ಪ್ರಕೃತಿ ವಿಕೋಪ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ನಿರ್ಮಿಸಲು ನೆರವೇರಿದ ಶಿಲಾನ್ಯಾಸದಲ್ಲಿ ದೇಶದ ಎಲ್ಲಾ ಭಾಗಗಳ ನದಿಗಳ ನೀರು ಮತ್ತು ಪುಣ್ಯಕ್ಷೇತ್ರಗಳ ಮೃತ್ತಿಕೆಯನ್ನು ಬಳೆಸಲಾಗಿತ್ತು. ಅಂತಹ ಪುಣ್ಯಕಾರ್ಯಕ್ಕೆ ಕನ್ನಡಿಗರ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಿಂದಲೂ ಜುಲೈ 23ರಂದು ಕಾವೇರಿ ತೀರ್ಥ ಹಾಗೂ ಮೃತ್ತಿಯನ್ನು ಕಳುಹಿಸಿ, ಮನೆಯಿಂದಲೇ ರಾಮಮಂದಿರದ ಶಿಲಾನ್ಯಸ ನೋಡಿ ಸಂಭ್ರಮಿಸಿದ್ದ ತಲಕಾವೇರಿಯ ಪ್ರಧಾನ ಅರ್ಚಕರಾದ ಟಿ.ಎಸ್. ನಾರಾಯಣಾಚಾರ್ ಸೇರಿದಂತೆ ಅವರ ಹಿರಿಯ ಸೋದರ, ಪತ್ನಿ ಹಾಗೂ ಇಬ್ಬರು ಸಹಾಯಕ ಅರ್ಚಕರು ಮತ್ತು ಅವರ… Read More ಪ್ರಕೃತಿ ವಿಕೋಪ

ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ನಮ್ಮ ದೇಶದ ಯಾವುದೇ ಪ್ರದೇಶಕ್ಕೆ ಹೋಗಿ ಯಾರನ್ನಾದರೂ ನಿಮ್ಮ ಹೆಸರೇನು? ನಿಮ್ಮ ತಂದೆಯ ಹೆಸರೇನು? ನಿಮ್ಮ ತಾತನ ಹೆಸರೇನು? ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಮುತ್ತಾತನ ಹೆಸರೇನು? ಎಂದು ಕೇಳ ಬಹುದು ಅದಕ್ಕಿಂತ ಹೆಚ್ಚಿನದ್ದೇನೂ ಅವರಿಗೆ ಗೊತ್ತಿರಲಿಕ್ಕಿಲ್ಲ. ಆದರೆ ಅದೇ ರಾಮನ ಬಗ್ಗೆ ಕೇಳಿ ಆತ ಥಟ್ ಅಂತಾ,‌ ಪ್ರಭು ಶ್ರೀ ರಾಮಾ, ವಿಷ್ಣುವಿನ ದಶಾವತಾರದಲ್ಲಿ ಏಳನೇ ಅವತಾರ. ದಶರಥನಿಗೆ ಮೂರು ಜನ ಆಧಿಕೃತವಾದ ರಾಣಿಯರಿದ್ದರೂ ಮಕ್ಕಳಾಗದಿದ್ದಾಗ ಪುತ್ರಕಾಮೇಷ್ಟಿ ಯಾಗದ ಫಲವಾಗಿ ಜನಿಸಿದ ನಾಲ್ಕು… Read More ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ವೈದ್ಯರೋ? ಯಮಧೂತರೋ?

ಕಳೆದ ವಾರ ಬೆಳ್ಳಂಬೆಳಿಗ್ಗೆ ಆಂಬ್ಯುಲೆನ್ಸ್ ಶಬ್ಧ ಮಾಡುತ್ತಾ ನಮ್ಮ ಮನೆಯ ಮುಂದೆ ಬಂದು ನಿಂತದ್ದೇ ತಡಾ ಎಲ್ಲರಿಗೂ ದಿಗ್ಭ್ರಮೆ ಮತ್ತು ಒಂದು ಕ್ಷಣ ಆಶ್ಚರ್ಯವೂ ಸಹ. ನಮ್ಮ ರಸ್ತೆಯ ಬಹುತೇಕ ಮನೆಯವರು ತಮ್ಮ ಮನೆಯಿಂದ ಹೊರಬಂದು ನಮ್ಮನ್ನೇ ಅನುಮಾನಾಸ್ಪದವಾಗಿ ನೋಡಲಾರಂಭಿಸಿದರು. ಮನೆಯ ಅಂಗಳದಲ್ಲೇ ಇದ್ದ ಮಗ ಏನೆಂದು ವಿಚಾರಿಸಿದಾಗ, ಬಂದವರು ನಮ್ಮ ಪಕ್ಕದ ಮನೆಯ ಮಾಲಿಕರನ್ನು ವಿಚಾರಿಸಿದ್ದಾರೆ. ಆದರೆ ಅವರು ಕೆಲ ವರ್ಷಗಳ ಹಿಂದೆಯೇ ಆ ಮನೆಯನ್ನು ಬಾಡಿಗೆಗೆ ಕೊಟ್ಟು ನಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಅವರ… Read More ವೈದ್ಯರೋ? ಯಮಧೂತರೋ?

ಗಂಡಸರೇ ಹುಷಾರ್ !!

ಸಾಧಾರಣವಾಗಿ ಪತ್ರಿಕೆಗಳ ಮೂರನೇಯ ಪುಟದಲ್ಲಿ ಪ್ರಕಟವಾಗುವ ಕ್ರೈಮ್ ಸುದ್ದಿ ನೋಡುವಾಗ ಅಮಾಯಕ ಹುಡುಗಿಗೆ ಮೋಸ ಮಾಡಿದ ಹುಡುಗ ಎಂಬ ಸುದ್ದಿ ಇತ್ತೀಚಿನ‌ ದಿನಗಳಲ್ಲಿ ಸರ್ವೇ ಸಾಮಾನ್ಯ. ಆದರೆ ಇಲ್ಲೊಂದು ಸುದ್ದಿ ಅದರ ತದ್ವಿರುದ್ಧವಾಗಿ ಹುಡುಗರೇ ಯುವತಿಯರಿಂದ ಮೋಸ ಹೋದ ಅಪರೂಪ ಪ್ರಕರಣಗಳು ಹೆಚ್ಚಾಗಿ ಸಭ್ಯ ಗಂಡಸರೆಲ್ಲಾ ತಲೆ ತಗ್ಗಿಸುವಂತಾಗಿದೆ ಖಾಸಗೀ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೈಟ್‌ ಫೀಲ್ಡ್‌ ನ ದೊಡ್ಡನೆಕ್ಕುಂದಿ ಬಳಿಯ ಯುವಕನೊಬ್ಬ ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದ. ಹದಿಹರೆಯದ ವಯಸ್ಸು ಮತ್ತು ಅಂತರ್ಜಾಲದಲ್ಲಿ… Read More ಗಂಡಸರೇ ಹುಷಾರ್ !!

ಆಲ್ ರೈಟ್ ಮುಂದಕ್ಕೆ ಹೋಗೋಣ

ಸುಮಾರು ದಿನಗಳಿಂದ ಕರೆ ಮಾಡದಿದ್ದ ನನ್ನ ಅಮೇರಿಕಾದ ನ್ಯೂಜೆರ್ಸಿಯಲ್ಲಿರುವ ಸ್ನೇಹಿತ ನಿನ್ನೆ ರಾತ್ರಿ ಕರೆ ಮಾಡಿದ್ದ. ಸಾಧಾರಣವಾಗಿ ತಿಂಗಳಿಗೊಮ್ಮೆಯೋ ಇಲ್ಲವೇ ಎರಡು ತಿಂಗಳಿಗಳಿಗೆ ಒಮ್ಮೆ ಕರೆ ಮಾಡಿ ಗಂಟೆ ಗಟ್ಟಲೆಗಳ ಕಾಲ ಉಭಯ ಕುಶಲೋಪರಿಯನ್ನು ವಿಚಾರಿಸುವುದು ನಮ್ಮಿಬ್ಬರ ನಡುವಿನ ವಾಡಿಕೆ. ಇತ್ತೀಚೆಗೆ ಸುಮಾರು ಐದಾರು ತಿಂಗಳುಗಳಿಂದ ಆತ ಕರೆ ಮಾಡಿರಲಿಲ್ಲ. ಬಹುಶಃ ಕೆಲಸದ ಬಾಹುಳ್ಯದಿಂದಲೋ ಇಲ್ಲವೇ ಕೂರೋನಾ ಪರಿಸ್ಥಿತಿಯಿಂದಾಗಿ ಆತ ಕರೆ ಮಾಡದಿರಬಹುದು ಎಂದು ನಾನೂ ಕೂಡಾ ಸುಮ್ಮನಾಗಿದ್ದೆ. ಯಥಾ ಪ್ರಕಾರ ಮನೆಯಲ್ಲಿ ಎಲ್ಲರೂ ಹೇಗಿದ್ದಾರೆ? ಮಕ್ಕಳ… Read More ಆಲ್ ರೈಟ್ ಮುಂದಕ್ಕೆ ಹೋಗೋಣ

ಜನಮರುಳೋ ಜಾತ್ರೆ ಮರುಳೋ?

ಕಳೆದು ಒಂದೆರಡು ವಾರಗಳಿಂದ ಕೂರೋನಾ ರೋಗಾಣುವುಗಿಂತಲೂ ಅತ್ಯಂತ ಹೆಚ್ಚಾಗಿ ಹರಡಿದ ವಿಷಯವೆಂದರೆ, ಮಂಡ್ಯಾ ಜಿಲ್ಲೆಯ ಮಳವಳ್ಳಿ ತಾಲ್ಲೂಕ್ಕಿನ ನೆಟ್ಕಲ್ ಎಂಬ ಗ್ರಾಮದ ಮಹತ್ವಾಕಾಂಕ್ಷಿ ಪ್ರತಾಪ್ ಅಲಿಯಾಸ್ ದ್ರೋಣ್ ಪ್ರತಾಪ್ ವಿಷಯ ಬಗ್ಗೆಯೇ. ಸುಮಾರು ಒಂದೆರಡು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆಯೇ ದ್ರೋಣ್ ಕುರಿತಂತೆ ತನ್ನ ಸಂಶೋಧನೆಯ ಫಲವಾಗಿ ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿರುವ ಯುವ ವಿಜ್ಞಾನಿ, ಕಸದಿಂದ ರಸ ತೆಗೆಯುವಂತೆ ಹಳೆಯ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿಕೊಂಡು ಸುಮಾರು 600 ಕ್ಕೂ ಹೆಚ್ಚು ದ್ರೋಣ್ ಗಳನ್ನು ತಯಾರಿಸಿದ್ದಾನೆ. ಕೇವಲ 21 ವರ್ಷದ… Read More ಜನಮರುಳೋ ಜಾತ್ರೆ ಮರುಳೋ?

ಅಪರೂಪ ಮತ್ತು ಅನುರೂಪದ ಅವಳಿಗಳು

ಕೆಲ ವರ್ಷಗಳ ಹಿಂದೆ ಗ್ರೇಟರ್ ನೋಯ್ಡಾದ ಆಸ್ಟರ್ ಪಬ್ಲಿಕ್ ಶಾಲೆಯ ಮಾನ್ಸಿ ಸಿಂಗ್ ಮತ್ತು ಮಾನ್ಯ ಸಿಂಗ್ ಅವಳಿ ಸಹೋದರಿಯರಿಬ್ಬರೂ ಸಿಬಿಎಸ್ಇ ದ್ವಿತೀಯ ಪಿಯುಸಿಯಲ್ಲಿ ಶೇ.95.8ರಷ್ಟು ಅಂಕ ಪಡೆಡ ಕುರಿತಾಗಿ ಲೇಖನವನ್ನು ಓದಿದ್ದೀರಿ.

ಈಗ ಧರ್ಮಸ್ಥಳದ ಉಜಿರೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಸ್ಪಂದನ ಮತ್ತು ಸ್ಪರ್ಶ ಅವರಿಬ್ಬರೂ, ಸರಿಸಮಾನವಾಗಿ 594/600 ಅಂಕ ಪಡೆಯುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿರುವ ಕುತೂಹಲಕಾರಿ ವಿಷಯ ಇದೋ ನಿಮಗಾಗಿ… Read More ಅಪರೂಪ ಮತ್ತು ಅನುರೂಪದ ಅವಳಿಗಳು

ವಿಕಾಸ್‌ ದುಬೆ

ನಿಜವಾಗಲೂ ಈತನ ಕುರಿತಾಗಿ ಈ ರೀತಿ ಒಂದು ಲೇಖನವನ್ನಾಗಲೀ ಅಥವಾ ಆತನ ಬಗ್ಗೆ ಮಾತನಾಡಿಕೊಳ್ಳ ಬೇಕಾದಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯೇ ಅಲ್ಲದಿದ್ದರೂ ಕಳೆದ ಒಂದು ವಾರಗಳಿಂದ ಈತ ದೇಶಾದ್ಯಂತ ಎಲ್ಲಾ ದೃಶ್ಯಮಾದ್ಯಮಗಳಿಗೂ ಟಿ.ಆರ್.ಪಿ ತಂದು ಕೊಟ್ಟಂತಹ ವ್ಯಕ್ತಿ ಎನ್ನುವುದಂತೂ ಸತ್ಯ. 2001 ರಲ್ಲಿ, ಉತ್ತರ ಪ್ರದೇಶದ ಬಿಜೆಪಿ ಸಚಿವರಾಗಿದ್ದ ಸಂತೋಷ್ ಶುಕ್ಲಾ ಅವರನ್ನು ಹಾಡಹಗಲಲ್ಲೇ ಗುಂಡಿಕ್ಕಿ ಕೊಲ್ಲುವ ಮೂಲಕ ಒಮ್ಮೆಂದೊಮ್ಮೆಲೆ ಪ್ರವರ್ಧಮಾನಕ್ಕೆ ಬಂದಂತಹ ಪಾತಕಿ ಸುಮಾರು ಆರು ತಿಂಗಳ ಪೋಲೀಸರಿಗೆ ಶರಣಾಗಿ ಕೊಲೆಯಾದ ಸಚಿವರ ಗನ್ ಮೆನ್… Read More ವಿಕಾಸ್‌ ದುಬೆ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?