online shopping

ಎಲ್ಲರಿಗೂ ತಿಳಿದಿರುವಂತೆ ದಸರಾ ಮತ್ತು ದೀಪಾವಳಿ ಹಬ್ಬ ಬಂದಿತೆಂದರೆ ಇಡೀ ದೇಶಾದ್ಯಂತ ಸಂಭ್ರಮದ ಹಬ್ಬದ ವಾತಾವರಣ. ಈ ಸಂಭ್ರಮದ ಸಮಯದಲ್ಲಿ ಎಲ್ಲರ ಮನೆ ಮತ್ತು ಮನಗಳು ಏನಾದರೊಂದು ಹೊಸತೊಂದನ್ನು ಕೊಂಡು ತರಲು ಬಯಸಿ ವರ್ಷವಿಡೀ ಅದಕ್ಕಾಗಿ ಹಣವನ್ನು ಉಳಿಸಿ ಅದನ್ನು ಖರೀದಿಸಿ ತಂದರಂತೂ ಆಂದಕ್ಕೆ ಎಣೆಯೇ ಇಲ್ಲ. ಇದನ್ನೇ ನೆಪವಾಗಿಟ್ಟುಕೊಂಡು ಬಹುತೇಕ ದಕ್ಷಿಣ ಭಾರತದ ಕೈಗಾರಿಕೆಗಳು ಆಯುಧಪೂಜೆಯ ಸಂದರ್ಭಕ್ಕೆ ತಮ್ಮ ನೌಕರಿಗೆ ಬೋನಸ್ ನೀಡಿದರೆ, ಇನ್ನು ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ತಮ್ಮ ನೌಕರಿಗೆ ಯಥೇಚ್ಚವಾದ ಬೋನಸ್ ನೀಡುವ… Read More online shopping

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ

ಮಾಮರವೆಲ್ಲೋ ಕೋಗಿಲೆ ಎಲ್ಲೋ, ನಾ ಕಂಡಂತೆ ಎಸ್ಪಿಬಿ

ಎಪ್ಪತರ ದಶಕದಲ್ಲಿ ನನಗೆ ಆಗಿನ್ನೂ ಬುದ್ಧಿ ಬಂದ ಸಮಯದಲ್ಲಿ ನಾನು ಬಹಳ ಕಾಲ ಗುನುಗುತ್ತಿದ್ದ ಮತ್ತು ಈಗಲೂ ನನಗೆ ನೆನಪಿನಲ್ಲಿ ಇರುವ ದೇವರಗುಡಿ ಚಿತ್ರದ ಚಿ.ಉದಯಶಂಕರ್ ಸಾಹಿತ್ಯ ರಚನೆಯ, ರಾಜನ್-ನಾಗೇಂದ್ರ ಜೋಡಿ ಸಂಗೀತ ನೀಡಿ ಶ್ರೀ ಎಸ್.ಪಿ.ಬಾಲಸುಬ್ರಮಣ್ಯಂ ಹಾಡಿರುವ ಮಾಮರವೆಲ್ಲೋ ಕೋಗಿಲೆ ಎಲ್ಲೋ, ಏನೀ ಸ್ನೇಹ ಸಂಬಂಧ, ಎಲ್ಲಿಯದೋ ಈ ಅನುಬಂಧ ಹಾಡು ಇಂದಿನ ದಿನಕ್ಕೆ ನಿಜಕ್ಕೂ ಅನ್ವರ್ಥವಾಗಿದೆ. ಜೂನ್ 4, 1946 ರಲ್ಲಿ ಆಂಧ್ರ ಪ್ರದೇಶದ ಸಣ್ಣ ಹಳ್ಳಿಯೊಂದರಲ್ಲಿ ಜನಿಸಿ ತಮಿಳುನಾಡಿನ ಚೆನ್ನೈನಲ್ಲಿ ವಿದ್ಯಾಭ್ಯಾಸ ಮಾಡಿ… Read More ಮಾಮರವೆಲ್ಲೋ ಕೋಗಿಲೆ ಎಲ್ಲೋ, ನಾ ಕಂಡಂತೆ ಎಸ್ಪಿಬಿ

ಕೊಡುಗೈ ರಾಜು

ಅದು 1998. ನನ್ನ ಮದುವೆಗಾಗಿ ಹೆಣ್ಣು ನೋಡುತ್ತಿದ್ದ ಸಮಯದಲ್ಲಿ ತಮ್ಮ ಮಗಳ ಜಾತಕವನ್ನು ಹಿಡಿದುಕೊಂಡು ಮೊತ್ತ ಮೊದಲ ಬಾರಿಗೆ ಸುಮಾರು 6 ಅಡಿಯಷ್ಟು ಎತ್ತರದ ಸುಂದರ ಮೈಕಟ್ಟಿನ ನಡು ವಯಸ್ಸಿನವರು ನಮ್ಮ ಮನೆಗೆ ಬಂದು ತಮ್ಮನ್ನು ತಾವು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಳ್ಳುತ್ತಾರೆ. ಒಂದು ಗಂಡಿಗೆ ಒಂದು ಹೆಣ್ಣು ಎಂದು ಹುಟ್ಟಿಸುವಾಗಲೇ ಬ್ರಹ್ಮ ಬರೆದು ಕಳುಹಿಸಿರುತ್ತಾನೆ ಎಂಬಂತೆ ಜಾತಕಗಳೆಲ್ಲವೂ ಕೂಡಿ ಬಂದ ಕಾರಣ, ಅದೇ ಗುರುವಾರ ಸಂಜೆ ನನ್ನ ಜೀವನದಲ್ಲಿಯೇ ಪ್ರಪ್ರಥಮವಾಗಿ ಮತ್ತು ಅಧಿಕೃತವಾಗಿ… Read More ಕೊಡುಗೈ ರಾಜು

ಹೆಣ್ಣು ಮಕ್ಕಳ ದಿನ

ಸೆಪ್ಟೆಂಬರ್ ತಿಂಗಳ ನಾಲ್ಕನೇ ಭಾನುವಾರವನ್ನು ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುವ ಮೂಲಕ ಆ ದಿನವನ್ನು ಕುಟುಂಬದಲ್ಲಿರುವ ಹೆಣ್ಣು ಮಕ್ಕಳಿಗೆ ಸಮರ್ಪಿಸಲಾಗಿದೆ. ಕುಟುಂಬದಲ್ಲಿ ಹೆಣ್ಣುಮಕ್ಕಳನ್ನು ಅತ್ಯಂತ ಪ್ರೀತಿಯಿಂದ ಮೃದು ಧೋರಣೆಯಿಂದ ನೋಡಿಕೊಳ್ಳುವುದನ್ನೇ ದುರುಪಯೋಗ ಪಡಿಸಿಕೊಂಡು ನಾನಾ ರೀತಿಯ ಅಪಸವ್ಯವಗಳಿಗೆ ಕಾರಣೀಭೂತರಾಗುತ್ತಿರುವ ಈ ಸಂಧರ್ಭದಲ್ಲಿ ಅರ್ಥಗರ್ಭಿತವಾಗಿ ಹೆಣ್ಣು ಮಕ್ಕಳ ದಿನವನ್ನು ಹೇಗೆ ಆಚರಿಸಬೇಕು ಎನ್ನುವ ಸವಿವರ ಇದೋ ನಿಮಗಾಗಿ… Read More ಹೆಣ್ಣು ಮಕ್ಕಳ ದಿನ

ಮಾತೃ-ಧರ್ಮ

ತಲಕಾವೇರಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ತಿಂಗಳ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತವುಂಟಾಗಿ, ತಲಕಾವೇರಿಯ ಪ್ರಧಾನ ಅರ್ಚಕರಾದ ಶ್ರೀ ನಾರಾಯಣಾಚಾರ್  ಅವರ ಧರ್ಮ ಪತ್ನಿ ಮತ್ತು ಅವರ ಸಹೋದರ ಮತ್ತು ಅವರ ನೆರೆಹೊರೆಯವರು  ಆ.5ರಂದು  ಭೂಕುಸಿತದಲ್ಲಿ ‌ ಮೃತಪಟ್ಟ ವಿಷಯ ಎಲ್ಲರಿಗೂ ತಿಳಿದ ವಿಷಯವಾಗಿದ್ದು ಆ ಕುರಿತಂತೆ ಲೇಖನವನ್ನೂ ಬರೆದಿದ್ದೆ. ಪೋಷಕರ ಮತ್ತು ಸಂಬಂಧೀಕರ ಅಕಾಲಿಕ ಮರಣದ ಸುದ್ದಿ ಕೇಳಿ ದೂರದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡಿನಲ್ಲಿ ಇದ್ದ ನಾರಾಯಣಾಚಾರ್ ಅವರ ಪುತ್ರಿಯರಾದ ಶಾರದಾ ಅಚಾರ್ ಮತ್ತು ನಮಿತಾ… Read More ಮಾತೃ-ಧರ್ಮ

ವಿಕಾಸ್‌ ದುಬೆ

ನಿಜವಾಗಲೂ ಈತನ ಕುರಿತಾಗಿ ಈ ರೀತಿ ಒಂದು ಲೇಖನವನ್ನಾಗಲೀ ಅಥವಾ ಆತನ ಬಗ್ಗೆ ಮಾತನಾಡಿಕೊಳ್ಳ ಬೇಕಾದಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯೇ ಅಲ್ಲದಿದ್ದರೂ ಕಳೆದ ಒಂದು ವಾರಗಳಿಂದ ಈತ ದೇಶಾದ್ಯಂತ ಎಲ್ಲಾ ದೃಶ್ಯಮಾದ್ಯಮಗಳಿಗೂ ಟಿ.ಆರ್.ಪಿ ತಂದು ಕೊಟ್ಟಂತಹ ವ್ಯಕ್ತಿ ಎನ್ನುವುದಂತೂ ಸತ್ಯ. 2001 ರಲ್ಲಿ, ಉತ್ತರ ಪ್ರದೇಶದ ಬಿಜೆಪಿ ಸಚಿವರಾಗಿದ್ದ ಸಂತೋಷ್ ಶುಕ್ಲಾ ಅವರನ್ನು ಹಾಡಹಗಲಲ್ಲೇ ಗುಂಡಿಕ್ಕಿ ಕೊಲ್ಲುವ ಮೂಲಕ ಒಮ್ಮೆಂದೊಮ್ಮೆಲೆ ಪ್ರವರ್ಧಮಾನಕ್ಕೆ ಬಂದಂತಹ ಪಾತಕಿ ಸುಮಾರು ಆರು ತಿಂಗಳ ಪೋಲೀಸರಿಗೆ ಶರಣಾಗಿ ಕೊಲೆಯಾದ ಸಚಿವರ ಗನ್ ಮೆನ್… Read More ವಿಕಾಸ್‌ ದುಬೆ

# 10, ಜನಪಥ್ ಬಂಗಲೆ

ಈ ಬಂಗಲೆಯ ವಿಳಾಸ ಓದಿದ ಕೂಡಲೇ ಬಹುತೇಕ ಭಾರತೀಯರಿಗೆ ಗೊತ್ತಿರುವ ಸಂಗತಿಯೇನೆಂದರೆ, ಆ ಬಂಗಲೆಯಲ್ಲಿ ಸದ್ಯಕ್ಕೆ ವಾಸಿಸುತ್ತಿರುವವರು, ಅರ್ಹತೆ ಇಲ್ಲದಿದ್ದರೂ, ನಮ್ಮ ಸರ್ಕಾರದಲ್ಲಿ ಯಾವುದೇ ಉನ್ನತ ಹುದ್ದೆ ಹೊಂದಿರದಿದ್ದರೂ, ನಮ್ಮ ದೇಶದ ಅನೇಕ ಆಗುಹೋಗುಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕಾರಣೀಭೂತರಾಗಿ ಹೋಗಿರುವುದು ನಿಜಕ್ಕೂ ವಿಪರ್ಯಾಸವೇ ಸರಿ ಹೌದು ನಿಮ್ಮ ಉಹೆ ಸರಿ. ನಾನೀಗ ಹೇಳ ಹೊರಟಿರುವುದು ನಮ್ಮ ಸರ್ಕಾರದ ಭಾಗವಾಗಿರದ ಕೇವಲ ಸಾಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಹೇಗೆ ಈ ಬಂಗಲೆಯಲ್ಲಿ ಇನ್ನೂ ವಾಸಿಸುತ್ತಿದ್ದಾರೆ? ಇನ್ನೂ ಆ… Read More # 10, ಜನಪಥ್ ಬಂಗಲೆ

ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಕೇವಲ ಕರ್ನಾಟಕ ಮತ್ತು ಭಾರತವಷ್ಟೇ ಅಲ್ಲದೇ ಇಡೀ ಈ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಇಂಜಿನೀಯರ್ ಎಂಬ ಪ್ರಖ್ಯಾತಿಯನ್ನು ಹೊಂದಿದ್ದಂತಹ ಭಾರತ ರತ್ನ ಶ್ರೀ ಮೊಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನವಾದ ಸೆಪ್ಟೆಂಬರ್ 15 ರಂದು ಎಂಜಿನಿಯರ್‌ ದಿನ ಎಂದು ಅಚರಿಸುವ ಮೂಲಕ ಆ ಮಹಾಚೇತನಕ್ಕೆ ಗೌರವ ಸಲ್ಲಿಸಲಾಗುತ್ತದೆ.

ಶ್ರೀ ವಿಶ್ವೇಶ್ವರಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯದ ಜೊತೆಗೆ, ಅಂತಹ ಶ್ರೇಷ್ಠ ಪರೋಪಕಾರಿ ಮತ್ತು ಜನಾನುರಾಗಿಗಳಾಗಿದ್ದಂತಹವರ ಕುರಿತು ಇಂದು ಕೆಲವು ಪಟ್ಟಭದ್ರಹಿತಾಸಕ್ತಿಗಳು ನಡೆಸಿಕೊಳ್ಳುತ್ತಿರವ ಬಗೆಗಿನ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು