ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ಕಳೆದ ಒಂದು ವಾರದಲ್ಲಿ ಭಾರತೀಯ ಮೂಲದ ಇಬ್ಬರು ಹೆಸರುಗಳು ಎಲ್ಲೆಡೆಯಲ್ಲೂ ಪ್ರಸಿದ್ದಿ ಪಡೆದಿತ್ತು. ಮೊದಲನೆಯದ್ದು ಭಾರತೀಯ ಮೂಲದ ಅಮೆರಿಕನ್ ಪರಾಗ್ ಅಗರವಾಲ್, ಟ್ವಿಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾದರೆ, ಎರಡನೆಯದ್ದು ಮುಂಬೈನಲ್ಲಿ ಹುಟ್ಟಿ ಬಾಲ್ಯದಲ್ಲಿಯೇ ಕುಟುಂಬದೊಂದಿಗೆ ನ್ಯೂಜಿಲೆಂಡಿಗೆ ಹೋಗಿ ಅಲ್ಲಿಯ ಕ್ರಿಕೆಟ್ ತಂಡದ ಭಾಗವಾಗಿ ಭಾರತದ ವಿರುದ್ದ ಮುಂಬೈ ಕ್ರಿಕೆಟ್ ಟೆಸ್ಟಿನ ಮೊದಲನೇ ಇನ್ನಿಂಗ್ಸಿನಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವ ದಾಖಲೆಯನ್ನು ಸರಿಗಟ್ಟಿದ ಅಜಾಜ್ ಪಟೇಲ್ ಬಗ್ಗೆ. ಪ್ರತೀ ಬಾರಿಯೂ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಾಗತಿಕ… Read More ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ನಂಜನಗೂಡಿನ ಕಪಿಲಾ ಆರತಿ

ಉತ್ತರ ಭಾರತದ ಋಷಿಕೇಶ್, ಹರಿದ್ವಾರ ಮತ್ತು ವಾರಾಣಸಿಯಲ್ಲಿ ಗಂಗಾ ನದಿಗೆ ಪ್ರತಿ ದಿನ ಸಂಜೆ ಗಂಗಾ ಆರತಿ ಮಾಡಲಾಗುತ್ತದೆ. ಈ ಆರತಿಯನ್ನು ನೋಡಲೆಂದೇ ದೇಶ ವಿದೇಶಗಳಿಂದ ಸಹಸ್ರಾರು ಭಕ್ತಾದಿಗಳು ಪ್ರತಿ ದಿನವೂ ಅಲ್ಲಿ ಸೇರಿ ಬಹಳ ವೈವಿಧ್ಯಮಯವಾಗಿ ಅದ್ದೂರಿಯಿಂದ ಮಾಡುವ ಗಂಗಾ ಆರತಿಯನ್ನು ನೋಡಿ ಹೃನ್ಮನಗಳನ್ನು ತಣಿಸಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದ ಜೀವನದಿಯಾದ ಕಾವೇರಿ ಮಾತೆಗೂ ಮೊದಲ ಬಾರಿಗೆ ಶ್ರೀರಂಗಪಟ್ಟಣದ ಸ್ನಾನ ಘಟ್ಟದಲ್ಲಿ ಆರತಿಯನ್ನು ಯುವಾಬ್ರಿಗೇಡ್ ಸಾರಥ್ಯದಲ್ಲಿ ಅಕ್ಟೋಬರ್ 17 ಭಾನುವಾರ ಸಂಜೆ 7 ಗಂಟೆಗೆ… Read More ನಂಜನಗೂಡಿನ ಕಪಿಲಾ ಆರತಿ

ಧರ್ಮಸ್ಥಳದ ಲಕ್ಷದೀಪೋತ್ಸವ

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ ಕೇವಲ ನದಿಗಳಿಗಷ್ಟೇ ಅಲ್ಲದೇ, ದೇವಾಲಯಗಳಿಗೂ ಪ್ರಸಿದ್ಧವಾಗಿದೆ. ಅಲ್ಲಿ ಹರಿಯುವ ಪ್ರತೀ ನದಿ ಹಳ್ಳ ಕೊಳ್ಳಗಳ ತಟದಲ್ಲಿ ಪ್ರತಿ ಹತ್ತಿಪ್ಪತ್ತು ಕಿಮೀ ದೂರದಲ್ಲಿ ಒಂದೊಂದು ಒಂದೊಂದು ದೇವಸ್ಥಾನಗಳಿದ್ದು, ಅವುಗಳಲ್ಲಿ ಜೀವನದಿ ನೇತ್ರಾವತಿಯ ತಟದಲ್ಲಿರುವ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸಕಲ ಹಿಂದೂಗಳ ಧಾರ್ಮಿಕ ಕ್ಷೇತ್ರವೇ ಪುರಾಣ ಪ್ರಸಿದ್ಧ ಧರ್ಮಸ್ಥಳವಾಗಿದೆ. ಹೆಸರಿಗೆ ಅನ್ವರ್ಥದಂತೆ ಅದು ಶಾಂತಿ ಮತ್ತು ಧರ್ಮದ ಬೀಡಾಗಿದ್ದು ಧರ್ಮಸ್ಥಳದ ಮಂಜುನಾಥನ ಸ್ವಾಮಿಗೆ ಇಡೀ ದೇಶಾದ್ಯಂತ ಭಕ್ತಾದಿಗಳು ಇದ್ದು ಬಹಳ ನಂಬಿಕೆಗೆ ಹೆಸರುವಾಸಿಯಾಗಿದೆ.… Read More ಧರ್ಮಸ್ಥಳದ ಲಕ್ಷದೀಪೋತ್ಸವ

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಬಸವನಗುಡಿ ಕಡಲೇಕಾಯಿ ಪರಿಷೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಶ್ರಾವಣ ಮಾಸ ಮತ್ತು ಆಶ್ವಯುಜ ಮಾಸದ ಸಾಲು ಸಾಲು ಹಬ್ಬಗಳು ಮುಗಿದು ಇನ್ನೇನು ಮಾಗಿಯ ಚಳಿ ನಮ್ಮೆಲ್ಲರನ್ನು ಅಪ್ಪುವುದಕ್ಕೆ ಶುರುವಾಗುತ್ತಿದ್ದಂತೆಯೇ ಬರುವುದೇ ಕಾರ್ತೀಕ ಮಾಸ. ಶೈವಾರಾಧಕರಿಗೆ ಪ್ರತೀ ಕಾರ್ತೀಕ ಸೋಮವಾರವೂ ಅತ್ಯಂತ ಪುಣ್ಯಕರವಾದ ದಿನ. ಬಹುತೇಕರು ಕಾರ್ತೀಕ ಸೋಮವಾರ ಶ್ರಧ್ಥೆಯಿಂದ… Read More ಬಸವನಗುಡಿ ಕಡಲೇಕಾಯಿ ಪರಿಷೆ

ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ

ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಇವತ್ತಿನ ದಿನ ಕಾಲದಲ್ಲಿ ದುಡಿಯುವ ಸಮಯದಲ್ಲಿ ಸರಿಯಾಗಿ ಎರಡು ಹೊತ್ತಿನ ಊಟ ಕಣ್ತುಂಬ ನಿದ್ದೆಯನ್ನೂ ಮಾಡದೇ, ಹೊಟ್ಟೆ ಬಟ್ಟೆ ಕಟ್ಟಿ ಅಷ್ಟೋ ಇಷ್ಟೋ ಉಳಿಸಿದ್ದನ್ನು ಒಂದು ಸಣ್ಣ ಖಾಯಿಲೆಯಿಂದ ಹುಷಾರಾಗೋದಿಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯರನ್ನು ಬೈದು ಕೊಳ್ಳುತ್ತಲೇ, ಲಕ್ಷಾಂತರ ರೂಪಾಯಿ ಹಣ ಆಸ್ಪತ್ರೆಗೆ ಕಟ್ಟಿ ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ಇರುವಾಗ, ಮಣಿಪಾಲ್ ಅಂತಹ ಕಾಲೇಜಿನಲ್ಲಿ ಓದಿ ವೈದ್ಯಕೀಯ ಪದವಿಯನ್ನು ಪಡೆದು ದೇಶ ವಿದೇಶಗಳಲ್ಲಿ ಲಕ್ಷಾಂತರ ಹಣವನ್ನು ಸಂಪದಿಸಿ ನೆಮ್ಮದಿಯಾಗಿರುವ ಬದಲು ವೈದ್ಯೋ ನಾರಯಣೋ ಹರಿಃ ಎನ್ನುವುದನ್ನು ಅಕ್ಷರಶಃ… Read More ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್

ಸ್ನೇಕ್ ಶ್ಯಾಮ್

ಮನುಷ್ಯ ಬುದ್ದಿವಂತನಾಗುತ್ತಾ ಹೋದಂತೆಲ್ಲಾ ನಾಗರಿಕತೆಯು ಬೆಳೆಯುತ್ತಾ ಹೋಗಿ ಅರಣ್ಯಗಳೆಲ್ಲಾ ನಾಶವಾಗಿ ಒಂದೊಂದೇ ಹಳ್ಳಿ ಮತ್ತು ಪಟ್ಟಣಗಳಾಗಿ ಮಾರ್ಪಾಡುತ್ತಾ ಹೋದಂತೆಲ್ಲಾ ಆರಣ್ಯವನ್ನೇ ಆಶ್ರಯಿಸಿದ್ದ ವನ್ಯಮೃಗಗಳು, ಸರೀಸೃಪಗಳು ಮತ್ತು ಪಶು ಪಕ್ಷಿಗಳು ದಿಕ್ಕಾಪಾಲಾಗಿವೆ. ಹಾಗಾಗಿಯೇ ಇಂದು ಅನೇಕ ಕಡೆಗಳಲ್ಲಿ ಹಾವುಗಳು ಮನೆಯ ಒಳಗೆ ಬರುವ ಉದಾಹರಣೆಗಳು ಇದ್ದು, ಹಾಗೆ ಹಾವು ಮನೆಯೊಳಗೆ ಬಂದೊಡನೆಯೇ ಅದು ಯಾವ ರೀತಿಯ ಹಾವು ವಿಷಪೂರಿತವೋ? ಇಲ್ಲಾ ವಿಷವಲ್ಲದ್ದೋ ಎಂದು ಯಾವುದನ್ನೂ ಯೋಚಿಸಿದೆ ಬಹಳಷ್ಟು ಮಂದಿ ಅದನ್ನು ಹೊಡೆದು ಸಾಯಿಸಲು ಪ್ರಯತ್ನಿಸುವವರೇ ಹೆಚ್ಚಾಗಿರುವ ಈ ಕಾಲದಲ್ಲಿ… Read More ಸ್ನೇಕ್ ಶ್ಯಾಮ್