ನಂಬಿಕೆ ಮತ್ತು ಆತ್ಮವಿಶ್ವಾಸ

ಅದೊಮ್ಮೆ ಭಿಕ್ಷುಕನೊಬ್ಬ ರೈಲಿನಲ್ಲಿ ಹಾಗೆಯೇ ಭಿಕ್ಷೆ ಬೇಡುತ್ತಿರುವಾಗ ಸೂಟು ಬೂಟುಗಳನ್ನು ಧರಿಸಿದ್ದ ಒಬ್ಬ ಗಣ್ಯವ್ಯಕ್ತಿಯನ್ನು ನೋಡಿ ಈ ವ್ಯಕ್ತಿ ಬಹಳ ಶ್ರೀಮಂತನಾಗಿರಬೇಕು. ಅವನ ಬಳಿ ಬಿಕ್ಷೆ ಬೇಡಿದಲ್ಲಿ ಆತ ಖಂಡಿತವಾಗಿಯೂ ತುಂಬಾ ಹಣವನ್ನು ಕೊಡುತ್ತಾನೆ ಎಂದು ಭಾವಿಸಿ ಆ ವ್ಯಕ್ತಿಯ ಬಳಿ ಹೋಗಿ ಭಿಕ್ಷೆಯನ್ನು ಕೇಳಿದನು. ಆ ವ್ಯಕ್ತಿ ಭಿಕ್ಷುಕನನ್ನು ಒಮ್ಮೆ ಮೇಲಿಂದ ಕೆಳಗಿನವರೆಗೂ ನೋಡಿ, ನೀವು ಹೀಗೆ ಯಾವಾಗಲೂ ಜನರಿಂದ ಭಿಕ್ಷೆ ಕೇಳುತ್ತಲೇ ಇರುತ್ತೀರಿ. ಆದರೆ ನೀವು ಯಾರಿಗಾದರೂ ಏನನ್ನಾದರೂ ಒಮ್ಮೆ ನೀಡಿದ್ದೀರಾ? ಎಂದು ಕೇಳಿದರು.… Read More ನಂಬಿಕೆ ಮತ್ತು ಆತ್ಮವಿಶ್ವಾಸ

ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ

ಟೀ.. ಚಾಯ್… ಕಾಪೀ.. ಕಾಪೀ…

ರಾಜಮಂಡ್ರಿಯಲ್ಲಿ ನಡೆಯಲ್ಲಿದ್ದ ತಮ್ಮ ಸ್ನೇಹಿತರ ಮಗಳ ಮದುವೆಯಲ್ಲಿ ಭಾಗವಹಿಸಲು ರಾಯರು ತಮ್ಮ ಪತ್ನಿಯ ಜೊತೆ ವಿಶಾಖಪಟ್ಟಣಂನಿಂದ ಜನ್ಮಭೂಮಿ ರೈಲನ್ನು ಬೆಳ್ಳಂಬೆಳಗ್ಗೆ ಹತ್ತುತ್ತಾರೆ. ಬೆಳ್ಳಬೆಳಿಗ್ಗೆ ಎದ್ದಿದ್ದು ಮತ್ತು ಮುಂಜಾನೆಯ ತಂಗಾಳಿಯು ಬೀಸುತಿದ್ದರಿಂದ ಹಾಗೇ ಜೊಂಪು ಹತ್ತಿದ್ದೇ ಗೊತ್ತಾಗದೇ ರೈಲು ಟುನಿ ನಿಲ್ದಾಣದಲ್ಲಿ ಟೀ.. ಚಾಯ್… ಕಾಪೀ.. ಕಾಪೀ… ಎಂದು ಕಾಫೀ ಮಾರಿಕೊಂಡು ಬಂದ ವ್ಯಾಪಾರಿಯ ಶಬ್ಧದಿಂದಾಗಿ ಎಚ್ಚರವಾಗಿ ಎರಡು ಕಪ್ ಕಾಫಿ ಕೊಡಪ್ಪಾ ಎಂದು ಕೇಳಿ ಪಡೆಯುತ್ತಾರೆ. ಒಂದು ಕಪ್ಪನ್ನು ತಮ್ಮ ಮಡದಿಗೆ ಕೊಟ್ಟು ಮತ್ತೊಂದು ಕಪ್ಪಿನ‌ ಕಾಫಿಯ… Read More ಟೀ.. ಚಾಯ್… ಕಾಪೀ.. ಕಾಪೀ…

ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ

ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾದ ಮೂರ್ನಾಲ್ಕು ತಿಂಗಳುಗಳಲ್ಲೇ ಗಂಡ ಹೆಂಡತಿಯರು ಬೇರಾಗುತ್ತಿರುವ ಸಂಗತಿಯ ಹಿಂದೆ ಕೇವಲ ಗಂಡ ಹೆಂಡತಿಯರಲ್ಲದೇ, ಹೇಗೆ ಮೂರನೆಯವರ ಅತಿಯಾದ ಪ್ರೀತಿ ಕಾರಣವಾಗಬಲ್ಲದು ಎಂಬ ಕುತೂಹಲಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ

ಅತ್ತೆ-ಸೊಸೆ, ಸಂಬಂಧ-ಅನುಬಂಧ

ಪತ್ನಿ ಮತ್ತೆ ಮತ್ತೆ ತಾಯಿಯ ಮೇಲೆ ಆರೋಪ ಮಾಡುತ್ತಿದ್ದಳು. ಆದರೆ ಪತಿ ಅವಳಿಗೆ ತನ್ನ ಮಾತಿನ ಮಿತಿ ಮೀರಬೇಡವೆಂದು ಮನವಿ ಮಾಡುತ್ತಿದ್ದ. ಆದರೂ ಪತ್ನಿ ಮೌನವಾಗದೆ ಜೋರು ಜೋರಾಗಿ ಟೇಬಲ್ ಮೇಲೆ ಕೈಸನ್ನೆ ಮಾಡುತ್ತಾ ಕೂಗಿ ಹೇಳುತ್ತಿದ್ದಳು ನಾನು ಚಿನ್ನದ ಹಾರವನ್ನು ಇಲ್ಲೇ ಟೇಬಲ್ ಮೇಲೆ ಇಟ್ಟಿದ್ದೆ, ನಮ್ಮಿಬ್ಬರನ್ನು ಬಿಟ್ಟರೆ ಬೇರೆ ಯಾರು ಕೋಣೆಯೊಳಗೆ ಬಂದಿಲ್ಲ, ಮನೆಯಲ್ಲಿ ಮೂರನೆಯವರು ನಿಮ್ಮ ತಾಯಿಯೇ. ಹಾಗಾಗಿ ಅವರೇ ಅದನ್ನು ತೆಗೆದುಕೊಂಡಿದ್ದಾರೆ. ಅಲ್ಲಿಯವರೆಗೂ ಸುಮ್ಮನಿದ್ದ ಪತಿ, ತನ್ನ ತಾಯಿಯ ಮೇಲೆ ಕಳ್ಳತನದ… Read More ಅತ್ತೆ-ಸೊಸೆ, ಸಂಬಂಧ-ಅನುಬಂಧ

ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಅವನೊಬ್ಬ ಅಸಾಧಾರಣ ಹುಡುಗನಾಗಿದ್ದ. ಓದಿನಲ್ಲಂತೂ ಸದಾಕಾಲವೂ ಚುರುಕು. ಗಣಿತ ಮತ್ತು ವಿಜ್ಞಾನದಲ್ಲಂತೂ ಸದಾಕಾಲವೂ 100% ಅಂಕಗಳನ್ನು ಗಳಿಸುತ್ತಿದ್ದ ಕಾರಣ ಸಹಜವಾಗಿ ಐಐಟಿ ಮದ್ರಾಸ್‌ಗೆ ಆಯ್ಕೆಯಾಗಿದ್ದಲ್ಲದೇ ಅಲ್ಲೂ ಸಹಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಉನ್ನತ ವಿದ್ಯಾಭ್ಯಾಸಕ್ಕೆಂದು ಅಮೇರಿಕಾದ ಕ್ಯಾಲಿಫೋರ್ನಿಯಾದ ವಿಶ್ವವಿದ್ಯಾಲಯ ಒಂದರಲ್ಲಿ ಎಂಬಿಎ ಪದವಿಯ ನಂತರ ಆರಂಕಿಯ ಸಂಬಳದ ಉದ್ಯೋಗವನ್ನು ಗಿಟ್ಟಿಸಿ ಅಲ್ಲಿಯೇ ನೆಲೆಸಿದ. ಕೆಲವು ವರ್ಷಗಳ ನಂತರ ಕರ್ನಾಟಕ್ಕೆ ಬಂದು, ಮನೆಯವರು ನೋಡಿದ ಕನ್ನಡತಿಯನ್ನೇ ವಿವಾಹವಾಗಿ ಅಮೇರಿಕಾದಲ್ಲಿ 5 ಕೊಠಡಿಗಳು ಇರುವಂತಹ ದೊಡ್ಡದಾದ ಮನೆ ಮತ್ತು ಐಷಾರಾಮಿ… Read More ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ವರ್ಕ್ ಫ್ರಂ ಹೋಮ್

ಶಂಕರ ದೂರದ  ಹಾಸನದ ಜಿಲ್ಲೆಯ ಸಣ್ಣದೊಂದು ಗ್ರಾಮದಲ್ಲಿ ಹುಟ್ಟಿ ಅಲ್ಲಿಯೇ ತನ್ನ ವಿದ್ಯಾಭ್ಯಾಸವನ್ನೆಲ್ಲವನ್ನೂ ಮುಗಿಸಿದವ. ಇದ್ದ ಸಣ್ಣ ಸಾಗುವಳಿ ಅವರ ಜೀವನಕ್ಕೆ ಸಾಲುತ್ತಿರಲಿಲ್ಲವಾದ್ದರಿಂದ ಬದುಕನ್ನು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದು  ಅರಂಭದಲ್ಲಿ  ಅವರಿವರ ಕೈಕಾಲು ಹಿಡಿದು ಸಣ್ಣ ಕಂಪನಿಯೊಂದರಲ್ಲಿ ಕೆಲಸವನ್ನು ಗಿಟ್ಟಿಸಿಕೊಂಡು ನಂತರ ತನ್ನ ಸ್ವಸಾಮರ್ಥ್ಯದಿಂದ ಬೇಗನೇ ಮೇಲೆ ಬಂದು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಐದಂಕಿಯ ಸಂಬಳ ಪಡೆಯುವಷ್ಟರ ಮಟ್ಟಿಗೆ ಬೆಳೆಯುತ್ತಾನೆ. ಬದುಕಿನಲ್ಲಿ ಎಷ್ಟೇ ಮೇಲಕ್ಕೆ ಏರಿದ್ದರೂ  ತನ್ನ ಹುಟ್ಟೂರು ತಂದೆ ತಾಯಿ, ತಾತಾ ಅಜ್ಜಿಯರನ್ನು ಮರೆಯದ ಶಂಕರ… Read More ವರ್ಕ್ ಫ್ರಂ ಹೋಮ್

ಕೋಯಾ-ಪಾಯ

ಅರೇ ಇದೇನಿದು! ಇದು ಯಾವ ಭಾಷೆಯ ಶೀರ್ಷಿಕೆ? ಅಂತಾ ಯೋಚಿಸ್ತಿದ್ದೀರಾ? ಇದು ಸರಳ ಸಂಸ್ಕೃತ ಭಾಷೆಯ ಪದ. ಕೋಯ ಎಂದರೆ ಕಳೆದು ಹೋದದ್ದು ಮತ್ತು ಪಾಯ ಎಂದರೆ ಸಿಕ್ಕಿದ್ದು ಅಂದರೆ ಕಳೆದುಕೊಂಡದ್ದು ಸಿಕ್ಕಿದೆ ಎಂದರ್ಧ. ದೇವರ ಅಸ್ಮಿತೆ ಮತ್ತು ಅಸ್ತಿತ್ವದ ಬಗ್ಗೆಯೇ ಮಾತನಾಡಿ ದೇವಾಲಯದಿಂದ ಹೊರ ಬಂದ ಕೂಡಲೇ ದೇವರ ಶಕ್ತಿಯ (ಪವಾಡ) ಅನುಭವ ಪಡೆದ ಸರಳ ಸುಂದರ ಪ್ರಸಂಗ ಇದೋ ನಿಮಗಾಗಿ. ಪ್ರತೀ ತಿಂಗಳ ಅಮಾವಾಸ್ಯೆಯ ಹಿಂದಿನ ದಿನ ನಮ್ಮ ವಿದ್ಯಾರಣ್ಯಪುರದ ಸನಾತನ ವೇದ ಪಾಠಶಾಲೆಯ… Read More ಕೋಯಾ-ಪಾಯ

ಏಪ್ರಿಲ್ – 10

ನಾವೆಲ್ಲಾ ಚಿಕ್ಕವರಿದ್ದಾಗ ಏಪ್ರಿಲ್-10 ಎಂದರೆ ಏನೋ‌ ಆತಂಕ, ಭಯ, ಹಿಂದಿನ ದಿನ ರಾತ್ರಿ ಇಡೀ ನಿದ್ದೆಯೇ ಇಲ್ಲದೇ ತಳಮಳಗೊಳ್ಳುತ್ತಿದ್ದ ಆ ಅನುಭವದ ಸವಿ ನೆನಪು/ರೋಚಕತೆ ಇದೋ ನಿಮಗಾಗಿ… Read More ಏಪ್ರಿಲ್ – 10