ಕಾಮುಕ

ನೆನ್ನೆ ಕಳೆದ ಒಂದೂವರೆ ತಿಂಗಳು ನಡೆದ ಮಹಾಚುನಾಚಣೆಯ ಅಂತಿಮ ಫಲಿತಾಂಶದ ದಿನ. ಚುನಾವಣಾ ಸ್ಪರ್ಧಿಗಳಿಗೆ ಎಷ್ಟು ಒತ್ತಡ, ಕಾತುರ ಮತ್ತು ಕುತೂಹಲ ಇರುತ್ತದೋ ಅದಕ್ಕಿಂತಲೂ ಹೆಚ್ಚಿನ ಒತ್ತಡಕ್ಕೊಳಗಾಗಿ ರಾತ್ರಿಎಲ್ಲಾ ನಿದ್ದೆಯೇ ಬಾರದೆ, ಮುಂಜಾವ ನಾಲ್ಕುವರೆ ಘಂಟೆಗೇ ಎಚ್ಚರಗೊಂಡು ಪ್ರಾತರ್ವಿಧಿಗಳನ್ನು ಮುಗಿಸಿ, ಭಗವಂತಾ, ದೇಶಕ್ಕೆ ಸುಭದ್ರ ಮತ್ತು ಸಮರ್ಥ ನಾಯಕತ್ವ ಮತ್ತೊಮ್ಮೆ ಬರಲೀ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದೆ. ಚುನಾವಣಾ ನಿರ್ಗಮನ ಫಲಿತಾಂಶ ಬಿಜೆಪಿ ಪರವಾಗಿ ಬಂದಿದ್ದರಿಂದ ಚುನಾವಣೆ ಫಲಿತಾಂಶದ ದಿನ ಮನೆಯಲ್ಲಿಯೇ ಟಿವಿ ಮುಂದೆ ಕುಳಿತು ನೇರವಾಗಿ ಫಲಿತಾಂಶ… Read More ಕಾಮುಕ

ಅಮ್ಮಾ

ಅಮ್ಮಾ= ಅ+ಮ+ಮ+ಆ. ಅಕ್ಕರೆಯಿಂದ , ಮಮತೆ ಮತ್ತು ಮಮಕಾರದಿಂದ, ಆರೈಕೆ ಮಾಡುವವಳೇ ಅಮ್ಮಾ. ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದ್ದಕ್ಕೇ ಆಗಲಿ ಪರ್ಯಾಯ ಹುಡುಕ ಬಹುದೇನೋ, ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತಿಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ಒಂಭತ್ತು ತಿಂಗಳು ತನ್ನ ಗರ್ಭದಲ್ಲಿ ಅಂಡಾಣುವಿನಿಂದ ಮಗುವಿನ ರೂಪ ತಾಳುವವರೆಗೆ ಜೋಪಾನವಾಗಿಟ್ಟುಕೊಂಡು, ತಾನು ತಿನ್ನುವ ಆಹಾರವನ್ನೇ ತನ್ನ ಒಡಲಿನಲ್ಲಿರುವ ಮಗುವಿನೊಂದಿಗೆ ಕರಳು ಬಳ್ಳಿಯ ಮೂಲಕ ಹಂಚಿಕೊಂಡು ದೇಹದ… Read More ಅಮ್ಮಾ

ಅಣ್ಣಾ, ಮತ್ತೆ ಯಾವಾಗ ಸಿಗೋಣ?

ಜಗಣ್ಣಾ, ನಮಸ್ಕಾರ. ಎಲ್ಲಿದ್ದೀಯಾ? ಹೇಗಿದ್ದೀಯಾ? ಅಂತಾ ಫೋನ್ ಮಾಡಿದ್ರೆ, ಹಾಂ!! ಹೇಳಣ್ಣಾ, ಇಲ್ಲೇ ಕೆಲ್ಸದ್ ಮೇಲೆ ಇದ್ದೀನಿ. ಅಂತಾ ಶುರುವಾಗುತ್ತಿದ್ದ ನಮ್ಮ ಫೋನ್ ಸಂಭಾಷಣೆ ಕನಿಷ್ಟ ಪಕ್ಷ ಅರ್ಧ ಘಂಟೆಯವರೆಗೂ ನಡೆದು, ನಮ್ಮಿಬ್ಬರ ಕೆಲಸಕಾರ್ಯಗಳು, ನಂತರ ನಮ್ಮಿಬ್ಬರ ಮನೆಯವರೆಲ್ಲರ ಯೋಗಕ್ಷೇಮ ಅದಾದ ನಂತರ ನಮ್ಮ ಸಂಬಂಧೀಕರು, ನಮ್ಮೂರಿನ ಕುತೂಹಲಕಾರಿ ವಿಷಯಗಳನ್ನು ವಿಚಾರಿಸಿಕೊಂಡ ನಂತರ, ಒಂದೋ ನಾನು ಆಫೀಸ್ ತಲುಪಿರಬೇಕು ಇಲ್ಲವೇ ನಮ್ಮಿಬ್ಬರಿಗೆ ಬೇರಾವುದೋ ಕರೆ ಬಂದಾಗ, ಸರಿ ಅಣ್ಣಾ ಮತ್ತೇ ಸಿಗೋಣ ಎಂದು ಮಾತು ಮುಗಿಸಿ ಮತ್ತೊಂದು… Read More ಅಣ್ಣಾ, ಮತ್ತೆ ಯಾವಾಗ ಸಿಗೋಣ?

ಬಾಳಗಂಚಿ ಹೊನ್ನಾದೇವಿ ಹಬ್ಬ

ಹಿಂದಿನ ಲೇಖನದಲ್ಲಿ ನಮ್ಮೂರಿನ ಚೋಮನ ಹಬ್ಬದ ಬಗ್ಗೆ ತಿಳಿದುಕೊಂಡಿದ್ದೆವು. ಇಂದು ನಮ್ಮ ಊರಿನ ಗ್ರಾಮ ದೇವತೆ, ಹೊನ್ನಾದೇವಿ ಅಥವಾ ಹೊನ್ನಮ್ಮ ಅಥವಾ ಸ್ವರ್ಣಾಂಬಾ ದೇವಿಯ ಊರ ಹಬ್ಬದ ಬಗ್ಗೆ ತಿಳಿದುಕೊಳ್ಳೊಣ. ಸಾವಿರಾರು ವರ್ಷಗಳಷ್ಟು ಪುರಾತನ ಇತಿಹಾಸ ಹೊಂದಿರುವ ನಮ್ಮ ಬಾಳಗಂಚಿ ಗ್ರಾಮವನ್ನು ಹೊಯ್ಸಳರ ದೊರೆ ವಿಷ್ಣುವರ್ಧನನ ವಂಶಸ್ಥ ನಾರಸಿಂಹದೇವ 76 ವೃತ್ತಿನಿರತ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟಿದ್ದ ಎಂಬ ಬಗ್ಗೆ 1256ರಲ್ಲಿ ಬರೆಸಿದ ತಾಮ್ರ ಶಾಸನ ಸಾರುತ್ತದೆ. ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಎಂದೇ ಖ್ಯಾತರಾಗಿದ್ದ ಹಾಗೂ ವಿಜಯನಗರ ಸಾಮ್ರಾಜ್ಯದ… Read More ಬಾಳಗಂಚಿ ಹೊನ್ನಾದೇವಿ ಹಬ್ಬ

ನಮ್ಮೂರು ಬಾಳಗಂಚಿ ಗ್ರಾಮದ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಈ ಹಳ್ಳಿಯಲ್ಲಿ ಸುಮಾರು ಹತ್ತು ಹದಿನೈದಕ್ಕೂ ಹೆಚ್ಚಿನ ದೇವಸ್ಥಾನಗಳಿದ್ದು… Read More ನಮ್ಮೂರು ಬಾಳಗಂಚಿ ಗ್ರಾಮದ ಹಬ್ಬ

ಕರಿಯ

ಸಾಧಾರಣವಾಗಿ ಬಹುತೇಕರ ಮನೆಗಳಲ್ಲಿ ಬೆಕ್ಕು, ನಾಯಿ, ಬಿಳಿ ಇಲಿ, ಮೊಲ, ಗಿಣಿ, ಪಾರಿವಾಳ ಮುಂತಾದ ಪ್ರಾಣಿ ಪಕ್ಷಿಗಳನ್ನು ಸಾಕು ಪ್ರಾಣಿಗಳಾಗಿ ಬೆಳೆಸುವ ಪರಿಪಾಠವಿದೆ. ಅದರಲ್ಲೂ ಸ್ವಾಮಿ ಭಕ್ತಿಗೆ ಮತ್ತೊಂದು ಹೆಸರೇ ಶ್ವಾನಗಳು ಅದಕ್ಕಾಗಿಯೇ ನಾಯಿಗಳನ್ನು ಉಳಿದೆಲ್ಲಾ ಪ್ರಾಣಿಗಳಿಗಿಂತ ಹೆಚ್ಚಾಗಿಯೇ ಮನೆಗಳಲ್ಲಿ ಸಾಕುತ್ತಾರೆ. ಇತ್ತೀಚೆಗೆ ಅಪಘಾತದಲ್ಲಿ ಮಡಿದ ತನ್ನ ಮಾಲೀಕನ ಶವ ಬಿಟ್ಟು ಕದಲದ ನಾಯಿಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ (https://www.msgp.pl/0goFLOw) ಆಗಿದ್ದನು ನೋಡುತ್ತಿದ್ದಾಗ, ಬಾಲ್ಯದಲ್ಲಿ ನನ್ನ ಅಜ್ಜಿಯ ಮನೆಯ ಸಾಕು ನಾಯಿ ಕರಿಯನ ನೆನಪು… Read More ಕರಿಯ

ಹಿರಿಯರು ಇರಲವ್ವಾ ಮನೆತುಂಬಾ

ಹಬ್ಬ ಹರಿದಿನಗಳಲ್ಲಿ, ಮದುವೆ ಮುಂಜಿ ನಾಮಕರಣ ಮುಂತಾದ ಶುಭ ಸಮಾರಂಭಗಳಲ್ಲಿ ಆಚಾರ, ವಿಚಾರ ಕಟ್ಟು ಪಾಡುಗಳು ಮತ್ತು ಸಂಪ್ರದಾಯದ ಆಚರಣೆಗಳೇ ಹೆಚ್ಚಿನ ಮಹತ್ವ ಪಡೆದಿರುತ್ತವೆ. ಒಂದೊಂದು ಪ್ರದೇಶದಲ್ಲಿಯೂ, ಒಬ್ಬೊಬ್ಬರ ಮನೆಗಳಲ್ಲಿಯೂ ಅಲ್ಲಿಯ ಸ್ಥಳೀಯ ಪರಿಸರ, ಹವಾಮಾನ ಮತ್ತು ಅನುಕೂಲಕ್ಕೆ ತಕ್ಕಂತೆ ಆಚರಣೆಗಳು ರೂಢಿಯಲ್ಲಿರುತ್ತದೆ. ಹಾಗಂದ ಮಾತ್ರಕ್ಕೆ ಈ ಪದ್ದತಿಗಳಿಗೆ ಯಾವುದೇ ಲಿಖಿತ ವಿಧಿವಿಧಾನಗಳು ಇಲ್ಲವಾದರೂ ಅದು ತಲೆ ತಲಾಂತರದಿಂದ ಹಿರಿಯರು ಆಚರಿಸುತ್ತಿದ್ದದ್ದನು ನೋಡಿ, ಕೇಳಿ ತಿಳಿದು ರೂಢಿಯಲ್ಲಿಟ್ಟು ಕೊಂಡು ಬಂದಿರುತ್ತಾರೆ. ನೆನ್ನೆ ವರಮಹಾಲಕ್ಷ್ಮಿ ಹಬ್ಬ. ಸಕಲ ಹಿಂದೂಗಳು… Read More ಹಿರಿಯರು ಇರಲವ್ವಾ ಮನೆತುಂಬಾ

ಸಂತೋಷಕೇ ಹಾಡು ಸಂತೋಷಕೇ

ಸುಖಃವಿರಲಿ, ದುಃಖವಿರಲಿ, ಭಾಷೆಯ ಗೊತ್ತಿಲ್ಲದಿದ್ದರೂ ಸಂವಹವಾಗಿ ಉಪಯೋಗಿಸಬಹುದಾದ ಏಕೈಕ ಸಾಧನವೆಂದರೆ ಸಂಗೀತ. ಇದನ್ನು ನಾನು ಹೇಳುವುದಕ್ಕಿಂತ ನನ್ನ ಮಗಳು ಸೃಷ್ಟಿಯಈ ಚೊಚ್ಚಲು ಬರಹವನ್ನು ಓದಿ ತಿಳಿದರೇ ಆನಂದ. ಸಂಗೀತವೆಂದರೆ ಸುರ ಗಂಗೆಯಂತೆ, ಸಂಗೀತವೆಂದರೆ ರವಿಕಾಂತಿಯಂತೇ. ಏನಂತೀರೀ?

ಉಡುದಾರದ ಪಜೀತಿ

ನಮ್ಮ ಹಿಂದೂ ಸಂಸ್ಕೃತಿಯಲ್ಲಿ ಅನೇಕ ಪದ್ದತಿಗಳು ನಮ್ಮ ಜೀವನದ ಅವಿಭಾಜ್ಯವಾಗಿ ರೂಢಿಯಲ್ಲಿರುತ್ತವೆ. ಅನೇಕರಿಗೆ ಅದರ ಅವಶ್ಯಕತೆಯಾಗಲೀ ಅದರ ಅನುಕೂಲವಾಗಲೀ ವೈಜ್ಞಾನಿಕ ಕಾರಣಗಳಾಗಲೀ ಗೊತ್ತಿಲ್ಲದಿದ್ದರೂ ಹಿರಿಯರಿಂದ ಬಂದ ಸಂಪ್ರದಾಯ ಎಂದು ಅದಕ್ಕೆ ಪ್ರತಿರೋಧ ತೋರದೆ ಚಾಚೂ ತಪ್ಪದೆ ಅದನ್ನು ಆಚರಿಸಿಕೊಂಡು ಬರುತ್ತಾರೆ. ಅಂತಹ ಪದ್ದತಿಯಲ್ಲಿ ಗಂಡು ಮಕ್ಕಳ ಸೊಂಟಕ್ಕೆ ಕಟ್ಟುವ ಉಡುದಾರವೂ ಹೌದು. ಹಾಗೆ ಕಟ್ಟಿ ಕೊಂಡ ಉಡುದಾರವೇ ನಮ್ಮ ಶಂಕರನನ್ನು ಪಜೀತಿಗೆ ಸಿಕ್ಕಿಸಿದ ಮೋಜಿನ ಪ್ರಸಂಗವನ್ನೇ ಇಲ್ಲಿ ಹೇಳ ಹೊರಟಿದ್ದೇನೆ. ಉಡುದಾರ ಧರಿಸುವುದು ಹಿಂದೂ ಸಂಪ್ರದಾಯಗಳಲ್ಲಿ ಒಂದಾಗಿದ್ದು,… Read More ಉಡುದಾರದ ಪಜೀತಿ