ಗಸಗಸೆ ಪಾಯಸ

ಹಬ್ಬದ ಹರಿದಿನಗಳಲ್ಲಿ ದೇವರ ಪೂಜೆಯಷ್ಟೇ ಊಟಕ್ಕೂ ಮಹತ್ವವಿದ್ದೇ ಇರುತ್ತದೆ. ಹಬ್ಬದ ಊಟ ಎಂದರೆ ಸಿಹಿ ಭಕ್ಷಗಳೇ ಪ್ರಾಧ್ಯಾನ್ಯವಾದದರು ಎಲೆ ಕೊನೆಗೇ ಪಾಯಸ ಬಡಿಸಲೇ ಬೇಕೆಂಬ ಶಾಸ್ತ್ರ ಮತ್ತು ನಮ್ಮ ಊಟ ಆರಂಭವಾಗುವುದೇ ಪಾಯಸದಿಂದ. ಇಂದೆಲ್ಲಾ ಬಾಣಸಿಗರು ಬಗೆ ಬಗೆಯ ಪಾಯಸಗಳನ್ನು ಮಾಡುತ್ತಾರಾದರೂ, ಹಿಂದಿನ ಕಾಲದಲ್ಲಿ ಶ್ಯಾವಿಗೆ ಪಾಯಸ ಇಲ್ಲವೇ ಗಸಗಸೆ ಪಾಯಸಕ್ಕೇ ಹೆಚ್ಚಿನ ಪ್ರಾಶಸ್ತ್ರ್ಯ. ಅಂತಹ ಗಸಗಸೆ ಪಾಯಸದ್ದೇ ಕುರಿತಾದ ಮೋಜಿನ ಸಂಗತಿ ಇದೋ ನಿಮಗಾಗಿ. ಚಿಕ್ಕ ವಯಸ್ಸಿನಿಂದಲೂ ನಾನು ಗಸಗಸೆ ಪಾಯಸ ಪ್ರಿಯ. ಬಹುಶಃ ಈ… Read More ಗಸಗಸೆ ಪಾಯಸ

ಜ್ಞಾನಚೂರ್ಣ ನಶ್ಯ

ಬಹುಶಃ ಇಂದಿನ ಕಾಲದಲ್ಲಿ ಯಾವುದೇ ಚಟವಿಲ್ಲದವರು ಸಿಗುವುದೇ ಅಪರೂಪ ಎಂದರೂ ತಪ್ಪಾಗಲಾರದೇನೋ?. ಇಂದಿನ ಬಹುತೇಕ ಹುಡುಗರು ಕಾಲೇಜು ಮೆಟ್ಟಿಲು ಹತ್ತುವುದರೊಳಗೇ ಬೀಡಿ ಇಲ್ಲವೇ ಸಿಗರೇಟ್ ಈ ರೀತಿ ಯಾವುದಾದರೂಂದು ತಂಬಾಕಿನ ಉತ್ಪನ್ನಕ್ಕೆ ದಾಸರಾಗಿ ಹೋಗುತ್ತಿರುವುದು ನಿಜಕ್ಕೂ ಬೇಸರ ಸಂಗತಿ. ಆದರೆ ಇವೆರೆಡರ ಹೊರತಾಗಿಯೂ ತಂಬಾಕಿನಿಂದ ತಯಾರಾದ ಹೊಗೆರಹಿತ ಸಣ್ಣದಾಗಿ ನಶೆ ಏರಿಸುವ ವಸ್ತುವೇ ನಶ್ಯ ಇಲ್ಲವೇ ನಸ್ಯ ಎಂದೂ ಕರೆಯುತ್ತಾರೆ.. ಇಂತಹ ನಶ್ಯದ ಕುರಿತಾದ ಕೆಲವು ಮೋಜಿನ ಪ್ರಸಂಗಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ನನಗೆ ತಿಳಿದಂತೆ, ನಶ್ಯಕ್ಕೂ ನಮ್ಮ… Read More ಜ್ಞಾನಚೂರ್ಣ ನಶ್ಯ

ನಮ್ಮನೆ, 1000 “ಸಂಭ್ರಮ”

ಎಲ್ಲರ ಜೀವನದಲ್ಲಿ ಹದಿನೆಂಟು ಎನ್ನುವುದು ಒಂದು ಪ್ರಮುಖ ಘಟ್ಟ. ಹದಿನೆಂಟಕ್ಕೆ ಹದಿಹರೆಯ ಎನ್ನುತ್ತೇವೆ. ಹೆಣ್ಣು ಮಕ್ಕಳಿಗಂತೂ ವಯಸ್ಸು ಹದಿನೆಂಟಾಗುತ್ತಿದ್ದಂತೆಯೇ ಅಪ್ಪಾ ಅಮ್ಮಂದಿರು ಮದುವೆ ಮಾಡಲು ಸಿದ್ಧರಾಗುತ್ತಾರೆ. ಸರ್ಕಾರ ಗಂಡು ಹೆಣ್ಣು ಎಂಬ ತಾರತಮ್ಯವಿಲ್ಲದೇ ಹದಿನೆಂಟು ವರ್ಷ ದಾಟಿದವರಿಗೆ ವಾಹನಗಳನ್ನು ಚಲಾಯಿಸುವ ಪರವಾನಗಿ ನೀಡುವುದರ ಜೊತೆಗೆ ಮತದಾನದ ಹಕ್ಕನ್ನೂ ನೀಡಿ ದೇಶವನ್ನೇ ಚಲಾಯಿಸುವ ಜವಾಬ್ಧಾರಿಯನ್ನು ನೀಡಿದೆ. ಇಷ್ಟೆಲ್ಲಾ ಪೀಠಿಕೆ ಏಕಪ್ಪಾ ಎಂದರೆ, ಇಂದಿಗೆ ಸರಿಯಾಗಿ ನಮ್ಮ ಮನೆಗೆ ಹದಿನೇಳು ತುಂಬಿ ಹದಿನೆಂಟು ವರ್ಷಗಳಾಗುತ್ತಿದೆ. ಈಗಿನಂತೆ ಆಗ ಮನೆ ಕಟ್ಟಿಸುವುದು… Read More ನಮ್ಮನೆ, 1000 “ಸಂಭ್ರಮ”

ಆಧುನಿಕ ಭಗೀರಥ ರಾಜಶೇಖರ್(ರಾಜಾ)

ಅದು ಎಂಭತ್ತರ ದಶಕದ ಸಮಯ. ನನ್ನ ವಿದ್ಯಾಭ್ಯಾಸದ ಸಲುವಾಗಿ ನಾವು ನೆಲಮಂಗಲದಿಂದ ಬೆಂಗಳೂರಿನ ಬಿಇಎಲ್ ಕಾರ್ಖಾನೆ ಹಿಂದಿನ ಲೊಟ್ಟೇಗೊಲ್ಲಹಳ್ಳಿ ಗ್ರಾಮಕ್ಕೆ ಸ್ಥಳಾಂತರಗೊಂಡು ಬಿಇಎಲ್ ಪ್ರಾಥಮಿಕ ಶಾಲೆಗೆ ಸೇರಿಕೊಂಡಿದ್ದೆ. ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹೋಗುತ್ತಿದ್ದ ನನಗೆ ನಮ್ಮ ಮನೆಯ ಬಳಿ ಯಾವುದೇ ಶಾಖೆ ಇರದಿದ್ದದ್ದು ತುಸು ಬೇಸರವೆನಿಸಿತ್ತು, ನಮ್ಮ ಶಾಲೆ ಮಧ್ಯಾಹ್ನನದ ಪಾಳಿಯಲ್ಲಿದ್ದು 1 – ಸಂಜೆ 5:30ಕ್ಕೆ ಮುಗಿಯುತ್ತಿತ್ತು. ಅದೊಂದು ದಿನ ನಮ್ಮ ಶಾಲೆಯ ಹಿಂಬಾಗದಲ್ಲಿದ್ದ ಬಿಇಎಲ್ ಸೊಸೈಟಿಯ ಪಕ್ಕದಲ್ಲಿ ಶಾಖೆ ನಡೆಯುವುದನ್ನು ನೋಡಿ ಆನಂದವಾಗಿ… Read More ಆಧುನಿಕ ಭಗೀರಥ ರಾಜಶೇಖರ್(ರಾಜಾ)

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ

ಶ್ರೀ ಗುರುಭ್ಯೋ ನಮಃ

ಸೂಟು, ಕೋಟು, ಬೂಟು, ಕುತ್ತಿಗೆಯಲ್ಲಿ ಟೈ.‌ಅದಕ್ಕೆ ಮಿರಿ‌ಮಿರಿ ಮಿಂಚುವ ಟೈ ಪಿನ್, ತೆಲೆಯ ಮೇಲೊಂದು ಮೈಸೂರು ಪೇಟ, ಹಣೆಯಲ್ಲಿ ಕೆಂಪನೆಯ ಉದ್ದನೆಯ ನಾಮ, ಕಣ್ಣಿಗೆ ಅಗಲವಾದ ಕನ್ನಡಕ, ನೋಡಲು ಕುಳ್ಳಗಿರುವ ವ್ಯಕ್ತಿಯೊಬ್ಬರು ತಮಗಿಂತಲೂ ಎತ್ತರವಿದ್ದ ಸೈಕಲ್ಲನ್ನು ತುಳಿದುಕೊಂಡು ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗುತ್ತಿದ್ದರು. ಹೊರಗಿನಿಂದ ನೋಡಿದರೆ ಬಾರೀ ಶಿಸ್ತಿನ ಕೋಪಿಷ್ಟ ಎನ್ನುವಂತೆ ಕಾಣಿಸಿಕೊಂಡರೂ, ಸ್ವಲ್ಪ ಹೊತ್ತು ಮಾತನಾಡಿಸಿದರೆ ಅವರಷ್ಟು ಮೃದು ಸ್ವಭಾವದ ವ್ಯಕ್ತಿ ಮತ್ತೊಬ್ಬರು ಇರಲಿಕ್ಕಿಲ್ಲ ಎಂದೆಸುವಂತಹ ವ್ಯಕ್ತಿತ್ವ. ಬಹುಶಃ ಎಪ್ಪತ್ತು, ಎಂಭತ್ತು ಮತ್ತು ತೊಂಭತ್ತರ ದಶಕದಲ್ಲಿ… Read More ಶ್ರೀ ಗುರುಭ್ಯೋ ನಮಃ

ಕಲ್ಪವೃಕ್ಷ

ತೆಂಗಿನ ಮರವನ್ನು ಕಲಿಯುಗದ ಕಲ್ಪವೃಕ್ಷ ಎಂದೇ ಕರೆಯಲಾಗುತ್ತದೆ. ನನ್ನನ್ನು ಏಳು ವರ್ಷ ಜನನದಿಂದ ಕಾಪಾಡು. ನಾನು ನಿನ್ನನ್ನು ಎಪ್ಪತ್ತು ವರ್ಷದ ವರೆಗೂ ನೆಮ್ಮದಿಯಿಂದ ಕಾಪಾಡುತ್ತೇನೆ ಎಂದು ತೆಂಗಿನಮರ ಹೇಳುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಿದ್ದದ ಮಾತಿನಲ್ಲಿ ಖಂಡಿತವಾಗಿಯೂ ಸತ್ಯವಿದೆ. ತೆಂಗಿನ ಮರದ ಪ್ರತಿಯೊಂದು ಭಾಗಗಳೂ ಉಪಯೋಗಿಸುವಂತಹದ್ದೇ ಅಗಿದ್ದು ಅದರಲ್ಲಿ ಬಿಸಾಡುವಂತಹ ತ್ರಾಜ್ಯಗಳೇ ಇಲ್ಲದಿರುವುದು ಮೆಚ್ಚಬೇಕಾದಂತಹ ಸಂಗತಿ. ತೆಂಗಿನ ಮರ ಇದ್ದಾಗ ಅನುಭವಿಸಿದ ಸಂತೋಷ ಮತ್ತು ಈಗ ತೆಂಗಿನ ಮರ ಇಲ್ಲದಿರುವಾಗ ಅನುಭವಿಸುತ್ತಿರುವ ಸಂಕಟಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ.… Read More ಕಲ್ಪವೃಕ್ಷ

ಪುನರ್ಜನ್ಮ ನೀಡಿದ ಅಪ್ಪ

ಬಹುಷಃ ಎಪ್ಪತ್ತು ಮತ್ತು ಎಂಭತ್ತರ ದಶಕದಲ್ಲಿ ಬಾಲ್ಯಾವಸ್ಥೆಯನ್ನು ಕಳೆದವರಿಗೆ ನಿಂಬೇಹುಳಿ ಪೆಪ್ಪರ್ಮೆಂಟ್ ಎಂಬ ಹೆಸರನ್ನು ಕೇಳಿದ ಕೂಡಲೇ ಖಂಡಿತವಾಗಿಯೂ ಬಾಯಯಲ್ಲಿ ನೀರು ಬಂದೇ ಬರುತ್ತದೆ. ಏಕೆಂದರೆ ಅಂದೆಲ್ಲಾ ನಮಗೆ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿದ್ದ ಚಾಕ್ಲೇಟ್ ಎಂದರೆ ಅದೊಂದೇ. ಕಡಿಮೆ ಹಣ ಜಾಸ್ತಿ ಹೊತ್ತು ಮಜ ಕೊಡುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ನಾವು ಚಿಕ್ಕವರಿದ್ದಾಗ ಮಾಡಿದ ಅತ್ಯುತ್ತಮ ಕೆಲಸಗಳಿಗೆ ಪ್ರೋತ್ಸಾಹಕರವಾಗಿ ಬಹುಮಾನ ರೂಪದಲ್ಲಿ ಸಿಗುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ಯಾರಾದರೂ ಚಿಕ್ಕ ಮಕ್ಕಳಿರುವ ಮನೆಗೆ ಬಂದರೆ, ಹೂವು ಹಣ್ಣುಗಳ… Read More ಪುನರ್ಜನ್ಮ ನೀಡಿದ ಅಪ್ಪ

ವಿಶ್ವ ಕುಟುಂಬ ದಿನ

ಜಾತಿ, ಧರ್ಮದ ಹೆಸರಿನಲ್ಲಿ ದೇಶ ದೇಶಗಳು ಶರಂಪರ ಕಿತ್ತಾಡುತ್ತಿರುವ ಈ ಸಂಧರ್ಭದಲ್ಲಿ, ವಸುಧೈವ ಕುಟುಂಬಕಂ ಅರ್ಥಾತ್ ಇಡೀ ವಿಶ್ವವೇ ಒಂದು ಕುಟುಂಬವಾಗಿ ಭಾವಿಸುವ ಅತ್ಯಂತ ಸುಂದರವಾದ ಪರಿಕಲ್ಪನೆ ನಮ್ಮ ಸನಾತನ ಧರ್ಮದಲ್ಲಿದ್ದು, ನಮ್ಮೆಲ್ಲರಿಗೂ ಕೇವಲ ಮೇ 15 ಮಾತ್ರವೇ ವಿಶ್ವ ಕುಟುಂಬ ದಿನವಾಗಿರದೇ,ಪ್ರತಿ ದಿನವೂ ಕುಟುಂಬದೊಂದಿಗೆ ನೆಮ್ಮದಿ ಮತ್ತು ಪ್ರೀತಿಯಿಂದ ಇರಬಹುದು ಅಲ್ವೇ?… Read More ವಿಶ್ವ ಕುಟುಂಬ ದಿನ