ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಸಮೀರ್ ವಾಂಖೆಡೆ

ವಾಂಖೆಡೆ ಎಂಬ ಹೆಸರು ಕೇಳಿದ ಕೂಡಲೇ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಾಗೋದೇ, ಮುಂಬೈನಲ್ಲಿರುವ ಸುಪ್ರಸಿದ್ದ ವಾಂಖೆಡೆ ಕ್ರೀಡಾಂಗಣ. 1974 ರಲ್ಲಿ ಮುಂಬೈ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿದ್ದ ಬ್ಯಾರಿಸ್ಟರ್ ಶೇಷರಾವ್ ವಾಂಖೆಡೆ ನೆನಪಿನಾರ್ಥ ಆ ಕ್ರೀಡಾಂಗಣಕ್ಕೆ ವಾಂಖೆಡೆ ಕ್ರೀಡಾಂಗಣ ಎಂಬ ಹೆಸರನ್ನಿಡಲಾಗಿದೆ. ಆದರೆ ಕಳೆದ ಎರಡು ಮೂರು ವಾರಗಳಿಂದ ದೇಶಾದ್ಯಂತ ಪ್ರಚಲಿವಿರುವ ಮತ್ತೊಂದು ಹೆಸರೇ ಸಮೀರ್ ವಾಂಖೆಡೆ. ಯಾರೀ ಸಮೀರ್ ವಾಂಖೆಡೆ? ಅವರ ಸಾಧನೆಗಳೇನು? ಅವರ ಹೆಸರು ಈಗ ಏಕೆ ಪ್ರಚಲಿತದಲ್ಲಿದೆ? ಎಂಬುದನ್ನು ಸವಿವರವಾಗಿ ತಿಳಿಯೋಣ. 2004ರ… Read More ಸಮೀರ್ ವಾಂಖೆಡೆ

ಕನ್ಯಾದಾನ ಮತ್ತು ಅಸಹಿಷ್ಣುತೆ

ಕಳೆದ ವಾರಾಂತ್ಯದಲ್ಲಿ #Nobindi_Nobusiness ಎಂಬ ಲೇಖನವೊಂದನ್ನು ಬರೆದು ಅದರಲ್ಲಿ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಹೇಗೆ ನಮ್ಮ ಹಿಂದೂ ಹಬ್ಬಗಳನ್ನು ಅವಹೇಳನ ಮಾಡಲಗುತ್ತಿದೆ ಹಾಗೂ ತಿರುಚಲಾಗುತ್ತಿದೆ ಎಂಬುದನ್ನು ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದೆ. ಈ ಲೇಖನವನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಲವರೊಡನೆ ಹಂಚಿಕೊಂಡಿದ್ದೆ. ಇಡೀ ಲೇಖನ ಯಾರದ್ದೇ ವಯಕ್ತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಹಿಂದೂ ಧರ್ಮದ ಬಗ್ಗೆ corporate company ಗಳಿಗೆ ಇರುವ ತಾತ್ಸಾರ, ನಮ್ಮ ಆಚರಣೆಗಳ ಬಗ್ಗೆ ತೋರುವ ಅಸಡ್ಡೆ ಮತ್ತು ತಾರತಮ್ಯವನ್ನು… Read More ಕನ್ಯಾದಾನ ಮತ್ತು ಅಸಹಿಷ್ಣುತೆ

#NoBindi_NoBusiness

ಅರೇ ಇದೇನಿದು ಇಂತಹ ಶೀರ್ಷಿಕೆ? ಜನರನ್ನು ಹೀಗೆ ಧರ್ಮಾಧಾರಿತವಾಗಿ ಕೆರಳುಸಿತ್ತಿದ್ದೀರಿ ಎಂದು ಭಾವಿಸುತ್ತಿದ್ದೀರಾ? ಅರೇ ಇದೇನಿದು ಹೀಗೆ ಕೋಮುವಾದವನ್ನು ಹರಡುತ್ತಿದ್ದೇನೆ ಎಂದು ಭಾವಿಸಿದ್ದೀರಾ? ಖಂಡಿತವಾಗಿಯೂ ಅಂತಹ ಪ್ರಯತ್ನವಾಗಿರದೇ ನಮ್ಮ ಸುತ್ತಮುತ್ತಲಿನವರು ನಮ್ಮ ಹಿಂದುಗಳ ಹೃದಯ ವೈಶಾಲ್ಯತೆಯನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತಿದ್ದಾರೆ ಎಂಬುದನ್ನು ಕೆಲವು ಉದಾಹರಣೆಯ ಮುಖಾಂತರ ವಿವರಿಸುತ್ತಿದ್ದೇನೆ ಅಷ್ಟೇ. ದಸರ ಮತ್ತು ದೀಪಾವಳಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬಗಳನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಹಿಂದೂಗಳು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಎಷ್ಟು ಚೆನ್ನಾಗಿ ಅಗುತ್ತದೆಯೋ? ಅದೇ… Read More #NoBindi_NoBusiness

ಸಿರಿವಂತರ ಮಕ್ಕಳೇ ಹೀಗೇಕೇ?

ಅಕ್ಟೋಬರ್ 2, ಗಾಂಧಿ ಜಯಂತಿ. ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಟ್ಟವರಲ್ಲಿ ಮುಂಚೂಣಿಯಲ್ಲಿದ್ದ ನಾಯಕನಿಗೆ ಗೌರವ ಅರ್ಪಿಸುವ ಸಲುವಾಗಿ ಅವರು ಪಾಲಿಸುತ್ತಿದ್ದ ಅಹಿಂಸಾ ತತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಆ ದಿನ ದೇಶಾದ್ಯಂತ ಮಧ್ಯ ಮತ್ತು ಮಾಂಸದ ವ್ಯಾಪಾರವನ್ನು ನೀಷೇಧಿಸಲಾಗಿರುತ್ತದೆ ಮತ್ತು ಇಡೀ ದಿನ ಗಾಂಧಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸುವ ಕಾರ್ಯದಲ್ಲಿ ಬಹುತೇಕ ಎಲ್ಲರೂ ನಿರತರಾಗಿರುವಾಗಲೇ ಅದೇ ರಾತ್ರಿ ಮುಂಬೈಯ್ಯಿನ ಐಷಾರಾಮಿ ಹಡುಗೊಂದರಲ್ಲಿ ಬೆಚ್ಚಿ ಬೀಳುವ ಸಂಗತಿಯೊಂದು ನಡೆದಿದೆ. ಸಮಾಜದಲ್ಲಿ ಗಣ್ಯರೆನಿಸಿಕೊಂಡವರ ಮಕ್ಕಳು… Read More ಸಿರಿವಂತರ ಮಕ್ಕಳೇ ಹೀಗೇಕೇ?

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ತಾಜಾ ಆಹಾರ

ಮೊನ್ನೆ ಅಮೇರಿಕಾದಿಂದ ಭಾರತಕ್ಕೆ ಬಂದಿದ್ದ ಸ್ನೇಹಿತರ ಕುಟುಂಬವೊಂದನ್ನು ಎಲ್ಲಾದರೂ ಹೊರಗೆ ಊಟಕ್ಕೆ ಕರೆದುಕೊಂಡು ಹೋಗೋಣ ಎಂದು ಯೋಚಿಸಿ ಅವರಿಗೆ ಕರೆ ಮಾಡಿ, ಬಹಳ ವರ್ಷಗಳಿಂದ ಅಲ್ಲೇ ನೆಲೆಸಿರುವ ಕಾರಣ ನಮ್ಮ ಆಹಾರ ಪದ್ದತಿ ಅವರಿಗೆ ಹಿಡಿಸದೇ ಇರಬಹುದು ಎಂದು ಭಾವಿಸಿ, ಏನ್ ಪಾ ದೋಸ್ತಾ? ಊಟಕ್ಕೆ ಎಲ್ಲಿಗೆ ಹೋಗೋಣು? ಇಲ್ಲೇ ಹತ್ತಿರದಲ್ಲೇ ಪಿಜ್ಜಾ ಬರ್ಗರ್ ಎಲ್ಲಾ ಸಿಕ್ತೈತೀ. ಅಲ್ಲಿಗೇ ಹೋಗೋಣು ಎಂದೆ. ಕೂಡಲೇ, ಏಕಾಏಕಿ ನನ್ನ ಗೆಳೆಯ ಸಿಟ್ಟಾಗಿ  ಯಾಕಪ್ಪಾ ದೋಸ್ತಾ? ನಾವ್ ಆರಾಮ್ ಆಗಿ ಇರೋದ್… Read More ತಾಜಾ ಆಹಾರ

ಎಲ್ಲರಂತಲ್ಲ ನನ್ನ ಮಕ್ಕಳು

ಅರೇ! ಇದೇನಿದು ಈ ರೀತಿಯ ಶೀರ್ಷಿಕೆ? ನಿಮ್ಮ ಮಕ್ಕಳು ಅದೇನು ಅಷ್ಟು ದೊಡ್ಡ ಸಾಧಕರೇ? ಎಂದು ಕೇಳಿದರೆ, ನಾನು ಯಾವುದೇ ಮುಚ್ಚುಮರೆ ಇಲ್ಲದೇ ಹೇಳುತ್ತೇನೆ. ಇಲ್ಲಾ ನನ್ನ ಮಕ್ಕಳು ಸರಾಸರಿಯವರು ಮತ್ತು ನಾನು ಸರಾಸರಿ ಮಕ್ಕಳ ತಂದೆ. ನನ್ನ ಮಕ್ಕಳು ಶಾಲೆಯ ಪರೀಕ್ಷೆಗಳಲ್ಲಿ ಅಂಕಗಳನ್ನು ಗಳಿಸುವಲ್ಲಿ ಸರಾಸರಿ. ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಓಹೋ!! ಎಂದು ಹೇಳಿಕೊಳ್ಳುವಂತಿಲ್ಲದ ಸರಾಸರಿಯವರು. ಹಾಗಾದರೆ ಆವರ ವಿಶೇಷತೆಗಳೇನು? ಎಂದು ಕೇಳಿದರೆ ಸದ್ಯಕ್ಕೆ ಸಮಾಜದ ದೃಷ್ಟಿಯಲ್ಲಿ ಮತ್ತು ಶೈಕ್ಷಣಿಕವಾಗಿ ಅವರು ಅಂತಹದ್ದೇನನ್ನೂ ಸಾಧಿಸಿಲ್ಲ… Read More ಎಲ್ಲರಂತಲ್ಲ ನನ್ನ ಮಕ್ಕಳು

ಲಂಚದಲ್ಲೂ ಡಿಜಟಲೀಕರಣ

ಮೊನ್ನೆ ಇನ್ನೂ, ಮಂಗಳೂರು ಟ್ರಾಫಿಕ್ ಪೋಲಿಸರ ಬಗ್ಗೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಇದಕ್ಕೆ ಪೂರಕವಾದ ಬೆಂಗಳೂರಿನ ಯಲಹಂಕದ ಬಳಿಯ ಮತ್ತೊಂದು ಪ್ರಸಂಗಕ್ಕೆ ನೆನ್ನೆ ನಾನೇ ಸಾಕ್ಷಿಯಾಗಬೇಕಾಗಿದ್ದು ನಿಜಕ್ಕೂ ಅಸಹ್ಯಕರ ಎನಿಸಿತು. ಹಾಗಾಗಿ ಮಂಗಳೂರಿನ ಪ್ರಕರಣವನ್ನು ಯಥಾವತ್ ಹಾಗೆಯೇ ಪ್ರಕಟಿಸಿ ನಂತರ ನನಗಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ಮಂಗಳೂರಿನ ಪ್ರಕರಣ ಇಂದು ಸ್ಟೇಟ್ ಬ್ಯಾಂಕ್ ನಲ್ಲಿ ನಾವು ರಾಂಗ್ ಸೈಡಲ್ಲಿ (one way) ಕಾರು ಚಲಾಯಿಸಿದ್ದಕ್ಕೆ ಈ ಪೋಲಿಸ್ ಅಡ್ಡಗಟ್ಟಿ ಫೈನ್ ಕಟ್ಟಲು ಹೇಳಿದ್ರು, ರಶೀದಿ ಬೇಕಾ? ಬೆಡ್ವಾ?… Read More ಲಂಚದಲ್ಲೂ ಡಿಜಟಲೀಕರಣ