ಹಿತಶತೃಗಳು

ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು

ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ಬಲಮುರಿ ಪ್ರವಾಸ ಭಾಗ-1

ಕಳೆದ ಒಂದೂವರೆ ತಿಂಗಳಿಂದ ಕೂರೋನಾ ಮಹಾಮಾರಿಯಿ ಸೋಂಕಿನಿಂದಾಗಿ ಎಲ್ಲರೂ ಮನೆಯಲ್ಲಿಯೇ ಕುಳಿತುಕೊಂಡು ಬೇಜಾರಾಗಿ ಹೋಗಿದೆ. ಎಲ್ಲಾ ಸರಿ ಇದ್ದಿದ್ರೇ ಈ ಬೇಸಿಗೆ ರಜೆಯಲ್ಲಿ ಸಂಸಾರ ಸಮೇತ ಯಾವುದಾದರೂ ಪ್ರವಾಸೀ ತಾಣಗಳಿಗೆ ಹೋಗಿ ಒಂದಷ್ಟು ದಿನ ಆರಾಮಾಗಿ ಇದ್ದು ಬರ್ತಾ ಇದ್ವಿ ಅನ್ಸತ್ತೆ . ಅದಕ್ಕೆ ಈಗ ಕುಳಿತಲ್ಲಿಂದಂದಲೇ ನಾವು ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಲೇಜಿನಲ್ಲಿರುವಾಗ ಬಲಮುರಿಗೆ ಹೋಗಿದ್ದ ರೋಚಕ ಪ್ರವಾಸದ ಅನುಭವವನ್ನು ಹಂಚಿಕೊಳ್ತಾ ಇದ್ದೀನಿ. ಓದಿ ನೀವೂ ಕುಳಿತಲ್ಲಿಂದಲೇ ಆನಂದಿಸಿ. ಆಗ 1992ನೇ ಇಸ್ವಿ. ನಾವಾಗ… Read More ಬಲಮುರಿ ಪ್ರವಾಸ ಭಾಗ-1

ಶ್ರೀ ರಾಮಾನುಜಾಚಾರ್ಯರು

ಎಂಟನೇ ಶತಮಾನದ ಅಂತ್ಯ ಮತ್ತು ಒಂಬತ್ತನೇ ಶತಮಾನದಲ್ಲಿ ವಿವಿಧ ಧರ್ಮಗಳ ಸೆಳೆತಕ್ಕೆ ಸಿಕ್ಕಿ ಸನಾತನ ಧರ್ಮ ಆವಸಾನದ ಅಂಚಿನಲ್ಲಿದ್ದಾಗ ಹಿಂದೂ ಧರ್ಮದ ಪುನರುತ್ಥಾನದ ಆಶಾಕಿರಣವಾಗಿ ಶ್ರೀ ಶಂಕರಾಚಾರ್ಯರ ಆಗಮನವಾಗಿ ಅನ್ಯಧರ್ಮೀಯರನ್ನು ಸಮರ್ಥವಾಗಿ ವಾದದಲ್ಲಿ ಸೋಲಿಸಿ ತಮ್ಮ ಅಹಂ ಬ್ರಹ್ಮಾಸ್ಮಿ ಎನ್ನುವ ಅದ್ವೈತ ತತ್ವದ ಮೂಲಕ ಸನಾತನ ಧರ್ಮವನ್ನು ಎತ್ತಿಹಿಡಿದ ಪರಂಪರೆಯನ್ನು 10 ಮತ್ತು 11ನೇ ಶತಮಾನದಲ್ಲಿ ಮುಂದುವರಿಸಿದ ಕೀರ್ತಿ ಶ್ರೀ ರಾಮಾನುಜಾಚಾರ್ಯರಿಗೆ ಸಲ್ಲುತ್ತದೆ. ಈ ಇಬ್ಬರು ಮಹಾನ್ ಆಚಾರ್ಯರ ನಡುವೆ ಹಲವಾರು ಸಾಮ್ಯಗಳಿದ್ದು ಮೊದಲನೆಯದಾಗಿ ಈ ಇಬ್ಬರೂ… Read More ಶ್ರೀ ರಾಮಾನುಜಾಚಾರ್ಯರು

ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು

ಕೂರೋನ ಇನ್ನೆಷ್ಟೂ ಅಂತಾ ಮನೆಯೊಳಗೇ ಕೂರೋಣಾ?

ಚೀನಾದ ದೇಶದ ವುಹಾನ್ ಪಟ್ಟಣದಲ್ಲಿ ಬಾವಲಿಗಳಿಂದ ಮೊದಲು ಕಾಣಿಸಿಕೊಂಡ ಕೂರೋನ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಕೆಲವೇ ಕೆಲವು ದಿನಗಳಲ್ಲಿ ಪ್ರಪಂಚಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚಿ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಸೋಂಕು ನಮ್ಮ ದೇಶದಲ್ಲಿ ಹರಡಬಾರದೆಂಬ ಮುಂಜಾಗೃತಾ ಕ್ರಮವಾಗಿ ಆರಂಭದಲ್ಲಿ ಏಪ್ರಿಲ್ 14 ರವಗೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿ, ಪರಿಸ್ಥಿತಿ ಸುಧಾರಿಸದ ಕಾರಣ ಅದನ್ನು ಎರಡನೆಯ ಬಾರಿಗೆ ಮೇ 3 ರವರೆಗೆ ವಿಸ್ತರಿಸಲಾಗಿದೆ. ಈಗ ಬಲ್ಲ… Read More ಕೂರೋನ ಇನ್ನೆಷ್ಟೂ ಅಂತಾ ಮನೆಯೊಳಗೇ ಕೂರೋಣಾ?

ಸಿಹಿ ಮತ್ತು ಖಾರ ಹುಗ್ಗಿ (ಪೊಂಗಲ್)

ದಕ್ಷಿಣ ಭಾರತೀಯರಿಗೆ ಅದರಲ್ಲೂ ಕರ್ನಾಟಕ, ತಮಿಳು ನಾಡು ಮತ್ತು  ಅವಿಭಜಿತ  ಆಂಧ್ರ ಪ್ರದೇಶದವರ ಬಹುತೇಕ ಸಭೆ ಸಮಾರಂಭಗಳಿರಲಿ ಅಥವಾ ದೇವಸ್ಥಾನಗಳಲ್ಲಿ ಪ್ರಸಾದ ರೂಪದಲ್ಲಿ ಹುಗ್ಗಿಯನ್ನು ಬಳೆಸಲಾಗುತ್ತದೆ.  ಧನುರ್ಮಾಸದಲ್ಲಂತೂ ಇಡೀ ಒಂದು ತಿಂಗಳು ಪೂರ್ತಿ ಬಹುತೇಕ ಎಲ್ಲಾ ದೇವಸ್ಥಾನಗಳಲ್ಲಿಯೂ ಸಿಹಿ ಇಲ್ಲವೇ ಖಾರ  ಹುಗ್ಗಿ (ಪೊಂಗಲ್)ಯದೇ ಭರಾಟೆ. ಇಂತಹ ಸಿಹಿ ಮತ್ತು  ಖಾರ  ಹುಗ್ಗಿ (ಪೊಂಗಲ್)ಯನ್ನು  ಸಾಂಪ್ರದಾಯಕವಾಗಿ ಮನೆಯಲ್ಲಿ ಹೇಗೆ ತಯಾರಿಸಬಹುದು ಎಂಬುದನ್ನು ತೋರಿಸಿಕೊಡುತ್ತಿದ್ದೇವೆ. ಸುಮಾರು ಐದಾರು ಜನರಿಗೆ ಸಾಕಾಗುವಷ್ಟು ತಯಾರಿಸಲು ಬೇಕಾಗುವ ಸಾಮಗ್ರಿಗಳು ಖಾರ  ಹುಗ್ಗಿ ತಯಾರಿಸಲು… Read More ಸಿಹಿ ಮತ್ತು ಖಾರ ಹುಗ್ಗಿ (ಪೊಂಗಲ್)

ಭಜರಂಗಿ ಮಹೇಂದ್ರ ಕುಮಾರ್

ಅದು ತೊಂಭತ್ತರ ಕಡೆಯ ದಿನಗಳು ಮತ್ತು ಎರಡು ಸಾವಿರ ಇಸ್ವಿಯ ಆರಂಭದ ದಿನಗಳು. ರಾಜ್ಯದಲ್ಲಿ ಭಜರಂಗ ದಳ ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳು. ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಲಕ್ಷಾಂತರ ಯುವಕರು ಭಜರಂಗ ದಳಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ಅಂತಹ ಯುವಕರಲ್ಲಿ ಚಿಕ್ಕಮಗಳೂರಿನ ಮೂಲದ ಮಹೇಂದ್ರ ಕುಮಾರು ಅತ್ಯಂತ ವೇಗವಾಗಿ ಪ್ರವರ್ಧಮಾನಕ್ಕೆ ಬಂದಂತಹ ಯುವಕ. ತನ್ನ ನಡೆ ನುಡಿ, ವಾಗ್ಪಟುತ್ವತೆ, ಪ್ರಖರ ಹಿಂದುತ್ವ ಮತ್ತು ಉಗ್ರ ಹೋರಾಟದ ಫಲವಾಗಿ ಮಹೇಂದ್ರ ಕುಮಾರ್ ನೋಡ ನೋಡುತ್ತಿದ್ದಂತೆಯೇ ಬಜರಂಗದ ರಾಜ್ಯ ಸಂಚಾಲಕರಾಗಿ ಹೋದರು.… Read More ಭಜರಂಗಿ ಮಹೇಂದ್ರ ಕುಮಾರ್