ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ರಾಜ್ಯದಲ್ಲಿ ಈಗ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮತ್ತು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೇ ಕೇವಲ ರಾಜ್ಯದಲ್ಲೇಕೇ, ಇಡೀ ರಾಷ್ಟ್ರದಲ್ಲಿಯೇ ಗ್ರಾಮೀಣ ಮಟ್ಟಕ್ಕೆ ಅಧಿಕಾರವನ್ನು ವಿಕೇಂದ್ರೀಕರಿಸಿದ ಹಿಂದಿರುವ ಕಥೆ ಬಲು ರೋಚಕವಾಗಿದೆ. ಅದು 1983, ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಸುಮಾರು 35-37 ವರ್ಷಗಳ ಕಾಲ ಕಾಂಗ್ರೇಸ್ ಆಡಳಿತದಿಂದ ಬೇಸತ್ತಿದ್ದ ಕನ್ನಡಿಗರು ಮೊತ್ತ ಮೊದಲ ಬಾರಿಗೆ ಕಾಂಗ್ರೇಸ್ಸನ್ನು ಧಿಕ್ಕರಿಸಿ, ಜನತಾ ಪಕ್ಷ + ಕ್ರಾಂತಿರಂಗ= ಜನತಾರಂಗವನ್ನು ಬೆಂಬಲಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರಪಥಮ ಬಾರಿಗೆ , ಬಿಜೆಪಿಯ… Read More ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್

ನಮಗೆಲ್ಲಾ ತಿಳಿದಿರುವಂತೆ ಐ.ಎ.ಎಸ್ ಅಧಿಕಾರಿಗಳೆಂದರೆ ಆಕಾಶದಿಂದ ನೇರವಾಗಿ ಈ ಧರೆಗೆ ಇಳಿದವರು ಎಂಬ ಹಮ್ಮು ಬಿಮ್ಮಿನಿಂದಲೇ ಸೂಟು ಬೂಟು ಧರಿಸಿಕೊಂಡು ಎಲ್ಲಿ ನೆಲದ ಮೇಲೆ ಕಾಲಿಟ್ಟರೆ ಅವರ ಕಾಲು ಸವೆದು ಹೋಗುತ್ತದೋ ಎಂದು ಸದಾಕಾಲವೂ ಐಶಾರಾಮಿ ಏಸಿ ಕಾರಿನಲ್ಲೇ ಓಡಾಡುತ್ತಾ ಏಸಿ ಕಛೇರಿಗಳಲ್ಲಿಯೇ ಕುಳಿತುಕೊಂಡು, ಆದಷ್ಟೂ ಜನರೊಂದಿಗೆ ಬೆರೆಯದೇ, ದೂರವೇ ಇದ್ದು ಅಧಿಕಾರವನ್ನು ಚಲಾಯಿಸುವರು ಎಂದೇ ಎಲ್ಲರ ಭಾವನೆ. ಆದರೆ ಇದಕ್ಕೆಲ್ಲವೂ ತದ್ವಿರುದ್ಧಂತೆ ಐ.ಎ.ಎಸ್ ಅಧಿಕಾರಿ ವರ್ಗದಲ್ಲಿಯೇ ಓರ್ವ ಸಂತ ಎಂದು ಬಣ್ಣಿಸಲ್ಪಟ್ಟ ಮತ್ತು ಧರಿಸುವ ವೇಷ… Read More ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್

ಪ್ರಭಾತ್ ಕಲಾವಿದರು ಗೋಪೀನಾಥ ದಾಸರು

ಎಂಭತ್ತರ ದಶಕದವರೆಗೂ, ಪರಭಾಷಾ ನಾಯಕ ನಟಿಯರು ಮತ್ತು ನೃತ್ಯಗಾರ್ತಿಯರು ಕನ್ನಡ ‍ಚಿತ್ರರಂಗಕ್ಕೆ ಬರುವವರೆಗೂ, ಕನ್ನಡದ ಚಿತ್ರರಂಗಕ್ಕೆ ಹೊಸ ಮುಖದ ಪ್ರಬುದ್ಧ ನವರರಸವನ್ನೂ ಅಭಿನಯಿಸಿ ತೋರಿಸಬಲ್ಲಂತಹ ನಟಿಯರು, ಸಹ ನೃತ್ಯಗಾರ್ತಿಯರು ಬೇಕೆಂದಲ್ಲಿ, ಇಂದಿಗೂ ಯಾವುದೇ ಸಾಂಸ್ಕೃತಿಯ ಕಾರ್ಯಕ್ರಮ ಅಥವಾ ಪೌರಾಣಿಕ ನಾಟಕಗಳಿಗೆ ರಂಗ ಸಜ್ಜಿಕೆ ಮತ್ತು ಉಡುಪುಗಳು ಬೇಕಾದಲ್ಲಿ, ಇಲ್ಲವೇ ಅತ್ಯುತ್ತಮವಾದ ಆಧುನಿಕ ಧ್ವನಿವರ್ಧಕಗಳು ಮತ್ತು ಬೆಳಕಿನ ಪರಿಕರಗಳು ಬೇಕಿದ್ದಲ್ಲಿ, ಎಲ್ಲರೂ ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ಪ್ರಭಾತ್ ಕಲಾವಿದರು ತಂಡವನ್ನೇ ಆಶ್ರಯಿಸುತ್ತಾರೆ. ಅಂತಹ ಪ್ರಭಾತ್ ಕಲಾವಿದರು ತಂಡವನ್ನು ಆಸ್ಥೆಯಿಂದ ಕಟ್ಟಿ… Read More ಪ್ರಭಾತ್ ಕಲಾವಿದರು ಗೋಪೀನಾಥ ದಾಸರು

ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಅದೊಂದು ಕುಗ್ರಾಮ. ಹೆಸರಿಗಷ್ಟೇ ಅಗ್ರಹಾರ ಎಂದಿದ್ದರೂ, ಇದ್ದದ್ದು ಎಂಕ, ನಾಣಿ, ಸೀನ ಅಂತಾ ಹತ್ತಾರು ಸಂಪ್ರದಾಯಸ್ಥರ ಮನೆ. ಕೃಷಿ ಪ್ರಧಾನವಾಗಿದ್ದ ಆ ಊರಿನಲ್ಲಿ ಶಾಸ್ತ್ರೀಯ ಸಂಗೀತ ಮತ್ತು ಸಾಹಿತ್ಯದ ಗಂಧವೇ ಇಲ್ಲದಿದ್ದರೂ ಜನಪದ ಸಾಹಿತ್ಯಕ್ಕೇನು ಕೊರತೆ ಇರಲಿಲ್ಲ. ಅಂತಹ ಊರಿನಲ್ಲೊಂದು ಅನರ್ಘ್ಯ ರತ್ನದಂತೆ, ತಾಯಿಯ ಕಡೆಯ ದೂರ ಸಂಬಧಿಯೊಬ್ಬರು ಮಾಡುತ್ತಿದ್ದ ಗಮಕ ವಾಚನದಿಂದ ಆಕರ್ಷಿತರಾಗಿ, ಮಹಾಭಾರತದ ಏಕಲವ್ಯನಂತೆ, ದೈವದತ್ತವಾದ ಶರೀರ ಮತ್ತು ಶಾರೀರದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹರಿಕಥೆ, ಗಮಕ ವಾಚನ, ವ್ಯಾಖ್ಯಾನವಲ್ಲದೇ, ನಾಟಕದ ಮಟ್ಟುಗಳು ಮತ್ತು… Read More ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಅಕ್ಷರಗಳ ಬ್ರಹ್ಮರಾಕ್ಷಸ ರವಿ ಬೆಳಗೆರೆ

ಅದು ಎಪ್ಪತ್ತರ ದಶಕ. ಬಳ್ಳಾರಿಯ ಸಂಪ್ರದಾಯಸ್ಥ ಮನೆತನದ ಚಿಗುರು ಮೀಸೆಯ ಚುರುಕು ಹುಡುಗನೊಬ್ಬ ಸಹವಾಸ ದೋಷದಿಂದ ಹಳಿಬಿಟ್ಟು ಶಾಲೆಗೆ ಸರಿಯಾಗಿ ಹೋಗದೇ ಪೋಲಿಯಾಗಿ ಅಲೆಯುತ್ತಿದ್ದಾಗ ಮತ್ತೆ ಅಮ್ಮನ ಪ್ರೋತ್ಸಾಹದ ಮೇರೆಗೆ ಅಮ್ಮಾ ಮಗ ಒಟ್ಟೊಟ್ಟಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಅಮ್ಮಾ ತೇರ್ಗಡೆಯಾದರೆ, ಮಗ ನಪಾಸ್. ಮತ್ತೆ ಛಲ ಬಿಡದ ತ್ರಿವಿಕ್ರಮನಂತೆ, ಪುನಃ ಪರೀಕ್ಷೇ ಬರೆದು ತೇರ್ಗಡೆ ಹೊಂದಿ, ತನ್ನೂರಿನಲ್ಲೇ ಪದವಿ ಪಡೆದು ನಂತರ ದೂರದ ಧಾರವಾಡದಲ್ಲಿ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆಯುವವರೆಗೂ ಹಿಂದಿರುಗಿ ನೋಡಲೇ… Read More ಅಕ್ಷರಗಳ ಬ್ರಹ್ಮರಾಕ್ಷಸ ರವಿ ಬೆಳಗೆರೆ

ಕಾರ್ತಿಕ್ ಸಾಹುಕಾರ್

ಬಿಹಾರದ ಗಯಾ ಜಿಲ್ಲೆಯ ಗೆಹ್ಲಾರ್‌ ಎಂಬ ಕುಗ್ರಾಮದಲ್ಲಿನ ಒಬ್ಬಾಕೆಗೆ ಆರೋಗ್ಯ ಸರಿ ಇಲ್ಲದಿದ್ದಾಗ ಚಿಕಿತ್ಸೆಗೆಂದು ಗುಡ್ಡ ಹಿಂದಿರುವ ಊರಿಗೆ ತಲುಪಲು ಸುಮಾರು 40 ಕಿಮೀ ಹೋಗಲಾರದೇ, ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಸಿಗದೇ ಮೃತಪಟ್ಟಾಗ ಆಕೆಯ ಪತಿ ದಶರಥ್‌ ಮಾಂಝಿ ಸುತ್ತಿಗೆ, ಹಾರೆಗಳಿಂದ ಏಕಾಂಗಿಯಾಗಿ ಸುಮಾರು 22 ವರ್ಷಗಳ ಕಾಲ ಕಡಿದು ಆ ಎರಡೂ ಊರುಗಳ ನಡುವಿನ ಅಂತರವನ್ನು ಕೆಲವೇ ಕೆಲವು ನಿಮಿಷಗಳಷ್ಟು ದೂರಕ್ಕೆ ತಂದಾಗ ಇಡೀ ಪ್ರಪಂಚವೇ ನಿಬ್ಬೆರಗಾಗಿತ್ತು. ಅದೇ ರೀತಿ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ… Read More ಕಾರ್ತಿಕ್ ಸಾಹುಕಾರ್

ಶಾಂತಾ ರಂಗಸ್ವಾಮಿ

ಬ್ರಿಟೀಷರು ಭಾರತವನ್ನು ಬಿಟ್ಟು ಹೋದರೂ, ಭಾರತೀಯರು ಬ್ರೀಟಿಷರಿಂದ ಕಲಿತ ಇಂಗ್ಲೀಷ್ ಭಾಷೆ, ಅವರ ವೇಷ ಭೂಷಣ ಮತ್ತು ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಅವರು ಕಲಿಸಿಕೊಟ್ಟ ಕ್ರಿಕೆಟ್ ಆಟವನ್ನು ಅಪ್ಪಿ ಮುದ್ದಾಡುತ್ತಿದ್ದೇವೆ. ಇತ್ತೀಚೆಗಂತೂ ಭಾರತದಲ್ಲಿ ಕ್ರಿಕೆಟ್ ಎನ್ನುವುದು ಒಂದು ರೀತಿಯ ಧರ್ಮವಾಗಿದೆ ಎಂದರೂ ತಪ್ಪಾಗಲಾರದು. ಈ ರೀತಿಯ ಬದಲಾವಣೆಯಾದದ್ದು ಕಪಿಲ್ ದೇವ್ ಅವರ ತಂಡ 1983ರ ವರ್ಲ್ಡ್ ಕಪ್ ಗೆದ್ದ ನಂತರ ಎನ್ನುವುದು ಗಮನಿಸಬೇಕಾದ ಅಂಶ ಅದಕ್ಕೂ ಮೊದಲು ಕ್ರಿಕೆಟ್ ವಿಶ್ವ ಕ್ರಿಕೆಟ್ ಜಗತ್ತಿನಲ್ಲಿ ಭಾರತ ಆಟಕ್ಕುಂಟು ಲೆಕ್ಕಕ್ಕಿಲ್ಲ. ಎಪ್ಪತ್ತರ… Read More ಶಾಂತಾ ರಂಗಸ್ವಾಮಿ

ಸುಧೀರ್

ಅದು ಎಂಬತ್ತರ ದಶಕ ಮಲ್ಲೇಶ್ವರದ ಕೋದಂಡರಾಮಪುರದ ರಾಮಮಂದಿರದ ಎರುರಿಗಿದ್ದ ಕೆಲವು ಸಣ್ಣ ಸಣ್ಣ ಮನೆಯೊಂದರಲ್ಲಿ ರಂಗಭೂಮಿ ಮತ್ತು ಚಲನಚಿತ್ರದಲ್ಲಿ ಅಭಿನಯಿಸುತ್ತಿದ್ದ ನಟರೊಬ್ಬರು ಇದ್ದರು. ವರನಟ ರಾಜಕುಮಾರರ ತಮ್ಮ ವರದಪ್ಪನವರ ಮನೆ ಅಲ್ಲಿಂದ ಕೂಗಳತೆಯ ದೂರದಲ್ಲಿತ್ತು. ನಾಟಕ ಅಥವಾ ಚಿತ್ರೀಕರಣವಿಲ್ಲದಿದ್ದಲ್ಲಿ ಸಂಜೆ ನೀಟಾಗಿ ಡ್ರೆಸ್ ಮಾಡಿಕೊಂಡು ಕೈ ಬೆರಳಲ್ಲೊಂದು ಕೀ ಚೈನ್ ತಿರುಗಿಸಿಕೊಂಡು ಸಿಳ್ಳೇ ಹಾಕುತ್ತಾ ತಮ್ಮ ಮನೆಯಿಂದ ಹೊರಡುತ್ತಿದ್ದ ವೈಯ್ಯಾಳಿಕಾವಲ್ ರಾಜೇಶ್ ಹೋಟೆಲ್ ಕಡೆಗೆ ಹೋಗುತ್ತಿದ್ದ ಆ ಅಜಾನುಬಾಹು ನಟನನ್ನು ನೋಡಿದರೆ ನಿಜಕ್ಕೂ ಭಯವೆನಿಸುತ್ತಿತ್ತು. ನಮ್ಮಂತಹ ಚಿಕ್ಕಮಕ್ಕಳು… Read More ಸುಧೀರ್

ಪರಿಸರ ಪ್ರೇಮಿ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ

ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ 114 ವರ್ಷದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ ಆಗಿರುವ ಸಂಧರ್ಭದಲ್ಲಿ ಅವರ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಪರಿಸರ ಪ್ರೇಮಿ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ