ಭಜರಂಗಿ ಮಹೇಂದ್ರ ಕುಮಾರ್

ಅದು ತೊಂಭತ್ತರ ಕಡೆಯ ದಿನಗಳು ಮತ್ತು ಎರಡು ಸಾವಿರ ಇಸ್ವಿಯ ಆರಂಭದ ದಿನಗಳು. ರಾಜ್ಯದಲ್ಲಿ ಭಜರಂಗ ದಳ ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳು. ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಲಕ್ಷಾಂತರ ಯುವಕರು ಭಜರಂಗ ದಳಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ಅಂತಹ ಯುವಕರಲ್ಲಿ ಚಿಕ್ಕಮಗಳೂರಿನ ಮೂಲದ ಮಹೇಂದ್ರ ಕುಮಾರು ಅತ್ಯಂತ ವೇಗವಾಗಿ ಪ್ರವರ್ಧಮಾನಕ್ಕೆ ಬಂದಂತಹ ಯುವಕ. ತನ್ನ ನಡೆ ನುಡಿ, ವಾಗ್ಪಟುತ್ವತೆ, ಪ್ರಖರ ಹಿಂದುತ್ವ ಮತ್ತು ಉಗ್ರ ಹೋರಾಟದ ಫಲವಾಗಿ ಮಹೇಂದ್ರ ಕುಮಾರ್ ನೋಡ ನೋಡುತ್ತಿದ್ದಂತೆಯೇ ಬಜರಂಗದ ರಾಜ್ಯ ಸಂಚಾಲಕರಾಗಿ ಹೋದರು.… Read More ಭಜರಂಗಿ ಮಹೇಂದ್ರ ಕುಮಾರ್

ಇತ್ತೀಚಿನ ದಿನಗಳಲ್ಲಿ ಭಾರತೀಯರು ಮೋದಿಯವರನ್ನು ಮತ್ತು ಬಿಜೆಪಿಯನ್ನು ಇಷ್ಟ ಪಡುತ್ತಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಪಾಲು ಭಾರತೀಯರು ಶ್ರೀ ನರೇಂದ್ರ ಮೋದಿಯನ್ನು ಇಷ್ಟಪಡುತ್ತಿಲ್ಲ ಎಂದು ಖಡಾ ಖಂಡಿತವಾಗಿ ಹೇಳಲಾಗುವುದಿಲ್ಲವಾದರೂ, ಭಾರತೀಯರು ಬಿಜೆಪಿಯಿಂದ ಸ್ವಲ್ಪ ಅಂತರವನ್ನು ಕಾಪಾಡಿಕೊಳ್ಳಲು ಬಯಸುತ್ತಿದ್ದಾರೆ ಎಂದು ಮಾತ್ರ ಹೇಳಬಲ್ಲೆ. ಅದಕ್ಕೆ ಉತ್ತರವನ್ನು ಹುಡುಕುವುದು ತುಂಬಾ ಸುಲಭ. ಪ್ರಧಾನಿಗಳಾಗಿ ಮೋದಿಯವರ ಕಾರ್ಯತತ್ಪರತೆಯನ್ನು ದೇಶ ವಿದೇಶಗಳಲ್ಲಿ ಇರುವ ಕೋಟ್ಯಾಂತರ ಭಾರತೀಯರು ಬಹಳವಾಗಿ ಇಷ್ಟು ಪಡುತ್ತಾರೆ. ದಿನದ ಹದಿನೆಂಟು ಗಂಟೆಗಳ ಕಾಲ ದೇಶಕ್ಕಾಗಿಯೇ ನಿಸ್ವಾರ್ಥವಾಗಿ ದುಡಿಯುತ್ತಿರುವುದನ್ನು ಜನರು ಗೌರವಿಸುತ್ತಾರೆ. ನಿಜವಾಗಿಯೂ ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ವಿದೇಶೀ ಬಾಂಧವ್ಯ ಬಹಳಷ್ಟು ಸುಧಾರಣೆಯಾಗಿದೆ.… Read More ಇತ್ತೀಚಿನ ದಿನಗಳಲ್ಲಿ ಭಾರತೀಯರು ಮೋದಿಯವರನ್ನು ಮತ್ತು ಬಿಜೆಪಿಯನ್ನು ಇಷ್ಟ ಪಡುತ್ತಿಲ್ಲವೇ?

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಭಯಾನಕವಾಗಿದೆ ಮತ್ತು ಮುಂದಿನ ದಿನಗಳಲ್ಲಿ, ಅವರ ಪರಿಸ್ಥಿತಿ ಇನ್ನೂ ಹದಗೆಡಲಿದೆ ಎಂಬುದು ನನ್ನ ಸೀಮಿತ ರಾಜಕೀಯ ಅನುಭವದಲ್ಲಿ ಹೇಳಲು ಇಚ್ಚಿಸುತ್ತಿದ್ದೇನೆ. ಹೀಗೆ ಹೇಳುವುದಕ್ಕೆ ಹಲವಾರು ಪ್ರಭಲ ಕಾರಣಗಳಿವೆ ಆ ಪಕ್ಷ ಮತ್ತು ಕುಟುಂಬದ ಸಮಸ್ಯೆ ಏನೆಂದರೆ, ಅವರ ರಾಜಕೀಯ ಅಧಃಪತನದ ಸ್ಥಿತಿ ಅವರಿಗೆ ಸ್ಪಷ್ಟವಾಗಿ ಗೋಚರಿಸುತ್ತಿದೆಯಾದರೂ, ಅದರಿಂದ ಹೇಗೆ ಹೊರಬರುವುದು ಎಂಬುವುದನ್ನು ಅರ್ಥ ಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸಾಧ್ಯವಾಗುತ್ತಿಲ್ಲ ಎನ್ನುವುದಕ್ಕಿಂದ ಅವರಲ್ಲಿರುವ ಅಹಂ ನಿಂದಾಗಿ ಪರಿಸ್ಥಿತಿಯಿಂದ… Read More ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?

ನಿಮಗಿದು ಗೊತ್ತೆ?

ನಮ್ಮ ಭಾರತ ದೇಶದಲ್ಲಿ 545 ಲೋಕಸಭಾ ಸದಸ್ಯರುಗಳು 245 ರಾಜ್ಯಸಭಾ ಸಂಸದರು 4120 ಶಾಸಕರು ಹೀಗೇ ಒಟ್ಟಾರೆಯಾಗಿ 4910 ಸಾರ್ವಜನಿಕ ಪ್ರತಿನಿಧಿಗಳು ನಮ್ಮನ್ನು ಪ್ರತಿನಿಧಿಸುತ್ತಿದ್ದಾರೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರವಾಗಿಯೇ ಆಯ್ಕೆಯಾದ ಈ ಜನಪ್ರತಿನಿಧಿಗಳು ಕಾಲಕಾಲಕ್ಕೆ ಸರ್ಕಾರದಿಂದ ಮಾಸಿಕ ಸಂಬಳ, ಆ ಭತ್ಯೆ, ಈ ಭತ್ಯೆ ಎಂದು ಲಕ್ಷಾಂತರ ರೂಪಾಯಿಗಳನ್ನು ಜನರ ತೆರಿಗೆಯ ರೂಪದಲ್ಲಿ ಸಂಗ್ರಹವಾದ ಹಣದಿಂದ ಪಡೆಯುತ್ತಿದ್ದಾರೆ. ನೆರೆ ಬರಲಿ ಬರ ಬರಲಿ, ಸೋಂಕುಗಳ ಹಾವಳಿ ಇರಲಿ ಇವರ ಭತ್ಯೆಗಳಿಗೆ ಮತ್ತು ಸೌಲಭ್ಯಗಳಿಗೆ ಯಾವುದೇ ಕುಂದು ಕೊರತೆಯಂತೂ… Read More ನಿಮಗಿದು ಗೊತ್ತೆ?

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಏಳು ಕೋಟಿ ಕನ್ನಡಿಗರು ಇರುವ ಈ ಕರ್ನಾಟಕದ ಕನ್ನಡ ಪರ ಹೋರಾಟಗಾರರು ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಹೊಂದಾಣಿಕೆಗಳೇ ಇಲ್ಲದೇ, ತಮ್ಮ ತಮ್ಮ ಅಹಂ ಮತ್ತು ಅಸ್ತಿತ್ವಕ್ಕಾಗಿ ಪದೇ ಪದೇ ಕರ್ನಾಟಕ ಬಂದ್ ಕರೆ ನೀಡುವುದು ಎಷ್ಟು ಸರಿ? ಈ ರೀತಿಯ ಬಂದ್ ನಿಂದ ಸಾಧಿಸುವುದಾದರೂ ಏನು?… Read More ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ದೆಹಲಿ ಚುನಾವಣಾ ಪೂರ್ವ ಸಮೀಕ್ಷೆ

ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂದು ಎರಡು ಮೂರು ವಾರಗಳ ಹಿಂದೆ ಕೇಳಿದ್ದರೆ, ಕೇಜ್ರಿವಾಲ್ ನಾಯಕತ್ವದ ಎಎಪಿ ಅತ್ಯಂತ ಸುಲಭವಾಗಿ ಮತ್ತೊಮ್ಮೆ ವಿಜಯಶಾಲಿಯಾಗುತ್ತದೆ ಎಂದು ಹೇಳಬಹುತಾಗಿತ್ತು. ಕಳೆದ ಬಾರಿಯಂತೆ ಅಭೂತಪೂರ್ವ ಯಶಸ್ಸಲ್ಲದಿದ್ದರೂ 70ಸೀಟಿನಲ್ಲಿ 45-55 ಮಂದಿ ಶಾಸಕರು ಗೆದ್ದು ಬಹಳ ಸುಲಭವಾಗಿ ಅಧಿಕಾರಕ್ಕೆ ಮತ್ತೊಮ್ಮೆ ಬರುತ್ತಾರೆ ಎಂದು ಹೇಳಬಹುದಾಗಿತ್ತು. ಆದರೆ ಕಳೆದ ಒಂದು ವಾರದಲ್ಲಿ ಈ ಚಿತ್ರ ಸಂಪೂರ್ಣವಾಗಿ ಬದಲಾಗಿ ಹೋಗಿ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ 50:50 ಆಗಿದೆ… Read More ದೆಹಲಿ ಚುನಾವಣಾ ಪೂರ್ವ ಸಮೀಕ್ಷೆ

ಭಾರತೀಯ ಜ್ಯೋತಿಷ್ಯದ ಪ್ರಕಾರ ಬಿಜೆಪಿ ಪಕ್ಷದ ಭವಿಷ್ಯವೇನು?

ಇಂಡಿಯನ್ ಕೌನ್ಸಿಲ್ ಆಫ್ ಜ್ಯೋತಿಷ್ಯ ವಿಜ್ಞಾನದಲ್ಲಿ (1997) ಎಮ್ಎ ಮಾಡಿರುವಂತಹ ವೈದಿಕ ಜ್ಯೋತಿಷ್ಯವನ್ನು ಅಭ್ಯಾಸ ಮಾಡುತ್ತಿರುವ, ಶ್ರೀಯುತರಾದ ರಾಜೀವ್ ಸೇಥಿ ಅವರು ಹೇಳುವ ಪ್ರಕಾರ ಇಂಟರ್ನೆಟ್ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವು 6/4/1980 ರಂದು ದೆಹಲಿಯಲ್ಲಿ ಬೆಳಿಗ್ಗೆ 11.45 ಕ್ಕೆ ರಚನೆಯಾಯಿತು ಎಂದು ತಿಳಿಯಬರುತ್ತದೆ. ಇದನ್ನೇ ಮೂಲವಾಗಿಟ್ಟುಕೊಂಡು ಲೆಕ್ಕ ಹಾಕಿದಲ್ಲಿ, ಬಿಜೆಪಿ 23/02/2019 ರಿಂದ 16/08/2020 ರವರೆಗೆ ಚಂದ್ರ ಮಹಾದಾಶ-ರಾಹು ಭುಕ್ತಿ ನಡೆಸುತ್ತಿದೆ. ಚಂದ್ರ ಮತ್ತು ರಾಹು ಪರಸ್ಪರ ಶತೃಗಳು ಮತ್ತು ಅವರ ದಶಾ-ಅಂತರ್ದಶಾ ಸರಿಯಾಗಿಲ್ಲದ… Read More ಭಾರತೀಯ ಜ್ಯೋತಿಷ್ಯದ ಪ್ರಕಾರ ಬಿಜೆಪಿ ಪಕ್ಷದ ಭವಿಷ್ಯವೇನು?

ಭಾಷಾ ಹೇರಿಕೆಯೋ, ಇಲ್ಲಾ ವಿಷಯಾಂತರವೋ

ಇದ್ದಕ್ಕಿದ್ದಂತೆಯೇ ಎರಡ್ಮೂರು ದಿನಗಳಿಂದ ನಮ್ಮ ಖನ್ನಢ ಉಟ್ಟು ಓರಾಟಗಾರರು ಎದ್ದೂ ಬಿದ್ದು ಓಡಾಡ್ತಾ ಅವ್ರೇ ಮತ್ತು ಸ್ಯಾನೇ ಮಾತಾಡ್ತಾ ಅವ್ರೆ!! . ಅರೇ ಯಾಕಪ್ಪಾ!! ಇಷ್ಟು ಬೇಗ ನವೆಂಬರ್ ತಿಂಗಳು ಬಂದು ಬಿಡ್ತಾ?. ಮೊನ್ನೇ ಇನ್ನೂ ಆಗಷ್ಟ್ 15, ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿರೋ ಖುಷೀನೇ ಇನ್ನೂ ತಣ್ಣಗಾಗಿಲ್ಲ. ಆಷ್ಟರೊಳಗೆ ಕರ್ನಾಟಕ ರಾಜ್ಯೋತ್ಸವ ಬಂದು ಬಿಡ್ತಾ ಅಂತಾ ಯೋಚಿಸಿ ಅಲ್ಲೇ ಬಿಳಿ ಪ್ಯಾಂಟ್ ಬಿಳೀ ಶರ್ಟ್ ಹಾಕಿಕೊಂಡು, ಕೊರಳಲ್ಲಿ ನಾಯಿ ಚೈನ್ ತರಹ ಚಿನ್ನದ ಚೈನ್… Read More ಭಾಷಾ ಹೇರಿಕೆಯೋ, ಇಲ್ಲಾ ವಿಷಯಾಂತರವೋ

ಸೋತು ಗೆದ್ದವರು ಸುಷ್ಮಾ ಸ್ವರಾಜ್

1999ರ ಲೋಕಸಭಾ ಚುನಾವಣೆ. ಕಾಂಗ್ರೇಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ತಮ್ಮ ಸ್ವಂತ ಬಲದಿಂದ ಆಡಳಿತದ ಚುಕ್ಕಾಣಿ ಹಿಡಿಯಲು ಜಿದ್ದಾ ಜಿದ್ದಿನಿಂದ ಹೋರಾಟಕ್ಕೆ ನಿಂತಿದ್ದವು. ದಕ್ಷಿಣ ಭಾರತದಲ್ಲಿ ಕಾಂಗ್ರೇಸ್ಸಿಗರ ಬಲ ಹೆಚ್ಚಿಸಲೆಂದೇ ಅಂದಿನ ಕಾಂಗ್ರೇಸ್ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರು ಉತ್ತರಪ್ರದೇಶದ ಅಮೆಥಿಯ ಜೊತೆಗೆ ಕರ್ನಾಟಕದ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ, ಎಲ್ಲರಿಗೂ ಸೋನಿಯಾ ಗಾಂಧಿಯ ವಿರುದ್ಧ ಭಾರತೀಯ ಜನತಾಪಕ್ಷದ ಅಭ್ಯರ್ಥಿ ಯಾರಿರಬಹುದೆಂಬ ಕುತೂಹಲ. ಜನರ ನಿರೀಕ್ಷೆಗೂ ಸಿಲುಕದಂತ ತುಸು ಕಡಿಮೆ ಎತ್ತರದ, ಸದಾ ಬಣ್ಣ… Read More ಸೋತು ಗೆದ್ದವರು ಸುಷ್ಮಾ ಸ್ವರಾಜ್