ಅಚ್ಚುತಾ ಅನಂತಾ ಗೋವಿಂದಾ. ಭಾಗ-1

ಭಾರತದ ದೇಶದಲ್ಲಿ ಅದೋಂದು ಸಣ್ಣ ಗ್ರಾಮ. ಆ ಗ್ರಾಮದಲ್ಲೊಬ್ಬ ವೃದ್ದ ದಂಪತಿಗಳು ವಾಸಿಸುತ್ತಿದ್ದರು. ಮನೆಯ ಹತ್ತಿರವೇ ನದಿಯೊಂದು ಹರಿಯುತ್ತಿದ್ದ ಕಾರಣ ಅವರ ಭಾವಿಯಲ್ಲಿ ಕೇವಲ  10 ಅಡಿಗಳ ಆಳದಲ್ಲಿಯೇ ನೀರಿದ್ದರಿಂದ  ಅವರ  ಮನೆಯ  ಸುತ್ತಲೂ ಮಾವು, ತೆಂಗು, ಹಲಸಿನ ಮರಗಳಲ್ಲದೇ ದಿನ ನಿತ್ಯ ಪೂಜೆಗೆ ಬೇಕಾಗುವಂತಹ ಹೂವಿನ ಗಿಡಗಳಲ್ಲದೇ, ಮನೆಗೆ ಅವಶ್ಯಕವಾಗಿದ್ದ ತರಕಾರಿಗಳನ್ನೂ ತಮ್ಮ ಕೈತೋಟದಲ್ಲಿಯೇ ಬೆಳೆಯುತ್ತಾ ಆನಂದಮಯ ಜೀವನವನ್ನು ನಡೆಸುತ್ತಿದ್ದರು. ಇದಲ್ಲದೇ ಅವರ ಬಳಿ ಭತ್ತ ಬೆಳೆಯುವ ಫಲವತ್ತದ ಸಾಕಷ್ಟು ಗದ್ದೆಯಿದ್ದು ಜೀವನಕ್ಕೇನೂ ಕೊರತೆ ಇರರಲಿಲ್ಲವಾದರೂ,… Read More ಅಚ್ಚುತಾ ಅನಂತಾ ಗೋವಿಂದಾ. ಭಾಗ-1

ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ.

ಎಲ್ಲರಿಗೂ ಗೊತ್ತಿರುವಂತೆ ಅಮೇರಿಕಾದ ಜನರಲ್ ಮೋಟಾರ್ಸ್ ವಾಹನಗಳ ತಯಾರಿಕೆಯಲ್ಲಿ ಅತ್ಯಂತ ಪುರಾತನವಾದ ಮತ್ತು ಅಷ್ಟೇ ದೊಡ್ಡ ಹೆಸರನ್ನು ಗಳಿಸಿದೆ. ಆ ಕಂಪನಿಯ ವಾಹನಗಳನ್ನು ಹೊಂದಲು ಇಂದಿಗೂ ಜನ ಹೆಮ್ಮೆ ಪಡುತ್ತಾರೆ. ಆದರೆ ಆಂತಹ ಜನರಲ್ ಮೋಟಾರ್ಸ್ ಕಂಪನಿಯನ್ನೇ ಒಂದು ವೆನಿಲ್ಲಾ ಐಸ್ ಕ್ರೀಮ್ ಗೊಂದಲಕ್ಕೀಡು ಮಾಡಿದಂತಹ ಜನರಲ್ ಮೋಟಾರ್ಸ್ ಗ್ರಾಹಕ ಮತ್ತು ಅದರ ಗ್ರಾಹಕ-ಆರೈಕೆ ಕಾರ್ಯನಿರ್ವಾಹಕರ ನಡುವೆ ನಡೆದ ಒಂದು ನೈಜ ರೋಚಕವಾದ ಪ್ರಸಂಗವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದೊಂದು ದಿನ ಜನರಲ್ ಮೋಟಾರ್ಸ್‌ನ ಕಂಪನಿಯ ಫಾನ್ಟಿಯಾಕ್ ಕಾರನ್ನು… Read More ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ.

ಪುನರ್ಜನ್ಮ ನೀಡಿದ ಅಪ್ಪ

ಬಹುಷಃ ಎಪ್ಪತ್ತು ಮತ್ತು ಎಂಭತ್ತರ ದಶಕದಲ್ಲಿ ಬಾಲ್ಯಾವಸ್ಥೆಯನ್ನು ಕಳೆದವರಿಗೆ ನಿಂಬೇಹುಳಿ ಪೆಪ್ಪರ್ಮೆಂಟ್ ಎಂಬ ಹೆಸರನ್ನು ಕೇಳಿದ ಕೂಡಲೇ ಖಂಡಿತವಾಗಿಯೂ ಬಾಯಯಲ್ಲಿ ನೀರು ಬಂದೇ ಬರುತ್ತದೆ. ಏಕೆಂದರೆ ಅಂದೆಲ್ಲಾ ನಮಗೆ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿದ್ದ ಚಾಕ್ಲೇಟ್ ಎಂದರೆ ಅದೊಂದೇ. ಕಡಿಮೆ ಹಣ ಜಾಸ್ತಿ ಹೊತ್ತು ಮಜ ಕೊಡುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ನಾವು ಚಿಕ್ಕವರಿದ್ದಾಗ ಮಾಡಿದ ಅತ್ಯುತ್ತಮ ಕೆಲಸಗಳಿಗೆ ಪ್ರೋತ್ಸಾಹಕರವಾಗಿ ಬಹುಮಾನ ರೂಪದಲ್ಲಿ ಸಿಗುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ಯಾರಾದರೂ ಚಿಕ್ಕ ಮಕ್ಕಳಿರುವ ಮನೆಗೆ ಬಂದರೆ, ಹೂವು ಹಣ್ಣುಗಳ… Read More ಪುನರ್ಜನ್ಮ ನೀಡಿದ ಅಪ್ಪ

ಲಾಕ್ಷಾಗೃಹ ಮತ್ತು ಕೂರೋನಾ ಲಾಕ್ ಡೌನ್

ಮಹಾಭಾರತದಲ್ಲಿ ಪಂಚ ಪಾಂಡವರಿಗೂ ಮತ್ತು ಕೌರವರಿಗೂ ಅಧಿಕಾರಕ್ಕಾಗಿ ದಾಯಾದಿ ಕಲಹ ಇದ್ದದ್ದು ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ. ಕೌರವರ ರಾಜ ದುರ್ಯೋಧನ ಯಾವ ಬಗೆಯಲ್ಲಾದರೂ ಪಾಂಡವರನ್ನು ನಾಶ ಮಾಡಲು ಒಂದಲ್ಲಾ ಒಂದು ಯೋಜನೆಗಳನ್ನು ಹಾಕುತ್ತಾ, ಕಡೆಗೆ ಕುಂತಿಯಾದಿಯಾಗಿ ಇಡೀ ಪಾಂಡವರನ್ನೇ ಹತ್ಯೆ ಮಾಡಲು ನಿರ್ಧರಿಸಿ ವಾರಣಾವತ ಎಂಬಲ್ಲಿ ಅರಗಿನ ಅರಮನೆಯೊಂದನ್ನು ನಿರ್ಮಿಸಿ ಪಾಂಡವರನ್ನು ಅಲ್ಲಿರಿಸಿ ಯಾರಿಗೂ ತಿಳಿಯದಂತೆ ಆ ಅರಗಿನ ಅರಮನೆಗೆ ಬೆಂಕಿ ಹಚ್ಚಿ , ಪಂಚ ಪಾಂಡವರನ್ನು ಒಮ್ಮೆಲೆಯೇ ನಾಶ ಮಾಡುವ ಉಪಾಯ ಹೂಡಿದನು. ಕೌರವರ ಆಸ್ಥಾನದಲ್ಲಿ… Read More ಲಾಕ್ಷಾಗೃಹ ಮತ್ತು ಕೂರೋನಾ ಲಾಕ್ ಡೌನ್

ಗಜ ಗಾಂಭೀರ್ಯ

ಆದೊಂದು ರಾಜನ ಅರಮನೆಯಲ್ಲಿ ಪಟ್ಟದಾನೆ ಮತ್ತು ಅರಮನೆಯಲ್ಲಿದ್ದ ನಾಯಿ ಎರಡೂ ಒಂದೇ ಸಮಯದಲ್ಲಿ ಗರ್ಭಿಣಿಯಾದವು. ಅದಾಗಿ ಮೂರು ತಿಂಗಳ ನಂತರ ಆ ನಾಯಿ ಆರು ನಾಯಿಮರಿಗಳಿಗೆ ಜನ್ಮ ನೀಡಿತು. ಮತ್ತೆ ಆರು ತಿಂಗಳ ನಂತರ ಅದೇ ನಾಯಿ ಪುನಃ ಗರ್ಭಿಣಿಯಾಗಿ ಆರು ಮರಿಗಳಿಗೆ ಜನ್ಮ ನೀಡಿ ಒಟ್ಟು ಒಂಬತ್ತು ತಿಂಗಳುಗಳೊಳಗೆ ಒಂದು ಡಜನ್ ನಾಯಿಮರಿಗಳಿಗೆ ಜನ್ಮ ನೀಡಿತು ಮತ್ತು ಅದರ ಹೆರಿಗೆಯ ಕಾರ್ಯ ಹಾಗೇ ಮುಂದುವರೆಯಿತು. ಆನೆ ಗರ್ಭಿಣಿಯಾಗಿ ಹದಿನೆಂಟು ತಿಂಗಳು ಕಳೆದರೂ ಪ್ರಸವವಾಗದಿದ್ದನ್ನು ನೋಡಿದ ನಾಯಿಗೆ… Read More ಗಜ ಗಾಂಭೀರ್ಯ

ಲಭ್ಯ

ಹೆಣ್ಣು, ಹೊನ್ನು ಮತ್ತು ಮಣ್ಣು ಎಲ್ಲವೂ ಲಭ್ಯ ಇದ್ದಲ್ಲಿ ಮಾತ್ರವೇ ಎಲ್ಲರಿಗೂ ಸಿಗುತ್ತದೆ ಎನ್ನುವುದು ದೊಡ್ಡವರು ಹೇಳುವ ಮಾತು. ಕಷ್ಟ ಪಟ್ಟು, ಬಿಸಿಲಿನಲ್ಲಿ ಬವಳಿ ಬೆಂದು, ಅಕ್ಕ ಪಕ್ಕದವರೊಡನೆ ಕಾದಾಡಿ, ಹೋರಾಡಿ ಸರದಿಯಲ್ಲಿ ನಿಂತು ಖರೀದಿಸಿದ ಕಲ್ಲೆಣ್ಣೆ (ಸೀಮೇಎಣ್ಣೆ ) ಅಂತಿಮವಾಗಿ ನಮಗೆ ಸಿಗದೇ, ಲಭ್ಯ ಇದ್ದವರಿಗೇ ಸಿಕ್ಕಾಗ ಆಗುವ ಸಿಟ್ಟು ಸೆಡವು ನಿಜಕ್ಕೂ ಹೇಳಲಾಗದು. ಅಂತಹ ರೋಚಕ ಪ್ರಸಂಗವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ಎಂಭತ್ತರ ದಶಕ. ಆಗ ತಾನೇ ಹೈಸ್ಕೂಲ್ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದೆ. ಊರಿನಲ್ಲಿದ್ದ… Read More ಲಭ್ಯ

ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -3

ಕಳೆದ ಎರಡು ಸಂಚಿಕೆಗಳಲ್ಲಿ ನಮ್ಮ ಪಿಂಟು ಅರ್ಥಾತ್ ಶ್ರೀನಿವಾಸನ ಬಾಲ್ಯ, ಕುಟುಂಬ ಮತ್ತು ಅವನ ಯೌವನದ ಆಟಪಾಠಗಳ ಬಗ್ಗೆ ತಿಳಿದುಕೊಂಡಿದ್ದೆವು ಈ ಸಂಚಿಕೆಯಲ್ಲಿ ಅವನ ವಿದ್ಯಾಭ್ಯಾಸದ ನಂತರದ ಅವನ ಜೀವನದ ಪ್ರಮುಖ ಘಟ್ಟದ ಬಗ್ಗೆ ತಿಳಿಯೋಣ. ಈ ಮೊದಲೇ ತಿಳಿಸಿದಂತೆ ನಮ್ಮ ಪಿಂಟೂವಿನ ಅಪ್ಪಾ ಮತ್ತು ಅಮ್ಮಾ ಇಬ್ಬರೂ ಕೇಂದ್ರಸರ್ಕಾರಿ ಕೆಲಸದಲ್ಲಿ ಇದ್ದದ್ದರಿಂದ ಆರ್ಥಿಕವಾಗಿ ತಕ್ಕ ಮಟ್ಟಿಗೆ ಇದ್ದರೂ ಸಹಾ, ಉದ್ಯೋಗಂ ಪುರುಷ ಲಕ್ಷಣಂ ಎನ್ನುವಂತೆ ನಮ್ಮ ಪಿಂಟು ಸಹಾ ತನ್ನ ಡಿಪ್ಲಮೋ ಕೋರ್ಸ್ ಮುಗಿಸಿದ ಮೇಲೆ… Read More ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -3

ಬೇಡುವ ಕೈಗಳ ಹಿಂದಿನ ಕಹಿ ಸತ್ಯ

ಶಂಕರ ಮೊನ್ನೆ ವಾರಾಂತ್ಯದಲ್ಲಿ ಮಡದಿಯೊಂದಿಗೆ ಮಲ್ಲೇಶ್ವರಂಗೆ ಹೋಗಿದ್ದ. ಸಂಜೆಗತ್ತಲು ವಾಹನ ನಿಲ್ಲಿಸಲು ಸ್ಥಳ ಸಿಗದೇ ಪರದಾಡುತ್ತಿದ್ದಾಗ ಯಾರೋ ಒಬ್ಬರು ವಾಹನ ತೆಗೆಯುತ್ತಿದ್ದದ್ದನ್ನು ನೋಡಿ ಮರುಭೂಮಿಯಲ್ಲಿ ನೀರುವ ಸಿಗುವ ಓಯಸಿಸ್ ನಂತೆ ಕಂಡು ಕೂಡಲೇ ಆಲ್ಲಿಗೆ ಹೋಗಿ ವಾಹನ ನಿಲ್ಲಿಸುತ್ತಿದ್ದಾಗ ಹಿಂದುಗಡೆಯಿಂದ ಯಾರೋ ಕೈ ಚಾಚಿದಂತಾಯಿತು. ಬೆನ್ನ ಹಿಂದ್ದಿದ್ದರಿಂದ ಆ ವ್ಯಕ್ತಿ ಯಾರು ಎಂದು ಸ್ಪಷ್ಟವಾಗಿ ತಿಳಿಯದಿದ್ದರೂ ಕೈಗಳಲ್ಲಿದ್ದ ಚಿಲ್ಲರೇ ಕಾಸು ಮತ್ತು ನಡುಗುತ್ತಿದ್ದ ಕೈಗಳಿಂದಾಗಿ ಯಾರೋ ವಯೋವೃದ್ಧರು ಹೊಟ್ಟೆಯ ಪಾಡಿಗೆ ಭಿಕ್ಷೇ ಬೇಡುತ್ತಿದ್ದಾರೆ ಎಂದು ತಿಳಿದ ಶಂಕರ,… Read More ಬೇಡುವ ಕೈಗಳ ಹಿಂದಿನ ಕಹಿ ಸತ್ಯ

ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -2

ಹಿಂದಿನ ಲೇಖನದಲ್ಲಿ ನಮ್ಮ ಗಿಣಿಯ ಕೃಷ್ಣಮೂರ್ತಿ ಶ್ರೀನಿವಾಸ ಅಲಿಯಾಸ್, ಜಿ.ಕೆ. ಉರ್ಫ್ ಪಿಂಟು ಅಂದ್ರೇ ಯಾರು? ಅವನ ಪೂರ್ವಾಪರ ಏನು ಅಂತಾ ತಿಳಿದುಕೊಂಡಿದ್ವಿ. ಈ ಭಾಗದಲ್ಲಿ ನನಗೇಕೆ ಪಿಂಟೂನ ಬಗ್ಗೆ ಯಾಕೆ ಇಷ್ಟೊಂದು ಕಾಳಜಿ? ಅಂತಾಹದ್ದೇನು ಮಾಡಿದ್ದ ಎಂಬುದನ್ನು ತಿಳಿಯೋಣ. ಈಗಾಗಲೇ ತಿಳಿಸಿದ್ದಂತೆ ವಯಸ್ಸಿನಲ್ಲಿ ನನಗಿಂತ ಒಂದು ವರ್ಷ ಚಿಕ್ಕವನಾದರೂ ಅವನ ವ್ಯಕ್ತಿತ್ವ ಮತ್ತು ಆಕಾರದಿಂದಾಗಿ ನನಗೆ ಅಣ್ಣನ ಸ್ಥಾನದಲ್ಲಿದ್ದ. ನಾನು ಮೊದಲನೇ ವರ್ಷದ ಡಿಪ್ಲಮೋ ಓದುತ್ತಿರುವಾಗ ನನ್ನ ಸಹೋದರಿಯ ಮದುವೆಯ ಸಂಧರ್ಭದಲ್ಲಿ ನನ್ನ ಉಪನಯನವಾಗಿತ್ತು. ಆಗ… Read More ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -2