋಪುರವನ್ನು ದಾಟಿ ಒಳಗೆ ಹೋಗುತ್ತಿದ್ದಲ್ಲಿ ನೂರಾರು ಸುಂದರವಾಗಿ ನಿಲ್ಲಿಸಿರುವ ಕಲ್ಲುಗಳ ಕಂಬ ಅದರಲ್ಲಿ ಶಿಲ್ಪಿಯ ಕೈ ಚಳಕದಿಂದ ಮೂಡಿರುವ ವಿವಿಧ ಆಕೃತಿಗಳ ಮಧ್ಯದಲ್ಲಿರುವ ಗರ್ಭಗುಡಿ ಇರುವ ದೇವಸ್ಥಾನ. ಇನ್ನು ವಾಸ್ತುಪ್ರಕಾರ ದೇವಸ್ಥಾನವೆಂದರೆ, ಗರ್ಭಾಂಕಣ, ನವರಂಗ, ಮುಖ ಮಂಟಪ, ಪ್ರಾಕಾರ ಮತ್ತು ರಾಜಗೋಪುರಗಳು ಇರಲೇಬೇಕೆಂಬ ನಿಯಮವಿದೆ. ಇಲ್ಲಿನ ದೇವಸ್ಥಾನಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದ್ದರೂ ಇಂದಿಗೂ ಬಯಲು ಮಂದಿರದಲ್ಲೇ ಇರುವ ಸುಂದರ… Read More ಸೌತಡ್ಕ ಶ್ರೀ ಮಹಾಗಣಪತಿ

ಶಿರಸಿ ಮಾರಿಕಾಂಬಾ

ಶಿರಸಿ, ಉತ್ತರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ತಾಲ್ಲೂಕು ಕೇಂದ್ರವಾಗಿದ್ದು, ಧಾರ್ಮಿಕವಾಗಿ, ಪೌರಾಣಿಕವಾಗಿ ಸಾಂಸ್ಕೃತಿಕವಾಗಿ, ಐತಿಹಾಸಿಕವಾಗಿ ಮತ್ತು ಆರ್ಥಿಕವಾಗಿಯೂ ಕರ್ನಾಟಕದ ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧಿಯಾಗಿದೆ. ಶಿರಸಿ ಎಂದಾಕ್ಷಣ ಪ್ರತಿಯೊಬ್ಬರ ಬಾಯಿಯಲ್ಲಿಯೂ ಉದ್ಘಾರವಾಗುವುದೇ, ಪುರಾಣ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಸ್ಥಾನ ಮತ್ತು ಎರಡು ವರ್ಷಕ್ಕೊಮ್ಮೆ ಎಂಟು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬ ಜಾತ್ರೆ. ನಾವಿಂದು ಮಾರಿಕಾಂಬ ದೇವಾಲಯ, ಅಲ್ಲಿಯ ಸ್ಥಳ ಪುರಾಣದ ಜೊತೆ ಅಲ್ಲಿಯ ಜಾತ್ರಾ ಮಹೋತ್ಸವವನ್ನು ಕುಳಿತಲ್ಲಿಂದಲೇ ಕಣ್ತುಂಬಿಕೊಳ್ಳೋಣ ಬನ್ನಿ. ಶಿರಸಿಯ ಮಾರಿಕಾಂಬ… Read More ಶಿರಸಿ ಮಾರಿಕಾಂಬಾ