ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಇತ್ತೀಚೆಗೆ ವಾಟ್ಸಾಪಿನಲ್ಲಿ ಓದಿದ ಆಂಗ್ಲ ಸಂದೇಶವೊಂದರ ಈ ಭಾವಾನುವಾದವನ್ನು ಮೊದಲು ಓದಿದ ನಂತರ ವಿಚಾರಕ್ಕೆ ಬರೋಣ. ಒಂದೂರಿನಲ್ಲಿದ್ದ  ದೇವಸ್ಥಾನವೊಂದಕ್ಕೆ ಪ್ರತಿದಿನ ಮುಂಜಾನೆ ಒಂದು ಚಿಕ್ಕ ಹುಡುಗಿ ಬಂದು ದೇವರ ಮುಂದೆ ನಿಂತು, ಕಣ್ಗಳನ್ನು ಮುಚ್ಚಿ, ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಸಿಕೊಂಡು ಒಂದೆರಡು ನಿಮಿಷಗಳ ಕಾಲ ಏನನ್ನೋ ಗೊಣಗುತ್ತಾ, ನಂತರ ಕಣ್ಣು ತೆರೆದು, ನಮಸ್ಕರಿಸಿ, ನಗುತ್ತಾ ಓಡಿಹೋಗುತ್ತಿದ್ದಳು. ಇದು ಆಕೆಯ ದೈನಂದಿನ ಕಾರ್ಯವಾಗಿತ್ತು. ಅ ಪುಟ್ಟ ಹುಡುಗಿಯನ್ನು ಪ್ರತಿದಿನವೂ ಗಮನಿಸುತ್ತಿದ್ದ ದೇವಸ್ಥಾನದ ಅರ್ಚಕರಿಗೆ ಅಷ್ಟು ಸಣ್ಣ ಹುಡುಗಿಗೆ ಧರ್ಮ ಆಚಾರ… Read More ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಕಳೆದ ಎರಡು ದಿನಗಳಿಂದಲೂ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಡಾ. ಗಗನ್ ಕುಬೇರ್ ಅವರ ವಿಡಿಯೋ ವೈರಲ್ ಆಗಿರುವುದನ್ನು ನಾವೆಲ್ಲರೂ ನೋಡಿದಾಗ ನನ್ನ ಮನದಲ್ಲಿ ಮೂಡಿದ ಪ್ರಶ್ನೆ ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ? ಉತ್ತರ ಕರ್ನಾಟಕ ಮೂಲದ ಗಗನ್ ಕುಬೇರ್ ಪ್ರತಿಭಾವಂತ ಹುಡುಗ. ಕಷ್ಟ ಪಟ್ಟು ಶ್ರಮವಹಿಸಿ ಓದಿ ತನ್ನ ಅರ್ಹತೆಯಿಂದ ವೈದ್ಯಕೀಯ ಪದವಿಯನ್ನು ಗಳಿಸಿಕೊಂಡಿದ್ದ ಹುಡುಗ. ಈಗಿನ ಕಾಲದಲ್ಲಿ ಕೇವಲ ಎಂ.ಬಿ.ಬಿ.ಎಎಸ್. ಪದವಿ ಇದ್ದರೆ ಸಾಲದು ಸ್ನಾತಕೋತ್ತರ ಪದವಿಯನ್ನು ಪಡೆದಲ್ಲಿ ಮಾತ್ರವೇ ಗೌರವ ದೊರೆಯುತ್ತದೆ ಎಂಬುದನ್ನು… Read More ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ನಿಮಗೆಲ್ಲಾ ಗೊತ್ತಿರುವಂತೆ ನಮ್ಮ ವಿದ್ಯಾರಣ್ಯಪುರದಲ್ಲಿ ಪ್ರತೀ ತಿಂಗಳ 2ನೇ ಮತ್ತು4ನೇ ಭಾನುವಾರ ಸಾವಯವ ಸಂತೆ ಸುಮಾರು 3 ವರ್ಷಗಳಿಂದಲೂ ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದ್ದು ಲಾಕ್ಡೌನ್ ಸಮಯದಲ್ಲಿ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಹಂತ ಹಂತವಾಗಿ ಲಾಕ್ದೌನ್ ತೆರೆದ ನಂತರ ಸಂತೆ ಪುನರ್ ಅರಂಭಿಸಿದರೂ ಹಿಂದಿನಷ್ಟು ಜನ ಸಂದಣೆ ಇಲ್ಲದೇ ಹೋದರೂ ಗ್ರಾಹಕರಿಗೂ ಮತ್ತು ವ್ಯಾಪಾರಿಗಳಿಗೂ ಮೆಚ್ಚುವಂತೆ ನಡೆದುಕೊಂಡು ಹೋಗುತ್ತಿತ್ತು. ಎರಡು ವಾರಗಳ ಹಿಂದೆ ವಾರಾಂತ್ಯದ ಕರ್ಫೂ ಇದ್ದರೂ, ಜನರು ಎಂದಿನಂತೆ ಬಂದಿದ್ದ ಕಾರಣ ಈ ವಾರ ಹೇಗೂ… Read More ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಗೋವು ಕಳ್ಳರು

ಹೇಳಿ ಕೇಳಿ ಮನುಷ್ಯ ಸಂಘ ಜೀವಿ. ಹಾಗಾಗಿಯೇ ತಾನೊಬ್ಬನೇ ಒಂಟಿಯಾಗಿ ಇರಲು ಸಾಧ್ಯವಿರದೇ ಅನೇಕರ ಜೊತೆಗೆ ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಒಂದು ಕಡೆ ವಾಸಿಸಲು ಆರಂಭಿಸಿದ ಕಾರಣದಿಂದಲೇ ಊರು ಮತ್ತು ಕೇರಿಗಳು ಆರಂಭವಾಯಿತು. ಕೇವಲ ಮನುಷ್ಯರೇ ತನ್ನೊಂದಿಗೆ ಇದ್ದರೆ ಸಾಲದು ತನ್ನ ಜೊತೆ ಪಶು ಪ್ರಾಣಿ ಪಕ್ಷಿಗಳೂ ಇದ್ದರೆ ಚೆನ್ನಾ ಎಂದೆನಿಸಿದಾಗ ಆತ ಕಾಡಿನಿಂದ ಸಾಧು ಪ್ರಾಣಿಗಳನ್ನು ಹಿಡಿದು ತಂದು ಅವುಗಳನ್ನು ಪಳಗಿಸಿ ತನ್ನ ಸಾಕು ಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಲ್ಲದೇ, ಅವುಗಳನ್ನು ತನ್ನ ದಿನನಿತ್ಯದ ಜೀವನ ಪದ್ದತಿಗಳಲ್ಲಿ ಭಾಗವಾಗುವಂತೆ… Read More ಗೋವು ಕಳ್ಳರು

ಆಂತರಿಕ ಹಿತಶತ್ರುಗಳು

ಮೊನ್ನೆ ಪಂಜಾಬಿನಲ್ಲಿ ವಿವಿಧ ಯೋಜನೆಗಳನ್ನು ಉಧ್ಘಾಟಿಸುವ ಸಲುವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ನಿಗಧಿಯಂತೆ ಹೆಲಿಕ್ಯಾಪ್ಟರಿನಲ್ಲಿ ಪ್ರಯಾಣಿಸಲು ನಿರ್ಧಾರವಾಗಿದ್ದರೂ, ಹವಾಮಾನದ ವೈಪರೀತ್ಯದಿಂದಾಗಿ ಕೂಡಲೇ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಲು ನಿರ್ಧರಿಸಿ, ಆದರ ಸಂಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿ ಅವರ ರಕ್ಷಣೆಯ ಜವಾಬ್ಛಾರಿಯನ್ನು ನೋಡಿಕೊಳ್ಳಲು ಸೂಚಿಸಲಾಗಿರುತ್ತದೆ. ನಂತರ ವಿವಿಧ ಕಾರಣಗಳಿಂದಾಗಿ ನಮ್ಮ ಪ್ರಧಾನ ಮಂತ್ರಿಗಳನ್ನು ರಸ್ತೆಯ ಮಾರ್ಗದ ಮಧ್ಯದಲ್ಲೇ ಸುಮಾರು 15-20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ತಡೆದು ನಿಲ್ಲಿಸುವ ಮೂಲಕ ಈ ದೇಶದಲ್ಲಿ ಹಿಂದೆಂದೂ ಕಾಣದ ವಿಛಿದ್ರಕಾರಿ… Read More ಆಂತರಿಕ ಹಿತಶತ್ರುಗಳು