ಛತ್ರಪತಿ ಶಿವಾಜಿ ಮಹಾರಾಜ್

ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಛತ್ರಪತಿ ಶಿವಾಜಿ ಮಹಾರಾಜ್

ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಕರಗ ಮಹೋತ್ಸವ

ಬೆಂಗಳೂರಿನ ಆಸುಪಾಸಿನಲ್ಲಿ ಶತಶತಮಾನಗಳಿಂದಲೂ ಪ್ರಮುಖ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ದೇವಿಯ ದೇವಸ್ಥಾನಗಳಲ್ಲಿ ಕರಗ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕರಗಕ್ಕೇ ತನ್ನದೇ ಆದ ವೈಶಿಷ್ಟ್ಯವಿದೆ. ಆದಿಶಕ್ತಿಯನ್ನು ಗುರುತಿಸಿ ಆರಾಧಿಸುವ ಹಲವಾರು ಸಂಪ್ರದಾಯಗಳಲ್ಲಿ ಕರಗ ಮಹೋತ್ಸವವೂ ಒಂದು. ಕರಗ(ಕರಕ) ಎಂಬ ಮಾತಿಗೆ ಕುಂಭ ಎಂಬ ಅರ್ಥವೂ ಇದೆ. ಕರಗದ ಒಂದೊಂದು ಅಕ್ಷರವೂ ಒಂದೊಂದು ಸಂಕೇತವನ್ನು ಹೊಂದಿವೆ ಎನ್ನುವ ಪ್ರತೀತಿ ಇದೆ. ಕ-ಕೈಯಿಂದ ಮುಟ್ಟದೆ, ರ-ರುಂಡದ ಮೇಲೆ ಧರಿಸಿ, ಗ-ಗತಿಸುವುದು (ತಿರುಗುವುದು) ಎಂಬ ಅರ್ಥ ವಿವರಣೆ ಬಳಕೆಯಲ್ಲಿದೆ. ಕರಗ ಪೂಜೆ… Read More ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಕರಗ ಮಹೋತ್ಸವ

ಪರಿಶಿಂಚನೆ ಮತ್ತು ಚಿತ್ರಾವತಿ

ನಾವೆಲ್ಲಾ ಪ್ರತೀಬಾರಿ ಊಟ ಮಾಡುವುದಕ್ಕಿಂತ ಮುನ್ನ ನೀರಿನಿಂದ ಪರಿಶಿಂಚನೆ ಮಾಡಿ ನಾಲ್ಕು ಅಗುಳು ಅನ್ನವನ್ನು ತೆಗೆದು ಕೊಂಡು ಎಲೆಯ ಬಲೆಗಡೆಯಲ್ಲಿ ಇಟ್ಟು ನಂತರ ಮತ್ತೊಮ್ಮೆ ಅನ್ನವನ್ನು ತೆಗೆದುಕೊಂಡು ಆರು ಬಾರಿ ಹಲ್ಲಿಗೆ ತಾಕದಂತೆ ತಿಂದು ತಾಯಿ ಅನ್ನಪೂರ್ಣೆಗೆ ನಮಿಸಿ ಊಟವನ್ನು ಮುಂದುವರೆಸುತ್ತೇವೆ. ಆದರೆ ಬಹುತೇಕರಿಗೆ ಭೋಜನವಿಧಿ ಮತ್ತದರ ಅರ್ಥವೇ ಗೊತ್ತಿಲ್ಲದೇ ಸುಮ್ಮನೇ ಯಾಂತ್ರೀಕೃತವಾಗಿ ಮಾಡುತ್ತಿರುತ್ತಾರೆ. ಆದ ಕಾರಣ ಚಿತ್ರಾವತಿ ಎಂದರೆ ಏನು? ಅದರ ಹಿಂದಿರುವ ವೈಜ್ಞಾನಿಕ ಕಾರಣವೇನು? ಚಿತ್ರಾವತಿ ಹೇಗೆ ಇಡಬೇಕು? ಮತ್ತು ಚಿತ್ರಾವತಿ ಇಡುವಾಗ ಯಾವ… Read More ಪರಿಶಿಂಚನೆ ಮತ್ತು ಚಿತ್ರಾವತಿ

ಲಭ್ಯ

ಹೆಣ್ಣು, ಹೊನ್ನು ಮತ್ತು ಮಣ್ಣು ಎಲ್ಲವೂ ಲಭ್ಯ ಇದ್ದಲ್ಲಿ ಮಾತ್ರವೇ ಎಲ್ಲರಿಗೂ ಸಿಗುತ್ತದೆ ಎನ್ನುವುದು ದೊಡ್ಡವರು ಹೇಳುವ ಮಾತು. ಕಷ್ಟ ಪಟ್ಟು, ಬಿಸಿಲಿನಲ್ಲಿ ಬವಳಿ ಬೆಂದು, ಅಕ್ಕ ಪಕ್ಕದವರೊಡನೆ ಕಾದಾಡಿ, ಹೋರಾಡಿ ಸರದಿಯಲ್ಲಿ ನಿಂತು ಖರೀದಿಸಿದ ಕಲ್ಲೆಣ್ಣೆ (ಸೀಮೇಎಣ್ಣೆ ) ಅಂತಿಮವಾಗಿ ನಮಗೆ ಸಿಗದೇ, ಲಭ್ಯ ಇದ್ದವರಿಗೇ ಸಿಕ್ಕಾಗ ಆಗುವ ಸಿಟ್ಟು ಸೆಡವು ನಿಜಕ್ಕೂ ಹೇಳಲಾಗದು. ಅಂತಹ ರೋಚಕ ಪ್ರಸಂಗವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ಎಂಭತ್ತರ ದಶಕ. ಆಗ ತಾನೇ ಹೈಸ್ಕೂಲ್ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದೆ. ಊರಿನಲ್ಲಿದ್ದ… Read More ಲಭ್ಯ

ಕೈ ಮುಗಿದು ನಮಸ್ಕರಿಸುವ ಅಗತ್ಯತೆ

ನಮ್ಮ ಧರ್ಮ ಶಾಸ್ತ್ರದ ಪ್ರಕಾರ ಪ್ರತಿಯೊಂದು ಜೀವರಾಶಿಗಳಲ್ಲಿಯೂ ದೇವರಿರುತ್ತಾನೆ ಹಾಗಾಗಿ ಪ್ರತಿಯೊಬ್ಬರಿಗೂ ನಮ್ಮ ಎರಡೂ ಕರಗಳನ್ನು  ಜೋಡಿಸಿ ಅದನ್ನು ನಮ್ಮ ಸೂರ್ಯಚಕ್ರಕ್ಕೆ  (ಎದೆಯ ಗೂಡು) ತಾಗಿಸಿಗೊಂಡು ಭಕ್ತಿಯಿಂದ ತಲೆಬಾಗಿಸಿ ವಂದಿಸುವುದು ಆಚರಣೆಯಲ್ಲಿದೆ.  ಅದಕ್ಕೆ ಪ್ರತಿಯಾಗಿ ಎದುರಿಗಿರುವ ವ್ಯಕ್ತಿಯೂ ಅದೇ ರೀತಿಯಲ್ಲಿಯೇ ಭಕ್ತಿ ಪೂರ್ವಕವಾಗಿ ವಂದಿಸುತ್ತಾರೆ. ಈ ಪ್ರಕ್ರಿಯೆಯಲ್ಲಿ ಇಬ್ಬರೂ ವ್ಯಕ್ತಿಗಳ  ನಡುವೆ ಕನಿಷ್ಠ ಪಕ್ಷ 3 ಅಡಿ ಅಂತರವನ್ನು ಕಾಯ್ದುಕೊಳ್ಳುತ್ತೇವೆ ಮತ್ತು ಎಂದಿಗೂ ಅವರನ್ನು ಮುಟ್ಟುವುದಿಲ್ಲ.  ಈ ಕ್ರಿಯೆಯನ್ನು ಆಚರ, ಮಡಿ ಅಥವಾ ಅನುಷ್ಠಾನ ಎಂದು ಕರೆಯಲಾಗುತ್ತದೆ. … Read More ಕೈ ಮುಗಿದು ನಮಸ್ಕರಿಸುವ ಅಗತ್ಯತೆ

ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಅಂದು 1910 ಮಾರ್ಚ್ 13, ಭಾನುವಾರ. ಆ ವ್ಯಕ್ತಿ ಪ್ಯಾರಿಸ್ ನಿಂದ ಲಂಡನ್ನಿನ ಕಡೆಗೆ ಹೊರಡುವ ರೈಲು ಹತ್ತಿದ್ದರು. ಲಂಡನ್ನಿನ ವಿಕ್ಟೋರಿಯಾ ನಿಲ್ದಾಣ ಪ್ರವೇಶಿಸುವ ಹೊತ್ತಿಗೆ ರಾತ್ರಿ 2 ಗಂಟೆ. ನಾಲ್ಕಾರು ಗುಪ್ತಚರರು ಧಡಧಡನೆ ಬಂದು ಅವರನ್ನು ಬಂಧಿಸಿದರು. ರಾಜದ್ರೋಹ, ಜಾಕ್ಸನ್ ಕೊಲೆಗೆ ನೆರವಾದ ಅಪರಾಧ, ಲಂಡನ್ನಿನಲ್ಲಿ ಶಸ್ತ್ರಾಸ್ತ್ರ ಶೇಖರಣೆ, ಭಾರತ ಹಾಗೂ ಲಂಡನ್ನಿನಲ್ಲಿ ಮಾಡಿದ ರಾಜದ್ರೋಹ ಭಾಷಣಗಳು, ಪರಾರಿ ಹೀಗೆ ಹತ್ತಾರು ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸಿದರು. ಜೂನ್ ಪ್ರಾರಂಭದಲ್ಲಿ ಕೋರ್ಟ್ ಆಫ್ ಕ್ರಿಮಿನಲ್ ಅಪೀಲ್… Read More ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ

ದೇಹ ಮತ್ತು ದುಡಿತ

ನನ್ನ ಶಾಲಾ ಸಹಪಾಠಿಯೊಬ್ಬ ನೆನ್ನೆಯ ದಿನ ಸಂಜೆ ಶಟಲ್ ಆಡುವ ವೇಳೆಯಲ್ಲಿ ಶಟಲ್ ಕೋರ್ಟಿನಲ್ಲಿಯೇ ಬಿದ್ದು ತೀವ್ರತರವಾದ ಹೃದಯಸ್ಥಂಭನದಿಂದಾಗಿ ಮೃತನಾದ ಎಂದು ಇಂದು ಬೆಳಿಗ್ಗೆ ಗೆಳೆಯನೊಬ್ಬ ಫೋಟೋದೊಂದಿಗೆ ಕಳುಹಿದ್ದ ವ್ಯಾಟ್ಯಾಪ್ ಸಂದೇಶವೊಂದನ್ನು ನೋಡಿ ಮನಸ್ಸಿಗೆ ಬಹಳ ದುಃಖವುಂಟಾಯಿತು. ಪಾಶ್ವಾತ್ಯ ಬದುಕಿಗೆ ಒಗ್ಗಿಹೋಗಿರುವ ಇಂದಿನ ಯುವ ಜನತೆ ವಾರಪೂರ್ತಿ ಹೊತ್ತಲ್ಲದ ಹೊತ್ತಿನಲ್ಲಿ ನಿಶಾಚರರಂತೆ ದುಡಿಯುತ್ತಾರೆ ಮತ್ತು ವಾರಾಂತ್ಯದಲ್ಲಿ ಆ ದುಡಿತದ ದಣಿವಾರಿಸಿಕೊಳ್ಳಲು ನಾನಾ ರೀತಿಯ ಹವ್ಯಾಸಗಳಿಗೆ ದಾಸರಾಗಿ ತಮ್ಮ ದೇಶ ಮತ್ತು ದೇಹದ ಬಗ್ಗೆ ಸ್ವಲ್ಪವೂ ಕಾಳಜಿ ವಹಿಸದ… Read More ದೇಹ ಮತ್ತು ದುಡಿತ

ಬಸ್ರೂರು ಸ್ವಾತಂತ್ರ್ಯ ದಿವಸ

ಇಂದಿನ ಯುವ ಜನತೆಗೆ ಬಸ್ರೂರು ಅನ್ನೋ ಊರು ಗೊತ್ತಾ ಅಂದ ಕ್ಷಣವೇ, ಹಾಂ!! ಗೊತ್ತು ಅದೇ ಸಿದ್ಧಾರ್ಥ್ ಬಸ್ರೂರ್ ಕಿಂಕಿ ಸ್ಕೀ ಮುಂಕಿಯೊಂದಿಗೆ ಇಂಡೀ ಸಂಗೀತ ಸಂಯೋಜಕ ಮತ್ತು ಹಿನ್ನೆಲೆ ಗಾಯಕ. ಪ್ರಸ್ತುತ ಮೆಟಲ್ ಬ್ಯಾಂಡ್ ಗಾಡೆಸ್ ಗಾಗ್ಡ್ ತಂಡಡಲ್ಲಿದ್ದಾರೆ ಬಾಲಿವುಡ್ ಚಲನಚಿತ್ರಗಳಲ್ಲಿ ಅನೇಕ ಹಾಡುಗಳನ್ನು ಹಾಡಿದ್ದಾರೆ. ಅದೇ ರೀತಿ ರವಿ ಬಸ್ರೂರು ಮತ್ತೊಬ್ಬ ಯಶಸ್ವೀ ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ನಿರ್ದೇಶಕರೂ ಕೂಡ. ಇಡೀ ಪ್ರಪಂಚವನ್ನೇ ಕನ್ನಡ ಚಿತ್ರರಂಗದತ್ತ ಗಮನಹರಿಸುವಂತೆ ಮಾಡಿದ ಬ್ಲಾಕ್ ಬಸ್ಟರ್ ಸಿನಿಮಾ… Read More ಬಸ್ರೂರು ಸ್ವಾತಂತ್ರ್ಯ ದಿವಸ