ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ದುರಂತ – 1 : ಗಂಡ ಹೆಂಡತಿ ಮತ್ತು ವಯಸ್ಸಿಗೆ ಬಂದಂತಹ ಇದ್ದ ಸಣ್ಣ ಮಧ್ಯಮ ವರ್ಗದ ಕುಟುಂಬ. ಅದು ಹೇಗೋ ಗಂಡ ಮತ್ತು ಹೆಂಡತಿ ಇಬ್ಬರಿಗೂ ಕೊರೋನಾ ಮಹಾಮಾರಿ ವಕ್ಕರಿಸಿಕೊಂಡು ಇಬ್ಬರು ಅಸ್ಲತ್ರೆಗೆ ದಾಖಲಾಗುತ್ತಾರೆ ಈ ವಿಷಯ ತಿಳಿದ ಮಗ ಪಟ್ಟಣದಿಂದ ಓಡೋಡಿ ಬರುತ್ತಾನೆ. ಆ ಔಷಧಿ ನಮ್ಮಲ್ಲಿ ಸ್ಟಾಕ್ ಇಲ್ಲಾ.. ಆಮ್ಕಜನಕದ ಕೊರತೆ ಇದೆ. ಇಂತಹವರ ಹತ್ತಿರ ಕೆಲವೇ ಸ್ಟಾಕ್ ಔಷಧಿ ಇದೆಯಂತೆ ಪ್ರಯತ್ನಿಸಿ ನೋಡಿ ನಂಬರ್ ಕೊಡ್ತಾರೆ. ಅವರಿಗೆ ಕರೆ ಮಾಡಿದರೆ ಒಂದಕ್ಕೆ… Read More ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ಬಿಟಿಎಸ್ ಫುಟ್ ಬೋರ್ಡ್ ಅನುಭವ

ಎಂಭತ್ತರ ದಶಕ ಹದಿಹರೆಯದ ವಯಸ್ಸು. ಆಗ ತಾನೆ ಹೈಸ್ಕೂಲ್ ಮುಗಿಸಿ ಕಾಲೇಜಿಗೆ ಸೇರಿಕೊಂಡಿದ್ದೆ. ಕಾಲೇಜಿಗೆ ಶಾಲೆಯ ತರಹ ಒಂದು ಮಣಭಾರದ ಪುಸ್ತಕಗಳನ್ನು ಹೊತ್ತುಕೊಂಡು ಹೊಗಬೇಕಿರಲಿಲ್ಲ. ಕೇವಲ ನಾಲ್ಕಾರು ಪುಸ್ತಕಗಳನ್ನು ಒಂದು ಚೆಂದನೆಯ ಚೀಲದಲ್ಲಿ ಹಾಕಿಕೊಂಡು ಬಣ್ಣ ಬಣ್ಣದ ಪ್ಯಾಂಟ್ ಶರ್ಟು ಹಾಕಿಕೊಂಡು ಕಾಲೇಜಿಗೆ ಹೋಗುವುದೆಂದರೆ ಎನೋ ಒಂದು ತರಹ ಹಿತಾನುಭವ. ನಾವು ಇದ್ದಿದ್ದು ಬಿಇಎಲ್ ಬಳಿ ಕಾಲೇಜ್ ಇದ್ದದ್ದು ಆರ್. ಟಿ ನಗರ. ನಮ್ಮ ಕಡೆಯಿಂದ ನೇರ ಬಸ್ ಸಂಪರ್ಕ ಇಲ್ಲದಿದ್ದ ಕಾರಣ ಕನಿಷ್ಠ ಪಕ್ಷ ಎರಡು… Read More ಬಿಟಿಎಸ್ ಫುಟ್ ಬೋರ್ಡ್ ಅನುಭವ

ಭಾಷಾ ಭೂಷಣ

ಇತ್ತೀಚೆಗೆ ಟಿವಿಯಲ್ಲಿ ಪೌರಾಣಿಕ ಚಿತ್ರವೊಂದು ಪ್ರಸಾರವಾಗುತ್ತಿತ್ತು. ಪೌರಾಣಿಕ ಚಿತ್ರ ಎಂಬ ಕುತೂಹಲದಿಂದ ನೋಡಲು ಕುಳಿತುಕೊಂಡು ಕೊಂಡ ಅರ್ಧಗಂಟೆಗಳಲ್ಲಿಯೇ ಮನಸ್ಸಿಗೆ ನೋವಾಗಿ ನೋಡಲು ಅಸಹನೀಯವಾಯಿತು. ಅಕಾರ ಮತ್ತು ಹಕಾರದ ನಡುವಿನ ವ್ಯತ್ಯಾಸ ಅರಿಯದ, ಅವರ ಸಂಭಾಷಣೆಗೂ ಅವರ ಆಂಗಿಕ ಅಭಿನಯಕ್ಕೂ ಸಂಬಂಧವೇ ಇರದ, ಕನ್ನಡ ಭಾಷೆಯ ಮೇಲೆ ಸ್ವಲ್ಪವೂ ಹಿಡಿತವಿರದ ಅಪಾತ್ರರನ್ನೆಲ್ಲಾ ಪೌರಾಣಿಕ ಪಾತ್ರದಲ್ಲಿ ನೋಡುತ್ತಿದ್ದಾಗ, ಕನ್ನಡ ಕಸ್ತೂರಿ ಎನ್ನುವಂತಹ ಸೊಗಡಿರುವ ಭಾಷೆಯನ್ನು ಇಷ್ಟು ಕೆಟ್ಟದಾಗಿ ಕೊಲೆ ಮಾಡುತ್ತಿದ್ದಾರಲ್ಲಾ? ಎಂದೆನಿಸಿ ಕೂಡಲೇ ಅಭಿನಯ ಮತ್ತು ಭಾಷ ಶುದ್ಧತೆಯಲ್ಲಿ ಪರಿಪಕ್ವವಾಗಿದ್ದ… Read More ಭಾಷಾ ಭೂಷಣ

ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು.  ಆದರೆ  ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ  ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು.  ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಹೇಳಿ ಕೇಳಿ ಇದು ಬೇಸಿಗೆ ಕಾಲ. ಬೇಸಿಗೆ ಕಾಲದಲ್ಲಿ ತಣ್ಣಗೆ ಇರುವ ಪದಾರ್ಥಗಳನ್ನು ತಿನ್ನುವ ಮತ್ತು ಕುಡಿಯುವ ಮೂಲಕ ದೇಹವನ್ನು ತಣ್ಣಗೆ ಇಟ್ಟುಕೊಳ್ಳಲು ಬಯಸುತ್ತೇವೆ. ಇದಕ್ಕೆ ಅನುಗುಣವಾಗಿ ನಮ್ಮ ಪ್ರಕೃತಿಯೂ ನಮ್ಮೊಂದಿಗೆ ಇದ್ದು ಬೇಸಿಗೆ ಕಾಲದಲ್ಲಿಯೇ ತಣ್ಣನೆ ಹಣ್ಣುಗಳಾದ ಕಲ್ಲಂಗಡಿ ಮತ್ತು ಕರ್ಬೂಜ (ಸಿದ್ದೋಟೆ ಹಣ್ಣು) ರಸ್ತೆಗಳ ಬದಿಗಳಲ್ಲಿಯೂ ಮತ್ತು ಮಾರುಕಟ್ಟೆಗಳಲ್ಲಿಯೂ ಸಿಗುತ್ತಿತ್ತು. ಉಳ್ಳವರು ಉಂಡೇ ಹಣ್ಣುಗಳನ್ನೇ ಕೊಂಡುಕೊಳ್ಳುತಿದ್ದರೆ, ಕೈಯ್ಯಲ್ಲಿ ಕಾಸಿಲ್ಲದವರು ಕತ್ತರಿಸಿಟ್ಟ ಹಣ್ಣುಗಳನ್ನು ತಿಂದು ತಮ್ಮ ನಾಲಿಗೆಯ ಬರವನ್ನು ಕಳೆದುಕೊಳ್ಳುತ್ತಿದ್ದರು. ಆಗೆಲ್ಲಾ ಬೇಸಿಗೆಯ ಸಮಯದಲ್ಲಿ ನದಿಗಳು… Read More ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಸಂಘ ಮತ್ತು ಸಂಘದ ಸ್ವಯಂಸೇವಕರು

ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.