ಸೆಟ್ ದೋಸೆ

ದಕ್ಷಿಣ ಭಾರತೀಯ ತಿಂಡಿಗಳಲ್ಲಿ ಇಡ್ಲಿ ಮತ್ತು ದೋಸೆಗಳು ಹೆಸರುವಾಸಿಯಾಗಿವೆ. ಮನೆಯಲ್ಲಿ ಎಷ್ಟು ಚೆನ್ನಾಗಿ ದೋಸೆ ಮಾಡಿ ಕೊಟ್ಟರೂ, ಮಕ್ಕಳನ್ನು ಹೋಟೆಲ್ಲಿಗೆ ಕರೆದುಕೊಂಡು ಹೋದ ತಕ್ಷಣ ಆರ್ಡರ್ ಮಾಡುವುದೇ ಮಸಾಲೆ ದೋಸೆ. ಮಸಾಲೇ ದೋಸೆಗೆ ಸಡ್ಡು ಹೊಡೆಯಲು ಇರುವ ಗಾತ್ರದಲ್ಲಿ ಚಿಕ್ಕದಾಗಿ, ಸ್ಪಂಜಿನಂತೆ ಸ್ವಲ್ಪ ದಪ್ಪದಾಗಿ, ಅಷ್ಟೇ ಮೃದುವಾದ ಮತ್ತೊಂದು ದೋಸೆಯೇ ಸೆಟ್ ದೋಸೆ. ಅಂತಹ ಸೆಟ್ ದೋಸೆಯನ್ನು ಸಾಂಪ್ರದಾಯಿಕವಾಗಿ ಮತ್ತು ದಿಡೀರ್ ಆಗಿ ಮಾಡುವ ವಿಧಾನವನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತಿದ್ದೇವೆ. ಸಾಂಪ್ರದಾಯಿಕವಾದ ಸುಮಾರು 12-15 ಸೆಟ್ ದೋಸೆ… Read More ಸೆಟ್ ದೋಸೆ

ಅಳಿಲು ಸೇವೆ

ಅದು ಎಂಭತ್ತನೇ ದಶಕದ ಆರಂಭದ ದಿನಗಳು. ನಾನಾಗ ಇನ್ನೂ ಮಿಡ್ಲ್ ಸ್ಕೂಲಿನಲ್ಲಿ ಓದುತ್ತಿದ್ದೆ. ಅದೊಂದು ರಾತ್ರಿ ನನ್ನ ತಂಗಿಗೆ ಜ್ವರ ಬಂದಿದ್ದ ಕಾರಣ ಆಕೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಆಕೆಯನ್ನು ಸೈಕಲ್ಲಿನ ಮುಂದುಗಡೆಯ ಬಾರ್ ಮೇಲಿನ ಚಿಕ್ಕ ಸೀಟಿನಲ್ಲಿ ಕೂರಿಸಿಕೊಂಡು ಮನೆಗೆ ಹಿಂತಿರುಗುವಾಗ ಇಳಿಜಾರಿನಲ್ಲಿ ಆಕೆ ಅಚಾನಕ್ಕಾಗಿ ಸೈಕಲ್ ಮುಂದಿನ ಚಕ್ರಕ್ಕೆ ತನ್ನ ಕಾಲು ಕೊಟ್ಟ ಪರಿಣಾಮ ಆಕೆಯ ಕಾಲಿನ ಹಿಮ್ಮಡಿ ಕಿತ್ತು ಬಂದು ಎಂಟು ಹತ್ತು ಹೊಲಿಗೆ ಹಾಕಿದ್ದಲ್ಲದೇ ಸಣ್ಣ ಪುಟ್ಟ ಗಾಯಗಳಾಗಿದ್ದವು. ಸೈಕಲ್ಲಿನಿಂದ ಕೆಳಗೆ… Read More ಅಳಿಲು ಸೇವೆ

ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ

ಡಿಸೆಂಬರ್ 31 ಆ ಕರಾಳ ರಾತ್ರಿ

ಡಿಸೆಂಬರ್ 31 ಮತ್ತು ಜನವರಿ 1 ಅಂತ ನೆನಪಿಸಿಕೊಂಡರೆ ಬಹುತೇಕರಿಗೆ ರೋಮಾಂಚನವಾಗುತ್ತದೆ. ಅನೇಕರು ಒಂದು ವಾರಕ್ಕಿಂತಲೂ ಮುಂಚೆಯೇ, ಆ ದಿನಗಳು ಮತ್ತು ಆ ದಿನವನ್ನು ಹೇಗೆ ಸಂಭ್ರಮಿಸಬೇಕು ಅಂತ ನಾನಾ ರೀತಿಯ ತಯಾರಿಗಳನ್ನು ಮಾಡಿಕೊಳ್ತಾ ಇದ್ರೇ ನಮಗೆ ಮಾತ್ರ ಆ ಕರಾಳ ನೆನಪನ್ನು ಹೇಗೆ ಮರೆಯುವುದಪ್ಪಾ ಅಂತಾ ಇರ್ತೀವಿ. ಅದೇನಪ್ಪಾ ಅಂತಹ ಕರಾಳ ನೆನಪು ಅಂತೀರಾ? ತಡೀರೀ ನಾನೂ ಹೇಳ್ತಾ ಹೋಗೀನಿ. ನೀವು ಕೇಳ್ತಾ ಹೋಗಿ. ಕೆಲ ವರ್ಷಗಳ ಹಿಂದೆ ಡಿಸೆಂಬರ್ 31 ಗುರುವಾರ, ಜನವರಿ 1… Read More ಡಿಸೆಂಬರ್ 31 ಆ ಕರಾಳ ರಾತ್ರಿ

ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಉಡುಪಿ ಅಂದ ತಕ್ಷಣ ನಮಗೆ ನೆನಪಾಗೋದು ಶ್ರೀಕೃಷ್ಣ ಪರಮಾತ್ಮ ಕನಕನ ಕಿಂಡಿ, ಆಷ್ಟ ಮಠಗಳು ಮತ್ತು ಅಲ್ಲಿನ ದಾಸೋಹ. ಇವೆಲ್ಲವ್ವಕ್ಕೂ ಕಳಸ ಪ್ರಾಯವಾಗಿ, ಇಡೀ ದೇಶಕ್ಕೆ ಉಡುಪಿಯನ್ನು ಹೆಚ್ಚಾಗಿ ಪರಿಚಯಿಸಿದ ಮತ್ತು ದೇಶಾದ್ಯಂತ ಎಲ್ಲೇ ಧಾರ್ಮಿಕ ಚಟುವಟಿಕೆಗಳು ನಡೆಯಲಿ ಆಥವಾ ಧರ್ಮಾಧಾರಿತ ಯಾವುದೇ ಸಮಸ್ಯೆಗಳಾದಲ್ಲಿ ಅದಕ್ಕೆ ಪರಿಹಾರವಾಗಿ ಉಡುಪಿಯತ್ತಲೇ ಮುಖಮಾಡುವ ಹಾಗೆ ಮಾಡಿದ ಕೀರ್ತಿ ಪೇಜಾವರ ಶ್ರೀಗಳಾದ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥರಿಗೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ. ಕೇವಲ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ… Read More ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ದಾಸಯ್ಯ

ಬಿಳಿ ಪಂಚೆ, ಬಿಳಿ ಜುಬ್ಬಾ ಅಥವಾ ಷರಾಯಿ ಹಾಕಿಕೊಂಡು ತಲೆಯಮೇಲೆ ಸುತ್ತಿದ ಒಂದು ಪೇಟ ಹಣೆಯಲ್ಲಿ ಒಂದು ಅಥವಾ ಮೂರು ಗೆರೆಗಳ ನಾಮ ಹಾಕಿಕೊಂಡು ಎಡಗೈಯಲ್ಲಿ ಉರಿಯುತ್ತಿರುವ ದೀಪದ ಕಂಬ, ಬಲಗೈಯ್ಯಿಗೆ ಜಾಗಟೆ ಕಟ್ಟಿಕೊಂಡು ಕೈಗಳಲ್ಲಿ ಕೆಲವೊಮ್ಮೆ ಕಹಳೆ ಮತ್ತು ಹೆಚ್ಚಿನ ಬಾರಿ ಶಂಖವನ್ನು ಇಟ್ಟುಕೊಂಡು ಎರಡೂ ತೋಳುಗಳಿಗೆ ಜೋಳಿಗೆ ಏರಿಸಿಕೊಂಡು ಎಲ್ಲರ ಮನೆಯ ಮುಂದೆ ಬಂದು ನಿಂತು ವೇಂಕಟರಮಣ ಸ್ವಾಮಿ ಪಾದಕ್ಕೆ ಗೋವಿಂದಾ! ಗೋವಿಂದಾ!! ಆಂಜನೇಯ ವರದಸ್ವಾಮಿ ಗೋವಿಂದಾ!! ಗೋವಿಂದಾ!! ಎಂದು ಜೋರಾಗಿ ಭಗವಂತನ ನಾಮ… Read More ದಾಸಯ್ಯ

ಹುಚ್ಚುಕೋಡಿ ಮನಸು ಹದಿನಾರರ ವಯಸು

ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ ! ಅಂದರೆ ಎಲ್ಲಿ ಮಹಿಳೆಯರನ್ನು ಆದರದಿಂದ ಕಾಣಲಾಗುತ್ತದೆಯೋ ಅಲ್ಲಿ ದೇವಾನುದೇವತೆಗಳಿರುತ್ತಾರೆ. ಎಲ್ಲಿ ಮಹಿಳೆಯರನ್ನು ಅಪಮಾನದಿಂದ ಕಾಣಲಾಗುತ್ತದೆಯೋ ಅಲ್ಲಿ ಧರ್ಮಕರ್ಮಗಳು ನಿಷ್ಫಲವಾಗುತ್ತವೆ ಎಂದು ಹೇಳುವ ಮೂಲಕ ಜಗತ್ತಿನ ಬೇರಾವ ಸಂಸ್ಕೃತಿಯೂ ನೀಡದಂತಹ ಪೂಜ್ಯಸ್ಥಾನವನ್ನು ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ನೀಡುತ್ತೇವೆಯಾದರೂ ನಮ್ಮಲ್ಲಿ ಅಂದಿನಿಂದಲೂ ಇಂದಿನವರೆಗೂ ಪುರುಷಪ್ರಧಾನವಾದ ಸಮಾಜವೇ. ವಂಶೋದ್ಧಾರಕ್ಕೆ ಗಂಡು ಮಕ್ಕಳೇ ಬೇಕು ಎಂದು ಬಯಸಿ, ಕಂಡ ಕಂಡ ದೇವರುಗಳಲ್ಲಿ ಸೆರಗೊಡ್ಡಿ, ಹರಕೆಯೊಡ್ಡಿ ಗಂಡು ಮಕ್ಕಳು ಆಗುವವರೆಗೂ ಸಂತಾನವನ್ನು ಬೆಳೆಸುತ್ತಲೇ ಹೋಗುವ… Read More ಹುಚ್ಚುಕೋಡಿ ಮನಸು ಹದಿನಾರರ ವಯಸು

ಅವಕಾಶ

ಆಗ ಎಂಭತ್ತರ ದಶಕ. ಆಗಿನ್ನೂ ನಾಲ್ಕನೇ ತರಗತಿಯಲ್ಲಿದ್ದೆ. ಇಂದಿನಂತೆ ಡೈರೀ ಹಾಲಿನ ಪ್ರಭಾವ ಅಷ್ಟಾಗಿರಲಿಲ್ಲ . ನಮ್ಮದೇ ಬಡಾವಣೆಯಲ್ಲಿಯೇ ಸಾಕಷ್ಟು ಮನೆಗಳಲ್ಲಿ ಇನ್ನೂ ಹಸು ಮತ್ತು ಎಮ್ಮೆಗಳನ್ನು ಸಾಕಿದ್ದರು. ನಾವೆಲ್ಲಾ ಅವರ ಬಳಿಯೇ ವರ್ತನೆಗೆ (ಪ್ರತಿ ನಿತ್ಯ ಕಡ್ಡಾಯವಾಗಿ ನಿರ್ಧಿಷ್ಟವಾದ ಹಾಲನ್ನು ತೆಗೆದುಕೊಂಡು ತಿಂಗಳಿಗೊಮ್ಮೆ ಹಣ ನೀಡುವ ಪದ್ದತಿ) ಹಾಲು ತೆಗೆದುಕೊಳ್ಳುತ್ತಿದ್ದವು. ಅದೇ ರೀತಿ ನಾವಿದ್ದ ವಠಾರದ ಮನೆಯ ಮಾಲೀಕರ ಮನೆಯಲ್ಲಿಯೂ ಹಸು ಮತ್ತು ಎಮ್ಮೆ ಸಾಕಿದ್ದರು ನಾವು ಅವರ ಬಳಿಯೇ ಪ್ರತಿನಿತ್ಯ ಹಾಲನ್ನು ತೆಗೆದುಕೊಂಡು ತಿಂಗಳಿಗೊಮ್ಮೆ… Read More ಅವಕಾಶ

ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ

ಸುಮಾರು ಹನ್ನೆರಡು ಹದಿಮೂರು ವರ್ಷಗಳ ಹಿಂದಿನ ಮಾತು. ಅವತ್ತು ಶನಿವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದ ಕಾರಣ ಯಾವುದೋ ಕೆಲಸಕ್ಕೆಂದು ಹೊರಗೆ ಹೋಗಿ ಮನೆಗೆ ಹಿಂದಿರುಗುವಾಗ ಮಟ ಮಟ ಮಧ್ಯಾಹ್ನವಾಗಿ ಹೊಟ್ಟೆ ಕೂಡಾ ತುಂಬಾನೇ ಹಸಿದಿತ್ತು. ಮನೆ ಒಳಗೆ ಕಾಲಿಟ್ಟೊಡನೆಯೇ ನಮ್ಮ ತಾಯಿಯವರು ಯಾರೊಂದಿಗೂ ಮಾತನಾಡುತ್ತಿರುವ ಶಬ್ಧ ಕೇಳಿಸಿ, ಯಾರು ಬಂದಿರಬಹುದು ಎಂದು ಯೋಚಿಸುತ್ತಾ ಸೀದಾ ಬಚ್ಚಲು ಮನೆಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ನೋಡಿದರೆ, ಯಾರೋ ಅಪರಿಚಿತ ಹೆಂಗಸು ನೋಡಲು ಬಹಳ ಕೃಶಕಾಯಳು, ಉಡಲು ಒಂದು… Read More ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ