ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಆದೃಷ್ಟ ಮತ್ತು ದುರಾದೃಷ್ಟ

ನಮ್ಮ ಜೀವನದಲ್ಲಿ ಯಾವುದಾದರೂ ಕೆಲಸ ಇನ್ನೇನು ಆಗಿಯೇ ಬಿಡುತ್ತದೆ ಎಂದೇ ಮನಸ್ಸಿನಲ್ಲಿ ಮಂಡಿಗೆ ತಿನ್ನುತ್ತಿರುವಾಗ ಆ ಕೆಲಸ ಆಗದಿದ್ದಾಗ ಛೇ! ಎಂತಹ ದುರಾದೃಷ್ಟ. ಕೈಗೆ ಬಂದದ್ದು ಬಾಯಿಗೆ ಬರಲಿಲ್ಲ ಎಂದು ಎಂದು ಹಳಿಯುತ್ತೇವೆ. ನಮ್ಮ ಜೊತೆಯಲ್ಲೇ ಇದ್ದವರು ಇದ್ದಕ್ಕಿದ್ದಂತೆಯೇ ಉತ್ತಮ ಸ್ಥಾನ ಗಳಿಸುವುದಾಗಲೀ ಅಥವಾ ಐಶ್ವರ್ಯವಂತರಾದರೆ ಛೇ ನಮಗೆಲ್ಲಿದೆ ಅಂತಹ ಅದೃಷ್ಟ ಎನ್ನುತ್ತೇವೆ. ಅದೇ ರೀತಿ ಬಯಸದೇ ಭಾಗ್ಯ ಬಂದರೇ ಹೇಗಿದೆ ನೋಡಿ ನಮ್ಮ ಅದೃಷ್ಟ ಎಂದು ಹೆಮ್ಮೆಯಿಂದ ಬೀಗುತ್ತೇವೆ. ಮೊನ್ನೆ ಡಿಸೆಂಬರ್ 4ನೇಯ ತಾರೀಖು ಇದೇ… Read More ಆದೃಷ್ಟ ಮತ್ತು ದುರಾದೃಷ್ಟ

ಕೋತ್ಮೀರೀ ಕವಿರಾಜ

ಕೆಲ ವರ್ಷಗಳ ಹಿಂದೆ ಶೇಷಾದ್ರೀಪುರಂ ಮಲ್ಲಿಗೆ ಆಸ್ಪತ್ರೆಯ ಬಳಿ ಕನ್ನಡ ಚಿತ್ರರಂಗದಲ್ಲಿ ಆಗಿನ್ನೂ ಪ್ರವರ್ಧಮಾನಕ್ಕೆ ಬರುತ್ತಿದ್ದ ಕವಿರಾಜ್ ಮತ್ತು ತಿಭುವನ್ ಮಾಸ್ತರ್ ಇಬ್ಬರೂ ನಮ್ಮ ಮುಂದೆ ನಡೆದುಕೊಂಡು ಬರುತ್ತಿದ್ದರು. ಅರೇ, ಇವರನ್ನು ಎಲ್ಲೋ ನೋಡಿದ ಹಾಗಿದೆಯಲ್ಲಾ ಎಂದು ಒಂದು ಕ್ಷಣ ಯೋಚಿಸುತ್ತಿದ್ದಂತೆಯೇ, ಅವರಿಬ್ಬರೂ ನಮ್ಮ ಮುಂದೆಯೇ ಬಂದಾಗ ಪರಿಚಯಸ್ಥರ ಹಾಗೆ ಒಂದು ನಗೆ ಚೆಲ್ಲಿದೆ. ಅದಕ್ಕೆ ಪ್ರತ್ಯುತ್ತರವಾಗಿ ಅವರೂ ಸಹಾ ನಕ್ಕಾಗಲೇ ಅವರು ಕವಿರಾಜ್ ಎಂದು ನೆನಪಿಗೆ ಬಂದು, ನಮಸ್ಕಾರ. ಹೇಗಿದ್ದೀರೀ? ಎಂದಾಗಾ, ಅವರಿಬ್ಬರೂ ತಕ್ಷಣವೇ ನಿಂತು… Read More ಕೋತ್ಮೀರೀ ಕವಿರಾಜ

ವಿಕಾಸ್‌ ದುಬೆ

ನಿಜವಾಗಲೂ ಈತನ ಕುರಿತಾಗಿ ಈ ರೀತಿ ಒಂದು ಲೇಖನವನ್ನಾಗಲೀ ಅಥವಾ ಆತನ ಬಗ್ಗೆ ಮಾತನಾಡಿಕೊಳ್ಳ ಬೇಕಾದಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯೇ ಅಲ್ಲದಿದ್ದರೂ ಕಳೆದ ಒಂದು ವಾರಗಳಿಂದ ಈತ ದೇಶಾದ್ಯಂತ ಎಲ್ಲಾ ದೃಶ್ಯಮಾದ್ಯಮಗಳಿಗೂ ಟಿ.ಆರ್.ಪಿ ತಂದು ಕೊಟ್ಟಂತಹ ವ್ಯಕ್ತಿ ಎನ್ನುವುದಂತೂ ಸತ್ಯ. 2001 ರಲ್ಲಿ, ಉತ್ತರ ಪ್ರದೇಶದ ಬಿಜೆಪಿ ಸಚಿವರಾಗಿದ್ದ ಸಂತೋಷ್ ಶುಕ್ಲಾ ಅವರನ್ನು ಹಾಡಹಗಲಲ್ಲೇ ಗುಂಡಿಕ್ಕಿ ಕೊಲ್ಲುವ ಮೂಲಕ ಒಮ್ಮೆಂದೊಮ್ಮೆಲೆ ಪ್ರವರ್ಧಮಾನಕ್ಕೆ ಬಂದಂತಹ ಪಾತಕಿ ಸುಮಾರು ಆರು ತಿಂಗಳ ಪೋಲೀಸರಿಗೆ ಶರಣಾಗಿ ಕೊಲೆಯಾದ ಸಚಿವರ ಗನ್ ಮೆನ್… Read More ವಿಕಾಸ್‌ ದುಬೆ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ಸಂತೋಷ್ ಬಿ ಎಲ್, ಸಂಘಟನಾ ಚತುರ

ನೆನ್ನೆ ಸಂಜೆ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಸಭೆಯನ್ನು ಉದ್ದೇಶಿಸಿ ಮೋದಿಯವರ ಕಳೆದ ಆರು ವರ್ಷಗಳ ಆಡಳಿತ ಅವರ ವಿದೇಶಾಂಗ ನೀತಿಗಳು ಮತ್ತು ಇತ್ತೀಚಿನ ಪಾಕ್, ಜೀನಾ ಆಕ್ರಮಣದ ಕುರಿತಂತೆ ಮೋದಿಯವರ ನಿರ್ಧಾರಗಳು,ಇಂತಹ ವಿಪತ್ತಿನಲ್ಲಿ ದೇಶದ ಪರವಾಗಿ ನಿಲ್ಲದೇ ಶತ್ರುಗಳಿಗೆ ಪರೋಕ್ಷವಾಗಿ ಸಹಕರಿಸುತ್ತಿರುವ ಹಿತಶತ್ರುಗಳನ್ನು ಎಳೆ ಎಳೆಯಾಗಿ ಜಗ್ಗಾಡುತ್ತಾ ಹಿಗ್ಗಾ ಮುಗ್ಗಿ ನಯವಾಗಿಯೇ ಜಾಡಿಸಿ ಮಾತನಾಡುತ್ತಿದ್ದದ್ದನು ಮನೆಯಲ್ಲಿಯೇ ಕುಳಿತು online ಮೂಲಕ ನೋಡುತ್ತಿದ್ದಾಗ ಮನಸ್ಸಿನಲ್ಲಿ… Read More ಸಂತೋಷ್ ಬಿ ಎಲ್, ಸಂಘಟನಾ ಚತುರ

ದೇಶದ ಆಂತರಿಕ ಹಿತಶತ್ರುಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬ್ರಿಟೀಷರ ವಿರುದ್ಧ ಭಾರತೀಯರೆಲ್ಲರೂ ಉಗ್ರವಾಗಿ ತೀವ್ರತರವಾದ ಹೋರಾಟ ಮಾಡುತ್ತಿದ್ದರೆ, ಅಲ್ಲೊಬ್ಬ ಸೋಗಲಾಡಿ ಹೋರಾಟಗಾರ, ನೀನು ಹೊಡೆದಹಾಗೆ ಮಾಡು ನಾನು ಅತ್ತಹಾಗೆ ಮಾಡುತ್ತೀನಿ ಎಂದು ಸೆರೆಮನೆಗೆ ಹೋಗಿ ಅಲ್ಲಿನ ಉದ್ಯಾನಗಳಲ್ಲಿ ವಿರಹಿಸಿಸುತ್ತಾ ಐಶಾರಾಮ್ಯ ಜೀವನವನ್ನು ನಡೆಸಿ, ಸ್ವಾತಂತ್ರ್ಯ ಬಂದ ನಂತರ, ಎಲ್ಲಾ ಹೋರಾಟಗಾರ ನಿಲುವಿಗೆ ವಿರುದ್ಧವಾಗಿ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹಾಕಿ ಹಿಂಬಾಗಿಲಿನಿನಿಂದ ಪ್ರಧಾನ ಮಂತ್ರಿ ಪಟ್ಟಕ್ಕೇರಿದ ನೆಹರು ಅವರ ಇತಿಹಾಸ ಎಲ್ಲರಿಗೂ ತಿಳಿದ ವಿಷಯವಷ್ಟೇ. ಕಷ್ಟ ಪಟ್ಟು ಗೆದ್ದಲು ಹುಳುಗಳು ಕಟ್ಟಿದ ಹುತ್ತದೊಳಗೆ… Read More ದೇಶದ ಆಂತರಿಕ ಹಿತಶತ್ರುಗಳು

# 10, ಜನಪಥ್ ಬಂಗಲೆ

ಈ ಬಂಗಲೆಯ ವಿಳಾಸ ಓದಿದ ಕೂಡಲೇ ಬಹುತೇಕ ಭಾರತೀಯರಿಗೆ ಗೊತ್ತಿರುವ ಸಂಗತಿಯೇನೆಂದರೆ, ಆ ಬಂಗಲೆಯಲ್ಲಿ ಸದ್ಯಕ್ಕೆ ವಾಸಿಸುತ್ತಿರುವವರು, ಅರ್ಹತೆ ಇಲ್ಲದಿದ್ದರೂ, ನಮ್ಮ ಸರ್ಕಾರದಲ್ಲಿ ಯಾವುದೇ ಉನ್ನತ ಹುದ್ದೆ ಹೊಂದಿರದಿದ್ದರೂ, ನಮ್ಮ ದೇಶದ ಅನೇಕ ಆಗುಹೋಗುಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕಾರಣೀಭೂತರಾಗಿ ಹೋಗಿರುವುದು ನಿಜಕ್ಕೂ ವಿಪರ್ಯಾಸವೇ ಸರಿ ಹೌದು ನಿಮ್ಮ ಉಹೆ ಸರಿ. ನಾನೀಗ ಹೇಳ ಹೊರಟಿರುವುದು ನಮ್ಮ ಸರ್ಕಾರದ ಭಾಗವಾಗಿರದ ಕೇವಲ ಸಾಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಹೇಗೆ ಈ ಬಂಗಲೆಯಲ್ಲಿ ಇನ್ನೂ ವಾಸಿಸುತ್ತಿದ್ದಾರೆ? ಇನ್ನೂ ಆ… Read More # 10, ಜನಪಥ್ ಬಂಗಲೆ

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು