ಕನ್ಯಾದಾನ ಮತ್ತು ಅಸಹಿಷ್ಣುತೆ

ಕಳೆದ ವಾರಾಂತ್ಯದಲ್ಲಿ #Nobindi_Nobusiness ಎಂಬ ಲೇಖನವೊಂದನ್ನು ಬರೆದು ಅದರಲ್ಲಿ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಹೇಗೆ ನಮ್ಮ ಹಿಂದೂ ಹಬ್ಬಗಳನ್ನು ಅವಹೇಳನ ಮಾಡಲಗುತ್ತಿದೆ ಹಾಗೂ ತಿರುಚಲಾಗುತ್ತಿದೆ ಎಂಬುದನ್ನು ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದೆ. ಈ ಲೇಖನವನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಲವರೊಡನೆ ಹಂಚಿಕೊಂಡಿದ್ದೆ. ಇಡೀ ಲೇಖನ ಯಾರದ್ದೇ ವಯಕ್ತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಹಿಂದೂ ಧರ್ಮದ ಬಗ್ಗೆ corporate company ಗಳಿಗೆ ಇರುವ ತಾತ್ಸಾರ, ನಮ್ಮ ಆಚರಣೆಗಳ ಬಗ್ಗೆ ತೋರುವ ಅಸಡ್ಡೆ ಮತ್ತು ತಾರತಮ್ಯವನ್ನು… Read More ಕನ್ಯಾದಾನ ಮತ್ತು ಅಸಹಿಷ್ಣುತೆ

#NoBindi_NoBusiness

ಅರೇ ಇದೇನಿದು ಇಂತಹ ಶೀರ್ಷಿಕೆ? ಜನರನ್ನು ಹೀಗೆ ಧರ್ಮಾಧಾರಿತವಾಗಿ ಕೆರಳುಸಿತ್ತಿದ್ದೀರಿ ಎಂದು ಭಾವಿಸುತ್ತಿದ್ದೀರಾ? ಅರೇ ಇದೇನಿದು ಹೀಗೆ ಕೋಮುವಾದವನ್ನು ಹರಡುತ್ತಿದ್ದೇನೆ ಎಂದು ಭಾವಿಸಿದ್ದೀರಾ? ಖಂಡಿತವಾಗಿಯೂ ಅಂತಹ ಪ್ರಯತ್ನವಾಗಿರದೇ ನಮ್ಮ ಸುತ್ತಮುತ್ತಲಿನವರು ನಮ್ಮ ಹಿಂದುಗಳ ಹೃದಯ ವೈಶಾಲ್ಯತೆಯನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತಿದ್ದಾರೆ ಎಂಬುದನ್ನು ಕೆಲವು ಉದಾಹರಣೆಯ ಮುಖಾಂತರ ವಿವರಿಸುತ್ತಿದ್ದೇನೆ ಅಷ್ಟೇ. ದಸರ ಮತ್ತು ದೀಪಾವಳಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬಗಳನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಹಿಂದೂಗಳು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಎಷ್ಟು ಚೆನ್ನಾಗಿ ಅಗುತ್ತದೆಯೋ? ಅದೇ… Read More #NoBindi_NoBusiness

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ

ಸಿರಿವಂತರ ಮಕ್ಕಳೇ ಹೀಗೇಕೇ?

ಅಕ್ಟೋಬರ್ 2, ಗಾಂಧಿ ಜಯಂತಿ. ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಟ್ಟವರಲ್ಲಿ ಮುಂಚೂಣಿಯಲ್ಲಿದ್ದ ನಾಯಕನಿಗೆ ಗೌರವ ಅರ್ಪಿಸುವ ಸಲುವಾಗಿ ಅವರು ಪಾಲಿಸುತ್ತಿದ್ದ ಅಹಿಂಸಾ ತತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಆ ದಿನ ದೇಶಾದ್ಯಂತ ಮಧ್ಯ ಮತ್ತು ಮಾಂಸದ ವ್ಯಾಪಾರವನ್ನು ನೀಷೇಧಿಸಲಾಗಿರುತ್ತದೆ ಮತ್ತು ಇಡೀ ದಿನ ಗಾಂಧಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸುವ ಕಾರ್ಯದಲ್ಲಿ ಬಹುತೇಕ ಎಲ್ಲರೂ ನಿರತರಾಗಿರುವಾಗಲೇ ಅದೇ ರಾತ್ರಿ ಮುಂಬೈಯ್ಯಿನ ಐಷಾರಾಮಿ ಹಡುಗೊಂದರಲ್ಲಿ ಬೆಚ್ಚಿ ಬೀಳುವ ಸಂಗತಿಯೊಂದು ನಡೆದಿದೆ. ಸಮಾಜದಲ್ಲಿ ಗಣ್ಯರೆನಿಸಿಕೊಂಡವರ ಮಕ್ಕಳು… Read More ಸಿರಿವಂತರ ಮಕ್ಕಳೇ ಹೀಗೇಕೇ?

ಎಲ್ಲರಂತಲ್ಲ ನನ್ನ ಮಕ್ಕಳು

ಅರೇ! ಇದೇನಿದು ಈ ರೀತಿಯ ಶೀರ್ಷಿಕೆ? ನಿಮ್ಮ ಮಕ್ಕಳು ಅದೇನು ಅಷ್ಟು ದೊಡ್ಡ ಸಾಧಕರೇ? ಎಂದು ಕೇಳಿದರೆ, ನಾನು ಯಾವುದೇ ಮುಚ್ಚುಮರೆ ಇಲ್ಲದೇ ಹೇಳುತ್ತೇನೆ. ಇಲ್ಲಾ ನನ್ನ ಮಕ್ಕಳು ಸರಾಸರಿಯವರು ಮತ್ತು ನಾನು ಸರಾಸರಿ ಮಕ್ಕಳ ತಂದೆ. ನನ್ನ ಮಕ್ಕಳು ಶಾಲೆಯ ಪರೀಕ್ಷೆಗಳಲ್ಲಿ ಅಂಕಗಳನ್ನು ಗಳಿಸುವಲ್ಲಿ ಸರಾಸರಿ. ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಓಹೋ!! ಎಂದು ಹೇಳಿಕೊಳ್ಳುವಂತಿಲ್ಲದ ಸರಾಸರಿಯವರು. ಹಾಗಾದರೆ ಆವರ ವಿಶೇಷತೆಗಳೇನು? ಎಂದು ಕೇಳಿದರೆ ಸದ್ಯಕ್ಕೆ ಸಮಾಜದ ದೃಷ್ಟಿಯಲ್ಲಿ ಮತ್ತು ಶೈಕ್ಷಣಿಕವಾಗಿ ಅವರು ಅಂತಹದ್ದೇನನ್ನೂ ಸಾಧಿಸಿಲ್ಲ… Read More ಎಲ್ಲರಂತಲ್ಲ ನನ್ನ ಮಕ್ಕಳು

ಲಂಚದಲ್ಲೂ ಡಿಜಟಲೀಕರಣ

ಮೊನ್ನೆ ಇನ್ನೂ, ಮಂಗಳೂರು ಟ್ರಾಫಿಕ್ ಪೋಲಿಸರ ಬಗ್ಗೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಇದಕ್ಕೆ ಪೂರಕವಾದ ಬೆಂಗಳೂರಿನ ಯಲಹಂಕದ ಬಳಿಯ ಮತ್ತೊಂದು ಪ್ರಸಂಗಕ್ಕೆ ನೆನ್ನೆ ನಾನೇ ಸಾಕ್ಷಿಯಾಗಬೇಕಾಗಿದ್ದು ನಿಜಕ್ಕೂ ಅಸಹ್ಯಕರ ಎನಿಸಿತು. ಹಾಗಾಗಿ ಮಂಗಳೂರಿನ ಪ್ರಕರಣವನ್ನು ಯಥಾವತ್ ಹಾಗೆಯೇ ಪ್ರಕಟಿಸಿ ನಂತರ ನನಗಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ಮಂಗಳೂರಿನ ಪ್ರಕರಣ ಇಂದು ಸ್ಟೇಟ್ ಬ್ಯಾಂಕ್ ನಲ್ಲಿ ನಾವು ರಾಂಗ್ ಸೈಡಲ್ಲಿ (one way) ಕಾರು ಚಲಾಯಿಸಿದ್ದಕ್ಕೆ ಈ ಪೋಲಿಸ್ ಅಡ್ಡಗಟ್ಟಿ ಫೈನ್ ಕಟ್ಟಲು ಹೇಳಿದ್ರು, ರಶೀದಿ ಬೇಕಾ? ಬೆಡ್ವಾ?… Read More ಲಂಚದಲ್ಲೂ ಡಿಜಟಲೀಕರಣ

ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ನೆನ್ನೆ ರಾತ್ರಿಯಿಂದ ಹಿಂದೂ ವ್ಯಕ್ತಿಯೊಬ್ಬರು ಬುರ್ಕ ಧರಿಸಿದ ಮಹಿಳೆಯೊಬ್ಬರಿಗೆ ತನ್ನ ಬೈಕಿನಲ್ಲಿ ಡ್ರಾಪ್​ ಕೊಟ್ಟಿದ್ದಕ್ಕಾಗಿ ಕೆಲವು ಮತಾಂಧರ ಗುಂಪು ಧಾಳಿ ನಡೆಸಿ ಹಿಂದು ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಬಳಿಯ ಡೈರಿ ಸರ್ಕಲ್​ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶುಕ್ರವಾರ ರಾತ್ರಿ ಆ ವ್ಯಕ್ತಿ ಮತ್ತು ಮಹಿಳೆ ಇಬ್ಬರೂ ಒಂದೇ ಬ್ಯಾಂಕಿನಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಸಹೋದ್ಯೋಗಿಯಾಗಿದ್ದು ಅದಾಗಲೇ ಸಮಯವಾಗಿದ್ದ ಕಾರಣ, ಇಬ್ಬರ ಮನೆಯೂ ಒಂದೇ… Read More ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ