ಅವರೇ ಮೇಳ

ರಂಗು ರಂಗಿನ ಶಬ್ಧ ಮತ್ತು ಬೆಳಕಿನ ಸಮ್ಮಿಳನದ ದೀಪಾವಳಿ ಹಬ್ಬ ಮುಗಿದು ಕನ್ನಡದ ಹಬ್ಬ ಕರ್ನಾಟಕ ರಾಜ್ಯೋತ್ಸವದ ಇಡೀ ತಿಂಗಳ ಭರಾಟೆ ಮುಗಿದು ಪ್ರಕೃತಿಯಲ್ಲೂ ತೀವ್ರವಾದ ಬದಲಾವಣೆಯಾಗಿ ಜನರನ್ನೆಲ್ಲಾ ಮಾಗಿಯ ಚಳಿಯಲ್ಲಿ ಗಡ ಗಡ ನಡುಗಿಸುತ್ತಾ ಮನೆಯಿಂದ ಹೊರಗಡೆ ಬಾರದಂತೆ ತಡೆದರೂ, ಬೆಂಗಳೂರಿನ ಜನರನ್ನೆಲ್ಲಾ ಸುಮಾರು ಎರಡು ವಾರಗಳ ಕಾಲ ಒಂದೆಡೆ ಒಗ್ಗೂಡಿಸುವ ಕಾರ್ಯಕ್ರಮವೆಂದರೆ ಬೆಂಗಳೂರಿನ ವಿಶ್ವೇಶ್ವರ ಪುರಂ ನ ತಿಂಡಿ ಬೀದಿಯಲ್ಲಿ ಪ್ರತೀವರ್ಷವೂ ವಾಸವೀ ಕಾಂಡಿಮೆಂಟ್ಸ್ ಅವರ ವತಿಯಿಂದ ನೆಡೆಸಲ್ಪಡುವ ಅವರೇ ಮೇಳ ಎಂದರೆ ಅತಿಶಯೋಕ್ತಿಯೇನಲ್ಲ.… Read More ಅವರೇ ಮೇಳ

ಕನ್ನಡ ಚಿತ್ರರಂಗದ ಅಂಕಲ್ ಲೋಕನಾಥ್ ಅಜರಾಮರ

ಇಂದು ಕಛೇರಿಗೆ ಬರುತ್ತಿದ್ದಂತೆಯೇ ಮೊದಲಿಗೆ ನೋಡಿದ ಸುದ್ದಿ ರಂಗಭೂಮಿ ಮತ್ತು ಚಲನಚಿತ್ರ ರಂಗದ ಮೇರು ನಟ ಸಿ.ಎಚ್.ಲೋಕನಾಥ್ ಇನ್ನಿಲ್ಲ  ಆ ಸುದ್ದಿ ಓದುತ್ತಿದ್ದಂತೆಯೇ ನನ್ನ ಮನಸ್ಸಿಗೆ ನಮ್ಮ ಮನೆಯವರನ್ನೊಬ್ಬರನ್ನೇ ಕಳೆದುಕೊಂಡಷ್ಟೇ ದುಃಖವಾಯಿತು.  ಕನ್ನಡ ಚಿತ್ರರಂಗದಲ್ಲಿ ಅಂಕಲ್ ಎಂದೇ ಚಿರಪರಿಚಿತರಾಗಿದ್ದ ಲೋಕನಾಥರ ಅಕಾಲಿಕ  ಅಗಲಿಗೆ ಕನ್ನಡ ಚಿತ್ರರಂಗಕ್ಕೆ ತುಂಬಲಾದರ ನಷ್ಟವೇ ಸರಿ. ಅವರನ್ನು ಕನ್ನಡ ಚಿತ್ರ ರಂಗದ ಭೀಷ್ಮ ಪಿತಾಮಹನೆಂದರೆ ತಪ್ಪಾಗಲಾರದು. ಡಿಸೆಂಬರ್ ಅಂತ್ಯಕ್ಕೂ ಕನ್ನಡ ಚಿತ್ರರಂಗಕ್ಕೂ ಕೂಡಿ ಬರುವುದಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಯಿತು. ಡಿ. 29 ಕಂಚಿನ… Read More ಕನ್ನಡ ಚಿತ್ರರಂಗದ ಅಂಕಲ್ ಲೋಕನಾಥ್ ಅಜರಾಮರ

ಸಹನೆ

ಇತ್ತೀಚೆಗೆ ಮಗಳನ್ನು ಕಾಲೇಜಿನ ಬಸ್ ಹತ್ತಿಸಲು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ನಿಧಾನವಾಗಿ ಹೋಗುತ್ತಿರುವಾಗ ಎದುರುಗಡೆಯಿಂದ ಮತ್ತೊಂದು ಭಾರೀ ವಾಹನ ಬಂದಾಗ ಸಹಜವಾಗಿಯೇ ರಸ್ತೆಯ ಬದಿಗೆ ಬಂದು ಎದುರುಗಡೆಯ ವಾಹನ ಸರಾಗವಾಗಿ ಹೋಗಲು ಅನುವು ಮಾಡಿಕೊಡುತ್ತಿರುವಾಗಲೇ, ಇದ್ದಕ್ಕಿದ್ದಂತೆಯೇ ಹಿಂದಿನಿಂದ ಜೋರು ಜೋರಾಗಿ ಕರ್ಕಶವಾದ ಹಾರ್ನ್ ಶಬ್ದ ಕೇಳಿಸಿ, ಅರೇ ಇರುವುದಷ್ಟೇ ಜಾಗ ಈಗಾಗಲೇ ರಸ್ತೆಯ ಅಂಚಿನಲ್ಲಿದ್ದೇನೆ. ಇನ್ನೇಷ್ಟು ಪಕ್ಕಕ್ಕೆ ಸರಿಯುವುದು ಎಂದು ಯೋಚಿಸಿ ಎದುರಿನ ವಾಹನ ಹೋದ ನಂತರ ಹಿಂದಿನವರಿಗೆ ಜಾಗ ಬಿಟ್ಟರಾಯಿತು ಎಂದು ನಿರ್ಧರಿಸುತ್ತಿರುವಾಗಲೇ ಕರ್ಕಶವಾದ ಹಾರ್ನ್… Read More ಸಹನೆ

ರಾಜಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್

ರಾಜಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್ ಕನ್ನಡ ಚಿತ್ರರಂಗದ ದಿಗ್ಗಜರು.  ಪ್ರತಿಭಾವಂತರು, ಸುರದ್ರೂಪಿಗಳು ಮೇಲಾಗಿ, ಸ್ವಾಭಿಮಾನಿಗಳು. ಕನ್ನಡ ನಾಡು, ನುಡಿಗಳ ಬಗ್ಗೆ ಅಪಾರವಾದ ಗೌರವ ಹೊಂದಿದ್ದವರು. ಅವರನ್ನು ಅನುಸರಿಸುವ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದವರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಭೌತಿಕವಾಗಿ ಅವರುಗಳು ನಮ್ಮೊಂದಿಗೆ ಇಂದು ಇಲ್ಲವಾದರೂ, ಅವರು ತಮ್ಮ ಸಿನಿಮಾಗಳ ಮೂಲಕ ಇನ್ನೂ ನೂರಾರು ವರ್ಷಗಳವರೆಗೂ ನಮ್ಮ ಕನ್ನಡಿಗರ ಹೃದಯದಲ್ಲಿ ಅಜರಾಮರವಾಗಿರುತ್ತಾರೆ ಎನ್ನುವುದಂತೂ ಸತ್ಯ. ಸದಾ ನಮ್ಮ ಹಿರಿಯರನ್ನು  ನೆನೆಸಿಕೊಳ್ಳುವುದು ನಮ್ಮ ಸಂಪ್ರದಾಯದ ಒಂದು… Read More ರಾಜಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್

Nation First Everything Next

ಒಂದನೊಂದು ಊರಿನ ಪಕ್ಕದಲ್ಲಿ ಒಂದು ದೊಡ್ಡ ಕಾಡು ಇತ್ತು. ಆ ಕಾಡಿನ ಒಂದು ದೊಡ್ಡ ಮರವೊಂದರಲ್ಲಿ ಹಲವಾರು ಪಕ್ಷಿಗಳು ಸುಖವಾಗಿ ವಾಸಮಾಡಿ ಕೊಂಡಿದ್ದವು. ಅಂತಹ ಪಕ್ಷಿಗಳ ಸಂಕುಲಗಳಲ್ಲಿ ಒಂದು ಗಂಡುಬೇರುಂಡ ಪಕ್ಷಿಯೂ ಇತ್ತು. ಎಲ್ಲರಿಗೂ ತಿಳಿದಿರುವಂತೆ ಗಂಡುಬೇರುಂಡ ಪಕ್ಷಿಗೆ ಒಂದೇ ದೇಹ ಎರಡು ತಲೆಗಳು ಇರುತ್ತಿದ್ದವು. ಈಗ ಈ ಪಕ್ಷಿಗಳು ನಶಿಸಿ ಹೋಗಿರುವುದರಿಂದ ಅದರ ಜ್ಣಾಪಕಾರ್ಥವಾಗಿ ನಮ್ಮ ರಾಜ್ಯದ ಅಧಿಕೃತ ಲಾಂಛನದ ಮಧ್ಯಭಾಗದಲ್ಲಿ ಗಂಡುಬೇರುಂಡ ಪಕ್ಷಿಯನ್ನು ಅಳವಡಿಸಿಕೊಂಡಿದ್ದಾರೆ. ಇಂತಹ ಗಂಡುಬೇರುಂಡ ಪಕ್ಷಿಯು ಇತರೇ ಪಕ್ಷಿಗಳಂತೆ ಕಾಡಿನಲ್ಲಿದ್ದ ಹಲವಾರು… Read More Nation First Everything Next

ಕೆಜಿಎಫ್-2

ಅದೊಮ್ಮೆ ಒಬ್ಬ ತಂದೆ ತನ್ನ ಮಕ್ಕಳೊಂದಿಗೆ ಪ್ರಾಣಿಸಂಗ್ರಹಾಲಯಕ್ಕೆ ಹೋಗಿರುತ್ತಾರೆ. ಆಲ್ಲಿ ಬಗೆ ಬಗೆ ಭಯಾನಕ, ಸಾಧು ಪ್ರಾಣಿಗಳು, ಪಶು ಪಕ್ಷಿಗಳು, ಸರಿಸೃಪಗಳು ಹೀಗೆ ಎಲ್ಲವನ್ನೂ ಗೂಡಿನಲ್ಲೋ‍, ಪಂಜರದೊಳಗೂ ಇಲ್ಲವೇ ಗಟ್ಟಿಯಾಗಿ ಬಂಧಿಸಲ್ಪಟ್ಟಂತೆ ನೋಡಿಕೊಂಡು ಬರುವಾಗ ಮತ್ಯಾಲಯದ ಬಳಿ ಬಂದು ಅಲ್ಲಿ ವಿಧ ವಿಧ ರೂಪದ ಬಣ್ಣ ಬಣ್ಣದ ಮೀನುಗಳನ್ನು ಕಣ್ತುಂಬ ನೋಡಿ ಆನಂದಿಸುತ್ತಿರುವಾಗ ಒಂದು ತೆರೆದ ಗಾಜಿನ ದೊಡ್ಡ ಬೋಗುಣಿಯಲ್ಲಿರುವ ಏಡಿಗಳನ್ನು ನೋಡಿ ಆಶ್ವರ್ಯ ಚಕಿತರಾಗಿ, ಅಪ್ಪಾ ಇಲ್ನೋಡಿ ಎಲ್ಲಾ ಪ್ರಾಣಿ ಪಕ್ಷಿಗಳು ತಪ್ಪಿಸಿಕೊಂಡು ಹೋಗದಂತೆ ಒಂದಲ್ಲಾ… Read More ಕೆಜಿಎಫ್-2

ಕೆಜಿಎಘ್-1

ಕೆಜಿಎಘ್ ಕನ್ನಡ ಚಲನಚಿತ್ರ ರಂಗದಲ್ಲಿ ಅತ್ಯಂತ ವಿಶೇಷವಾಗಿ ಮತ್ತು ರೋಚಕಚಾಗಿ ಚಿತ್ರಿಕರಣವಾಗಿದೆ ಮತ್ತು ಬಿಡುಗಡೆಯ ಮುಂಚೆಯೇ ಪ್ರಪಂಚಾದ್ಯಂತ ಸದ್ದು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇಡೀ ಚಿತ್ರತಂಡ ಸುಮಾರು ಎರಡು ಮೂರು ವರ್ಷಗಳಿಂದ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ ಪರಿಶ್ರಮ ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟೀಸರ್ನಲ್ಲಿ ನೋಡಬಹುದಾಗಿದೆ.  ಕನ್ನಡದ ಹುಡುಗರೂ ಈ ರೀತಿಯಾಗಿ ಹಾಲಿವುಡ್ ಚಿತ್ರಗಳಿಗೆ ಸರಿಸಮನಾಗಿ ನಿಲ್ಲಬಲ್ಲಂತಹ ಚಿತ್ರಗಳನನ್ನು ಮಾಡಬಹುದು ಎಂದು ಜಗತ್ತಿಗೆ ತೋರಿಸಿರುವುದು ಮತ್ತು ಅದನ್ನು  ಈಗಾಗಲೇ ಚಲಚಿತ್ರ ರಂಗದ ನಾನಾ… Read More ಕೆಜಿಎಘ್-1

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ

ಅದೋಂದು ಗಿಜಿ ಗಿಜಿಯಿಂದ ವಕೀಲರು ಮತ್ತು ಕಕ್ಷೀದಾರರಿಂದ  ತುಂಬ್ಬಿದ್ದ  ನ್ಯಾಯಾಲಯ. ಅಲ್ಲೋಂದು ಕಳ್ಳತನದ ವಿಚಾರಣೆ ನಡೆದು ಅಂತಿಮ ತೀರ್ಮಾನ ನೀಡುವ ಸಂದರ್ಭವಾಗಿತ್ತು.  ವಾದ ಪ್ರತಿವಾದಗಳನ್ನೆಲ್ಲ  ಕೇಳಿ ಮುಗಿಸಿದ ನ್ಯಾಯಾಧೀಯರಿಗೆ ಆರೋಪಿ ತಪ್ಪು ಮಾಡಿರುವುದು ಸಾಭೀತಾಗಿ ಅವನಿಗೆ ಕಠಿಣ ಶಿಕ್ಷೆಯನ್ನು ವಿಧಿಸಿದ ನಂತರ ಆರೋಪಿಯತ್ತ ನೋಡಿ ಇನ್ನೆನಾದರೂ ಹೇಳಬೇಕಾಗಿದೆಯೇ ಎಂದು ವಿಚಾರಿಸಿದಾಗ, ಅದಕ್ಕಾಗಿಯೇ ಬಕ ಪಕ್ಷಿಂತೆ ಕಾಯುತ್ತಿದ್ದ ಆರೋಪಿ ನನ್ನ ತಾಯಿಯವರನ್ನು ಒಮ್ಮೆ ಮಾತನಾಡಿಸಲು ಅವಕಾಶ ಕೊಡಿ. ಅವರ ಬಳಿ ಮಾತಾನಾಡಿದ ನಂತರ ನೀವು ಹೇಳಿದ ಶಿಕ್ಷೆಯನ್ನು ಸಂತೋಷದಿಂದ… Read More ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ

ಆಹಾರದ ಸದ್ಬಳಕೆ

ನಮ್ಮಲ್ಲಿ ಹಬ್ಬ ಮತ್ತು ಶುಭ ಮಹೂರ್ತದ ಸಾಲು ಬಂದಿತೆಂದರೆ ಎಲ್ಲರಿಗೂ ಸುಗ್ಗಿಯೋ ಸುಗ್ಗಿ. ತರಕಾರಿ, ಹೂವು ಹಣ್ಣು ವ್ಯಾಪಾರಿಗಳಿಗೆ, ದಿನಸಿ, ಬಟ್ಟೆ ವ್ಯಾಪಾರಿಗಳಿಗೆ, ಎಲ್ಲರೀತಿಯ ಛತ್ರದವರಿಗೆ, ಬಾಣಸಿಗರಿಗೆ, ಪುರೋಹಿತರಿಗೆ ಪುರುಸೊತ್ತೇ ಇರುವುದಿಲ್ಲ. ಹೆಚ್ಚಿನ ಸಮಯಗಳಲ್ಲಿ ಒಳ್ಳೆಯ ಮಹೂರ್ತದ ಜೊತೆಗೆ ಛತ್ರ, ಅಡುಗೆಯವರ ಮತ್ತು ಪುರೋಹಿತರ ಸಮಯವನ್ನೂ ನೋಡಿಕೊಂಡೇ ಮದುವೆ ಮುಂಜಿಗಳನ್ನು ನಿರ್ಧರಿಸಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಈ ಶುಭ ಸಂದರ್ಭಗಳಲ್ಲಿ, ಎರಡು ಮೂರು, ಗೃಹಪ್ರವೇಶಗಳು, ಒಂದೆರೆಡು ನಿಶ್ಚಿತಾರ್ಥ, ಒಂದೆರಡು ಮದುವೆ ಮತ್ತು ಹುಟ್ಟಿದ ಹಬ್ಬಕ್ಕೆ ಹೋಗಲೇ ಬೇಕಾದ ಪರಿಸ್ಥಿತಿ.… Read More ಆಹಾರದ ಸದ್ಬಳಕೆ