ವರ್ಕ್ ಫ್ರಂ ಹೋಮ್

ಶಂಕರ ದೂರದ  ಹಾಸನದ ಜಿಲ್ಲೆಯ ಸಣ್ಣದೊಂದು ಗ್ರಾಮದಲ್ಲಿ ಹುಟ್ಟಿ ಅಲ್ಲಿಯೇ ತನ್ನ ವಿದ್ಯಾಭ್ಯಾಸವನ್ನೆಲ್ಲವನ್ನೂ ಮುಗಿಸಿದವ. ಇದ್ದ ಸಣ್ಣ ಸಾಗುವಳಿ ಅವರ ಜೀವನಕ್ಕೆ ಸಾಲುತ್ತಿರಲಿಲ್ಲವಾದ್ದರಿಂದ ಬದುಕನ್ನು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದು  ಅರಂಭದಲ್ಲಿ  ಅವರಿವರ ಕೈಕಾಲು ಹಿಡಿದು ಸಣ್ಣ ಕಂಪನಿಯೊಂದರಲ್ಲಿ ಕೆಲಸವನ್ನು ಗಿಟ್ಟಿಸಿಕೊಂಡು ನಂತರ ತನ್ನ ಸ್ವಸಾಮರ್ಥ್ಯದಿಂದ ಬೇಗನೇ ಮೇಲೆ ಬಂದು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಐದಂಕಿಯ ಸಂಬಳ ಪಡೆಯುವಷ್ಟರ ಮಟ್ಟಿಗೆ ಬೆಳೆಯುತ್ತಾನೆ. ಬದುಕಿನಲ್ಲಿ ಎಷ್ಟೇ ಮೇಲಕ್ಕೆ ಏರಿದ್ದರೂ  ತನ್ನ ಹುಟ್ಟೂರು ತಂದೆ ತಾಯಿ, ತಾತಾ ಅಜ್ಜಿಯರನ್ನು ಮರೆಯದ ಶಂಕರ… Read More ವರ್ಕ್ ಫ್ರಂ ಹೋಮ್

ಲಕ್ಷದ್ವೀಪ

ಕಳೆದ ವಾರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಲಕ್ಷದ್ವೀಪ ಪ್ರವಾಸದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಪ್ರಪಂಚಾದ್ಯಂತ ಪ್ರವಾಸೀತಾಣಗಳು ಅಲ್ಲೋಲಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

ಲಕ್ಷದ್ವೀಪದ ಕುರಿತಾದ ಪ್ರಧಾನಿಗಳ ಪ್ರೇಮ ಕೇವಲ ನೆನ್ನೆಯ ಮೊನ್ನೆಯದ್ದಾಗಿರದೇ, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆಯೇ ಈ ಕುರಿತಾಗಿ ತಮ್ಮ ದೂರದೃಷ್ಟಿತನದಿಂದ ಅಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ, ಲಕ್ಷದ್ವೀಪದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಲಕ್ಷದ್ವೀಪ

ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಸಾಮ್ಯಾನ್ಯವಾಗಿ ನಮ್ಮ ಹಿಂದಿನ ಕಾಲದವರು ಈಗಿನಷ್ಟು ಆರ್ಥಿಕವಾಗಿ ಸಧೃಡರಿಲ್ಲದಿದ್ದರೂ, ಸರಿಯಾಗಿ ಎರಡು ಹೊತ್ತು ಊಟ ಮಾಡಲು ಇರುತ್ತಿರದಿದ್ದರೂ, ಯಾವುದೇ ರೋಗ ರುಜಿನಗಳಿಲ್ಲದೇ ಆರಾಮವಾಗಿ 80-90 ವರ್ಷಗಳು ಜೀವಿಸುತ್ತಿದ್ದರು. ಅದೆಷ್ಟೋ ಜನ ಶತಾಯುಷಿಗಳಾಗಿಯೂ ಜೀವಿಸಿದ್ದರು. ಅವರ ನೆನಪಿನ ಶಕ್ತಿಯಂತೂ ಕೇಳುವುದೇ ಬೇಡ. ಹಾಗಾಗಿಯೇ ಸುಲಭವಾಗಿ ಐದಾರು ತಲೆಮಾರುಗಳನ್ನು ಸುಲಭವಾಗಿ ನೋಡಬಹುದಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವೆಲ್ಲವೂ ಮಾಯವಾಗಿದೆ. 20-30 ವರ್ಷಕ್ಕೇ ಕೂದಲೆಲ್ಲಾ ಬೆಳ್ಳಾಗಾಗಿ ಅದೆಷ್ಟೋ ಮಂದಿಗಳಿಗೆ ಕೂದಲೆಲ್ಲ ಉದುರಿ ಹೋಗಿ, ಹತ್ತಾರು ರೀತಿಯ ಖಾಯಿಲೆಗಳಿಗೆ ತುತ್ತಾಗಿ ಊಟಕ್ಕಿಂತಲೂ ಹೆಚ್ಚಾಗಿ… Read More ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ದುರಂತ – 1 : ಗಂಡ ಹೆಂಡತಿ ಮತ್ತು ವಯಸ್ಸಿಗೆ ಬಂದಂತಹ ಇದ್ದ ಸಣ್ಣ ಮಧ್ಯಮ ವರ್ಗದ ಕುಟುಂಬ. ಅದು ಹೇಗೋ ಗಂಡ ಮತ್ತು ಹೆಂಡತಿ ಇಬ್ಬರಿಗೂ ಕೊರೋನಾ ಮಹಾಮಾರಿ ವಕ್ಕರಿಸಿಕೊಂಡು ಇಬ್ಬರು ಅಸ್ಲತ್ರೆಗೆ ದಾಖಲಾಗುತ್ತಾರೆ ಈ ವಿಷಯ ತಿಳಿದ ಮಗ ಪಟ್ಟಣದಿಂದ ಓಡೋಡಿ ಬರುತ್ತಾನೆ. ಆ ಔಷಧಿ ನಮ್ಮಲ್ಲಿ ಸ್ಟಾಕ್ ಇಲ್ಲಾ.. ಆಮ್ಕಜನಕದ ಕೊರತೆ ಇದೆ. ಇಂತಹವರ ಹತ್ತಿರ ಕೆಲವೇ ಸ್ಟಾಕ್ ಔಷಧಿ ಇದೆಯಂತೆ ಪ್ರಯತ್ನಿಸಿ ನೋಡಿ ನಂಬರ್ ಕೊಡ್ತಾರೆ. ಅವರಿಗೆ ಕರೆ ಮಾಡಿದರೆ ಒಂದಕ್ಕೆ… Read More ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ಬಿಟಿಎಸ್ ಫುಟ್ ಬೋರ್ಡ್ ಅನುಭವ

ಎಂಭತ್ತರ ದಶಕ ಹದಿಹರೆಯದ ವಯಸ್ಸು. ಆಗ ತಾನೆ ಹೈಸ್ಕೂಲ್ ಮುಗಿಸಿ ಕಾಲೇಜಿಗೆ ಸೇರಿಕೊಂಡಿದ್ದೆ. ಕಾಲೇಜಿಗೆ ಶಾಲೆಯ ತರಹ ಒಂದು ಮಣಭಾರದ ಪುಸ್ತಕಗಳನ್ನು ಹೊತ್ತುಕೊಂಡು ಹೊಗಬೇಕಿರಲಿಲ್ಲ. ಕೇವಲ ನಾಲ್ಕಾರು ಪುಸ್ತಕಗಳನ್ನು ಒಂದು ಚೆಂದನೆಯ ಚೀಲದಲ್ಲಿ ಹಾಕಿಕೊಂಡು ಬಣ್ಣ ಬಣ್ಣದ ಪ್ಯಾಂಟ್ ಶರ್ಟು ಹಾಕಿಕೊಂಡು ಕಾಲೇಜಿಗೆ ಹೋಗುವುದೆಂದರೆ ಎನೋ ಒಂದು ತರಹ ಹಿತಾನುಭವ. ನಾವು ಇದ್ದಿದ್ದು ಬಿಇಎಲ್ ಬಳಿ ಕಾಲೇಜ್ ಇದ್ದದ್ದು ಆರ್. ಟಿ ನಗರ. ನಮ್ಮ ಕಡೆಯಿಂದ ನೇರ ಬಸ್ ಸಂಪರ್ಕ ಇಲ್ಲದಿದ್ದ ಕಾರಣ ಕನಿಷ್ಠ ಪಕ್ಷ ಎರಡು… Read More ಬಿಟಿಎಸ್ ಫುಟ್ ಬೋರ್ಡ್ ಅನುಭವ

ಭಾಷಾ ಭೂಷಣ

ಇತ್ತೀಚೆಗೆ ಟಿವಿಯಲ್ಲಿ ಪೌರಾಣಿಕ ಚಿತ್ರವೊಂದು ಪ್ರಸಾರವಾಗುತ್ತಿತ್ತು. ಪೌರಾಣಿಕ ಚಿತ್ರ ಎಂಬ ಕುತೂಹಲದಿಂದ ನೋಡಲು ಕುಳಿತುಕೊಂಡು ಕೊಂಡ ಅರ್ಧಗಂಟೆಗಳಲ್ಲಿಯೇ ಮನಸ್ಸಿಗೆ ನೋವಾಗಿ ನೋಡಲು ಅಸಹನೀಯವಾಯಿತು. ಅಕಾರ ಮತ್ತು ಹಕಾರದ ನಡುವಿನ ವ್ಯತ್ಯಾಸ ಅರಿಯದ, ಅವರ ಸಂಭಾಷಣೆಗೂ ಅವರ ಆಂಗಿಕ ಅಭಿನಯಕ್ಕೂ ಸಂಬಂಧವೇ ಇರದ, ಕನ್ನಡ ಭಾಷೆಯ ಮೇಲೆ ಸ್ವಲ್ಪವೂ ಹಿಡಿತವಿರದ ಅಪಾತ್ರರನ್ನೆಲ್ಲಾ ಪೌರಾಣಿಕ ಪಾತ್ರದಲ್ಲಿ ನೋಡುತ್ತಿದ್ದಾಗ, ಕನ್ನಡ ಕಸ್ತೂರಿ ಎನ್ನುವಂತಹ ಸೊಗಡಿರುವ ಭಾಷೆಯನ್ನು ಇಷ್ಟು ಕೆಟ್ಟದಾಗಿ ಕೊಲೆ ಮಾಡುತ್ತಿದ್ದಾರಲ್ಲಾ? ಎಂದೆನಿಸಿ ಕೂಡಲೇ ಅಭಿನಯ ಮತ್ತು ಭಾಷ ಶುದ್ಧತೆಯಲ್ಲಿ ಪರಿಪಕ್ವವಾಗಿದ್ದ… Read More ಭಾಷಾ ಭೂಷಣ

ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು.  ಆದರೆ  ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ  ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು.  ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್