ಕನಕಗಿರಿ ಕನಕಾಚಲಪತಿ

ಕಾಲಿದ್ದವರು ಹಂಪೆ ಸುತ್ತಿ ನೋಡಬೇಕು ಮತ್ತು ಕಣ್ಣಿದ್ದವರು ಕನಕಗಿರಿ ನೋಡಬೇಕು ಎಂಬ ನಾನ್ನುಡಿ ಉತ್ತರ ಕರ್ನಾಟಕದಲ್ಲಿ ಬಹಳ ಪ್ರಚಲಿತವಾಗಿದೆ. ಅಂದಿನ ಕಾಲದ ವಿಜಯನಗರದ ಗತವೈಭವ ಇಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಂಚಿಹೋಗಿವೆ. ಹಂಪೆಯಿಂದ ಸುಮಾರು 30 ಕಿ.ಮಿ ದೂರದಲ್ಲಿರುವ ಕೊಪ್ಪಳ ಜಿಲ್ಲೆಯ ಪ್ರಮುಖ ತಾಲ್ಲೂಕ್ ಕೇಂದ್ರವೇ ಕನಕಗಿರಿ. ಇಲ್ಲಿನ ಕನಕಾಚಲಪತಿ ದೇವಸ್ಥಾನದಿಂದಾಗಿ ಇದು ಐತಿಹಾಸಿಕ ಸ್ಥಳವಾಗಿದೆ. ಈ ಶ್ರೀಕ್ಷೇತ್ರವನ್ನು ಎರಡನೆ ತಿರುಪತಿ ಎಂಬ ನಂಬಿಕೆ ಇರುವ ಕಾರಣ ಹಂಪೆಗೆ ಬರುವ ಬಹುತೇಕ ಪ್ರವಾಸಿಗರು ಇಲ್ಲಿಯೂ ಬೇಟಿ… Read More ಕನಕಗಿರಿ ಕನಕಾಚಲಪತಿ

ಅನ್ನದಾತ ಸುಖೀಭವ

ನಾವೆಲ್ಲಾ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗ ಶ್ರೀ ಸತ್ಯಾರ್ಥಿ ಚನ್ನಬಸಪ್ಪ ಹೊಸಮನಿ ಅವರ ಅನ್ನದಾತ ಪದ್ಯವನ್ನು ಓದಿಯೇ ಇರುತ್ತೇವೆ. ನಮ್ಮೆಲ್ಲರ ಅನ್ನದಾತರಾದ ರೈತರನ್ನು ಇದಕ್ಕಿಂತಲೂ ಉತ್ತಮವಾಗಿ ವರ್ಣಿಸಲು ಸಾಧ್ಯವೇ ಇಲ್ಲವೇನೋ ಎನ್ನುವಷ್ಟರ ಮಟ್ಟಿಗೆ ಮನಮುಟ್ಟುವಂತಿದೆ ಈ ಪದ್ಯ. ಇವನೆ ನೋಡು ಅನ್ನದಾತ ಹೊಲದಿ ದುಡಿದೇ ದುಡಿವನುನಾಡ ಜನರು ಬದುಕಲೆಂದು ದವಸ ಧಾನ್ಯ ಬೆಳೆವನು ಮಳೆಯ ಗುಡುಗು ಚಳಿಯ ನಡುಗು ಬಿಸಿಲ ಬೇಗೆ ಸಹಿಸುತಬೆವರು ಸುರಿಸಿ ಕಷ್ಟ ಸಹಿಸಿ ಒಂದೇ ಸವನೆ ದುಡಿಯುತ ಗಟ್ಟಿ ದೇಹ ದೊಡ್ಡ ಮನಸು ದೇವನಿಂದ… Read More ಅನ್ನದಾತ ಸುಖೀಭವ

ಎಲ್.ಎಸ್.ಶೇಷಗಿರಿರಾವ್

ಆಗ ಎಪ್ಪತ್ತರ ದಶಕ. ಆಗ ತಾನೆ ಓದಲು ಬರೆಯಲು ಕಲಿತ ಸಮಯ. ಅಮ್ಮಾ ಮೊದಲು ಪ್ರಜಾವಾಣಿ ಪತ್ರಿಕೆಯ ದಪ್ಪಕ್ಷರದ ಹೆಡ್ ಲೈನ್ ಓದುವ ಅಭ್ಯಾಸ ಮಾಡಿಸಿದರು. ಸ್ವಲ್ಪ ಅಕ್ಷರಗಳನ್ನು ಜೋಡಿಸಿ ಓದುವುದನ್ನು ಕರಗತ ಮಾಡಿಕೊಳ್ಳುತ್ತಿದ್ದಂತೆಯೇ, ತಂದೆಯವರು ಕೈಗಿತ್ತ ಪುಸ್ತಕ ಭಂಡಾರವೇ ಭಾರತ ಭಾರತಿ ಪುಸ್ತಕ ಸಂಪದ. ಚಿಕ್ಕ ಚಿಕ್ಕದಾದ ಬಹಳ ಸರಳ ಭಾಷೆಯಲ್ಲಿದ್ದರೂ ಅಷ್ತೇ ಮಹತ್ವಪೂರ್ಣ ವಿಷಯಗಳನ್ನೊಳಗೊಂಡ ದೇಶಭಕ್ತರ ಕಥಾ ಪುಸ್ತಕಗಳು. ಆರಂಭದಲ್ಲಿ ವಾರಕ್ಕೊಂದು ಪುಸ್ತಕವನ್ನು ಓದಿ ಅದನ್ನು ತಂದೆಯವರ ಸಮ್ಮುಖದಲ್ಲಿ ಓದಿದ ಪುಸ್ತಕದ ಬಗ್ಗೆ ವಿಚಾರ… Read More ಎಲ್.ಎಸ್.ಶೇಷಗಿರಿರಾವ್

ಹುಚ್ಚುಕೋಡಿ ಮನಸು ಹದಿನಾರರ ವಯಸು

ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ ! ಅಂದರೆ ಎಲ್ಲಿ ಮಹಿಳೆಯರನ್ನು ಆದರದಿಂದ ಕಾಣಲಾಗುತ್ತದೆಯೋ ಅಲ್ಲಿ ದೇವಾನುದೇವತೆಗಳಿರುತ್ತಾರೆ. ಎಲ್ಲಿ ಮಹಿಳೆಯರನ್ನು ಅಪಮಾನದಿಂದ ಕಾಣಲಾಗುತ್ತದೆಯೋ ಅಲ್ಲಿ ಧರ್ಮಕರ್ಮಗಳು ನಿಷ್ಫಲವಾಗುತ್ತವೆ ಎಂದು ಹೇಳುವ ಮೂಲಕ ಜಗತ್ತಿನ ಬೇರಾವ ಸಂಸ್ಕೃತಿಯೂ ನೀಡದಂತಹ ಪೂಜ್ಯಸ್ಥಾನವನ್ನು ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ನೀಡುತ್ತೇವೆಯಾದರೂ ನಮ್ಮಲ್ಲಿ ಅಂದಿನಿಂದಲೂ ಇಂದಿನವರೆಗೂ ಪುರುಷಪ್ರಧಾನವಾದ ಸಮಾಜವೇ. ವಂಶೋದ್ಧಾರಕ್ಕೆ ಗಂಡು ಮಕ್ಕಳೇ ಬೇಕು ಎಂದು ಬಯಸಿ, ಕಂಡ ಕಂಡ ದೇವರುಗಳಲ್ಲಿ ಸೆರಗೊಡ್ಡಿ, ಹರಕೆಯೊಡ್ಡಿ ಗಂಡು ಮಕ್ಕಳು ಆಗುವವರೆಗೂ ಸಂತಾನವನ್ನು ಬೆಳೆಸುತ್ತಲೇ ಹೋಗುವ… Read More ಹುಚ್ಚುಕೋಡಿ ಮನಸು ಹದಿನಾರರ ವಯಸು

ವಿಜಯ ದಿವಸ್ ಮತ್ತು ಪ್ರಹಾರ ದಿವಸ್

ಡಿಸೆಂಬರ್ 16, 1971 ನಿಜಕ್ಕೂ ನಮ್ಮ ಭಾರತದ ಮೂರೂ ಸೇನೆಗಳಿಗೆ ಅತ್ಯಂತ ಸ್ಮರಣಿಯ ದಿನ. ಇಡೀ ಪ್ರಪಂಚವೇ ನಮ್ಮ ವಿರುದ್ಧವಾಗಿದ್ದರೂ, ಸ್ವತಃ ಅಮೇರಿಕಾ ಹಿಂಬಾಗಿಲಿನಿಂದ ಪಾಕೀಸ್ಥಾನಕ್ಕೆ ಸಹಾಯ ಮಾಡುತ್ತಿದ್ದರೂ, ಯಾವುದೇ ರೀತಿಯ ಆಧುನಿಕ ಶಸ್ತ್ರಾಸ್ತ್ರಗಳು ನಮ್ಮ ಬಳಿ ಇಲ್ಲದಿದ್ದರೂ ನಮ್ಮ ಭೂ,ವಾಯು ಮತ್ತು ಜಲ ಸೇನೆಗಳು ಜಂಟಿಯಾಗಿ ಛಲದಿಂದ ಪಾಕೀಸ್ಥಾನದ ವಿರುದ್ಧ ಜನರಲ್ ಮಾಣಿಕ್ ಷಾ ಅವರ ನೇತೃತ್ವದಲ್ಲಿ ಹೋರಾಡಿ ಸುಮಾರು 93000ಕ್ಕೂಅಧಿಕ ಪಾಕೀ ಸೈನಿಕರನ್ನು ಸೆರೆಗೈದು ಇಂದಿನ ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ಅಂದಿನ ಪೂರ್ವ ಪಾಕೀಸ್ಥಾನದ ಜೆನರಲ್… Read More ವಿಜಯ ದಿವಸ್ ಮತ್ತು ಪ್ರಹಾರ ದಿವಸ್

ಕಲ್ಲಿನ ಮರಗಿ

ಮನುಷ್ಯ ಸಂಘಜೀವಿ. ಹಾಗಾಗಿ ತನ್ನೊಂದಿಗೆ ಜೀವಿಸಲು ಸಂಗಾತಿಯನ್ನು ಹುಡುಕಿಕೊಂಡ ನಂತರ ಹೊಟ್ಟೆ ಪಾಡಿಗೆ ಗೆಡ್ಡೆ ಗೆಣಸುಗಳನ್ನು ಮತ್ತು ಪ್ರಾಣಿಗಳನ್ನು ಬೇಟೆಯಾಡಿ ತಿಂದು ಜೀವಿಸತೊಡಗಿದ. ಯಾವಾಗ ಕಲ್ಲಿಗೆ ಕಲ್ಲನ್ನು ಉಜ್ಜಿ ಘರ್ಷಣೆಯಿಂದ ಬೆಂಕಿ ಹೊತ್ತಿಸುವುದನ್ನು ಕಲಿತುಕೊಂಡನೋ ಅಂದಿನಿಂದ ತನ್ನ ಗೆಡ್ಡೆ ಗೆಣಸು ಗಳನ್ನು ಮತ್ತು ಮಾಂಸಗಳನ್ನು ಸುಟ್ಟು ತಿನ್ನುವುದನ್ನು ಕಲಿತ. ತನ್ನ ಆತ್ಮರಕ್ಷಣೆಗಾಗಿ ಮತ್ತು ತಮ್ಮ ಆಹಾರದ ಬೇಟೆಗಾಗಿ ಕಲ್ಲಿನ ಆಯುಧಗಳನ್ನು ತಯಾರಿಸಿಕೊಳ್ಳುವುದನ್ನು ಕಲಿತುಕೊಂಡ. ಆಹಾರವನ್ನು ಅರೆಯಲು, ಕುಟ್ಟಲು, ಪುಡಿ ಮಾಡಲು ರುಬ್ಬುವ ಗುಂಡು, ಒರಳು ಮತ್ತು ಬೀಸೋಕಲ್ಲುಗಳನ್ನು… Read More ಕಲ್ಲಿನ ಮರಗಿ

ನೆರೆ ಮನೆಯ ಸಾರಿನ ರುಚಿಯೇ ಚೆನ್ನ

ಪ್ರತಿದಿನ ಮಧ್ಯಾಹ್ನ ನಮ್ಮ ಕಛೇರಿಯ ಊಟದ ಸಮಯದಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡುವುದನ್ನು ಬಹಳ ವರ್ಷಗಳಿಂದ ರೂಢಿ ಮಾಡಿಕೊಂಡಿದ್ದೇವೆ. ನಮ್ಮಲ್ಲಿ ಒಬ್ಬರು ಪ್ರತಿದಿನವೂ ಅವರ ಮನೆಯಾಕಿ ಶ್ರಧ್ದೆಯಿಂದ ಪ್ರೀತಿಯಿಂದ ಅಡುಗೆ ಮಾಡಿ ಊಟದ ಡಬ್ಬಿಯನ್ನು ಕಟ್ಟಿ ಕಳುಹಿಸಿದ್ದರೂ ಅದೇಕೋ ಏನೋ ಬಹಳಷ್ಟು ಬಾರಿ ಯಾರು ಹೋಟೆಲ್ನಿಂದ ಊಟ ತರಿಸಿರುತ್ತಾರೋ ಅವರಿಗೆ ತಮ್ಮ ಮನೆಯ ಊಟವನ್ನು ಕೊಟ್ಟು ತಾವು ಹೋಟೆಲ್ ಊಟ ಮಾಡುತ್ತಾರೆ. ಕುತೂಹಲದಿಂದ ಹಾಗೇಕೆ ಮಾಡುತ್ತೀರೆಂದು ಕೇಳಿದರೆ ಇದು ಒಂದು ಊಟವೇ ಒಳ್ಳೇ ದನದ ಆಹಾರ… Read More ನೆರೆ ಮನೆಯ ಸಾರಿನ ರುಚಿಯೇ ಚೆನ್ನ

ಈ ಶತಮಾನದ ಮಕ್ಕಳನ್ನು ರೂಪಿಸುವಲ್ಲಿ ನಾವು ಎಡವುತ್ತಿದ್ದೇವೆಯೇ?

ಕಳೆದ ವಾರಾಂತ್ಯದಲ್ಲಿ ಮನೆಗೆ ಅವಶ್ಯಕವಿದ್ದ ತರಕಾರಿಗಳನ್ನು ಕೊಳ್ಳಲು ರಸ್ತೆಯ ಬದಿಯಲ್ಲಿದ್ದ ವ್ಯಾಪಾರಿಗಳ ಬಳಿ ಹೋಗಿದ್ದೆ. ನಮಗೆ ಬೇಕಾದ ತರಕಾರಿಗಳನ್ನೆಲ್ಲಾ ಕೊಂಡು ದುಡ್ಡು ಎಷ್ಟಾಯಿತು ಎಂದೆ? ಅಲ್ಲಿ ವ್ಯಾಪಾರ ಮಾಡುತ್ತಿದ್ದ ಸುಮಾರು 18-20ರ ವಯಸ್ಸಿನ ತರುಣ ತರಕಾರಿ ಕೊಡುವಾಗ ಇದ್ದ ಚುರುಕು ಲೆಕ್ಕ ಹಾಕುವಾಗ ತಡಕಾಡತೊಡಗಿದ್ದ. ಕಡೆಗೆ ಕ್ಯಾಲುಕ್ಯುಲೇಟರ್ ಸಹಾಯದಿಂದ ಲೆಖ್ಖಾ ಹಾಕಿ ಅಂಕಲ್ 235 ಆಯ್ತು ಎಂದ. ಸರಿ ಎಂದು 500 ರೂಪಾಯಿ ಕೊಟ್ಟರೆ ಪುನಃ ಕ್ಯಾಲುಕ್ಯುಲೇಟರ್ ತೆಗೆದುಕೊಂಡು 500-235 ಲೆಖ್ಖ ಹಾಕಿ ಚಿಲ್ಲರೆ 265 ರೂಗಳನ್ನು… Read More ಈ ಶತಮಾನದ ಮಕ್ಕಳನ್ನು ರೂಪಿಸುವಲ್ಲಿ ನಾವು ಎಡವುತ್ತಿದ್ದೇವೆಯೇ?

ಅತ್ಯಾಚಾರಕ್ಕೆ ಧರ್ಮವಿಲ್ಲ.

  ಮೊನ್ನೆ ಹೈದರಾಬಾದಿನ ಬಳಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯ ಮೇಲೆ ನಡೆದೆ ಅಮಾವೀಯವಾದ ಅತ್ಯಾಚಾರ ಮತ್ತು ಬರ್ಬರವಾದ ಹತ್ಯೆ ನಿಜಕ್ಕೂ ದೇಶಾದ್ಯಂತ ತಲ್ಲಣ ಎಬ್ಬಿಸಿದೆ. ಗಾಂಧೀಜೀಯವರು ಕಂಡ ರಾಮ ರಾಜ್ಯ ಕನಸಿನಲ್ಲಿ ನಿರ್ಜನ ಪ್ರದೇಶದಲ್ಲಿ ರಾತ್ರಿ 12ಗಂಟೆಯ ಹೊತ್ತಿಗೂ ಒಬ್ಬ ಹೆಂಗಸು ಹೋಗುವಂತಾದಾಗ ಮಾತ್ರವೇ ನಿಜವಾದ ಸ್ವಾತಂತ್ಯ್ರ ಎಂದಿದ್ದಾರೆ. ರಾತ್ರಿ 12ಗಂಟೆ ಬಿಡಿ, ಮಧ್ಯಾಹ್ನ 12ಗಂಟೆಯ ಹೊತ್ತಿಗೆ ಹೊರಗೆ ಹೋದ ಹೆಣ್ಣುಮಗಳು ಸುರಕ್ಷಿತವಾಗಿ ಹಿಂದುರಿಗಿ ಬರುವುದೂ ಈಗ ದುಸ್ತರವಾಗಿದೆ. ನಮ್ಮ ಇಂದಿನ ಶಿಕ್ಷಣ ಪದ್ದತಿ, ಅತಿಯಾದ ಪಾಶ್ವಾತ್ಯ… Read More ಅತ್ಯಾಚಾರಕ್ಕೆ ಧರ್ಮವಿಲ್ಲ.