ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ

ಪ್ರತೀ ಬಾರೀ ಓಲಂಪಿಕ್ಸ್ ಕ್ರೀಡಾಕೂಟಗಳು ನಡೆದಾಗ ಪದಕಗಳ ಪಟ್ಟಿಯಲ್ಲಿ ಅಮೇರಿಕಾ, ಚೀನಾ, ಜಪಾನ್ ದೇಶಗಳದ್ದೇ ಪ್ರಾಬಲ್ಯ ಮೆರೆದು, ನಮ್ಮ ಭಾರತವನ್ನು  ಕೆಳಗಿನ ಸ್ಥಾನದಲ್ಲಿ ನೋಡುತ್ತಿದ್ದಾಗ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿಯೂ ಥಟ್ ಅಂತಾ ಮೂಡಿ ಬರುವುದೇ ನಾವೂ ನಮ್ಮ ದೇಶದ ಪರಿಸ್ಥಿತಿ ಹೀಗೇಕೆ? ಎನ್ನುವ ನಿರಾಶೆ. ಅದೇ ಗುಂಗಿನಲ್ಲಿ ತÀಮ್ಮೆಲ್ಲಾ ಗೆಳೆಯರೊಡನೇ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಅಸಹನೆಯನ್ನು ವ್ಯಕ್ತಪಡಿಸುವ ಜನರೇನು ಕಡಿಮೆ ಇಲ್ಲ. ಆದರೆ ಈಗಷ್ಟೇ ಸಂಪನ್ನಗೊಂಡ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳ ಪ್ರದರ್ಶನವನ್ನು ಗಮನಿಸಿದರೆ ದೇಶದ… Read More ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ನಾವೆಲ್ಲರೂ ಒಂದೇ..

ಕೆಲ ವರ್ಷಗಳ ಹಿಂದೆ ನಮ್ಮ ಅಜ್ಜಿಯವರು ಇನ್ನೂ ಬದುಕಿದ್ದರು. ಅದಾಗಲೇ ಅವರಿಗೆ 90+ ವರ್ಷಗಳಷ್ಟು ವಯಸ್ಸಾಗಿತ್ತು. ಸುಮಾರು 80+ ವರ್ಷಗಳ ಕಾಲ ಬಹಳ ಸ್ವಾಭಿಮಾನಿಯಾಗಿ ತನ್ನೆಲ್ಲಾ ಕೆಲಸವನ್ನು ಮಾಡಿಕೊಳ್ಳುತ್ತಾ ನಮ್ಮೂರಿನಲ್ಲಿಯೇ ಇದ್ದವರನ್ನು ವಯೋಸಹಜ ಕಾರಣಗಳಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೆವು. ಮೂರು ಗಂಡು ಮಕ್ಕಳು ಇಬ್ಬರು ಹೆಣ್ಣುಮಕ್ಕಳ ಹೆಮ್ಮೆಯ ತಾಯಿ. ಬೆಂಗಳೂರಿನಲ್ಲಿ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದರೆ ಮೈಸೂರಿನಲ್ಲಿ ಒಬ್ಬ ಮಗ ಮತ್ತು ಶಿವಮೊಗ್ಗದಲ್ಲಿ ಮತ್ತೊಬ್ಬ ಮಗಳಿದ್ದ ಕಾರಣ, ಅಂತಹ ಇಳೀ ವಯಸ್ಸಿನಲ್ಲಿಯೂ ಸ್ವತಃ ಅವರೇ… Read More ನಾವೆಲ್ಲರೂ ಒಂದೇ..

ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಅವನೊಬ್ಬ ಅಸಾಧಾರಣ ಹುಡುಗನಾಗಿದ್ದ. ಓದಿನಲ್ಲಂತೂ ಸದಾಕಾಲವೂ ಚುರುಕು. ಗಣಿತ ಮತ್ತು ವಿಜ್ಞಾನದಲ್ಲಂತೂ ಸದಾಕಾಲವೂ 100% ಅಂಕಗಳನ್ನು ಗಳಿಸುತ್ತಿದ್ದ ಕಾರಣ ಸಹಜವಾಗಿ ಐಐಟಿ ಮದ್ರಾಸ್‌ಗೆ ಆಯ್ಕೆಯಾಗಿದ್ದಲ್ಲದೇ ಅಲ್ಲೂ ಸಹಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಉನ್ನತ ವಿದ್ಯಾಭ್ಯಾಸಕ್ಕೆಂದು ಅಮೇರಿಕಾದ ಕ್ಯಾಲಿಫೋರ್ನಿಯಾದ ವಿಶ್ವವಿದ್ಯಾಲಯ ಒಂದರಲ್ಲಿ ಎಂಬಿಎ ಪದವಿಯ ನಂತರ ಆರಂಕಿಯ ಸಂಬಳದ ಉದ್ಯೋಗವನ್ನು ಗಿಟ್ಟಿಸಿ ಅಲ್ಲಿಯೇ ನೆಲೆಸಿದ. ಕೆಲವು ವರ್ಷಗಳ ನಂತರ ಕರ್ನಾಟಕ್ಕೆ ಬಂದು, ಮನೆಯವರು ನೋಡಿದ ಕನ್ನಡತಿಯನ್ನೇ ವಿವಾಹವಾಗಿ ಅಮೇರಿಕಾದಲ್ಲಿ 5 ಕೊಠಡಿಗಳು ಇರುವಂತಹ ದೊಡ್ಡದಾದ ಮನೆ ಮತ್ತು ಐಷಾರಾಮಿ… Read More ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಸಂಸ್ಕೃತ ಪ್ರಪಂಚದ ಅತ್ಯಂತ ಪುರಾತನ ಭಾಷೆ ಎಂಬುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಬಹುತೇಕ ಭಾಷೆಗಳಿಗೆ ಮೂಲಭಾಷೆಯೇ ಸಂಸ್ಕೃತ ಎಂಬ ಅಗ್ಗಳಿಕೆಯೂ ಇದೆ. ಎಲ್ಲದ್ದಕ್ಕಿಂತಲೂ  ಸಂಸ್ಕೃತದ ಭಾಷೆಯ ಮೂಲ ನಮ್ಮ ಭಾರತ ಮತ್ತು ನಮ್ಮ ಸನಾತನ ಧರ್ಮದ ಅಷ್ಟೂ ವೇದಶಾಸ್ತ್ರಗಳು ಮತ್ತು ಪುರಾಣಗಳ ಮೂಲ ಕೃತಿಗಳು ಸಂಸ್ಕೃತದಲ್ಲಿಯೇ ಇದೆ ಎನ್ನುವುದು ಗಮನಾರ್ಹ.  ಹೀಗೆ ಪುರಾಣ ಗ್ರಂಥಗಳು ಸಂಸ್ಕೃತದಲ್ಲಿ ಇದೆ ಎಂದಾದಲ್ಲಿ ಅಂದಿನ ಕಾಲದಲ್ಲಿ ಎಲ್ಲಡೆಯೂ ಸಂಸ್ಕೃತ  ಆಡು ಭಾಷೆಯಾಗಿತ್ತು ಮತ್ತು ದೇವರು ಮತ್ತು ಮಾನವರ ನಡುವಿನ ವ್ಯಾವಹಾರಿಕ  ಸಂಭಾಷಣೆಯ… Read More ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಮಟ್ಟಿಗೆ ಕೇಳುತ್ತಿರುವುದು ಎರಡು ವಿಷಯ ಒಂದು ಕೊರೋನ ಕುರಿತಾದ ವಿಷಯವಾದರೆ, ಇನ್ನೊಂದು ಬ್ರಾಹ್ಮಣ್ಯ ಮತ್ತು ಬ್ರಾಹ್ಮಣರ ವಿರುದ್ಧ ಅನಾವಶ್ಯಕವಾಗಿ ತಮ್ಮ ತಮ್ಮ ತೆವಲುಗಳನ್ನು ತೀರಿಸಿಕೊಳ್ಳುವಷ್ಟು ವಾಚಾಮಗೋಚರವಾಗಿ ಕಂಡ ಕಡೆಗೆಳಲ್ಲಿ ಬೈದಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಮಂದಿಗಳೇ ಹೆಚ್ಚಾಗಿದ್ದಾರೆ. ಮೇಲೆ ತಿಳಿಸಿದ ಎರಡೂ ವಿಷಯಗಳೂ ಒಂದಕ್ಕೊಂದು ಪೂರಕವಾಗಿದೆ ಅಂದ್ರೇ ಆಶ್ಚರ್ಯವಾಗುತ್ತದೆ ಅಲ್ವೇ? ನಿಜ ಹೇಳ್ಬೇಕು ಅಂದ್ರೇ, ಬಹಳ ಹಿಂದಿನಿಂದಲೂ ನಮ್ಮಲ್ಲಿ ತಮ್ಮ ಕರ್ಮಾನುಸಾರವಾಗಿ ವರ್ಣಾಶ್ರಮಗಳು ರೂಢಿಯಲ್ಲಿ ಇತ್ತೇ ಹೊರತು ಅವು ಜನ್ಮತಃ ಆಚರಣೆಯಲ್ಲಿರಲಿಲ್ಲ, ಯಾರು ಬ್ರಹ್ಮತ್ವವನ್ನು… Read More ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಕೊರೋನಾ ಬಂದು ಇಡೀ ಪ್ರಪಂಚವೇ ಕಳೆದು ಒಂದೂವರೆ ವರ್ಷಗಳಿಂದ ಲಾಕ್ಡೌನ್ ಆಗಿರುವಾಗ ಅರೇ ಇದೇನಪ್ಪಾ ಇಂತಹ ಶೀರ್ಷಿಕೆ ಎಂದು ಆಶ್ಚರ್ಯ ಪಡುತ್ತಿದ್ದರೆ ನಿಮಗೊಂದು ಅಚ್ಚರಿಯ ಸಂಗತಿಗಳೊಂದಿಗೆ ನಿಮಗೆ ಸಾದರ ಪಡಿಸುವ ಸಣ್ಣದಾದ ಪ್ರಯತ್ನ ಕೊರೋನಾ ವಕ್ಕರಿಸುವುದಕ್ಕಿಂತಲೂ ಮುಂಚೆ, ಎಲ್ಲರ ಮನೆಗಳಲ್ಲಿ ನಡೆಯುತ್ತಿದ್ದ ಸಣ್ಣ ಪುಟ್ಟ ಸಮಾರಂಭಗಳೂ ಸಹಾ ಬಹಳ ಅದ್ದೂರಿಯಿಂದ ನೂರಾರು ಜನರ ಸಮ್ಮುಖದಲ್ಲಿ ನಡೆಯುತ್ತಿತ್ತು. ಇನ್ನೂ ಮದುವೆ ಮುಂಜಿ ಉಪನಯನಗಳಲ್ಲಂತೂ ಸಾವಿರಾರು ಜನರನ್ನು ಸೇರಿಸಿ ನಭೂತೋ ನ ಭವಿಷ್ಯತಿ ಎನ್ನುವಂತೆ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಜಾಂ… Read More ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ

ನಾವೆಲ್ಲಾ ಚಿಕ್ಕವರಿದ್ದಾಗ ನಾವೇನಾದರೂ ತಪ್ಪು ಮಾಡಿದಲ್ಲಿ ಅಥವಾ ಹಠ ಮಾಡಿದಲ್ಲಿ ಪೋಲೀಸರಿಗೆ ಹಿಡಿದು ಕೊಡ್ತೀವಿ ಎಂದು ಭಯ ಪಡಿಸುತ್ತಿದ್ದದ್ದು ಸಹಜವಾಗಿತ್ತು. ಇತ್ತೀಚೆಗೆ ಸಣ್ ವಯಸ್ಸಿನ ಮಗುವೊಂದು ದಾರಿಯಲ್ಲಿ ಹಠ ಮಾಡುತ್ತಿದ್ದಾಗ ಅಲ್ಲೇ ಹೋಗುತ್ತಿದ್ದ ಪೋಲೀಸರನ್ನು ತೋರಿಸಿ ಇದೇ ರೀತಿ ಗಲಾಟೆ ಮಾಡುತ್ತಿದ್ದರೆ, ಆ ಪೋಲೀಸರಿಗೆ ಹಿಡಿದು ಕೊಡುತ್ತೇನೇ ಎಂಬುದನ್ನು ಕೇಳಿಸಿಕೊಂಡ ಆ ಪೋಲಿಸರು ಅಮ್ಮಾ, ಸುಖಾ ಸುಮ್ಮನೇ ಮಕ್ಕಳಿಗೆ ಪೋಲೀಸರನ್ನು ಕಂಡರೆ ಭಯ ಹುಟ್ಟಿಸ ಬೇಡಿ. ನಾವೂ ಸಹಾ ಸಹಜವಾದ ಮನುಷ್ಯರೇ ಎಂದು ಹೇಳಿದ್ದಲ್ಲದೇ ತಮ್ಮ ಜೋಬಿನಲ್ಲಿದ್ದ… Read More ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ