ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ

ಬ್ರಿಟಿಷರು ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಒಡೆದು ಎರಡು ದೇಶಗಳಾಗಿ ಮಾಡಿ ಹೋದ ನಂತರ ಸ್ವಾತಂತ್ರ್ಯ ಭಾರತದ ಮೊತ್ತ ಮೊದಲ ಪ್ರಧಾನಿಯಾಗಿ ನೆಹರು ಅಧಿಕಾರ ವಹಿಸಿಕೊಂಡಿದ್ದರು. ನಮ್ಮ ದೇಶಕ್ಕಾಗಿ ಸೂಕ್ತವಾದ ರಕ್ಷಣಾ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ನಮ್ಮ ಸೈನ್ಯಕ್ಕೆ ಅತ್ಯುತ್ತಮ ಭಾರತೀಯ ಕಮಾಂಡರ್ ಮತ್ತು ಅತ್ಯಂತ ಅನುಭವಿ ವ್ಯಕ್ತಿಯನ್ನು ಸೇನಾ ಮುಖ್ಯಸ್ಥರಾಗಿ ಆಯ್ಕೆ ಮಾಡಲು ಬಯಸಿತ್ತು. ಆದರೆ ನೆಹರು ಅವರಿಗೆ ಇದ್ದಕ್ಕಿಂದ್ದಂತೆಯೇ ಜಗತ್ಪ್ರಸಿದ್ದ ನಾಯಕನಾಗುವ ಮತ್ತು ಭಾರತ ಅಹಿಂಸಾಪ್ರಿಯ ದೇಶ ಎಂದು ತೋರಿಸುವ ಉಮ್ಮೇದು. ಹಾಗಾಗಿ ನಮ್ಮ ದೇಶಕ್ಕೆ… Read More ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ

ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಇವತ್ತಿನ ನಮ್ಮ ಕನ್ನಡದ ಕಲಿಗಳು ಕಥಾನಾಯಕರನ್ನು ಹೇಗೆ ಪರಿಚರಿಸಿಕೊಡುವುದು ಎಂಬ ಗೊಂದಲ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ. ಇವರು ತಮ್ಮ ಜೀವನ ಆರಂಭಿಸಿದ್ದು, ಕೂಲೀ ಕಾರ್ಮಿಕನಾಗಿ ನಂತರ ಹೊಟೇಲ್ ಮಾಲಿಕ, ತದನಂತರ ಸ್ವಾತಂತ್ರ್ಯ ಹೋರಾಟಗಾರ, ಆನಂತರ ಚಲನಚಿತ್ರ ಪ್ರದರ್ಶಕ, ಚಿತ್ರ ನಿರ್ದೇಶಕ, ಚಿತ್ರ ನಿರ್ಮಾಪಕ ಹೀಗೆ ಹಿಡಿದ ಕೆಲಸವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಜನರ ಮನವನ್ನು ಸೂರೆಗೊಂಡ ಅಪ್ರತಿಮ ಛಲಗಾರ ಬಿ. ವಿಠಲಾಚಾರ್ಯರು. ವಿಠಲಾಚಾರ್ಯರು ಎಂದರೆ ನಮಗೆ ಥಟ್ ಅಂತಾ ನೆನಪಾಗೋದೇ ಪೌರಾಣಿಕ ಇಲ್ಲವೇ ಕ್ರಾಂತಿಕಾರಿ ಸಿನಿಮಾಗಳೇ. ಇಂದಿನ… Read More ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಭಾರತೀಕಂಠ ಗಂಗೂಬಾಯಿ ಹಾನಗಲ್

ಅದೊಂದು ದೇವಾಲಯದಲ್ಲಿ ಸಂಗೀತ ಕಛೇರಿ ನಡೆಯುತ್ತಿತ್ತು. ದೇವಸ್ಥಾನದ ಆರ್ಚಕರು ಪೂಜೆ ಪುನಸ್ಕಾರಗಳಲ್ಲಿ ನಿರತರಾಗಿದ್ದ ಕಾರಣ ಖುದ್ದಾಗಿ ಸಂಗೀತ ಕಛೇರಿಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಕಛೇರಿಯಿಂದ ಸುಶ್ರಾವ್ಯವಾಗಿ ಗಂಡು ಧ್ವನಿಯಲ್ಲಿ ಕೇಳಿಬರುತ್ತಿದ್ದ ಸಂಗೀತವನ್ನು ಆಲಿಸುತ್ತಲೇ, ದೇವಸ್ಥಾನದ ಮಹಾಮಂಗಳಾರತಿ ಮುಗಿಸಿ ಸಂಗೀತ ಕಛೇರಿಗೆ ಬಂದು ನೋಡಿದರೆ, ಅಲ್ಲಿ ಹಾಡುತ್ತಿದ್ದವರು ಗಂಡಸಾಗಿಲ್ಲದೇ, ಹೆಂಗಸಾಗಿದ್ದಿದ್ದನ್ನು ನೋಡಿ ಆಶ್ವರ್ಯಚಕಿತರಾಗಿದ್ದರು. ಅಂತಹ ವೈಶಿಷ್ಟ್ಯವಾದ ಧ್ವನಿಯಲ್ಲಿ ಐದಾರು ದಶಕಗಳ ಕಾಲ ಹಿಂದೂಸ್ಥಾನೀ ಸಂಗೀತ ಪ್ರಿಯರ ಮನವನ್ನು ಗೆದ್ದಂತಹ ಶ್ರೀಮತಿ ಗಂಗೂಬಾಯಿ ಹಾನಗಲ್ ಅವರೇ ನಮ್ಮ ಕನ್ನಡದ ಕಲಿಗಳು ಮಾಲಿಕೆಯ… Read More ಭಾರತೀಕಂಠ ಗಂಗೂಬಾಯಿ ಹಾನಗಲ್

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ

ಮೂಗೂರು ಸುಂದರಂ ಮಾಸ್ಟರ್

ಅವಿಭಜಿತ ಮೈಸೂರು ಜಿಲ್ಲೆಯ ‍ಚಾಮರಾಜನಗರದ ಬಳಿಯ ಮೂಗೂರು ಗ್ರಾಮದ ತರುಣ, ಸಿನಿಮಾದ ಹುಚ್ಚಿನಿಂದ ದೂರದ ಮದ್ರಾಸಿಗೆ ಹೋಗಿ,  ಎಂಜಿಆರ್, ಎಂಟಿಆರ್, ಜಯಲಲಿತ ಅಂತಹ ಮುಖ್ಯಮಂತ್ರಿಗಳಿಂದ ಹಿಡಿದು, ರಾಜಕುಮಾರ್, ಶಿವಾಜಿ ಗಣೇಶನ್, ವಿಷ್ಣುವರ್ಧನ್, ರಜನೀಕಾಂತ್, ಚಿರಂಜೀವಿ, ಅಕ್ಕಿನೇನಿ ನಾಗೇಶ್ವರ್ ರಾವ್ ಇಂದ ಹಿಡಿದು ಅವರ ಕುಟುಂಬದ ಇತ್ತೀಚಿನ ನಟರ ವರೆಗೂ ಕುಣಿಸಿ ಕುಪ್ಪಳಿಸಿದ್ದಲ್ಲದೇ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿಯೂ ಬಹುತೇಕ ನಟ ನಟಿಯರಿಂದ ನೃತ್ಯ ಮಾಡಿಸಿ, 1200ಕ್ಕೂ ಹೆಚ್ಚಿನ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿರುವ ಮೂಗೂರು ಸುಂದರಂ ಮಾಸ್ಟರ್… Read More ಮೂಗೂರು ಸುಂದರಂ ಮಾಸ್ಟರ್

ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ರಾಜ್ಯದಲ್ಲಿ ಈಗ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮತ್ತು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೇ ಕೇವಲ ರಾಜ್ಯದಲ್ಲೇಕೇ, ಇಡೀ ರಾಷ್ಟ್ರದಲ್ಲಿಯೇ ಗ್ರಾಮೀಣ ಮಟ್ಟಕ್ಕೆ ಅಧಿಕಾರವನ್ನು ವಿಕೇಂದ್ರೀಕರಿಸಿದ ಹಿಂದಿರುವ ಕಥೆ ಬಲು ರೋಚಕವಾಗಿದೆ. ಅದು 1983, ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಸುಮಾರು 35-37 ವರ್ಷಗಳ ಕಾಲ ಕಾಂಗ್ರೇಸ್ ಆಡಳಿತದಿಂದ ಬೇಸತ್ತಿದ್ದ ಕನ್ನಡಿಗರು ಮೊತ್ತ ಮೊದಲ ಬಾರಿಗೆ ಕಾಂಗ್ರೇಸ್ಸನ್ನು ಧಿಕ್ಕರಿಸಿ, ಜನತಾ ಪಕ್ಷ + ಕ್ರಾಂತಿರಂಗ= ಜನತಾರಂಗವನ್ನು ಬೆಂಬಲಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರಪಥಮ ಬಾರಿಗೆ , ಬಿಜೆಪಿಯ… Read More ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್

ನಮಗೆಲ್ಲಾ ತಿಳಿದಿರುವಂತೆ ಐ.ಎ.ಎಸ್ ಅಧಿಕಾರಿಗಳೆಂದರೆ ಆಕಾಶದಿಂದ ನೇರವಾಗಿ ಈ ಧರೆಗೆ ಇಳಿದವರು ಎಂಬ ಹಮ್ಮು ಬಿಮ್ಮಿನಿಂದಲೇ ಸೂಟು ಬೂಟು ಧರಿಸಿಕೊಂಡು ಎಲ್ಲಿ ನೆಲದ ಮೇಲೆ ಕಾಲಿಟ್ಟರೆ ಅವರ ಕಾಲು ಸವೆದು ಹೋಗುತ್ತದೋ ಎಂದು ಸದಾಕಾಲವೂ ಐಶಾರಾಮಿ ಏಸಿ ಕಾರಿನಲ್ಲೇ ಓಡಾಡುತ್ತಾ ಏಸಿ ಕಛೇರಿಗಳಲ್ಲಿಯೇ ಕುಳಿತುಕೊಂಡು, ಆದಷ್ಟೂ ಜನರೊಂದಿಗೆ ಬೆರೆಯದೇ, ದೂರವೇ ಇದ್ದು ಅಧಿಕಾರವನ್ನು ಚಲಾಯಿಸುವರು ಎಂದೇ ಎಲ್ಲರ ಭಾವನೆ. ಆದರೆ ಇದಕ್ಕೆಲ್ಲವೂ ತದ್ವಿರುದ್ಧಂತೆ ಐ.ಎ.ಎಸ್ ಅಧಿಕಾರಿ ವರ್ಗದಲ್ಲಿಯೇ ಓರ್ವ ಸಂತ ಎಂದು ಬಣ್ಣಿಸಲ್ಪಟ್ಟ ಮತ್ತು ಧರಿಸುವ ವೇಷ… Read More ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್

ಪ್ರಭಾತ್ ಕಲಾವಿದರು ಗೋಪೀನಾಥ ದಾಸರು

ಎಂಭತ್ತರ ದಶಕದವರೆಗೂ, ಪರಭಾಷಾ ನಾಯಕ ನಟಿಯರು ಮತ್ತು ನೃತ್ಯಗಾರ್ತಿಯರು ಕನ್ನಡ ‍ಚಿತ್ರರಂಗಕ್ಕೆ ಬರುವವರೆಗೂ, ಕನ್ನಡದ ಚಿತ್ರರಂಗಕ್ಕೆ ಹೊಸ ಮುಖದ ಪ್ರಬುದ್ಧ ನವರರಸವನ್ನೂ ಅಭಿನಯಿಸಿ ತೋರಿಸಬಲ್ಲಂತಹ ನಟಿಯರು, ಸಹ ನೃತ್ಯಗಾರ್ತಿಯರು ಬೇಕೆಂದಲ್ಲಿ, ಇಂದಿಗೂ ಯಾವುದೇ ಸಾಂಸ್ಕೃತಿಯ ಕಾರ್ಯಕ್ರಮ ಅಥವಾ ಪೌರಾಣಿಕ ನಾಟಕಗಳಿಗೆ ರಂಗ ಸಜ್ಜಿಕೆ ಮತ್ತು ಉಡುಪುಗಳು ಬೇಕಾದಲ್ಲಿ, ಇಲ್ಲವೇ ಅತ್ಯುತ್ತಮವಾದ ಆಧುನಿಕ ಧ್ವನಿವರ್ಧಕಗಳು ಮತ್ತು ಬೆಳಕಿನ ಪರಿಕರಗಳು ಬೇಕಿದ್ದಲ್ಲಿ, ಎಲ್ಲರೂ ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ಪ್ರಭಾತ್ ಕಲಾವಿದರು ತಂಡವನ್ನೇ ಆಶ್ರಯಿಸುತ್ತಾರೆ. ಅಂತಹ ಪ್ರಭಾತ್ ಕಲಾವಿದರು ತಂಡವನ್ನು ಆಸ್ಥೆಯಿಂದ ಕಟ್ಟಿ… Read More ಪ್ರಭಾತ್ ಕಲಾವಿದರು ಗೋಪೀನಾಥ ದಾಸರು

ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಅದೊಂದು ಕುಗ್ರಾಮ. ಹೆಸರಿಗಷ್ಟೇ ಅಗ್ರಹಾರ ಎಂದಿದ್ದರೂ, ಇದ್ದದ್ದು ಎಂಕ, ನಾಣಿ, ಸೀನ ಅಂತಾ ಹತ್ತಾರು ಸಂಪ್ರದಾಯಸ್ಥರ ಮನೆ. ಕೃಷಿ ಪ್ರಧಾನವಾಗಿದ್ದ ಆ ಊರಿನಲ್ಲಿ ಶಾಸ್ತ್ರೀಯ ಸಂಗೀತ ಮತ್ತು ಸಾಹಿತ್ಯದ ಗಂಧವೇ ಇಲ್ಲದಿದ್ದರೂ ಜನಪದ ಸಾಹಿತ್ಯಕ್ಕೇನು ಕೊರತೆ ಇರಲಿಲ್ಲ. ಅಂತಹ ಊರಿನಲ್ಲೊಂದು ಅನರ್ಘ್ಯ ರತ್ನದಂತೆ, ತಾಯಿಯ ಕಡೆಯ ದೂರ ಸಂಬಧಿಯೊಬ್ಬರು ಮಾಡುತ್ತಿದ್ದ ಗಮಕ ವಾಚನದಿಂದ ಆಕರ್ಷಿತರಾಗಿ, ಮಹಾಭಾರತದ ಏಕಲವ್ಯನಂತೆ, ದೈವದತ್ತವಾದ ಶರೀರ ಮತ್ತು ಶಾರೀರದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹರಿಕಥೆ, ಗಮಕ ವಾಚನ, ವ್ಯಾಖ್ಯಾನವಲ್ಲದೇ, ನಾಟಕದ ಮಟ್ಟುಗಳು ಮತ್ತು… Read More ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು