ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ತೋಳ ಬಂತು ತೋಳ

ಸಾರಿಗೆ ಸಂಪರ್ಕ ಜನ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರನ್ನು ಕರೆದೊಯ್ಯಲು ಮತ್ತು ವಸ್ತುಗಳನ್ನು ಸಾಗಿಸಲು ಸಾರಿಗೆ ವಾಹನಗಳ ಅವಶ್ಯಕತೆ ಅತ್ಯಗತ್ಯವಾಗಿ ಇದನ್ನು ಮನಗಂಡ ಸ್ವಾತ್ರಂತ್ರ್ಯಾ ನಂತರ  ಸರ್ಕಾರವೇ ನೇರವಾಗಿ ಸಾರಿಗೆ  ಸಂಸ್ಜೆಗಳನ್ನು ಅರಂಭಿಸಿ ಸುಮಾರು ವರ್ಷಗಳ ವರೆಗೂ ಅದನ್ನು ನಡೆಸಿಕೊಂಡು ಹೋಗಿತ್ತು. ಈ  ಸಾರಿಗೆ ಸಂಸ್ಥೆಯ ನೌಕರಿಗಲ್ಲರಿಗೂ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನೀಡುತ್ತಿದ್ದರೂ. ಈ ನೌಕರ  ದುರಾಡಳಿತ ಮತ್ತು ಕದ್ದು ತಿನ್ನುವಿಕೆಯಿಂದಾಗಿ ಪ್ರತೀವರ್ಷವೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗಿ… Read More ತೋಳ ಬಂತು ತೋಳ

ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ

ದಲಿತರು ಮತ್ತು ಮತಾಂತರ

ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ‌ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು‌ ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ

ತೈಲಬೆಲೆ ಏರಿಕೆ, ಸತ್ಯ-ಮಿಥ್ಯ

ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚಿತವಾಗುತ್ತಿರುವ ವಿಷಯವೆಂದರೆ ತೈಲಬೆಲೆಯ ಏರಿಕೆ. ಸದ್ಯದ ಪರಿಸ್ಥಿತಿಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ 85-90ರ ಆಸುಪಾಸಿನಲ್ಲಿದ್ದು ಇನ್ನು ಕೆಲವೇ ವಾರಗಳಲ್ಲಿ ಶತಕದತ್ತ ಧಾಪುಗಾಲು ಹಾಕಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಿರೋಧ ಪಕ್ಷ ಅದರಲ್ಲೂ ಪ್ರಮುಖವಾಗಿ ಕಾಂಗ್ರೇಸ್ ಪಕ್ಷ ಇದೇ ಏನೂ ಅಚ್ಚೇ ದಿನ್? ಎನ್ನುವ ಶೀರ್ಷಿಕೆಯಲ್ಲಿ, ಭಾರತವು ಪೆಟ್ರೋಲ್ / ಡೀಸೆಲ್ / ಎಲ್ಪಿಜಿ ಬೆಲೆಗಳಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದೆ ಎಂದು ಹೇಳುತ್ತಾ ಈ ಕೆಳಕಂಡ ಅಂಕಿ… Read More ತೈಲಬೆಲೆ ಏರಿಕೆ, ಸತ್ಯ-ಮಿಥ್ಯ

ರೈತರ ಟ್ರಾಕ್ಟರ್ ಪೆರೇಡ್

ಕಳೆದ ಎರಡು ವರ್ಷಗಳಿಂದ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ಆಶ್ರಯದಲ್ಲಿ ಸಾವಯವ ಸಂತೆಯನ್ನು ನಡೆಸಿಕೊಂಡು ಹೋಗುವ ಸೌಭ್ಯಾಗ್ಯ ವಯಕ್ತಿಕವಾಗಿ ನನಗೆ ಲಭಿಸಿದೆ. ಸಾವಯವ ಕೃಷಿಯಾಧಾರಿತವಾಗಿ ಬೆಳೆದ ಬಗೆಬೆಗೆಯ ತರಕಾರಿಗಳು, ಸೊಪ್ಪುಗಳು ಮತ್ತು ಹಣ್ಣುಗಳನ್ನು ರೈತರೇ ಯಾವುದೇ ಮಧ್ಯವರ್ತಿಗಳ ನೆರವೆಲ್ಲದೇ ನೇರವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುವ ವೇದಿಕೆಯನ್ನು ಕಲ್ಪಿಸಲಾಗಿದೆ. ಇದರಿಂದ ಗ್ರಾಹಕರು ತಾಜಾ ತಾಜ ಮತ್ತು ನಿಜವಾಗಿಯೂ ಸಾವಯವವಾಗಿ ಬೆಳೆದದ ಕೃಷಿ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸುವ ಮೂಲಕ ರೈತರಿಗೆ ಅಧಿಕ ಲಾಭಗಳಿಸಲು ಸಹಾಯ ಮಾಡುತ್ತಿದ್ದಾರೆ. ರೈತರು, ಈ… Read More ರೈತರ ಟ್ರಾಕ್ಟರ್ ಪೆರೇಡ್

ಈ ಸಾವಿಗೆ ಹೋಣೆಗಾರರು ಯಾರು?

ಇಂದು ಬೆಳ್ಳಂಬೆಳಿಗ್ಗೆ ವ್ಯಾಯಾಮವನ್ನು ಮುಗಿಸಿ, ಏನಪ್ಪಾ ಇವತ್ತಿನ ವಿಷಯ ಎಂದ ಮೊಬೈಲ್ನಲ್ಲಿ ವಾರ್ತೆಗಳನ್ನು ನೋಡುತ್ತಿದ್ದಂತೆ ಎದೆ ಧಸಕ್ ಎಂದಿತು. ಕೆಲ ದಿನಗಳವರೆಗೂ ಚಿಕ್ಕಮಗಳೂರಿನ ಹೊರಗೀನಾಚೆ ಆಷ್ಟೇನೂ ಪರಿಚಯವಿರದಿದ್ದ ವಿಧಾನ ಪರಿಷತ್ ಉಪ ಸಭಾಪತಿಗಳಾಗಿದ್ದ ಶ್ರೀ ಎಸ್.ಎಲ್. ಧರ್ಮೇಗೌಡ ಅವರು ನೆನ್ನೆ ರಾತ್ರಿ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಓದಿ ನಿಜಕ್ಕೂ ಬೇಸರವೆನಿಸಿತು. ಮೂಲತಃ ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾಗಿದ್ದ, ಬೀರೂರಿನ ಮಾಜೀ ಶಾಸಕ ಲಕ್ಷ್ಮಯ್ಯನವರ ಪುತ್ರರಾಗಿ ರಾಜಕೀಯ… Read More ಈ ಸಾವಿಗೆ ಹೋಣೆಗಾರರು ಯಾರು?