ಪಕ್ಷನಿಷ್ಠೆ ಮತ್ತು ಸಿದ್ಧಾಂತ

ಪ್ರಜೆ ಮತ್ತು ಪಕ್ಷಗಳಿಂದ ತಾವು ಎನ್ನುವುದನ್ನು ಮರೆತು ತಮ್ಮಿಂದಲೇ ಪಕ್ಷ ಮತ್ತು ಪ್ರಜೆ ಎಂದು ಭಾವಿಸುವವರು ಖಂಡಿತವಾಗಿಯೂ ನಂಬಿಕೆಗೆ ಅರ್ಹರಲ್ಲ. ವ್ಯಕ್ತಿ ಮತ್ತು ಅಧಿಕಾರ ಎಂದಿಗೂ ಶಾಶ್ವತವಲ್ಲಾ. ಹಾಗಾಗಿ ಅಧಿಕಾರದಲ್ಲಿ ಕಡೆಯವರೆಗೂ ಇದ್ದು ಎಲ್ಲಾ ರೀತಿಯ ಅಧಿಕಾರವನ್ನೂ ಸವಿದು ನಂತರ ಮತ್ತೆ ಅಧಿಕಾರಕ್ಕೆ ಆರು ಕೊಟ್ಟರೆ ಅತ್ತೇ ಕಡೇ, ಮೂರು ಕೊಟ್ಟರೆ ಸೊಸೇ ಕಡೇ ಎಂಡು ಮತ್ತೊಂದು ಪಕ್ಷಕ್ಕೆ ಹಾರುವ ಪಕ್ಷಾಂತರಿಗಳನ್ನು ನಿಸ್ಸಂಕೋಚವಾಗಿ ಸೋಲಿಸುವ ಮೂಲಕ ಅವರ ತಪ್ಪನ್ನು ಅವರಿಗೆ ತಿಳಿಸುವ ಜವಾಬ್ಧಾರಿ ನಮ್ಮ ನಿಮ್ಮಿಲ್ಲರ ಮೇಲೆಯೇ ಇದೆ ಅಲ್ವೇ?… Read More ಪಕ್ಷನಿಷ್ಠೆ ಮತ್ತು ಸಿದ್ಧಾಂತ

ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ನಂದಿನಿ ಮತ್ತು ಅಮುಲ್ ವಾಸ್ತವ ಚಿತ್ರಣ

ಕಳೆದ ಡಿಸೆಂಬರ್ ನಲ್ಲಿ ಮನ್ ಮೂಲ್ ಕಾರ್ಯಕ್ರಮಕ್ಕಾಗಿ ಮಂಡ್ಯಾಕ್ಕೆ ಆಗಮಿಸಿದ್ದ ದೇಶದ ಗೃಹಮಂತ್ರಿಗಳಾದ ಅಮಿತ್ ಶಾ, 1970ರಲ್ಲಿ ಕೇರಳ ಮೂಲದ ವರ್ಗೀಸ್_ಕುರಿಯನ್ ಗುಜರಾತಿನಲ್ಲಿ ಯಾವುದೇ ಜಾತಿ ಮತ ಪಂಥಗಳ ಯಾವದೇ ರಾಗ ದ್ವೇಷವಿರದೇ ಅಮೂಲ್ ಎಂಬ ಸಹಕಾರಿ ಸಂಘದ ಮೂಲಕ ಗುಜರಾತ್ ನಲ್ಲಿ ಕಳೆದ ಐದು ದಶಕಗಳಿಂದಲೂ ಈ ದೇಶದಲ್ಲಿ ಕ್ಷೀತ್ರಕ್ರಾಂತಿಯನ್ನುಂಟು ಮಾಡಿದ್ದನ್ನು ಹೊಗಳುತ್ತಾ, ಅದೇ ರೀತಿ ದೇಶದಲ್ಲಿ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿರುವ KMF ನಂದಿನಿ ಎರಡೂ ಸಹಾ ಪರಸ್ಪರ ಸಹಯೋಗದೊಂದಿಗೆ ಹೋದಲ್ಲಿ ಈ ದೇಶದಲ್ಲಿ… Read More ನಂದಿನಿ ಮತ್ತು ಅಮುಲ್ ವಾಸ್ತವ ಚಿತ್ರಣ

ಗುಡ್ ಫ್ರೈಡೆ

ದೇವನೊಬ್ಬ ನಾಮ ಹಲವು ಎನ್ನುವಂತೆ, ನಮ್ಮ ಹಬ್ಬಗಳ ಆಚರಣೆಯ ಹಿಂದಿನ ಮಹತ್ವಗಳು ಮತ್ತು ಕಾರಣಗಳು ಒಂದೇ ಆದರೂ ಅದರ ಆಚರಣೆಗಳು ಮಾತ್ರಾ ವಿಭಿನ್ನ. ಬಗೆ ಬಗೆಯಾದರೂ ದೇಹದ ಬಣ್ಣ ಎಲ್ಲರ ನಗೆಯೂ ಒಂದೇ ಅಣ್ಣ ಎನ್ನುವಂತೆ ನಾವೆಲ್ಲರೂ ನಗು ನಗುತ ಭಾವೈಕತ್ಯೆಯಿಂದ ಬಾಳಬೇಕು. ಬದುಕು ಜೀವನೋತ್ಸಾಹದ ಹೂರಣವಾಗಬೇಕೇ ಹೊರತು ನಿರಾಶೆಯ ಕಾರ್ಮೋಡವಾಗಬಾರದು ಅಲ್ವೇ?… Read More ಗುಡ್ ಫ್ರೈಡೆ

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಯಸ್ಸು 80+ ಎಲ್ಲಾ ರೀತಿಯ ರಾಜಕೀಯ ಅಧಿಕಾರವನ್ನೂ ಸವಿದ ನಂತರ, ಈಗ ಸ್ವತಂತ್ರವಾಗಿ ನಡೆಯಲಾಗದೇ, ಸ್ಪಷ್ಟವಾಗಿ ಮಾತನಾಡಲಾಗದೇ, ಡೈಪರ್ ಹಾಕಿಕೊಂಡು ವೀಲ್ ಛೇರ್ ಮೇಲೆ ಕುಳಿತು ಕೊಳ್ಳುವವರೆಲ್ಲಾ ಇನ್ನೂ ಅಧಿಕಾರದ ಆಸೆಯಿಂದಾಗಿ ಸಕ್ರೀಯ ಚುನಾವಣಾ ರಾಜಕಾರಣ ಮಾಡುತ್ತಾ, ತಮ್ಮ ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರನ್ನು ಅಧಿಕಾರಕ್ಕೆ ತರುವುದಕ್ಕೇ ಒದ್ದಾಡುತ್ತಿರುವವರಿಗೆ, ಐದು ಬಾರಿ ಜನಪ್ರಿಯ ಶಾಸಕರಾಗಿಯೂ ಮಂತ್ರಿಗಿರಿಗೆ ಲಾಭಿಯನ್ನು ನಡೆಸದೇ ತಮ್ಮ 72ನೇ ವಯಸ್ಸಿನಲ್ಲಿಯೇ ಸ್ವಯಂಪ್ರೇರಿತರಾಗಿ ಸಕ್ರೀಯ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿರುವ ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿರ್ಧಾರ ಮೇಲ್ಪಂಕ್ತಿ ಆಗಬೇಕು ಅಲ್ವೇ?… Read More ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ