ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ

ಯನಮದುರು ಶ್ರೀ ಶಕ್ತೇಶ್ವರ

ಹಿಂದಿನ ಕಾಲದಲ್ಲಿ ಹುಲುಮಾನವರು ಭಗವಂತನನ್ನು ಒಲಿಸಿಕೊಳ್ಳಲು ನಾನಾ ರೀತಿಯಲ್ಲಿ ಪೂಜೆ ಮಾಡುತ್ತಿದ್ದರು. ತಮ್ಮ ಭಕ್ತಿಗೆ ಆ ಭಗವಂತನು ಒಲಿಯದಿದ್ದಲ್ಲಿ ಅನ್ನ ನೀರು ಬಿಟ್ಟು ತಪಸ್ಸನ್ನು ಮಾಡುತ್ತಿದ್ದರು ಹಾಗೊಮ್ಮೆಯೂ ಒಲಿಯದಿದ್ದಲ್ಲಿ, ನಾನಾ ಭಂಗಿಗಳಲ್ಲಿ ನಿಂತು ಕಠೋರ ತಪಸ್ಸಿನ ಮೂಲಕ ಆ ಭಗವಂತನನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ತನ್ನ ತಾಯಿಯ ಬಯಕೆಯಂತೆ ಶಿವನನ್ನು ಒಲಿಸಿಕೊಂಡು ಶಿವನ ಆತ್ಮ ಲಿಂಗವನ್ನು ತರಲು ರಾವಣನಂತೂ ತನ್ನ ಕರುಳು ಬಳ್ಳಿಯನ್ನೇ ಬಗೆದು ಹೊರತೆಗೆದು ರುದ್ರವೀಣೆಯನ್ನಾಗಿಸಿ ಪರಶಿವನನ್ನು ಒಲಿಸಿಕೊಂಡಿದ್ದನಂತೆ. ಆದರಿಲ್ಲಿ ಭಗವಂತನೇ ತಲೆಕೆಳಗಾಗಿ ನಿಂತು ಭಕ್ತರ ಭವರೋಗವನ್ನು… Read More ಯನಮದುರು ಶ್ರೀ ಶಕ್ತೇಶ್ವರ

ಡಿಸೆಂಬರ್ 31 ಆ ಕರಾಳ ರಾತ್ರಿ

ಡಿಸೆಂಬರ್ 31 ಮತ್ತು ಜನವರಿ 1 ಅಂತ ನೆನಪಿಸಿಕೊಂಡರೆ ಬಹುತೇಕರಿಗೆ ರೋಮಾಂಚನವಾಗುತ್ತದೆ. ಅನೇಕರು ಒಂದು ವಾರಕ್ಕಿಂತಲೂ ಮುಂಚೆಯೇ, ಆ ದಿನಗಳು ಮತ್ತು ಆ ದಿನವನ್ನು ಹೇಗೆ ಸಂಭ್ರಮಿಸಬೇಕು ಅಂತ ನಾನಾ ರೀತಿಯ ತಯಾರಿಗಳನ್ನು ಮಾಡಿಕೊಳ್ತಾ ಇದ್ರೇ ನಮಗೆ ಮಾತ್ರ ಆ ಕರಾಳ ನೆನಪನ್ನು ಹೇಗೆ ಮರೆಯುವುದಪ್ಪಾ ಅಂತಾ ಇರ್ತೀವಿ. ಅದೇನಪ್ಪಾ ಅಂತಹ ಕರಾಳ ನೆನಪು ಅಂತೀರಾ? ತಡೀರೀ ನಾನೂ ಹೇಳ್ತಾ ಹೋಗೀನಿ. ನೀವು ಕೇಳ್ತಾ ಹೋಗಿ. ಕೆಲ ವರ್ಷಗಳ ಹಿಂದೆ ಡಿಸೆಂಬರ್ 31 ಗುರುವಾರ, ಜನವರಿ 1… Read More ಡಿಸೆಂಬರ್ 31 ಆ ಕರಾಳ ರಾತ್ರಿ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಕನಕಗಿರಿ ಕನಕಾಚಲಪತಿ

ಕಾಲಿದ್ದವರು ಹಂಪೆ ಸುತ್ತಿ ನೋಡಬೇಕು ಮತ್ತು ಕಣ್ಣಿದ್ದವರು ಕನಕಗಿರಿ ನೋಡಬೇಕು ಎಂಬ ನಾನ್ನುಡಿ ಉತ್ತರ ಕರ್ನಾಟಕದಲ್ಲಿ ಬಹಳ ಪ್ರಚಲಿತವಾಗಿದೆ. ಅಂದಿನ ಕಾಲದ ವಿಜಯನಗರದ ಗತವೈಭವ ಇಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಂಚಿಹೋಗಿವೆ. ಹಂಪೆಯಿಂದ ಸುಮಾರು 30 ಕಿ.ಮಿ ದೂರದಲ್ಲಿರುವ ಕೊಪ್ಪಳ ಜಿಲ್ಲೆಯ ಪ್ರಮುಖ ತಾಲ್ಲೂಕ್ ಕೇಂದ್ರವೇ ಕನಕಗಿರಿ. ಇಲ್ಲಿನ ಕನಕಾಚಲಪತಿ ದೇವಸ್ಥಾನದಿಂದಾಗಿ ಇದು ಐತಿಹಾಸಿಕ ಸ್ಥಳವಾಗಿದೆ. ಈ ಶ್ರೀಕ್ಷೇತ್ರವನ್ನು ಎರಡನೆ ತಿರುಪತಿ ಎಂಬ ನಂಬಿಕೆ ಇರುವ ಕಾರಣ ಹಂಪೆಗೆ ಬರುವ ಬಹುತೇಕ ಪ್ರವಾಸಿಗರು ಇಲ್ಲಿಯೂ ಬೇಟಿ… Read More ಕನಕಗಿರಿ ಕನಕಾಚಲಪತಿ

ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ನಂಜನಗೂಡಿನಿಂದ ಚಾಮರಾಜ ನಗರದ ಕಡೆ ಸುಮಾರು 10 ಕಿಮೀ ನಷ್ಟು ದೂರ ಕ್ರಮಿಸಿದರೆ ಬದನವಾಳು ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಬಲಕ್ಕೆ ತಿರುಗಿದಲ್ಲಿ ದೊಡ್ಡದಾದ ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ ಸಂತಾನ ವೇಣುಗೋಪಾಲಸ್ವಾಮಿ ದೇವಾಲಯ, ಹೆಮ್ಮರಗಾಲ ಎಂಬ ಕಮಾನು ನಮ್ಮನ್ನು ಸ್ವಾಗತಿಸುತ್ತದೆ. ಆ ಕಮಾನನ್ನು ದಾಟಿ ಕೇವಲ 2.5 ಕಿಮೀ ದೂರ ಕ್ರಮಿಸಿದರೆ ಸಿಗುವುದೇ ಅತ್ಯಂತ ಪುರಾಣ ಪ್ರಸಿದ್ಧ ಹೆಡೆತಲೆ ಎಂಬ ಗ್ರಾಮದ ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ. ದ್ವಾಪರಯುಗದಲ್ಲಿ ಕೌಂಡಿನ್ಯ ಋಷಿಗಳು ಈ ಪ್ರದೇಶದಲ್ಲಿ ತಮ್ಮ… Read More ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ