ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ

ಮಹಾರಾಷ್ಟ್ರದಲ್ಲಿ ಸಿಂಧೂ ತಾಯಿ ಎಂದರೆ ಅನಾಥರ ಪಾಲಿನ ಆಯಿ ಎಂದೇ ಖ್ಯಾತಿ ಪಡೆದಿದ್ದವರು. ಸುಮಾರು 50 ವರ್ಷಗಳಿಂದಲೂ  ಅನಾಥ ಮಕ್ಕಳಿಗೆ ಆಶ್ರಯ ನೀಡುವ ಮೂಲಕ ದಿಕ್ಕು ದೆಸೆ ಇಲ್ಲದ ಸಾವಿರಾರು ಅನಾಥ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡಿ ಅವರಿಗೆ ಸೂಕ್ತವಾದ ವಿದ್ಯಾಭ್ಯಾಸವನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಮಾಡಿರುವ ಕಾರಣ ಆಕೆ ತನಗೆ  207 ಅಳಿಯಂದಿರು ಮತ್ತು 36 ಸೊಸೆಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ನವೆಂಬರ್ 14, 1948 ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಿಂಧು… Read More ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು ಈ ಮಾತನ್ನು ನಮ್ಮ ಹಿರಿಯರು ಬಹುಶಃ ಮುಂದೊಂದು ದಿನ ಸ್ವಘೋಷಿತ ನಾದಬ್ರಹ್ಮ, ಮಹಾಗುರು ಎಂಬ ಬಿರುದಾಂಕಿತ ಗಂಗರಾಜು ಎಂಬ ದುರಹಂಕಾರ ಅವಿವೇಕಿಗೆಂದೇ ಬರೆದಿರಬೇಕು ಎಂದರು ಅತಿಶಯವಲ್ಲ. ಒಮ್ಮೆ ಮಾಡಿದರೆ ತಪ್ಪು ಪುನಃ ಪುನಃ ಅದೇ ತಪ್ಪನ್ನು ಮಾಡಿದಲ್ಲಿ ಪ್ರಮಾದ ಎಂದಾಗುತ್ತದೆ ಎನ್ನುವ ಸಾಮಾನ್ಯ ಜ್ಞಾನ ಗಂಗರಾಜುವಿನ ಅರಿವಿಗೆ ಬರಲಿಲ್ಲವೇ? ಕೆಲ ದಿನಗಳ ಹಿಂದೆಯಷ್ಟೇ ತನ್ನ ಸುತ್ತಲೂ ಇರುವ ವಂದಿಮಾಗಧರನ್ನು ಮೆಚ್ಚಿಸಲು ಮತ್ತವರ ಚಪ್ಪಾಳೆಗಾಗಿ ಓತಪ್ರೋತವಾಗಿ ಪೇಜಾವರ ಶ್ರೀಗಳು, ಬಿಳಿಗಿರಿರಂಗ… Read More ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?

ಅದು ಎಪ್ಪತ್ತರ ದಶಕ ನಾನು ಸರ್ಕಾರೀ ಪ್ರಾಥಮಿಕ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾಗ, ನಮ್ಮ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ರುಕ್ಮಿಣಿಯ ಮಗ ಉಮೇಶ, ನನ್ನ ಕೂದಲು ಕತ್ತರಿಸುತ್ತಿದ್ದ ನವೀನ್ ಸಲೂನ್ ಅಂಗಡಿಯವರ ಮಗ ನವೀನ, ನಾಗರಾಜ ಶೆಟ್ಟರ ಮಗ ರಂಗನಾಥ, ಸೈಕಲ್ ಶಾಪ್ ಶಫಿಯವರ ಮಗ ಅಬ್ದುಲ್ಲಾ ಎಲ್ಲರೂ ಒಟ್ಟಿಗೇ ಒಂದೇ ತರಗತಿಯಲ್ಲಿ ಪಕ್ಕ ಪಕ್ಕದಲ್ಲಿಯೇ ಕುಳಿತುಕೊಂಡು ಓದುತ್ತಿದ್ದೆವು. ಅಮ್ಮಾ ಬಟ್ಟೆ ಹಾಕಿ ಎಣ್ಣೆ ಹಚ್ಚಿ ಬೈತಲೆ ತೆಗೆದು ಕೂದಲು ಬಾಚಿದರೆ ಹೆಗಲ ಮೇಲೊಂದು ಹಡಪ, ಆ… Read More ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?

ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ಕಳೆದ ಒಂದು ವಾರದಲ್ಲಿ ಭಾರತೀಯ ಮೂಲದ ಇಬ್ಬರು ಹೆಸರುಗಳು ಎಲ್ಲೆಡೆಯಲ್ಲೂ ಪ್ರಸಿದ್ದಿ ಪಡೆದಿತ್ತು. ಮೊದಲನೆಯದ್ದು ಭಾರತೀಯ ಮೂಲದ ಅಮೆರಿಕನ್ ಪರಾಗ್ ಅಗರವಾಲ್, ಟ್ವಿಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾದರೆ, ಎರಡನೆಯದ್ದು ಮುಂಬೈನಲ್ಲಿ ಹುಟ್ಟಿ ಬಾಲ್ಯದಲ್ಲಿಯೇ ಕುಟುಂಬದೊಂದಿಗೆ ನ್ಯೂಜಿಲೆಂಡಿಗೆ ಹೋಗಿ ಅಲ್ಲಿಯ ಕ್ರಿಕೆಟ್ ತಂಡದ ಭಾಗವಾಗಿ ಭಾರತದ ವಿರುದ್ದ ಮುಂಬೈ ಕ್ರಿಕೆಟ್ ಟೆಸ್ಟಿನ ಮೊದಲನೇ ಇನ್ನಿಂಗ್ಸಿನಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವ ದಾಖಲೆಯನ್ನು ಸರಿಗಟ್ಟಿದ ಅಜಾಜ್ ಪಟೇಲ್ ಬಗ್ಗೆ. ಪ್ರತೀ ಬಾರಿಯೂ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಾಗತಿಕ… Read More ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಅಮ್ಮನ ಮಡಿಲು

ಅಮ್ಮಾ= ಅ+ಮ+ಮ+ಆ. ಅಕ್ಕರೆಯಿಂದ , ಮಮತೆ ಮತ್ತು ಮಮಕಾರದಿಂದ, ಆರೈಕೆ ಮಾಡುವವಳೇ ಅಮ್ಮಾ. ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದಕ್ಕೇ ಆಗಲಿ ಪರ್ಯಾಯ ಸಿಗಬಹುದೇನೋ ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತೀಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ಜನ್ಮ‌ ಕೊಟ್ಟ ತಾಯಿ ಮತ್ತು ಆಶ್ರಯ ನೀಡುತ್ತಿರುವ ಭೂಮಿ ತಾಯಿಗೆ ಪರ್ಯಾಯವೇ ಇಲ್ಲ‌. ಹಾಗಾಗಿ ಅವರಿಬ್ಬರೂ ಸದಾಕಾಲವೂ ಪೂಜ್ಯರು‌ ವಂದಿತರು ಮತ್ತು ಆದರಣೀಯರೇ ಸರಿ. ಒಂಭತ್ತು ತಿಂಗಳು ತನ್ನ… Read More ಅಮ್ಮನ ಮಡಿಲು

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ

ಸಮೀರ್ ವಾಂಖೆಡೆ

ವಾಂಖೆಡೆ ಎಂಬ ಹೆಸರು ಕೇಳಿದ ಕೂಡಲೇ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಾಗೋದೇ, ಮುಂಬೈನಲ್ಲಿರುವ ಸುಪ್ರಸಿದ್ದ ವಾಂಖೆಡೆ ಕ್ರೀಡಾಂಗಣ. 1974 ರಲ್ಲಿ ಮುಂಬೈ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿದ್ದ ಬ್ಯಾರಿಸ್ಟರ್ ಶೇಷರಾವ್ ವಾಂಖೆಡೆ ನೆನಪಿನಾರ್ಥ ಆ ಕ್ರೀಡಾಂಗಣಕ್ಕೆ ವಾಂಖೆಡೆ ಕ್ರೀಡಾಂಗಣ ಎಂಬ ಹೆಸರನ್ನಿಡಲಾಗಿದೆ. ಆದರೆ ಕಳೆದ ಎರಡು ಮೂರು ವಾರಗಳಿಂದ ದೇಶಾದ್ಯಂತ ಪ್ರಚಲಿವಿರುವ ಮತ್ತೊಂದು ಹೆಸರೇ ಸಮೀರ್ ವಾಂಖೆಡೆ. ಯಾರೀ ಸಮೀರ್ ವಾಂಖೆಡೆ? ಅವರ ಸಾಧನೆಗಳೇನು? ಅವರ ಹೆಸರು ಈಗ ಏಕೆ ಪ್ರಚಲಿತದಲ್ಲಿದೆ? ಎಂಬುದನ್ನು ಸವಿವರವಾಗಿ ತಿಳಿಯೋಣ. 2004ರ… Read More ಸಮೀರ್ ವಾಂಖೆಡೆ