ಬಿ ವಿಜಯಕೃಷ್ಣ

ಅದು ಎಪ್ಪತ್ತು ಮತ್ತು ಎಂಭತ್ತರ ದಶಕ. ಕರ್ನಾಟಕ ರಾಜ್ಯದ ರಣಜಿ ತಂಡದಲ್ಲಿ ಘಟಾನುಘಟಿಗಳು ಇದ್ದಂತಹ ಕಾಲ. ಕಾರ್ಲ್ಟನ್ ಸಲ್ಡಾನ, ಬಿನ್ನಿ, ಅಭಿರಾಂ, ಸುಧಾಕರ್ ರಾವ್, ಎ ವಿ ಜಯಪ್ರಕಾಶ್, ಬ್ರಿಜೇಶ್ ಪಟೇಲ್, ಅವಿನಾಶ್ ವೈದ್ಯ, ರಘುರಾಂ ಭಟ್ ಅವರುಗಳು ಇದ್ದ ಕಾಲ. ಅವರ ಜೊತೆಯಲ್ಲಿಯೇ ಮತ್ತೊಬ್ಬ ಸಧೃಢವಾದ ಚಂಡು ಇರುವುದೇ ಬಾರೀ ಹೊಡೆತಕ್ಕೇ ಎಂದು ಭರ್ಜರಿಯಾಗಿ ಸಿಕ್ಸರ್ ಗಳನ್ನು ಬಾರಿಸುತ್ತಿದ್ದ ಇನ್ನು ಚಂಡನ್ನು ಕೈಯಲ್ಲಿ ಹಿಡಿದು ಬೋಲಿಂಗ್ ಮಾಡಿದರೆ ದಾಂಡಿಗರನ್ನು ವಂಚಿಸಿ ಸೀದಾ ವಿಕೆಟ್ ಉರುಳಿಸುತ್ತಿದ್ದಂತಹ ಚಾಣಾಕ್ಷ… Read More ಬಿ ವಿಜಯಕೃಷ್ಣ

ನೀರು ಓಕೆ. ಕೃತಕ‌ ಪಾನೀಯ ಏಕೆ?

ಪೋರ್ಚುಗಲ್ ನಲ್ಲಿ ನಡೆಯುತ್ತಿರುವ ಯೂರೋ 2020 ಟೂರ್ನಿಯಲ್ಲಿ ಪೋರ್ಚುಗಲ್ ತನ್ನ ಮೊದಲ ಪಂದ್ಯವನ್ನು ಆಡುತ್ತಲಿತ್ತು. ಸಹಜವಾಗಿ ಪಂದ್ಯ ಆಡುವ ಮುನ್ನ ತಂಡದ ಮ್ಯಾನೇಜರ್ ಮತ್ತು ತಂಡದ ನಾಯಕರ ಪ್ರೆಸ್ ಕಾನ್ಫರೆನ್ಸ್ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ. ಈ ಸಂವಾದ ಪ್ರಪಂಚಾದ್ಯಂತ ಪ್ರಸಾರವಾಗುವ ಕಾರಣ, ಟೂರ್ನಿಯ ಪ್ರಾಯೋಜಕರಾದ ಕೋಕೋಕೋಲ ಇದರ ಪ್ರಯೋಜನವನ್ನು ಪಡೆಯುವ ಸಲುವಾಗಿ ಸಂವಾದ ನಡೆಸುವವರ ಟೇಬಲ್ ಮುಂದೆ ಸಣ್ಣದಾದ ಎರಡು ಕೋಕ್ ಬಾಟಲ್ ಗಳನ್ನು ಇಟ್ಟಿದ್ದರು. ಮೊದಲು ಈ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ ಪೋರ್ಚುಗಲ್ ತಂಡದ ಮ್ಯಾನೇಜರ್… Read More ನೀರು ಓಕೆ. ಕೃತಕ‌ ಪಾನೀಯ ಏಕೆ?

ಸಮಸ್ಯೆ ಒಂದು ಪರಿಹಾರ ನೂರು

ಕಳೆದ ಒಂದು ವರ್ಷದಿಂದಲೂ ಕೊರೋನಾ ಮಾಹಾಮಾರಿಯಿಂದಾಗಿ ಇಡೀ ಪ್ರಪಂಚವೇ online ಮೂಲಕ ನಡೆದುಕೊಂಡು ಹೋಗುತ್ತಿದೆ. ನಮ್ಮ ದೇಶದ ವಿದ್ಯಾರ್ಥಿಗಳೂ ಇದಕ್ಕೆ ಹೊರತಾಗಿಲ್ಲ. ಹಳ್ಳಿಗಾಡುಗಳಲ್ಲಂತೂ ಸ್ವಲ್ಪ ಜೋರಾದ ಗಾಳಿ ಇಲ್ಲವೇ ಮಳೆ ಬಂದಿತೆಂದರೂ ಸಾಕು, ವಿದ್ಯುತ್ ಕಡಿತವಾಗಿ ನೆಟ್ವರ್ಕ್ ಸಮಸ್ಯೆ ಕಾಣಿಸಿ ಕೊಳ್ಳುತ್ತದೆ. ಇಲ್ಲೊಂದು ಗುಡ್ಡಗಾಡಿನ ಹಳ್ಳಿಯ ಹುಡುಗಿ ತನ್ನ ತರಗತಿಗಳು ಆನ್‌ಲೈನ್ ‌ನಲ್ಲಿ ಆರಂಭವಾಗಿದೆ. ಜೋರಾದ ಮಳೆಯಿಂದಾಗಿ ಮನೆಯಲ್ಲಿ ನೆಟ್ವರ್ಕ್ ಇಲ್ಲ. ಅರೇ.. ನೆಟ್ವರ್ಕ್ ಇಲ್ಲಾ ಎಂದು ಗೊಣಗಾಡದೇ ಕೂಡಲೇ, ಅಪ್ಪಾ ಮತ್ತು ತಂಗಿಯ ಜೊತೆ ಮನೆಯ… Read More ಸಮಸ್ಯೆ ಒಂದು ಪರಿಹಾರ ನೂರು

ಸಂಚಾರಿ ವಿಜಯ್

ಬದುಕು ಜಟಕಾಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು.| ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ || ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ… Read More ಸಂಚಾರಿ ವಿಜಯ್

ಡಾ. ಸುನೀಲ್ ಕುಮಾರ್ ಹೆಬ್ಬಿ

ಶರೀರೇ ಜುರ್ಜರೀ ಭೂತೇ ವ್ಯಾಧಿಗ್ರಸ್ತೇ ಕಳೇವರೇ | ಔಷಧೀ ಜಾಹ್ನವೀ ತೋಯಂ, ವೈದ್ಯೋ ನಾರಾಯಣೋಹರಿಃ|| ಎಂಬ ಶ್ಲೋಕವನ್ನು ಸಾಧಾರಣವಾಗಿ ಎಲ್ಲಾ ದೇವಾಲಯಗಳಲ್ಲಿ ಪುರೋಹಿತರು ತೀರ್ಥ ಕೊಡುವಾಗ ಹೇಳುವುದನ್ನು ಕೇಳಿರುತ್ತೇವೆ. ಇದರ ಅರ್ಥ ಹೀಗಿದೆ. ಶರೀರವು ವ್ಯಾಧಿಗ್ರಸ್ತವೂ ಜರ್ಜರಿತವೂ ಆಗಿ ಕಳೇಬರದಂತಾಗಿ ಹೋದಾಗಾ, ಗಂಗಾ ಜಲವೇ ಔಷಧಿ, ಹರಿ ಅರ್ಥಾತ್ ಶ್ರೀ ಮನ್ನಾರಾಯಣನೇ ವೈದ್ಯನಾಗುತ್ತಾನೆ ಎಂದು ಭಗವಂತನನ್ನು ಹಾಡಿ ಹೊಗಳುವುದೇ ಆಗಿದೆ. ಸದ್ಯದ ಕಲಿಗಾಲದಲ್ಲಿ ಭಗವಂತನನ್ನು ಮರೆತು ಲೌಕಿಕದಲ್ಲೇ ಕಾಲ ಹರಣ ಮಾಡುತ್ತಿರುವವರು ಕಾಯಿಲೆಗೆ ತುತ್ತಾಗಿ ಅವರ ಶರೀರ… Read More ಡಾ. ಸುನೀಲ್ ಕುಮಾರ್ ಹೆಬ್ಬಿ

ವರ್ಕ್ ಫ್ರಂ ಹೋಮ್

ಶಂಕರ ದೂರದ  ಹಾಸನದ ಜಿಲ್ಲೆಯ ಸಣ್ಣದೊಂದು ಗ್ರಾಮದಲ್ಲಿ ಹುಟ್ಟಿ ಅಲ್ಲಿಯೇ ತನ್ನ ವಿದ್ಯಾಭ್ಯಾಸವನ್ನೆಲ್ಲವನ್ನೂ ಮುಗಿಸಿದವ. ಇದ್ದ ಸಣ್ಣ ಸಾಗುವಳಿ ಅವರ ಜೀವನಕ್ಕೆ ಸಾಲುತ್ತಿರಲಿಲ್ಲವಾದ್ದರಿಂದ ಬದುಕನ್ನು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದು  ಅರಂಭದಲ್ಲಿ  ಅವರಿವರ ಕೈಕಾಲು ಹಿಡಿದು ಸಣ್ಣ ಕಂಪನಿಯೊಂದರಲ್ಲಿ ಕೆಲಸವನ್ನು ಗಿಟ್ಟಿಸಿಕೊಂಡು ನಂತರ ತನ್ನ ಸ್ವಸಾಮರ್ಥ್ಯದಿಂದ ಬೇಗನೇ ಮೇಲೆ ಬಂದು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಐದಂಕಿಯ ಸಂಬಳ ಪಡೆಯುವಷ್ಟರ ಮಟ್ಟಿಗೆ ಬೆಳೆಯುತ್ತಾನೆ. ಬದುಕಿನಲ್ಲಿ ಎಷ್ಟೇ ಮೇಲಕ್ಕೆ ಏರಿದ್ದರೂ  ತನ್ನ ಹುಟ್ಟೂರು ತಂದೆ ತಾಯಿ, ತಾತಾ ಅಜ್ಜಿಯರನ್ನು ಮರೆಯದ ಶಂಕರ… Read More ವರ್ಕ್ ಫ್ರಂ ಹೋಮ್

ಲಕ್ಷದ್ವೀಪ

ಕಳೆದ ವಾರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಲಕ್ಷದ್ವೀಪ ಪ್ರವಾಸದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಪ್ರಪಂಚಾದ್ಯಂತ ಪ್ರವಾಸೀತಾಣಗಳು ಅಲ್ಲೋಲಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

ಲಕ್ಷದ್ವೀಪದ ಕುರಿತಾದ ಪ್ರಧಾನಿಗಳ ಪ್ರೇಮ ಕೇವಲ ನೆನ್ನೆಯ ಮೊನ್ನೆಯದ್ದಾಗಿರದೇ, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆಯೇ ಈ ಕುರಿತಾಗಿ ತಮ್ಮ ದೂರದೃಷ್ಟಿತನದಿಂದ ಅಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ, ಲಕ್ಷದ್ವೀಪದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಲಕ್ಷದ್ವೀಪ

ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಸಾಮ್ಯಾನ್ಯವಾಗಿ ನಮ್ಮ ಹಿಂದಿನ ಕಾಲದವರು ಈಗಿನಷ್ಟು ಆರ್ಥಿಕವಾಗಿ ಸಧೃಡರಿಲ್ಲದಿದ್ದರೂ, ಸರಿಯಾಗಿ ಎರಡು ಹೊತ್ತು ಊಟ ಮಾಡಲು ಇರುತ್ತಿರದಿದ್ದರೂ, ಯಾವುದೇ ರೋಗ ರುಜಿನಗಳಿಲ್ಲದೇ ಆರಾಮವಾಗಿ 80-90 ವರ್ಷಗಳು ಜೀವಿಸುತ್ತಿದ್ದರು. ಅದೆಷ್ಟೋ ಜನ ಶತಾಯುಷಿಗಳಾಗಿಯೂ ಜೀವಿಸಿದ್ದರು. ಅವರ ನೆನಪಿನ ಶಕ್ತಿಯಂತೂ ಕೇಳುವುದೇ ಬೇಡ. ಹಾಗಾಗಿಯೇ ಸುಲಭವಾಗಿ ಐದಾರು ತಲೆಮಾರುಗಳನ್ನು ಸುಲಭವಾಗಿ ನೋಡಬಹುದಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವೆಲ್ಲವೂ ಮಾಯವಾಗಿದೆ. 20-30 ವರ್ಷಕ್ಕೇ ಕೂದಲೆಲ್ಲಾ ಬೆಳ್ಳಾಗಾಗಿ ಅದೆಷ್ಟೋ ಮಂದಿಗಳಿಗೆ ಕೂದಲೆಲ್ಲ ಉದುರಿ ಹೋಗಿ, ಹತ್ತಾರು ರೀತಿಯ ಖಾಯಿಲೆಗಳಿಗೆ ತುತ್ತಾಗಿ ಊಟಕ್ಕಿಂತಲೂ ಹೆಚ್ಚಾಗಿ… Read More ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?