ಶ್ರೀ ಕುದ್ಮುಲ್ ರಂಗರಾಯರು

ಬ್ರಿಟೀಷರು ಭಾರತೀಯರನ್ನು ಒಡೆದು ಆಳುವ ನಿಟ್ಟಿನಲ್ಲಿ ಬಿತ್ತಿಹೋದ ಜಾತಿ ಮತ್ತು ಸಾಮಾಜಿಕ ಅಸಮಾನತೆ ಎಂಬ ಕಳೆ ಈಗ ದೇಶದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಅಸಮಾನತೆಯ ಪಿಡುಗನ್ನು ತೊಡೆದು ಹಾಕುವುದರಲ್ಲಿ ತಮ್ಮದೇನೂ ಕಿಂಚಿತ್ ಪಾತ್ರವಿರದಿದ್ದರೂ ತಮ್ಮ ಬಾಯಿ ಚಪಲ ಮತ್ತು ಸುತ್ತಮುತ್ತಲಿನ ವಂದಿಮಾಗಧರ ಚೆಪ್ಪಾಳೆಗಾಗಿ ದಲಿತರು, ಬಲಿತರು ಎಂಬ ವಿತಂಡವಾದವನ್ನು ಮಂಡಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವುತ್ತಿರುವವರೇ ಹೆಚ್ಚಾಗಿರುವಾಗ ಈ ಸಂದರ್ಭದಲ್ಲಿ ಸುಮಾರು ಸುಮಾರು 150 ವರ್ಷಗಳ ಹಿಂದೆಯೇ ದೀನ ದಲಿತರ ಸೇವೆಗಾಗಿಯೇ ತಮ್ಮ ಸರ್ವಸ್ವವನ್ನೂ ಮುಡಿಪಾಗಿಟ್ಟಿದ್ದ… Read More ಶ್ರೀ ಕುದ್ಮುಲ್ ರಂಗರಾಯರು

ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಅನಕ್ಷರಸ್ಥ ಕುರಿ ಕಾಯುವ ವೃತ್ತಿಯನ್ನು ಮಾಡುವ 84 ವರ್ಷ ಕುರುಬ ಕಲ್ಮನೆ ಕಾಮೇಗೌಡ ಎಂಬ ಹೆಸರು ಬಹುಶಃ ಅವರ ಊರು ಅಥವಾ ಅವರ ತಾಲ್ಲೂಕಿನ ಹೊರತಾಗಿ ಹೊರಗಿನವರಿಗೆ ಹೆಚ್ಚಾಗಿ ಪರಿಚಯವೇ ಇರಲಿಲ್ಲ. ಆದರೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್  ನಲ್ಲಿ ಈ ವ್ಯಕ್ತಿಯ ಬಗ್ಗೆ  ಯಾವಾಗ ಮಾತನಾಡಿದರೋ ಆ ಕೂಡಲೇ ಅವರ ಹೆಸರು ದೇಶಾದ್ಯಂತ ಪರಿಚಿತವಾಗಿ ಗೂಗಲ್ಲಿನಲ್ಲಿ… Read More ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು

ಎಲ್.ಎಸ್.ಶೇಷಗಿರಿರಾವ್

ಆಗ ಎಪ್ಪತ್ತರ ದಶಕ. ಆಗ ತಾನೆ ಓದಲು ಬರೆಯಲು ಕಲಿತ ಸಮಯ. ಅಮ್ಮಾ ಮೊದಲು ಪ್ರಜಾವಾಣಿ ಪತ್ರಿಕೆಯ ದಪ್ಪಕ್ಷರದ ಹೆಡ್ ಲೈನ್ ಓದುವ ಅಭ್ಯಾಸ ಮಾಡಿಸಿದರು. ಸ್ವಲ್ಪ ಅಕ್ಷರಗಳನ್ನು ಜೋಡಿಸಿ ಓದುವುದನ್ನು ಕರಗತ ಮಾಡಿಕೊಳ್ಳುತ್ತಿದ್ದಂತೆಯೇ, ತಂದೆಯವರು ಕೈಗಿತ್ತ ಪುಸ್ತಕ ಭಂಡಾರವೇ ಭಾರತ ಭಾರತಿ ಪುಸ್ತಕ ಸಂಪದ. ಚಿಕ್ಕ ಚಿಕ್ಕದಾದ ಬಹಳ ಸರಳ ಭಾಷೆಯಲ್ಲಿದ್ದರೂ ಅಷ್ತೇ ಮಹತ್ವಪೂರ್ಣ ವಿಷಯಗಳನ್ನೊಳಗೊಂಡ ದೇಶಭಕ್ತರ ಕಥಾ ಪುಸ್ತಕಗಳು. ಆರಂಭದಲ್ಲಿ ವಾರಕ್ಕೊಂದು ಪುಸ್ತಕವನ್ನು ಓದಿ ಅದನ್ನು ತಂದೆಯವರ ಸಮ್ಮುಖದಲ್ಲಿ ಓದಿದ ಪುಸ್ತಕದ ಬಗ್ಗೆ ವಿಚಾರ… Read More ಎಲ್.ಎಸ್.ಶೇಷಗಿರಿರಾವ್

ಕಾದಂಬರಿಗಾರ್ತಿ ತ್ರಿವೇಣಿ

ಕನ್ನಡ ಚಿತ್ರರಂಗದವರು ಒಳ್ಳೆಯ ಚಿತ್ರ ತೆಗೆಯಲು ಕಥೆಗಳೇ ಇಲ್ಲಾ ಅಂತಾ ಹೇಳುವ ಸಮಯದಲ್ಲಿ ಮಲೆಯಾಳಂ ಚಿತ್ರವೂ ಸೇರಿದಂತೆ ಸುಮಾರು ಎಂಟರಿಂದ ಹತ್ತು ಜನಪ್ರಿಯ ಕನ್ನಡ ಚಿತ್ರಗಳು ಆಕೆಯ ಕಾದಂಬರಿಗಳನ್ನು ಆಧರಿಸಿದ್ದವು ಎಂದರೆ ಆಕೆಯ ಸಾಮರ್ಥ್ಯದ ಅರಿವಾಗುತ್ತದೆ. ಬದುಕಿದ್ದು ಕೇವಲ ಮೂವತ್ತೈದು ವರ್ಷಗಳಾದರೂ ಅದಕ್ಕಿಂತಲೂ ಹೆಚ್ಚಿನ ಸಾಹಿತ್ಯಗಳನ್ನು ರಚಿಸಿದ್ದಾಕೆ. ನಿಧನರಾಗಿ 58 ವರ್ಷಗಳೇ ಆಗಿದ್ದರೂ ಇಂದಿಗೂ ಕನ್ನಡಿಗರ ಹೃದಯದಲ್ಲಿ ಅಚ್ಚಳಿಯದ ನೆನಪನ್ನು ಉಳಿಸಿ ಹೋಗಿರುವ ಶ್ರೀಮತಿ ಅನುಸೂಯ ಶಂಕರ್ ಅವರ ಬಗ್ಗೆ ನಾವಿಂದು ತಿಳಿದು ಕೊಳ್ಳೋಣ. ಬಹುಶಃ ಅನುಸೂಯ… Read More ಕಾದಂಬರಿಗಾರ್ತಿ ತ್ರಿವೇಣಿ

ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ

1956ರಲ್ಲಿ ಹತ್ತಾರು ಕಡೆ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು  ಭಾಷಾವಾರು ಅಧಾರದ ಮೇಲೆ  ರಾಜ್ಯಗಳನ್ನು ವಿಂಗಡಿಸಿ ಮೈಸೂರು ರಾಜ್ಯವಾದರೂ ಕನ್ನಡಿಗರಿಗೆ ಸಿಗಬೇಕಾದ ಗೌರವಗಳು ಸಿಗದೇ ಇನ್ನೂ  ಪರಕೀಯನಾಗಿಯೇ ಇದ್ದ.  ಅದೂ ರಾಜಧಾನಿಯಾದ ಬೆಂಗಳುರಿನಲ್ಲಿಯೇ ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ದೊರಕದಿದ್ದ ಸಂದರ್ಭದಲ್ಲಿ ಅನಕೃ ಅವರ ನೇತೃತ್ವದಲ್ಲಿ ಚಳುವಳಿ ಆರಂಭವಾದಾಗ ಅದರ ಮುಂದಾಳತ್ವವನ್ನು ವಹಿಸಿದ, ಕನ್ನಡ ಹೋರಾಟಕ್ಕೆ ಹೊಸ ಆಯಾಮ ನೀಡಿ, ಕನ್ನಡಿಗರ ಅಸ್ದಿತ್ವ ಮತ್ತು ಅಸ್ಮಿತಿಯನ್ನು ಎತ್ತಿ ಹಿಡಿಯಲು ಅವರನ್ನು ಒಗ್ಗೂಡಿಸಲು, ಹಳದಿ ಮತ್ತು ಕೆಂಪು ಬಣ್ಣದ ಬಾವುಟವನ್ನು… Read More ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ

ಸಾಹಿತ್ಯರತ್ನ ಚಿ. ಉದಯಶಂಕರ್

ಡಾ. ರಾಜ್ ಅವರ ಸಹಭಾವಚಿತ್ರ “ಜೀವನ ಚೈತ್ರ”ದ ಅಭಿನಯದಲ್ಲಿ ತಮ್ಮ ಅಮೋಘ ಕಾರ್ಯಗಳಿಂದ ನಿರ್ಮಾಪಕರಾಗಿ, ಸಂಭಾಷಣಕಾರರಾಗಿ, ಸಂಗೀತ ನಿರ್ದೇಶಕರಾಗಿ ನಟನಾಗಿ ಕನ್ನಡ ಚಲನಚಿತ್ರ ರಂಗದಲ್ಲಿ ಅಜ್ಞಾತವಾಗಿ ಮಹತ್ವದ ಪಾತ್ರ ನಿರ್ವಹಿಸಿದ ಚಿ. ಉದಯಶಂಕರ್ ಅವರ ಕುರಿತು ತಿಳಿಯಲು ಈ ಮಹಾನ್ ಕನ್ನಡಿಗರ ಬಗ್ಗೆ ನಾವು ಓದಿರಬಹುದು. … Read More ಸಾಹಿತ್ಯರತ್ನ ಚಿ. ಉದಯಶಂಕರ್

ಗುರುದತ್

ನಮ್ಮ ಕರ್ನಾಟಕದ ಪಡುಕೋಣೆ ಎಂಬ ಊರಿನ ಹೆಸರು ಕ್ರೀಡಾಜಗತ್ತಿನಲ್ಲಿ ಮತ್ತು ಚಲನಚಿತ್ರರಂಗದಲ್ಲಿ ಸಾಕಷ್ಟು ಚಿರಪರಿತವಾಗಿದೆ. ತಂದೆ ಪ್ರಕಾಶ್ ಪಡುಕೋಣೆ 1980ರಲ್ಲಿ ಆಲ್ ಇಂಗ್ಲೇಂಡ್ ಬ್ಯಾಂಡ್ಮಿಂಟನ್ ಛಾಂಪಿಯನ್ ಆಗುವ ಮೂಲಕ ಚಿರಪರಿಚಿತರಾದರೆ ಅವರ ಮಗಳು ದೀಪಿಕ ಪಡುಕೋಣೆ ಕಳೆದ ಎಂಟು ಹತ್ತು ವರ್ಷಗಳಿಂದ ಜನಪ್ರಿಯ ನಾಯಕಿಯಾಗಿ ಮಿಂಚುತ್ತಿದ್ದಾಳೆ. ಅದರೆ 1940ರಲ್ಲೇ ಪಡುಕೋಣೆ ಹೆಸರನ್ನು ದೇಶಾದ್ಯಂತ ಪಸರಿಸಿದ ಹೆಸರಾಂತ ಚಿತ್ರಕಾರ, ನಟ, ನೃತ್ಯ ಸಂಯೋಜಕ,ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದ ಅಪ್ಪಟ ಕನ್ನಡಿಗ ಗುರುದತ್ ಶಿವಶಂಕರ್ ಪಡುಕೋಣೆ. ಎಲ್ಲರ ಪ್ರೀತಿಯ ಗುರುದತ್ ಅವರ… Read More ಗುರುದತ್

ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಯಾವುದೇ ಒಂದು ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟವನ್ನು ತಲುಪುದು ಎಷ್ಟು ಕಷ್ಟ ಎಂದು ಕ್ರೀಡಾಪಟು ಆಗಿದ್ದವರಿಗೆ ತಿಳಿಯುತ್ತದೆ ಇಲ್ಲವೇ ಕ್ರೀಡಾಸಕ್ತರಿಗೆ ತಿಳಿದಿರುತ್ತದೆ. ಇಲ್ಲೊಬ್ಬರು ಎರಡೆರಡು ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ, ಮತ್ತೊಂದು ಕ್ರೀಡೆಯ ಆಡಳಿತಾಧಿಕಾರಿಯಾಗಿ ನಮ್ಮ ರಾಜ್ಯಕ್ಕೆ ಹೆಮ್ಮೆ ತಂದ ವೀರ ಸೇನಾನಿ, ಕೆಚ್ಚೆದೆಯ ಆಟಗಾರ, ಛಲವಂತ ನಾಯಕ, ಅತ್ಯುತ್ತಮ ತರಭೇತಿದಾರ ಮತ್ತು ಸಮರ್ಥ ಕ್ರೀಡಾ ಆಡಳಿತಗಾರರಾಗಿದ್ದ ಹಾಕಿ ಆಟಗಾರ ಶ್ರೀ ಎಂ ಪಿ ಗಣೇಶ್ ಆವರ ಬಗ್ಗೆ ತಿಳಿದುಕೊಳ್ಳೋಣ. ಕೊಡಗು ಜಿಲ್ಲೆಯ ಮಡಿಕೇರಿಯ ಸುಂಟಿಕೊಪ್ಪದ ಬಳಿಯ ಅಂದಗೋವೆ… Read More ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಎಂ.ವಿ. ಸುಬ್ಬಯ್ಯ ನಾಯ್ಡು

ಸ್ವಾತಂತ್ಯ್ರ ಪೂರ್ವದಲ್ಲಿ ಹರಿದು ಹಂಚಿಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಲು ಹಲವಾರು ಜನ ನಾನಾ ರೀತಿಯಲ್ಲಿ ಪ್ರಯತ್ನಿಸುತ್ತಿದ್ದರೆ ಇಲ್ಲೊಬ್ಬ ಮಹಾಶಯರು ರಂಗಭೂಮಿಯ ಮುಖಾಂತರ ಏಕೀಕರಣಕ್ಕೆ ಪ್ರಯತ್ನಿಸಿದ, ಕರ್ನಾಟಕದ ಹಲವಾರು ಪ್ರಪ್ರಥಮಗಳ ನಾಯಕ, ನಟ, ನಿರ್ದೇಶಕ, ನಿರ್ಮಾಪಕ, ಪೈಲ್ವಾನ್, ರಂಗಭೂಮಿ ಮತ್ತು ಚಲನಚಿತ್ರರಂಗ ಎರಡರಲ್ಲೂ ಸೈ ಎನಿಸಿಕೊಂಡವರು, ಹೀಗೆ ಹೇಳುತ್ತಾ ಹೋದರೆ ಹೇಳುತ್ತಲೇ ಹೋಗ ಬೇಕಾಗುವಂತಹ ವ್ಯಕ್ತಿತ್ವ ಹೊಂದಿದ್ದ ಅಭಿಜಾತ ಕಲಾವಿದರರಾಗಿದ್ದ ಶ್ರೀ ಎಂ.ವಿ. ಸುಬ್ಬಯ್ಯ ನಾಯ್ಡು ಅವರ ಕುರಿತಾಗಿ ತಿಳಿದುಕೊಳ್ಳೋಣ. 1896 ರಲ್ಲಿ ಮೈಸೂರು ಜಿಲ್ಲೆಯ ಮಾದಲಾಪುರದಲ್ಲಿ ಸುಬ್ಬಯ್ಯನವರ ಜನನವಾಗುತ್ತದೆ.… Read More ಎಂ.ವಿ. ಸುಬ್ಬಯ್ಯ ನಾಯ್ಡು