ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಉಕ್ರೇನಿನ ನೈಜ ಮುಖ

ಕಾಲು ಕೆರೆದುಕೊಂಡು ರಷ್ಯಾದ ವಿರುದ್ಧ ಯುದ್ದ ಮಾಡಲು ಹೋಗಿ ತಪರಾಕಿ ಹಾಕಿಸಿಕೊಳ್ಳುತ್ತಿರುವ ಉಕ್ರೇನಿನ ನೆರೆ ರಾಷ್ಟ್ರಗಳಿಂದ ಉಕ್ರೇನಿನಲ್ಲಿ ಸಿಲಿಕಿಕೊಂಡಿರುವ ಭಾರತೀಯರು ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭಾರತ ಸರ್ಕಾರ ಮಾನವೀಯತೆಯ ದೃಷ್ಟಿಯಿಂದ ಆಪರೇಷನ್ ಗಂಗಾ ಮೂಲಕ ಭಾರತಕ್ಕೆ ಕರೆತರುವ ಪ್ರಯಾಸದಲ್ಲಿದ್ದರೆ, ಕಮ್ಯೂನಿಷ್ಟ್ ಮನಸ್ಥಿತಿಯ ಬಹುತೇಕ ಮಾಧ್ಯಮಗಳು ಹುಡುಕಿ ಹುಡುಕೀ ಭಾರತ ಸರ್ಕಾರದ ಉಚಿತ ವಿಮಾನದಲ್ಲೇ ಬಂದು ಅದೇ ಭಾರತ ಸರ್ಕಾರ ವಿರುದ್ಧ ಮಾತನಾಡುವವರ ಸಂದರ್ಶನವನ್ನು ಪ್ರಸರಿಸಿ ಪರೋಕ್ಷವಾಗಿ ಆಪರೇಷನ್ ಗಂಗಾ ಎನ್ನುವುದು ವಿಫಲ ಪ್ರಯತ್ನ… Read More ಉಕ್ರೇನಿನ ನೈಜ ಮುಖ

ಅರ್ಥಪೂರ್ಣ ಮಹಿಳಾ ದಿನಾಚರಣೆ

ಮಾರ್ಚ್ 8 ರಂದು ವಿಶ್ವಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅಚರಿಸಿಕೊಂಡು ಬರಲಾಗುತ್ತದೆ. ಇದೇ ಅಂಗವಾಗಿ ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿ ಇರುವ ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಸಹಾ ಕಳೆದ ಕೆಲವು ವರ್ಷಗಳಿಂದಲೂ ನಮ್ಮ ನಿಮ್ಮೆಲ್ಲರ ನಡುವೆಯೇ ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ಮಹಿಳಾ ಸಾಧಕಿಯರ ಸಾಧನೆಯನ್ನು ಗುರುತಿಸಿ ಅವರ ಸಾಧನೆಗಳು ಮತ್ತಷ್ಟು ಮಗದಷ್ಟು ಹೆಚ್ಚಾಗಲಿ ಎಂದು ಅವರಿಗೆ ಗೌರವ ಸಲ್ಲಿಸಿಕೊಂಡು ಬರುತ್ತಿದೆ. ಈ ಬಾರಿ ಯಲಹಂಕ ವಿಭಾಗದ ಆರೋಗ್ಯಭಾರತಿ ಸಹಯೋಗದೊಂದಿಗೆ ದಿನಾಂಕ 13-3-2022 ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ… Read More ಅರ್ಥಪೂರ್ಣ ಮಹಿಳಾ ದಿನಾಚರಣೆ

ಅಡುಗೆ ಎಣ್ಣೆ ಕಾಳದಂಧೆ

ಕಳೆದ ಒಂದು ತಿಂಗಳಿನಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಯಾದವೀ ಕಲಹ ನಡೆಯುತ್ತಿದ್ದರೆ, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದಂತೆ ಆ ಯುದ್ಧದ ದುಷ್ಪರಿಣಾಮ ಭಾರತದ ಮೇಲೆ ಆಗುತ್ತಿದೆ. ಯುದ್ಧದಿಂದಾಗಿ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದ್ದ ಪೆಟ್ರೋಲ್ ಬೆಲೆ ಏರುತ್ತದೆ ಎಂದರೆ ಒಪ್ಪಿಕೊಳ್ಳಬಹುದು ಆದರೆ ಉಕ್ರೇನ್ ನಿಂದ ಸೂರ್ಯಕಾಂತಿಯ ಎಣ್ಣೆ ಭಾರತಕ್ಕೆ ಆಮದು ಆಗ್ತಾ ಇಲ್ಲಾ ಎಂಬ ನೆಪವೊಡ್ಡಿ ಇದ್ದಕ್ಕಿದಂತೆಯೇ ಭಾರತದಲ್ಲಿ ಅಡುಗೆ ಎಣ್ಣೆ ಯದ್ವಾ ತವ್ದಾ ಏರುತ್ತಿರುವುದು ಕಳವಳಕಾರಿಯಾಗಿದೆ. ಕೊರೋನಾ ಮುಂಚೆ 80-100 ರೂಪಾಯಿ ಆಸುಪಾಸಿನಲ್ಲಿ… Read More ಅಡುಗೆ ಎಣ್ಣೆ ಕಾಳದಂಧೆ

ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಇತ್ತೀಚೆಗೆ ವಾಟ್ಸಾಪಿನಲ್ಲಿ ಓದಿದ ಆಂಗ್ಲ ಸಂದೇಶವೊಂದರ ಈ ಭಾವಾನುವಾದವನ್ನು ಮೊದಲು ಓದಿದ ನಂತರ ವಿಚಾರಕ್ಕೆ ಬರೋಣ. ಒಂದೂರಿನಲ್ಲಿದ್ದ  ದೇವಸ್ಥಾನವೊಂದಕ್ಕೆ ಪ್ರತಿದಿನ ಮುಂಜಾನೆ ಒಂದು ಚಿಕ್ಕ ಹುಡುಗಿ ಬಂದು ದೇವರ ಮುಂದೆ ನಿಂತು, ಕಣ್ಗಳನ್ನು ಮುಚ್ಚಿ, ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಸಿಕೊಂಡು ಒಂದೆರಡು ನಿಮಿಷಗಳ ಕಾಲ ಏನನ್ನೋ ಗೊಣಗುತ್ತಾ, ನಂತರ ಕಣ್ಣು ತೆರೆದು, ನಮಸ್ಕರಿಸಿ, ನಗುತ್ತಾ ಓಡಿಹೋಗುತ್ತಿದ್ದಳು. ಇದು ಆಕೆಯ ದೈನಂದಿನ ಕಾರ್ಯವಾಗಿತ್ತು. ಅ ಪುಟ್ಟ ಹುಡುಗಿಯನ್ನು ಪ್ರತಿದಿನವೂ ಗಮನಿಸುತ್ತಿದ್ದ ದೇವಸ್ಥಾನದ ಅರ್ಚಕರಿಗೆ ಅಷ್ಟು ಸಣ್ಣ ಹುಡುಗಿಗೆ ಧರ್ಮ ಆಚಾರ… Read More ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಕಳೆದ ಎರಡು ದಿನಗಳಿಂದಲೂ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಡಾ. ಗಗನ್ ಕುಬೇರ್ ಅವರ ವಿಡಿಯೋ ವೈರಲ್ ಆಗಿರುವುದನ್ನು ನಾವೆಲ್ಲರೂ ನೋಡಿದಾಗ ನನ್ನ ಮನದಲ್ಲಿ ಮೂಡಿದ ಪ್ರಶ್ನೆ ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ? ಉತ್ತರ ಕರ್ನಾಟಕ ಮೂಲದ ಗಗನ್ ಕುಬೇರ್ ಪ್ರತಿಭಾವಂತ ಹುಡುಗ. ಕಷ್ಟ ಪಟ್ಟು ಶ್ರಮವಹಿಸಿ ಓದಿ ತನ್ನ ಅರ್ಹತೆಯಿಂದ ವೈದ್ಯಕೀಯ ಪದವಿಯನ್ನು ಗಳಿಸಿಕೊಂಡಿದ್ದ ಹುಡುಗ. ಈಗಿನ ಕಾಲದಲ್ಲಿ ಕೇವಲ ಎಂ.ಬಿ.ಬಿ.ಎಎಸ್. ಪದವಿ ಇದ್ದರೆ ಸಾಲದು ಸ್ನಾತಕೋತ್ತರ ಪದವಿಯನ್ನು ಪಡೆದಲ್ಲಿ ಮಾತ್ರವೇ ಗೌರವ ದೊರೆಯುತ್ತದೆ ಎಂಬುದನ್ನು… Read More ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?