ನಾನು ಹೇಗೆ ಸಣ್ಣಗಾದೆ

ಈ ಹಿಂದೆ ನಾನೇ ಹಲವಾರು ನನ್ನ ಬರಹಗಳಲ್ಲಿ ತಿಳಿಸಿದ್ದಂತೆ ನಾನು ಕಾಲೇಜು ಓದುತ್ತಿರುವಾಗಲೂ ಸಣ್ಣಗೆ ಕುಳ್ಳಗಿದ್ದು , ನಮ್ಮ ತಾಯಿವರು ಕುಟುಂಬದ ವೈದ್ಯರ ಬಳಿ ಹಲವಾರು ಸಲ ತೋರಿಸಿ, ನಮ್ಮ ಮಗನಿಗೆ ಸ್ವಲ್ಪ ಉದ್ದ ಹಾಗು ದಷ್ಟ ಪುಷ್ಟವಾಗಿ  ಆಗುವಂತೆ ಏನಾದರೂ ಔಷಧಿ ಇದ್ದರೆ ಕೊಡಿ ಎಂದು ಕೇಳಿದ್ದದ್ದು ಇನ್ನೂ ಹಚ್ಚ ಹಸುರಾಗಿದೆ. ನಂತರ ವಯೋಗುಣವಾಗಿ ಬೆಳೆದನಾದರೂ ಸಣ್ಣಗೇ ಇದ್ದೆ.  ಮದುವೆ ಸಮಯದಲ್ಲೂ  ಮದುವೆಗೆ ಬಂದಿದ್ದ ನೆಂಟರಿಷ್ಟರೂ, ಸ್ನೇಹಿತರುಗಳು ನನ್ನನ್ನೂ  ಮತ್ತು ನನ್ನ ಅರ್ಧಾಂಗಿಯನ್ನು ನೋಡಿ, ಇದೇನು… Read More ನಾನು ಹೇಗೆ ಸಣ್ಣಗಾದೆ

ಅಜೇಯ

ಅಜೇಯ ಎಂದರೆ ಎಂದೂ ಸೋಲಿಲ್ಲದ ಸರದಾರ ಎಂದರ್ಥ. ಚಂದ್ರಶೇಖರ್ ಆಝಾದ್ ಅದಕ್ಕೆ ಅನ್ವರ್ಥ. ಚಿಕ್ಕಚಯಸ್ಸಿನಲ್ಲಿ ನನ್ನ ಮೇಲೇಯೂ ಮತ್ತು ಹಲವಾರು ಜನರ ಮೇಲೆ ಅತ್ಯಂತ ಪ್ರಭಾವ ಬೀರಿರುವ ಪುಸ್ತಕ ಒಂದಿದ್ದರೆ ಅದು ಬಾಬು ಕೃಷ್ಣಮೂರ್ತಿಯವರ ವಿರಚಿತ ಅಜೇಯ ಎಂದರೆ ತಪ್ಪಾಗಲಾರದು. ಒಮ್ಮೆ ಆ ಪುಸ್ತಕ ಹಿಡಿದರೆ ಇಡೀ ಪುಸ್ತಕವನ್ನು ಓದಿ ಮುಗಿಸದೆ ಪಕ್ಕಕ್ಕೆ ಎತ್ತಿಡಲಾಗದ ಪುಸ್ತಕವದು. ಯಾವುದೇ ಪುಸ್ತಕದ ಎರಡು ಪುಟಗಳನ್ನು ನಾವು ಓದಬೇಕು. ನಂತರ ಉಳಿದ ಪುಟಗಳನ್ನು ಲೇಖಕ ತನ್ನ ಭಾಷಾ ಪಾಂಡಿತ್ಯದಿಂದ, ಆಸಕ್ತಿಕರ ವಿಷಯಗಳಿಂದ… Read More ಅಜೇಯ

ಗಮಕ ವಿದ್ವಾನ್, ಹರಿಕಥಾ ಸಾಮ್ರಾಟ, ಖ್ಯಾತ ವಾಗ್ಗೇಯಕಾರ ಬಾಳಗಂಚಿ ಶ್ರೀ ನಂಜುಡಯ್ಯನವರು

ಸೆಪ್ಟೆಂಬರ್ ೫ ಭಾರತದ ಮಾಜಿ ರಾಷ್ಟ್ರಪತಿಗಳಾದ ಸರ್ವಪಲ್ಲಿ ರಾಧಾಕೃಷ್ಣರವರ ಜಯಂತಿ. ಇದನ್ನು ನಾವು ಪ್ರೀತಿಯಿಂದ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಾ ಬಂದಿದ್ದೇವೆ. ಇತ್ತೀಚೆಗಷ್ಟೇ ಶ್ರೀಯುತ ರಾಧಾಕೃಷ್ಣರವರು ನನ್ನ ಪ್ರಾಣ ಸ್ನೇಹಿತ ಹರಿಯವರ ಅಜ್ಜನ  ಸೋದರತ್ತೆಯ ಮಗ  ಎಂದು ತಿಳಿದುಬಂದಿದ್ದರಿಂದ ಶ್ರೀಯುತರು ನಮ್ಶ ಹತ್ತಿರದ ಸಂಬಂಧಿಯೇನೂ ಎನ್ನುವ ಭಾವನೆ ಮೂಡುತ್ತಲಿದೆ.   ನಮ್ಮ ಸಂಸ್ಕೃತಿಯಲ್ಲಿ  ತಂದೆ ತಾಯಿಯರ  ನಂತರದ ಸ್ಥಾನವನ್ನು ಗುರುಗಳಿಗೇ ಮೀಸಲಿಟ್ಟಿದ್ದೇವೆ.  ಮನೆಯೇ ಮೊದಲ ಪಾಠಶಾಲೆ  ತಂದೆ, ತಾಯಿಯರೇ ಮೊದಲ ಗುರುಗಳಾಗಿ, ಬಾಲ ಪಾಠಗಳನ್ನು ಕಲಿಸಿಕೊಟ್ಟರೂ ವ್ಯವಸ್ಥಿತವಾಗಿ ವಿದ್ಯೆಯನ್ನು ಕಲಿತು… Read More ಗಮಕ ವಿದ್ವಾನ್, ಹರಿಕಥಾ ಸಾಮ್ರಾಟ, ಖ್ಯಾತ ವಾಗ್ಗೇಯಕಾರ ಬಾಳಗಂಚಿ ಶ್ರೀ ನಂಜುಡಯ್ಯನವರು

ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ  ಆಹಾರ ಸೇವಿಸಬೇಕೇ ಹೊರತು   ಆಹಾರ ಸೇವಿಸುವಕ್ಕೇ ಬದುಕಬಾರದು

ಸಾಲು ಸಾಲು ಹಬ್ಬ, ಮದುವೆ ಮುಂಜಿ ‌ನಾಮಕರಣಗಳ ಸಂಭ್ರಮದಲ್ಲಿ ತರಕಾರಿ, ಹೂವು ಹಣ್ಣು ವ್ಯಾಪಾರಿಗಳಿಗೆ, ದಿನಸಿ, ಬಟ್ಟೆ ವ್ಯಾಪಾರಿಗಳಿಗೆ, ಎಲ್ಲ ರೀತಿಯ ಛತ್ರದವರಿಗೆ, ಬಾಣಸಿಗರಿಗೆ, ಪುರೋಹಿತರಿಗೆ ಪುರುಸೊತ್ತೇ ಇರುವುದಿಲ್ಲ. ಹೆಚ್ಚಿನ ಸಮಯಗಳಲ್ಲಿ ಒಳ್ಳೆಯ ಮಹೂರ್ತದ ಜೊತೆಗೆ ಛತ್ರ, ಅಡುಗೆಯವರ ಮತ್ತು ಪುರೋಹಿತರ ಸಮಯವನ್ನೂ ನೋಡಿಕೊಂಡೇ ಮದುವೆ ಮುಂಜಿಗಳನ್ನು ನಿರ್ಧರಿಸಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇನ್ನು ಎರಡು ಮೂರು ವಾರಗಳಲ್ಲಿ ಮೂರ್ನಾಲ್ಕು ಗೃಹಪ್ರವೇಶಗಳು, ಒಂದೆರೆಡು ನಿಶ್ಚಿತಾರ್ಥ, ಒಂದೆರಡು ಮದುವೆ ಮತ್ತು ಹುಟ್ಟಿದ ಹಬ್ಬಕ್ಕೆ ಹೋಗಲೇ ಬೇಕಾದ ಅನಿವಾರ್ಯ ಪರಿಸ್ಥಿತಿ. ತುಂಬಾ… Read More ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ  ಆಹಾರ ಸೇವಿಸಬೇಕೇ ಹೊರತು   ಆಹಾರ ಸೇವಿಸುವಕ್ಕೇ ಬದುಕಬಾರದು

ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ 

ರಾಮ ರಾವಣ -2

ನಾವೆಲ್ಲಾ ಓದಿದಂತೆ‌ ಇಲ್ಲವೇ ಕೇಳಿ ತಿಳಿದಂತೆ ರಾಮ‌ ಒಳ್ಳೆಯವನು‌ ಮತ್ತು ರಾವಣ ಕೆಟ್ಟವನು ಅದ ಕಾರಣ ರಾವಣ ‌ಮಾಡಿದ ಎಲ್ಲ ಕೆಲಸಗಳನ್ನೂ ದ್ವೇಷಿಸ‌ಬೇಕು ಮತ್ತು ರಾಮ ಏನನ್ನೇ ಮಾಡಿದರು ಸಹಿಸಿಕೊಳ್ಳಬೇಕು ಎಂದು ನಮ್ಮ ಮನಃಪಠದಲ್ಲಿ ಅಚ್ಚೊತ್ತಿದೆ. ಆದರೆ ಪ್ರತಿಯೊಬ್ಬರಲ್ಲೂ ಒಳ್ಳೆಯ ‌ಹಾಗೂ‌‌ ಕೆಟ್ಟ ಗುಣಗಳಿದ್ದು ಅದು ಸಂದರ್ಭಕ್ಕನುಗುಣವಾಗಿ ‌ಪ್ರಕಟಿತಗೊಳ್ಳುತ್ತವೆ. ಒಳ್ಳೆಯ ಕೆಲಸ‌‌‌ ಮಾಡಿದಾಗ ಪ್ರೋತ್ಸಾಹಿಸಿ, ಕೆಟ್ಟ‌ ಕೆಲಸಗಳನ್ನು ಮಾಡಿದಾಗ ದಾಕ್ಷಿಣ್ಯವಿಲ್ಲದೆ ಖಂಡಿಸೋಣ. ನಾನು ವಿವರಿಸಿದ ಎರಡೂ ಸಂದರ್ಭಗಳಲ್ಲಿ ಶಕ್ತಿಶಾಲಿ ರಾಮ, ವಿವೇಕವಂತ ರಾಮ, ಪತ್ನಿಯನ್ನು ಅತ್ಯಂತ ಗೌರವಾದರದಿಂದ… Read More ರಾಮ ರಾವಣ -2

ರಾಮ ರಾವಣ-1

ರಾಕ್ಷಸೀ ಗುಣವುಳ್ಳ‌ ರಾವಣ ಸೀತಾಮಾತೆಯನ್ನು ಅಪಹರಿಸಿದ ಅಂದಾ ಮಾತ್ರಕ್ಕೆ ಆತ ಕೆಟ್ಟವನೆನಿಸ‌ ಬಹುದಾದರೂ, ಆತಾ ಸ್ವಭಾವತಃ ಮಹಾ ಜ್ಞಾನಿ. ಪರಮ ಶಿವ ಭಕ್ತ, ನಾಲ್ಕೂ ವೇದಗಳನ್ನು ಬಲ್ಲವನಾಗಿದ್ದ. ಅತ್ಯುತ್ತಮ ‌ಸಂಗೀತಗಾರ, ಶಿವನನ್ನು ‌ಒಲಿಸಿಕೊಳ್ಳುವ ಸಲುವಾಗಿ‌ ತನ್ನ‌ ಕರಳುಗಳನ್ನೇ ಹೊರ‌ತೆಗೆದು‌ ರುದ್ರ ವೀಣೆಯನ್ನಾಗಿಸಿ‌‌ ನುಡಿಸಿ‌ ಶಿವನನ್ನು ಒಲಿಸಿಕೊಂಡು‌ ಪರಶಿವನ ಆತ್ಮಲಿಂಗವನ್ನೇ ಪಡೆದಂತಹವನು. ರಾಮ‌‌ ಮತ್ತು ಲಕ್ಷ್ಮಣರು ಯುಧ್ದಕ್ಕೆ ಶತ್ರು ವಿನಾಶಕಾರೀ ಪೂಜೆಮಾಡಿಸಲು‌‌ ಲಂಕೆಯಲ್ಲಿ ಪುರೋಹಿತರು ‌ಯಾರೂ‌ ಸಿಗದಿದ್ದಾಗ, ಸ್ವತಃ ರಾವಣನೇ ಬಂದು ಪೂಜಾ ವಿಧಿ ವಿಧಾನಗಳನ್ನು ಪೂರೈಸಿ‌ ರಾಮ‌… Read More ರಾಮ ರಾವಣ-1

ದುಡ್ಡಿನ ಮಹತ್ವ

ಸುಮಾರು ಸಾವಿರದ ಒಂಬೈನೊರ ಎಂಬತ್ತಾರು, ಎಂಬತ್ತೇಳರ ಸಮಯ, ನಾನಿನ್ನೂ ಆಗಷ್ಟೇ ಕಾಲೇಜಿಗೆ ಸೇರಿದ್ದನಷ್ಟೆ. ಕಾಲೇಜಿಗೆ ಹೋಗುವ ಹುಡುಗನಾದರೂ ನೋಡಲು ಏಳು ಅಥವಾ ಎಂಟನೇ ತರಗತಿಯ ‌ವಿದ್ಯಾರ್ಥಿ ಅನ್ನುವ ಹಾಗೆ ಕಾಣುತ್ತಿದೆ. ಕುಳ್ಳಗೆ ಸಣ್ಣಗಿದ್ದ ನನ್ನನ್ನು ನನ್ನ ತಾಯಿ ವೈದ್ಯರ ಬಳಿ‌ ಕರೆದುಕೊಂಡು ಹೋಗಿ‌ ಡಾಕ್ಟ್ರೇ ನನ್ನ ‌ಮಗನಿಗೆ ಯಾವುದಾದರು ವಿಟಮಿನ್ ಟಾನಿಕ್‌ ಕೊಡಿ‌ ಸ್ವಲ್ಪ ಉದ್ದ ಮತ್ತು ಗಾತ್ರವಾಗಲಿ‌ ಎಂದು‌‌ ಕೋರಿದ್ದೂ ಉಂಟು. ಆದರೆ ನನ್ನ ತಂದೆ ‌ನಮ್ಮ ವಂಶದಲ್ಲಿ ಗಂಡುಮಕ್ಕಳೆಲ್ಲರೂ ಹದಿನೆಂಟರ ನಂತರವೇ ಬೆಳಯುವುದು ಎಂದು‌… Read More ದುಡ್ಡಿನ ಮಹತ್ವ

ದೇವರಿಗೆ ಅರ್ಪಿಸಿದ  ನೈವೇದ್ಯ ದೇವರಿಗೆ ತಲುಪುತ್ತದೆಯೇ?

ಸುಮಾರು ಅರವತ್ತು ಎಪ್ಪತ್ತು ವರ್ಷಗಳ ಹಿಂದೆ ಒಬ್ಬ ಆಸ್ತಿಕ ಮಹಾಶಯರು ಬೆಂಗಳೂರಿನಿಂದ ತಿರುಪತಿ ವೇಂಕಟರಮಣನನ್ನು   ದರ್ಶನ ಮಾಡಲು ನಿರ್ಧರಿಸಿದರು. ಆವತ್ತಿನ ಕಾಲದಲ್ಲಿ ಇಂದಿನಂತೆ ಮೋಟಾರು ವಾಹನಗಳು ಇನ್ನೂ ಹೆಚ್ಚಿನ ಪ್ರಚಲಿತವಿಲ್ಲದಿದ್ದ ಕಾರಣ, ಎತ್ತಿನ ಗಾಡಿಯಲ್ಲಿಯೇ ಹೋಗಲು ನಿರ್ಧರಿಸಿ ಸಕಲ ಸಿದ್ಢತೆಗಳೊಂದಿಗೆ ಒಳ್ಳೆಯ ಮಹೂರ್ತ ನೋಡಿ ಕುಟುಂಬ ಸಮೇತರಾಗಿ ಗಾಡಿಯಲ್ಲಿ ಹೊರಟೇ ಬಿಟ್ಟರು. ಬಹಳ ಅನುಷ್ಟಾಂತರಾದ ಶ್ರೀಯುತರು ಮಾರ್ಗದ ಬದಿಯಲ್ಲಿಯೇ ಇರುತ್ತಿದ್ದ ಅರವಟ್ಟಿಗೆಗಳಲ್ಲಿ ತಂಗಿ, ಅಲ್ಲಿಯೇ ಅಡುಗೆ ಮಾಡಿಕೊಂಡು ತಮ್ಮ ಪ್ರಯಾಣ ಮುಂದುವರಿಸಿದ್ದರು. ಸುಮಾರು ಹದಿನೈದು ಇಪ್ಪತ್ತು ದಿನಗಳ… Read More ದೇವರಿಗೆ ಅರ್ಪಿಸಿದ  ನೈವೇದ್ಯ ದೇವರಿಗೆ ತಲುಪುತ್ತದೆಯೇ?