ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ವೀರ ಕುನ್ವರ್ ಸಿಂಗ್

ಬ್ರಿಟೀಷರ ಸೇನೆಯಲ್ಲಿ ಸಾಮಾನ್ಯ ಸೈನಿಕನಾಗಿದ್ದ ಮಂಗಲ್ ಪಾಂಡೆ 1857ರಲ್ಲಿ ಬ್ರಿಟೀಷ್ ಸೈನ್ಯದ ವಿರುದ್ಧವೇ ತಿರುಗಿ ಬಿದ್ದು ನಡೆಸಿದ ಹೋರಾಟವನ್ನು ಬ್ರಿಟೀಷರು ಸಿಪಾಯಿದಂಗೆ ಎಂದು ದಾಖಲಿಸಿದರೆ, ಭಾರತದ ನಿಜವಾದ ಇತಿಹಾಸಕಾರರು ಅದನ್ನು ಪ್ರಥಮ ಸ್ವಾತ್ರಂತ್ರ್ಯ ಸಂಗ್ರಾಮ ಎಂದೇ ಹೆಮ್ಮೆಯಿಂದ ಕರೆಯುತ್ತಾರೆ. ಮಂಗಲ್ ಪಾಂಡೆ ಹತ್ತಿಸಿದ ಸ್ವಾತ್ರಂತ್ರ್ಯದ ಕಿಚ್ಚನ್ನು ಬಿಹಾರ್ ಪ್ರಾಂತ್ಯದಲ್ಲಿ ಪ್ರಜ್ವಲಿಸುವಂತೆ ಮಾಡಿದ ಕೀರ್ತಿ ಪ್ರಸ್ತುತ ಭಾರತದ ಬಿಹಾರದ ಭೋಜ್‌ಪುರ ಜಿಲ್ಲೆಯ ಭಾಗವಾಗಿರುವ ಜಗದೀಸ್‌ಪುರದ ಪರ್ಮಾರ್ ರಜಪೂತರ ಉಜ್ಜೈನಿಯಾ ಕುಲದ ಕುಟುಂಬಕ್ಕೆ ಸೇರಿದ್ದ ವೀರ್ ಕುನ್ವರ್ ಸಿಂಗ್ ಅವರಿಗೆ… Read More ವೀರ ಕುನ್ವರ್ ಸಿಂಗ್

ಕಶ್ಮೀರ್ ಫೈಲ್ಸ್ ಅನುಭವ

ಮಾರ್ಚ್ ೧೧ ಭಾರತೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ ಎಂದರೂ ತಪ್ಪಾಗದು. ಏಕೆಂದರೆ ಸಾವಿರಾರು ವರ್ಷಗಳ ಇತಿಹಾಸವನ್ನು ಕರಾರುವಾಕ್ಕಾಗಿ ತಿಳಿದಿರುವ ನಮಗೆ ಕೇವಲ 32 ವರ್ಷಗಳ ಹಿಂದೆ ನಡೆದಿದ್ದ ಕಾಶ್ಮೀರೀ ಪಂಡಿತರ ನರಮೇಧದ ಕುರಿತಾಗಿ ನಿಜವಾದ ಇತಿಹಾಸವನ್ನೇ ತಿಳಿಯದಿದ್ದ ನಮಗೆ ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕರಾದ ವಿವೇಕ್ ಅಗ್ನಿಹೋತ್ರಿಯವರ ಕಾಶ್ಮೀರಿ ಫೈಲ್ಸ್ ಚಲನಚಿತ್ರ ಬಿಡುಗಡೆಯಾದ ದಿನ. ಈ ಚಿತ್ರದ ಮೂಲಕ ಆ ನಿರ್ದೇಶಕ ಕಾಶ್ಮೀರದ ಕುರಿತಾದ ನೈಜ ಇತಿಹಾಸನ್ನು ಜಗತ್ತಿಗೇ ತಿಳಿಸಿದ್ದಕ್ಕಾಗಿ ಮೊದಲು ಅಭಿನಂದನೆಗಳನ್ನು ಸಲ್ಲಿಸೋಣ. ಚಿತ್ರ… Read More ಕಶ್ಮೀರ್ ಫೈಲ್ಸ್ ಅನುಭವ

ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ

ಉಡುಪಿ ಉಪಹಾರ ಗೃಹ

ಉಡುಪಿ ಎಂದೊಂಡನೆಯೇ ಆಸ್ಥಿಕರಿಗೆ ಉಡುಪಿಯ ಶ್ರೀ ಕೃಷ್ಣ, ಅಷ್ಟ ಮಠಗಳು, ಸಂಸ್ಕೃತ-ವೇದ ಪಾಠ ಶಾಲೆಗಳು,  ರಥದ ಬೀದಿ, ಇತ್ತೀಚೆಗೆ ಅಗಲಿದ ಪೇಜಾವರ ಶ್ರೀಗಳು ನೆನಪಿಗೆ ಬಂದರೆ, ವಾಣಿಜ್ಯೋದ್ಯಮಿಗಳಿಗೆ  ಅವಿಭಜಿತ ದಕ್ಷಿಣ ಕರ್ನಾಟಕದ ಭಾಗವಾಗಿ ಉಡುಪಿಯಿಂದಲೇ ಆರಂಭವಾಗಿ ಇಂದು ಹಲವಾರು ರಾಷ್ಟ್ರೀಕೃತ ಬ್ಯಾಂಕಿನೊಂದಿಗೆ ವಿಲೀನವಾಗಿ ಹೋದ, ಕೆನರ ಬ್ಯಾಂಕ್, ವಿಜಯ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕುಗಳು ನೆನಪಾಗುತ್ತದೆ.  ಇನ್ನು  ತಿಂಡಿ ಪೋತರಿಗೆ ಉಡುಪಿ ಎಂದೊಡನೆ ನೆನಪಿಗೆ ಬರುವುದೇ, ಉಡುಪಿ ಶ್ರೀಕೃಷ್ಣ ಮಠದ ಭೋಜನಶಾಲೆ ಮತ್ತು  ರಾಜ್ಯಾದ್ಯಂತ, ದೇಶಾದ್ಯಂತ… Read More ಉಡುಪಿ ಉಪಹಾರ ಗೃಹ

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್