ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ಪತ್ರಿಕಾ ಧರ್ಮ

ಯಾವುದೇ ಕಾರ್ಯ ಅಥವಾ ಕಾರ್ಯಕ್ರಮವನ್ನು ನಡೆಸಿದ ನಂತರ ಅದರ ಫಲವನ್ನು ಯಾರು ಯಾರು ಅನುಭವಿಸಬಹುದು? ಎಂಬುದನ್ನು ಅತ್ಯಂತ ಸರಳ ಮತ್ತು ಸುಂದರವಾಗಿ ಈ ಸಂಸ್ಕೃತ ಸುಭಾಷಿತದಲ್ಲಿ ಉಲ್ಲೇಖಿಸಿಲಾಗಿದೆ. ಕರ್ತಾ ಕಾರಯಿತಾಶ್ಚೈವ ಪ್ರೇರಕಾಶ್ಚಾನುಮೋದಕಃ | ಸುಕೃತೇಃ ದುಕೃತೇಶ್ಚೈವ ಚತ್ವಾರಿ ಸಮಭಾಗಿನಃ || ಯಾವುದೇ ಒಳ್ಳೆಯ ಕೆಲಸವೇ ಇರಲಿ ಅಥವಾ ಕೆಟ್ಟ ಕೆಲಸವೇ ಇರಲಿ, ಅದನ್ನು ಮಾಡಿದವರು, ಮಾಡಿಸಿದವರು, ಅದಕ್ಕೆ ಪ್ರೇರಣೆ ಕೊಟ್ಟವನು, ಅದನ್ನು ನೋಡಿ ಸರಿ ತಪ್ಪುಗಳನ್ನು ವಿಶ್ಲೇಷಿಸದೇ ಸುಮ್ಮನಿದ್ದು ಆ ಕಾರ್ಯವನ್ನು ಅನುಮೋದಿಸಿದವರು. ಈ ನಾಲ್ಕೂ ಜನರೂ… Read More ಪತ್ರಿಕಾ ಧರ್ಮ

ಊಟ ತನ್ನಿಷ್ಟ, ನೋಟ ಪರರಿಷ್ಟ

ಕೆಲವು ವರ್ಷಗಳ ಹಿಂದೆ ನಿಜಕ್ಕೂ ನಮ್ಮ ಬಹುತೇಕರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ. ದುಡಿಯುವ ಕೈ ಎರಡಾದರೇ ಕುಳಿತು ತಿನ್ನುವ ಕೈ ಹತ್ತಾರು ಇರುತ್ತಿತ್ತು. ಸರಿಯಾಗಿ ಎರಡು ಹೊತ್ತು ಹೊಟ್ಟೆ ತುಂಬಾ ಊಟವೂ ಇಲ್ಲದಿರುವಂತಹ ಸಂಧರ್ಭವೂ ಇತ್ತು. ಆದರೂ ನಮ್ಮ ಅಜ್ಜ-ಅಜ್ಜಿಯರ ಆಯಸ್ಸು 80-90 ರ ಆಸುಪಾಸಿನಲ್ಲಿಯೇ ಇರುತ್ತಿತ್ತು. ಆಷ್ಟು ವರ್ಷಗಳ ಕಾಲ ಅವರು ಕಷ್ಟದಲ್ಲೇ ಜೀವಿಸಿದರೂ ಅವರಿಗೆಂದೂ ಬಿಪಿ, ಶುಗರ್, ಕಿಡ್ನಿ ತೊಂದರೆಯಾಗಲಿ ಇರಲೇ ಇಲ್ಲ. ಹೃದಯಾಘಾತ ಎನ್ನುವುದನ್ನು ಕೇಳೇ ಇರಲಿಲ್ಲ ಅವರೆಲ್ಲರೂ ಗಂಡಾ ಗುಂಡೀ… Read More ಊಟ ತನ್ನಿಷ್ಟ, ನೋಟ ಪರರಿಷ್ಟ

ಪೂರ್ಣಾಂಕ

ಇತ್ತೀಚಿನ SSLC ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ 625/625 ಅಂಕಗಳನ್ನು ಗಳಿಸುವವರ ಸಂಖ್ಯೆ ಹೆಚ್ಚಾಗುತ್ತಾ ಹೋದಂತೆಲ್ಲಾ, ಶಿಕ್ಷಣದ ಗುಣ ಮಟ್ಟದ ಬಗ್ಗೆ ಸಂದೇಹವಾಗುತ್ತಿದೆ. ನಿಜವಾಗಿಯೂ ಶಿಕ್ಷಣ ಕ್ಷೇತ್ರದಲ್ಲಿ ಆ ಪರಿಯಾಗಿ ಬೆಳೆದಿದ್ದಲ್ಲಿ ಮುಂದೆ ಅದೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮತ್ತು ನಿಜ ಜೀವನದಲ್ಲಿ ವಿಫಲರಾಗುತ್ತಿರುವ ಬಗ್ಗೆಯೂ ಶಿಕ್ಷಣ ಇಲಾಖೆ ಗಮನ ಹರಿಸಬೇಕಲ್ಲವೇ?… Read More ಪೂರ್ಣಾಂಕ

ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಭಾರತದಲ್ಲಿ ಕ್ರಿಕೆಟ್ ಒಂದು ರೀತಿಯ ಧರ್ಮ ಎಂಬತಾಗಿ  ಅದರ ಹೊರತಾಗಿ ಉಳಿದ ಕ್ರೀಡೆಗಳ ಬಗ್ಗೆ ಪ್ರೋತ್ಸಾಹ ಅಷ್ಟಕಷ್ಟೇ. ಬಹುತೇಕ ಪೋಷಕರು ತಮ್ಮ ಮಕ್ಕಳು ಡಾಕ್ಟರ್ ಇಲ್ಲವೇ ಇಂಜಿನೀಯರ್ ಆಗಿ ವಿದೇಶಗಳಿಗೆ ಹೋಗಿ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದಿಸಿ ಐಶಾರಾಮ್ಯದ ಜೀವನವನ್ನು ನಡೆಸಿದರೆ ಸಾಕು ಎಂದು ಬಯಸುವವರೇ ಹೆಚ್ಚಾಗಿದ್ದಾರೆ. ಅಪರೂಪಕ್ಕೆ ಅಲ್ಲೊಂದು  ಇಲ್ಲೊಂದು ವಯಕ್ತಿಕ ಆಸಕ್ತಿಯುಳ್ಳವರು ಟಿನ್ನಿಸ್, ಶೂಟಿಂಗ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು, ಕುಸ್ತಿ, ವೇಯ್ಟ್ ಲಿಫ್ಟಿಂಗ್ ಮುಂತಾದ ಕ್ರೀಡೆಗಳಲ್ಲಿ ಅಷ್ಟೂ ಇಷ್ಟೋ ಸಾಧನೆಗಳನ್ನು ಮಾಡುವ… Read More ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಕಛೇರಿಯ ಮೊದಲ ದಿನದ ಅನುಭವ

ಮಾರ್ಚ್ 11, 2020 ಬುಧವಾರ ಸಂಜೆ ಸುಮಾರು5:30ರ ಸಮಯ ಕಛೇರಿಯ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಂತಹ ಸಮಯ. ನಾವು ನಾಲ್ಕೈದು ಜನ ಒಟ್ಟಿಗೆ ಒಂದೇ ಕಾರಿನಲ್ಲಿ (car pool) ಮಾಡುತ್ತಿದ್ದಾಗ ಮೊಬೈಲಿನಲ್ಲಿ ಈ-ಮೇಲ್ ಬಂದ ಶಬ್ಧ ಕೇಳಿ ಯಾರಪ್ಪಾ ಈಗ ಮೇಲ್ ಕಳುಹಿಹಿರುವವರು? ಎಂದು ಮೋಬೈಲ್ ನೋಡುತ್ತಲೇ ಒಂದು ಕ್ಷಣ ಎದೆ ಝಲ್ ಎಂದಿದ್ದಂತೂ ಸುಳ್ಳಲ್ಲ. ನಮ್ಮ ಕಛೇರಿಯ ಹತ್ತಿರವೇ ಇದ್ದ ಕೆಲವು ಸಹೋದ್ಯೋಗಿಗಳು ವಾಸಿಸುತ್ತಿದ್ದಂತಹ ಅಪಾರ್ಟ್ಮೆಂಟಿನ ಕೆಲವರಿಗೆ ಕೊರೋನಾ ಸೋಂಕು ಧೃಢ ಪಟ್ಟಿರುವ ವಿಷಯ ತಿಳಿದು… Read More ಕಛೇರಿಯ ಮೊದಲ ದಿನದ ಅನುಭವ

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?