ಹಾರುವ ಸಿಖ್, ಮಿಲ್ಕಾ ಸಿಂಗ್

ಅದು 1960ರ ಸಮಯ ರೋಮ್‌ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಲಿದೆ. ಎಂದಿನಂತೆ ಭಾರತದಿಂದಲೂ ಕೆಲ ಆಟಗಾರರು ಹೋದಾ ಪುಟ್ಟಾ ಬಂದಾ ಪುಟ್ಟಾ ಎನ್ನುವಂತೆ ಬರಿಗೈಯಲ್ಲಿ ವಾವಾಸಾಗುತ್ತಿದ್ದ ದಿನಗಳಾದರೂ ಈ ಒಲಿಂಪಿಕ್ಸ್ ಭಾರತೀಯರ ಪಾಲಿಗೆ ಅತ್ಯಂತ ವಿಶೇಷವಾಗಿತ್ತು. ಭಾರತದ ಪರ 31ರ ತರುಣ ಅಥ್ಲೆಟಿಕ್ಸ್ ನಲ್ಲಿ ಏನಾದರೂ ಸಾಧಿಸಬಹುದು ಎಂಬ ನಿರೀಕ್ಷೆ ಇತ್ತು. ಏಕೆಂದರೆ 1956ರಲ್ಲಿ ನಡೆದ ಮೆಲ್ಬೊರ್ನ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಮೊದಲಬಾರಿಗೆ ಭಾಗವಹಿಸಿದ್ದ ಇದೇ ಓಟಗಾರ, ಸಾಕಷ್ಟು ಅನುಭವವಿಲ್ಲದ ಕಾರಣ ಅಷ್ಟೆನೂ ಸಾಧನೆ ಮಾಡಲಾಗದಿದ್ದರೂ, ಆ ಕ್ರೀಡಾಕೂಟದಿಂದ ಕಲಿತು,… Read More ಹಾರುವ ಸಿಖ್, ಮಿಲ್ಕಾ ಸಿಂಗ್

ಲಕ್ಷದ್ವೀಪ

ಕಳೆದ ವಾರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಲಕ್ಷದ್ವೀಪ ಪ್ರವಾಸದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಪ್ರಪಂಚಾದ್ಯಂತ ಪ್ರವಾಸೀತಾಣಗಳು ಅಲ್ಲೋಲಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

ಲಕ್ಷದ್ವೀಪದ ಕುರಿತಾದ ಪ್ರಧಾನಿಗಳ ಪ್ರೇಮ ಕೇವಲ ನೆನ್ನೆಯ ಮೊನ್ನೆಯದ್ದಾಗಿರದೇ, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆಯೇ ಈ ಕುರಿತಾಗಿ ತಮ್ಮ ದೂರದೃಷ್ಟಿತನದಿಂದ ಅಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ, ಲಕ್ಷದ್ವೀಪದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಲಕ್ಷದ್ವೀಪ

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಬೆಂಗಳೂರಿನಲ್ಲಿ ಮೊಟ್ಟ ಮೊದಲ ಆಟೋರಿಕ್ಷಾ

ಹಿಂದೆಲ್ಲಾ, ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗುವುದಕ್ಕೆ ನಡಿಗೆಯೇ ಮೂಲವಾಗಿದ್ದು ನಂತರದ ದಿನಗಳಲ್ಲಿ ಎತ್ತಿನ ಗಾಡಿಗಳು ಜನರನ್ನು ಮತ್ತು ವಸ್ತುಗಳನ್ನು ಸಾಗಿಸಲು ಬಳಸುತ್ತಿದ್ದರು. ಇನ್ನು ಕೆಲವರು ಸೈಕಲ್ ಮುಖಾಂತರ ಒಂದಿಬ್ಬರು ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತಲು ಹೆಚ್ಚಿನ ಜನರನ್ನು ಆರಾಮದಾಯಕವಾಗಿ ಪ್ರಯಾಣಿಸುವ ಸಲುವಾಗಿ ಕುದುರೇ ಗಾಡಿಗಳನ್ನು ಬಳಸಲು ಅರಂಭಿಸಿದರು ಇವು ಜಟಕಾಗಾಡಿಗಳು, ಟಾಂಗ, ಜಟ್ಕಾ (ಉರ್ದು ಭಾಷೆಯಿಂದ ಬಂದಿರುವ ಪದ) ಎಂದೇ ನಾಡಿನಾದ್ಯಂತ ಪ್ರಖ್ಯಾತವಾಯಿತು. ಎತ್ತಿನಗಾಡಿ ಮತ್ತು ಕುದುರೇ ಗಾಡಿಗಳನ್ನು ಸಂಭಾಳಿಸುವುದು ಬಹಳ ತ್ರಾಸದಾಯಕ ಮತ್ತು ಪ್ರಾಣಿಗಳಿಗೇಕೆ ತೊಂದರೆ ಕೊಡುವುದು… Read More ಬೆಂಗಳೂರಿನಲ್ಲಿ ಮೊಟ್ಟ ಮೊದಲ ಆಟೋರಿಕ್ಷಾ

ಕವಲೇ ದುರ್ಗ

ಶಿವಮೊಗ್ಗ ಹೇಳಿ ಕೇಳಿ ಮಲೆನಾಡಿನ ಪ್ರದೇಶ ವರ್ಷದ 365 ದಿನಗಳು ಹಚ್ಚ ಹಸಿರಾಗಿರುವಂತಹ ಸುಂದರ ಪ್ರಕೃತಿಯ ತಾಣ. ಶಿವಮೊಗ್ಗದಿಂದ ಸುಮಾರು 80 ಕಿಮೀ ಮತ್ತು ತೀರ್ಥಹಳ್ಳಿಯಿ೦ದ ಸುಮಾರು 18 ಕಿ.ಮಿ ದೂರದಲ್ಲಿರುವ ಸುಂದರ ಪ್ರಕೃತಿ ತಾಣ ಮತ್ತು ಐತಿಹಾಸಿಕ ಪ್ರದೇಶವೇ ಕವಲೇ ದುರ್ಗ. ತೀರ್ಥಹಳ್ಳಿಯಿಂದ ಆಗುಂಬೆಯತ್ತ ಹೋಗುವ ಹಾದಿಯಲ್ಲಿ ಸುಮಾರು ಆರು ಕಿ.ಮೀ ದಲ್ಲಿ ಸಿಗುವ ಬಿಳ್ ಕೊಪ್ಪ ಎನ್ನುವ ಸ್ಥಳದಿಂದ ಬಲಕ್ಕೆ ತಿರುಗಿ ಸುಮಾರು 10 ಕಿ.ಮೀ ಕಚ್ಚಾ ರಸ್ತೆಯಲ್ಲಿ ಕ್ರಮಿಸಿದರೆ ಕವಲೇ ದುರ್ಗದ ಬುಡವನ್ನು… Read More ಕವಲೇ ದುರ್ಗ

ಕುಂಭಲ್ ಘಡ್ ಭಾರತದ ಮಹಾ ಗೋಡೆ

ವಿಶ್ವದ ಅತಿ ಉದ್ದದ ಗೋಡೆ ಎಂದ ತಕ್ಷಣ ಥಟ್ ಅಂತಾ ನೆನಪಾಗೋದೇ, ಚೀನಾ ದೇಶದ ಮಹಾಗೋಡೆ. ಆದರೇ, ಅದೇ ರೀತಿಯಲ್ಲಿರುವ ಮತ್ತೊಂದು ಮಹಾನ್ ಗೋಡೆ ಚೀನಾ ಗೋಡೆಗಿಂತಲೂ ಕಡಿಮೆ ಸಮಯದಲ್ಲಿ ನಿರ್ಮಾಣವಾದ, ಇಂದಿಗೂ ಅತ್ಯಂತ ಗಟ್ಟಿ ಮುಟ್ಟಾಗಿ, ವೈಭವೋಪೇತವಾಗಿ ಮತ್ತು ವಾಸ್ತು ಶಿಲ್ಪದಲ್ಲಿ ಚೀನಾ ಗೋಡೆಗೂ ಸಡ್ಡು ಹೊಡೆಯಬಲ್ಲಂತಹ ಮತ್ತೊಂದು ಉದ್ದನೆಯ ಗೋಡೆ ನಮ್ಮ ದೇಶದಲ್ಲಿ ಎನ್ನುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ. ಹೇಳೀ ಕೇಳಿ ರಾಜಸ್ಥಾನ ಮರುಭೂಮಿ ಮತ್ತು ಎತ್ತರದ ಪರ್ವತಗಳಿಂದ ಆವೃತವಾಗಿರುವ, ಹೆಚ್ಚು ಜನಸಂದಣಿ ಇಲ್ಲದ… Read More ಕುಂಭಲ್ ಘಡ್ ಭಾರತದ ಮಹಾ ಗೋಡೆ

ಸೂಯೆಜ್ ಕಾಲುವೆ ಮತ್ತು ಮೈಸೂರು ಸ್ಯಾಂಡಲ್

ಸುಯೆಜ್ ಕಾಲುವೆ, ಕೆಂಪು ಸಮುದ್ರದ ಸುಯೆಜ್ ಮತ್ತು ಮೆಡಿಟರೇನಿಯನ್ ಸಮುದ್ರದ ಸಯೀದ್ ಬಂದರಿನ ನಡುವೆ ಸಂಪರ್ಕ ಕಲ್ಪಿಸುವ ಒಂದು ಮಹಾಕಾಲುವೆಯಾಗಿದ್ದು ಈಜಿಪ್ಟ್ ದೇಶದಲ್ಲಿದೆ. ಇದು ಸುಮಾರು 162 ಕಿಮೀ ಉದ್ದವಿದ್ದು ಇದರ ಅಗಲ ಅತ್ಯಂತ ಕಡಿಮೆ ಇರುವ ಸ್ಥಳದಲ್ಲಿ 300 ಮೀ ಇದೆ. ಈ ಕಾಲುವೆ ಏಷ್ಯಾ ಮತ್ತು ಯೂರೋಪ್ ಖಂಡಗಳ ನಡುವೆ ಪಯಣಿಸುವ ಹಡಗುಗಳಿಗೆ ಪ್ರಮುಖ ಜಲಮಾರ್ಗವಾಗಿದೆ. ಇದು ಇಲ್ಲದಿದ್ದಲ್ಲಿ ಕೊಂಕಣ ಸುತ್ತಿ ಮೈಲಾರಕ್ಕೆ ಬಂದಂತೆ ಆಫ್ರಿಕಾದ ಕೇಪ್‌ ಆಫ್‌ ಗುಡ್‌ ಹೋಪ್‌ ಭೂಶಿರ ಸುತ್ತಿ… Read More ಸೂಯೆಜ್ ಕಾಲುವೆ ಮತ್ತು ಮೈಸೂರು ಸ್ಯಾಂಡಲ್

ಇಕ್ಕೇರಿಯ ಅಘೋರೇಶ್ವರ ರಥೋತ್ಸವ

ಇಕ್ಕೇರಿ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಸುಮಾರು 6 ಕಿಮೀ ದೂರದಲ್ಲಿರುವ ಪಟ್ಟಣವಾಗಿದೆ. 1499-1763ರ ನಡುವೆ ಈ ಪ್ರದೇಶವನ್ನು ಆಳಿದ ಕೆಳದಿಯ ನಾಯಕರ ರಾಜಧಾನಿಯಾಗಿತ್ತು. ಇಲ್ಲಿರುವ ಅಘೋರೇಶ್ವರ ದೇವಸ್ಥಾನ ಬಹಳ ಪ್ರಖ್ಯಾತವಾಗಿದ್ದು, ಇದರ ಕುರಿತಾಗಿ ಅನೇಕ ದಂತ ದಂತಕಥೆಗಳಿವೆ. ಚೌಡೇಗೌಡ ಮತ್ತು ಭಧ್ರೇ ಗೌಡ ಎಂಬ ಇಬ್ಬರು ಸಹೋದರರು ಅದೊಮ್ಮೆ ತಮ್ಮ ಹೊಲದಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ, ಅವರ ಹಸುವೊಂದು ಅಲ್ಲಿದ್ದ ಹುತ್ತದ ಮೇಲೆ ತಂತಾನೇ ಹಾಲನ್ನು ಸುರಿಸುತ್ತಿದ್ದದ್ದನು ಗಮನಿಸಿ ಆ ಹುತ್ತವನ್ನು ಅಗೆದಾಗ ಅಲ್ಲೊಂದು ಲಿಂಗವನ್ನು ಕಂಡು ಭಕ್ತಿಪೂರ್ವಕವಾಗಿ… Read More ಇಕ್ಕೇರಿಯ ಅಘೋರೇಶ್ವರ ರಥೋತ್ಸವ

ಆಪರೇಷನ್ ಬ್ಲೂ ಸ್ಟಾರ್

ಅದು ಎಂಭತ್ತರ ದಶಕ. ಈಗಿನಂತೆ ದೃಶ್ಯ ಮಾಧ್ಯಮಗಳ ಹಾವಳಿಯೇ ಇರಲಿಲ್ಲ. ಸುದ್ಧಿಯ ಮೂಲವೆಂದರೆ, ಸರ್ಕಾರಿ ಸುಪರ್ಧಿಯಲ್ಲಿದ್ದ ರೇಡಿಯೋ ಇಲ್ಲವೇ ವೃತ್ತ ಪತ್ರಿಕೆಗಳು ಮಾತ್ರ. ರೇಡಿಯೋದಲ್ಲಿನ ವಾರ್ತೆಗಳಲ್ಲಿ ಮತ್ತು ಪ್ರತಿ ದಿನ ಪತ್ರಿಕೆಗಳಲ್ಲಿ ಕಂಡು ಬರುತ್ತಿದ್ದ   ಒಂದೇ ಒಂದು ಅಂಶವೆಂದರೆ, ಪಂಜಾಬಿನಲ್ಲಿ ಇವತ್ತು ಉಗ್ರಗಾಮಿಗಳ ಧಾಳಿಯಿಂದಾಗಿ ಇಷ್ಟು ಜನ ಮೃತಪಟ್ಟರು ಅಷ್ಟು ಜನ ಮೃತಪಟ್ಟರು ಎಂಬುದೇ ಆಗಿತ್ತು. ಆರಂಭದಲ್ಲಿ  ಎಲ್ಲರೂ ಇದರ ಬಗ್ಗೆ ಆತಂಕ ಪಟ್ಟು ಕೊಳ್ಳುತ್ತಿದ್ದರಾದರೂ ನಂತರದ ದಿನಗಳಲ್ಲಿ ದಿನ ಸಾಯುವವರಿಗೆ ಅಳುವವರು ಯಾರು? ಎನ್ನುವಂತಾಗಿತ್ತು.  ಇನ್ನು… Read More ಆಪರೇಷನ್ ಬ್ಲೂ ಸ್ಟಾರ್