ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ

ಅರೇ ಇದೇನಿದು ಇಂತಹ ವಿಲಕ್ಷಣ ಮತ್ತು ಹೃದಯವಿದ್ರಾವಕ ಶೀರ್ಷಿಕೆ ಅಂದುಕೊಳ್ತಾ ಇದ್ದೀರಾ? ಖಂಡಿತವಾಗಿಯೂ ಇದು ವಿಲಕ್ಷಣವಾಗಿರದೇ ಇಂದಿನ ಜೀವನದ ಕಠು ಸತ್ಯವಾಗಿದೆ. ಇದೇ ವಾರದಲ್ಲಿ ನಡೆದ ಎರಡು ಕರುಣಾಜನಕ ಕತೆ ಮತ್ತು ವ್ಯಥೆ ಇದೋ ನಿಮಗಾಗಿ. ಶ್ರೀಯುತ ಆಚಾರ್ ಮೂಲತಃ ಬಳ್ಳಾರಿಯ ಹೊಸಪೇಟೆಯವರು. ಸಾಕಷ್ಟು ಸ್ಥಿತಿವಂತರಾಗಿದ್ದು ಕಾರು ಬಾರು ನಡೆಸಿದ್ದವರು. ಗಂಡು ಮಕ್ಕಳಿಬ್ಬರು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಮ್ಮ ಬದಕನ್ನರಿಸಿ ರಾಜಧಾನಿ ಬೆಂಗಳೂರಿಗೆ ಬಂದಾಗ ನಮಗೆ ಪರಿಚಯವಾದವರು. ಮಕ್ಕಳು ತಮ್ಮ ಕಛೇರಿಯ ಮೂಲಕ ವಿದೇಶಕ್ಕೆ ಹೋಗಿ ನಂತರದ… Read More ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ

ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ಹಾಸ್ಯ ಮನುಷ್ಯರ ಜೀವನದ ಅವಿಭಾಜ್ಯ ಅಂಗ. ಜೀವನದ ಏಕಾನತೆಯಿಂದಾಗಲೀ ದುಃಖದಿಂದಾಗಲೀ ಹೊರಬರಲು ಜನರಿಗೆ ಸಹಾಯ ಮಾಡುವುದೇ, ತಿಳಿಹಾಸ್ಯ ಹಾಗಾಗಿಯೇ ಸರ್ಕಸ್, ನಾಟಕ, ಚಲನಚಿತ್ರಗಳಲ್ಲಿ ಮನೋರಂಜನೆಯ ಭಾಗವಾಗಿ ಒಂದಷ್ಟು ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡು ಅವುಗಳನ್ನು ನೋಡುತ್ತಾ ಅನುಭವಿಸುತ್ತಾ ಕೆಲ ಕಾಲ ತಮ್ಮ ನೋವುಗಳನ್ನು ಮರೆಯುವಂತೆ ಮಾಡುವುದರಲ್ಲಿ ಸಫಲತೆಯನ್ನು ಕಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿ ನರಸಿಂಹರಾಜು, ದಿನೇಶ್, ಉಮೇಶ್, ಇತ್ತೀಚಿನ ಜಗ್ಗೇಶ್, ಚಿಕ್ಕಣ್ಣ, ಕುರಿಪ್ರತಾಪ್ ರಂತಹ ದಂಡೇ ಇದೆ. ಅದೇ ರೀತಿ ಎಂಭತ್ತರ ದಶಕದಲ್ಲಿ ತಮಿಳು ಚಿತ್ರರಂಗದಲ್ಲಿ ಗೌಂಡಮಣಿ… Read More ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್

ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಭಾರತೀಯ ಸೇನೆಗೂ ನಮ್ಮ ಕರ್ನಾಟಕದ ಕೊಡಗಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಇಂದಿಗೂ ಸಹಾ ಕೊಡಗಿನ ಬಹುತೇಕ ಕುಟುಂಬದ ಒಬ್ಬ ಸದಸ್ಯನಾದರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುತ್ತಾರೆ. ಸ್ವಾತಂತ್ರ್ಯ ಭಾರತದ ಪ್ರಥಮ ದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರೂ ಕೊಡಗಿನವರೇ. ಅವರಂತೆಯೇ ಭಾರತದ ಭೂಸೇನೆಯ ದಂಡನಾಯಕರಾಗಿದ್ದ, ಅಪ್ಪಟ ಕನ್ನಡಿಗ ಜನರಲ್  ಕೊಡಂದೆರ ಸುಬ್ಬಯ್ಯ ತಿಮ್ಮಯ್ಯನವರು ಅರ್ಥಾತ್ ಕೆ. ಎಸ್ ತಿಮ್ಮಯ್ಯನವರು 30 ಮಾರ್ಚ್ 1906ರಲ್ಲಿ ಕೊಡಗಿನ ಮಡಿಕೇರಿಯ ಆಗರ್ಭ ಶ್ರೀಮಂತ ಪ್ಲಾಂಟರ್ ಆಗಿದ್ದ ತಿಮ್ಮಯ್ಯ ಮತ್ತು  ಸೀತವ್ವ ದಂಪತಿಗಳ… Read More ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಕೊರೋನ ಲಸಿಕೆ ಅಭಿಯಾನ

ಕಳೆದ ವರ್ಷದ ಆರಂಭದಲ್ಲಿ ಚೀನಾದ ವುಹಾನ್ ನಗರದಲ್ಲಿ ಕಾಣಿಸಿ ಕೊಂಡ ಸಾಂಕ್ರಾಮಿಕ ಕೊರಾನಾ ವೈರಾಣು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚಾದ್ಯಂತ ಆವರಿಸಿ ಅಕ್ಷರಶಃ ಜಗತ್ತನ್ನು ನಿಸ್ತೇಜವನ್ನಾಗಿಸಿದ್ದು ಈಗ ಇತಿಹಾಸ. ಕಡೆಗೂ ಈ ಮಹಾಮಾರಿಗೆ ಲಸಿಕೆಯನ್ನು ನಮ್ಮ ದೇಶದ ವಿಜ್ಞಾನಿಗಳು ಕಂಡು ಹಿಡಿಯಲು ಸಫಲರಾಗಿ ಅದು ವಿಶ್ವದ ಇತರೇ ರಾಷ್ಘ್ರಗಳ ಲಸಿಕೆಗಿಂತಲೂ ಉತ್ತಮ ಫಲಿತಾಂಶ ತೋರಿದ ಕಾರಣ ಇಂದು ನಮ್ಮ ದೇಶದಿಂದ ಅನೇಕ ರಾಷ್ಟ್ರಗಳಿಗೆ Made in India ಲಸಿಕೆಗಳು ರಫ್ತಾಗುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಕಳೆದ ಜನವರಿ… Read More ಕೊರೋನ ಲಸಿಕೆ ಅಭಿಯಾನ

ತೋಳ ಬಂತು ತೋಳ

ಸಾರಿಗೆ ಸಂಪರ್ಕ ಜನ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರನ್ನು ಕರೆದೊಯ್ಯಲು ಮತ್ತು ವಸ್ತುಗಳನ್ನು ಸಾಗಿಸಲು ಸಾರಿಗೆ ವಾಹನಗಳ ಅವಶ್ಯಕತೆ ಅತ್ಯಗತ್ಯವಾಗಿ ಇದನ್ನು ಮನಗಂಡ ಸ್ವಾತ್ರಂತ್ರ್ಯಾ ನಂತರ  ಸರ್ಕಾರವೇ ನೇರವಾಗಿ ಸಾರಿಗೆ  ಸಂಸ್ಜೆಗಳನ್ನು ಅರಂಭಿಸಿ ಸುಮಾರು ವರ್ಷಗಳ ವರೆಗೂ ಅದನ್ನು ನಡೆಸಿಕೊಂಡು ಹೋಗಿತ್ತು. ಈ  ಸಾರಿಗೆ ಸಂಸ್ಥೆಯ ನೌಕರಿಗಲ್ಲರಿಗೂ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನೀಡುತ್ತಿದ್ದರೂ. ಈ ನೌಕರ  ದುರಾಡಳಿತ ಮತ್ತು ಕದ್ದು ತಿನ್ನುವಿಕೆಯಿಂದಾಗಿ ಪ್ರತೀವರ್ಷವೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗಿ… Read More ತೋಳ ಬಂತು ತೋಳ