ಸಿರಿವಂತರ ಮಕ್ಕಳೇ ಹೀಗೇಕೇ?

ಅಕ್ಟೋಬರ್ 2, ಗಾಂಧಿ ಜಯಂತಿ. ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಟ್ಟವರಲ್ಲಿ ಮುಂಚೂಣಿಯಲ್ಲಿದ್ದ ನಾಯಕನಿಗೆ ಗೌರವ ಅರ್ಪಿಸುವ ಸಲುವಾಗಿ ಅವರು ಪಾಲಿಸುತ್ತಿದ್ದ ಅಹಿಂಸಾ ತತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಆ ದಿನ ದೇಶಾದ್ಯಂತ ಮಧ್ಯ ಮತ್ತು ಮಾಂಸದ ವ್ಯಾಪಾರವನ್ನು ನೀಷೇಧಿಸಲಾಗಿರುತ್ತದೆ ಮತ್ತು ಇಡೀ ದಿನ ಗಾಂಧಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸುವ ಕಾರ್ಯದಲ್ಲಿ ಬಹುತೇಕ ಎಲ್ಲರೂ ನಿರತರಾಗಿರುವಾಗಲೇ ಅದೇ ರಾತ್ರಿ ಮುಂಬೈಯ್ಯಿನ ಐಷಾರಾಮಿ ಹಡುಗೊಂದರಲ್ಲಿ ಬೆಚ್ಚಿ ಬೀಳುವ ಸಂಗತಿಯೊಂದು ನಡೆದಿದೆ. ಸಮಾಜದಲ್ಲಿ ಗಣ್ಯರೆನಿಸಿಕೊಂಡವರ ಮಕ್ಕಳು… Read More ಸಿರಿವಂತರ ಮಕ್ಕಳೇ ಹೀಗೇಕೇ?

ಎಲ್ಲರಂತಲ್ಲ ನನ್ನ ಮಕ್ಕಳು

ಅರೇ! ಇದೇನಿದು ಈ ರೀತಿಯ ಶೀರ್ಷಿಕೆ? ನಿಮ್ಮ ಮಕ್ಕಳು ಅದೇನು ಅಷ್ಟು ದೊಡ್ಡ ಸಾಧಕರೇ? ಎಂದು ಕೇಳಿದರೆ, ನಾನು ಯಾವುದೇ ಮುಚ್ಚುಮರೆ ಇಲ್ಲದೇ ಹೇಳುತ್ತೇನೆ. ಇಲ್ಲಾ ನನ್ನ ಮಕ್ಕಳು ಸರಾಸರಿಯವರು ಮತ್ತು ನಾನು ಸರಾಸರಿ ಮಕ್ಕಳ ತಂದೆ. ನನ್ನ ಮಕ್ಕಳು ಶಾಲೆಯ ಪರೀಕ್ಷೆಗಳಲ್ಲಿ ಅಂಕಗಳನ್ನು ಗಳಿಸುವಲ್ಲಿ ಸರಾಸರಿ. ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಓಹೋ!! ಎಂದು ಹೇಳಿಕೊಳ್ಳುವಂತಿಲ್ಲದ ಸರಾಸರಿಯವರು. ಹಾಗಾದರೆ ಆವರ ವಿಶೇಷತೆಗಳೇನು? ಎಂದು ಕೇಳಿದರೆ ಸದ್ಯಕ್ಕೆ ಸಮಾಜದ ದೃಷ್ಟಿಯಲ್ಲಿ ಮತ್ತು ಶೈಕ್ಷಣಿಕವಾಗಿ ಅವರು ಅಂತಹದ್ದೇನನ್ನೂ ಸಾಧಿಸಿಲ್ಲ… Read More ಎಲ್ಲರಂತಲ್ಲ ನನ್ನ ಮಕ್ಕಳು

ಲಂಚದಲ್ಲೂ ಡಿಜಟಲೀಕರಣ

ಮೊನ್ನೆ ಇನ್ನೂ, ಮಂಗಳೂರು ಟ್ರಾಫಿಕ್ ಪೋಲಿಸರ ಬಗ್ಗೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಇದಕ್ಕೆ ಪೂರಕವಾದ ಬೆಂಗಳೂರಿನ ಯಲಹಂಕದ ಬಳಿಯ ಮತ್ತೊಂದು ಪ್ರಸಂಗಕ್ಕೆ ನೆನ್ನೆ ನಾನೇ ಸಾಕ್ಷಿಯಾಗಬೇಕಾಗಿದ್ದು ನಿಜಕ್ಕೂ ಅಸಹ್ಯಕರ ಎನಿಸಿತು. ಹಾಗಾಗಿ ಮಂಗಳೂರಿನ ಪ್ರಕರಣವನ್ನು ಯಥಾವತ್ ಹಾಗೆಯೇ ಪ್ರಕಟಿಸಿ ನಂತರ ನನಗಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ಮಂಗಳೂರಿನ ಪ್ರಕರಣ ಇಂದು ಸ್ಟೇಟ್ ಬ್ಯಾಂಕ್ ನಲ್ಲಿ ನಾವು ರಾಂಗ್ ಸೈಡಲ್ಲಿ (one way) ಕಾರು ಚಲಾಯಿಸಿದ್ದಕ್ಕೆ ಈ ಪೋಲಿಸ್ ಅಡ್ಡಗಟ್ಟಿ ಫೈನ್ ಕಟ್ಟಲು ಹೇಳಿದ್ರು, ರಶೀದಿ ಬೇಕಾ? ಬೆಡ್ವಾ?… Read More ಲಂಚದಲ್ಲೂ ಡಿಜಟಲೀಕರಣ

ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ನೆನ್ನೆ ರಾತ್ರಿಯಿಂದ ಹಿಂದೂ ವ್ಯಕ್ತಿಯೊಬ್ಬರು ಬುರ್ಕ ಧರಿಸಿದ ಮಹಿಳೆಯೊಬ್ಬರಿಗೆ ತನ್ನ ಬೈಕಿನಲ್ಲಿ ಡ್ರಾಪ್​ ಕೊಟ್ಟಿದ್ದಕ್ಕಾಗಿ ಕೆಲವು ಮತಾಂಧರ ಗುಂಪು ಧಾಳಿ ನಡೆಸಿ ಹಿಂದು ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಬಳಿಯ ಡೈರಿ ಸರ್ಕಲ್​ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶುಕ್ರವಾರ ರಾತ್ರಿ ಆ ವ್ಯಕ್ತಿ ಮತ್ತು ಮಹಿಳೆ ಇಬ್ಬರೂ ಒಂದೇ ಬ್ಯಾಂಕಿನಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಸಹೋದ್ಯೋಗಿಯಾಗಿದ್ದು ಅದಾಗಲೇ ಸಮಯವಾಗಿದ್ದ ಕಾರಣ, ಇಬ್ಬರ ಮನೆಯೂ ಒಂದೇ… Read More ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ

ಮೂರ್ತಿ ಪೂಜೆ

ರಸ್ತೇ ಅಗಲೀಕರಣದ ನೆಪದಲ್ಲಿ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಕಳೆದ ವಾರ ನಂಜನಗೂಡಿನ ಬಳಿ 800 ವರ್ಷದ ಹಳೆಯದಾದ ಚೋಳರ ಕಾಲದ  ದೇವಾಲಯವನ್ನು ಒಡೆದು ಹಾಕಿರುವ ವಿಷಯ ಇನ್ನೂ ಆರದಿರುವಾಗ ಅದೇ ಪ್ರಾಂತ್ಯದ ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವು ಮಾಡುವ ಎಡವಟ್ಟೊಂದನ್ನು ಮಾಡುವ ಮೂಲಕ  ಆಸ್ತಿಕ ಮಹಾಶಯರ ಸಾತ್ವಿಕ ಕೋಪ ಹೆಚ್ಚುವಂತಾಗಿದೆ. ನಮ್ಮ ರಾಜ್ಯದ ಹಲವಾರು ದೇವಾಲಯಗಳಿಗೆ ನಮ್ಮ ಮೈಸೂರು ಅರಸರ ಕೊಡುಗೆ ಅಪಾರ ಎನ್ನುವುದು ನಿರ್ವಿವಾದ. ಅದರಲ್ಲೂ… Read More ಮೂರ್ತಿ ಪೂಜೆ

ನೋಕು ಕೂಲಿ

ಕಳೆದ ಭಾನುವಾರ ಸೆಪ್ಟಂಬರ್ -5 ರಂದು ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಸಂಭ್ರದಿಂದ ಆಚರಿಸುತ್ತಿದ್ದರೆ, ದೂರದ ಕೇರಳದ ತಿರುವನಂತಪುರದಲ್ಲಿರುವ ಬಾಹ್ಯಾಕಾಶ ಸಂಶೋಧನಾ ಇಲಾಖೆ (IRRO)ದ ವಿಕ್ರಮ್ ಸಾರಾಭಾಯ್ ಸ್ಪೇಸ್ ಸೆಂಟರ್ನಲ್ಲಿ (VSSC) ಮಾತ್ರಾ ಅದೊಂದು ಘನಘೋರ ಘಟನೆಯೊಂದು ನಡೆಯುವ ಮೂಲಕ ವಿದ್ಯಾವಂತರ ನಾಡು ಎಂದು ಕರೆಸಿ ಕೊಳ್ಳುವ ಕೇರಳದ ಮರ್ಯಾದೆಯನ್ನು ಮೂರುಕಾಸಿಗೆ ಹಾರಾಜು ಹಾಕಿರುವುದು ನಿಜಕ್ಕೂ ಖಂಡನೀಯವಾಗಿದೆ. ಭಾನುವಾರದ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತಿರುವನಂತಪುರಂನ ತುಂಬಾದಲ್ಲಿರುವ ಭಾರತೀಯ… Read More ನೋಕು ಕೂಲಿ

ವಿಮಲ ಮಿಸ್

ಅದು ಎಂಭತ್ತರ ದಶಕ ಆರಂಭದ ಕಾಲ ನಾನು ಆಗ ತಾನೇ ನೆಲಮಂಗಲದ ಸರ್ಕಾರೀ ಪ್ರಾಥಮಿಕ ಶಾಲೆಯಿಂದ ಬೆಂಗಳೂರಿನ ಪ್ರತಿಷ್ಠಿತ ಬಿಇಎಲ್ ಪ್ರಾಥಮಿಕ ಶಾಲೆಗೆ ಸೇರಿಕೊಂಡಿದ್ದೆ. ಸ್ಲೇಟು ಬಳಪ ಹಿಡಿದುಕೊಂಡು ಯಾವುದೇ ರೀತಿಯ ಸಮವವಸ್ತ್ರ ಇಲ್ಲದೇ ಕಾಲಿಗೆ ಹವಾಯಿ ಚಪ್ಪಲಿ ಹಾಕಿಕೊಂಡು ನೆಲದ ಮೇಲೆ ಹಾಕಿದ್ದ ಮಣೆಯ ಮೇಲೆ ಪಾಠ ಕಲಿಯುತ್ತಿದ್ದ ನನಗೆ, ಏಕಾ ಏಕಿ ಸ್ಲೇಟು ಬಳಪ ಜಾಗದಲ್ಲಿ ನೋಟ್ ಪುಸ್ತಕ, ಪೆನ್ಸಿಲ್, ಸಮವಸ್ತ್ರದ ಜೊತೆ ಟೈ ಮತ್ತು ಶೂ ಹಾಕಿಕೊಂಡು ಡೆಸ್ಕಿನ ಮೇಲೆ ಕುಳಿತು ಕೊಂಡು… Read More ವಿಮಲ ಮಿಸ್

ಪೇಪರ್.. ಪೇಪರ್…

ಪ್ರತಿ ದಿನವೂ ಬೆಳ್ಳಂ ಬೆಳಗ್ಗೆ ಛಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೇ ತಪ್ಪದೇ ನಮ್ಮೆಲ್ಲರ ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸುವ ಆ ಶ್ರಮ ಜೀವಿಗಳ ರೋಚಕ ಮತ್ತು ಅಷ್ಟೇ ಹೃದಯಸ್ಪರ್ಶಿ ಪ್ರಸಂಗಗಳನ್ನು ಸೆಪ್ಟಂಬರ್-4, ವಿಶ್ವ ಪತ್ರಿಕಾ ವಿತರಕರ ದಿನದಂದು ಮೆಲುಕು ಹಾಕುತ್ತಾ, ಆ ಪತ್ರಿಕಾ ಯೋಧರಿಗೆ ನಮ್ಮೆಲ್ಲರ ಅಭಿನಂದನೆಗಳನ್ನು ಸಲ್ಲಿಸೋಣ ಅಲ್ವೇ?… Read More ಪೇಪರ್.. ಪೇಪರ್…