ವೃಕ್ಷ ದೇವಿ ತುಳಸಿ ಗೌಡ

ಪರಿಸರ ಕಾಳಜಿಗೂ ಮತ್ತು ನಮ್ಮ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ. ಒಂದು ಕಡೆ ನಿಂತರವಾಗಿ ಕಾಡನ್ನು ನಾಶ ಮಾಡಿ ನಾಡುಗಳನ್ನು ಮಾಡುತ್ತಿದರೆ ಮತ್ತೊಂಡೆ ಅದೇ ನಾಡಿನಲ್ಲಿ ಲಕ್ಷಾಂತರ ಗಿಡಗಳನ್ನು ನೆಟ್ಟು ಅದನ್ನೇ ಕಾಡಾಗಿ ಪರಿವರ್ತಿಸುತ್ತಿರುವವರ ಸಂಖ್ಯೆಯೂ ನಮ್ಮ ರಾಜ್ಯದಲ್ಲಿ ಹೆಚ್ಚಾಗಿಯೇ ಇದೆ. ಅದಕ್ಕೆ ಸಾಲು ಮರದ ತಿಮ್ಮಕ್ಕನವರು ಉದಾಹರಣೆಯಾದರೆ ಅವರ ಜೊತೆಗೆ ಸೇರಿಸಬಹುದಾದ ಮತ್ತೊಂದು ಹೆಸರೇ ತುಳಸೀ ಗೌಡ. ಇಂತಹ ನಿಸ್ವಾರ್ಥ ಮಹಾನ್ ಸಾಧಕಿಯನ್ನು ಗುರುತಿಸಿ ಕೇಂದ್ರ ಸರ್ಕಾರವು 2020ರ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಮಾಡಿರುವುದು ನಿಜಕ್ಕೂ ಅಭಿನಂದನಾರ್ಯವಾಗಿದೆ.… Read More ವೃಕ್ಷ ದೇವಿ ತುಳಸಿ ಗೌಡ

ಅಕ್ಷರ ಸಂತ ಹರೇಕಳ ಹಾಜಬ್ಬ

ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ

ದಕ್ಷಿಣ ಕಾಶೀ ಅಂತರ ಗಂಗೆ

ಇಂದು ಈ ವರ್ಷದ  ಮೊದಲ ಕಾರ್ತೀಕ ಸೋಮವಾರ.  ಕಾರ್ತೀಕ ಸೋಮವಾರದಂದು ಶಿವನ ದರ್ಶನ ಮಾಡಿದರೆ ಅದರಲ್ಲೂ ಕಾಶೀ ವಿಶ್ವೇಶ್ವರನ ದರ್ಶನ ಮಾಡಿದಲ್ಲಿ ಹೆಚ್ಚಿನ ಪುಣ್ಯ ಲಭಿಸುತ್ತದೆ  ಎನ್ನುವುದು ಶ್ರದ್ಧಾವಂತ ಹಿಂದೂಗಳ ನಂಬಿಕೆಯಾಗಿದೆ.  ದೂರದ ಕಾಶೀಗೆ ಹೋಗಿ ಗಂಗೆಯಲ್ಲಿ ಮಿಂದು ಕಾಶೀ ವಿಶ್ವೇಶ್ವರನ ದರ್ಶನದ ಭಾಗ್ಯ ಪಡೆಯಲು ಸಾಧ್ಯವಿಲ್ಲದವರು, ಇಲ್ಲೇ ಬೆಂಗಳೂರಿಗೆ ಹತ್ತಿರವಿರುವ ದಕ್ಷಿಣ ಕಾಶಿ ಪುಣ್ಯಕ್ಷೇತ್ರಕ್ಕೆ ಹೋಗಿ ಅಲ್ಲಿರುವ ಅಂತರಗಂಗೆಯಲ್ಲಿ  ಮಿಂದು ಕುಳಿತಲ್ಲಿಂದಲೇ ಕಾಶೀ ವಿಶ್ವೇಶ್ವರನ ದರ್ಶನ ಪಡೆಯೋಣ ಬನ್ನಿ ನಮಗೆಲ್ಲರಿಗೂ ತಿಳಿದಿರುವಂತೆ ಕೋಲಾರ  ಚಿನ್ನದ ಬೀಡು.… Read More ದಕ್ಷಿಣ ಕಾಶೀ ಅಂತರ ಗಂಗೆ

ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ

ಅಮ್ಮನ ಮಡಿಲು

ಅಮ್ಮಾ= ಅ+ಮ+ಮ+ಆ. ಅಕ್ಕರೆಯಿಂದ , ಮಮತೆ ಮತ್ತು ಮಮಕಾರದಿಂದ, ಆರೈಕೆ ಮಾಡುವವಳೇ ಅಮ್ಮಾ. ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದಕ್ಕೇ ಆಗಲಿ ಪರ್ಯಾಯ ಸಿಗಬಹುದೇನೋ ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತೀಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ಜನ್ಮ‌ ಕೊಟ್ಟ ತಾಯಿ ಮತ್ತು ಆಶ್ರಯ ನೀಡುತ್ತಿರುವ ಭೂಮಿ ತಾಯಿಗೆ ಪರ್ಯಾಯವೇ ಇಲ್ಲ‌. ಹಾಗಾಗಿ ಅವರಿಬ್ಬರೂ ಸದಾಕಾಲವೂ ಪೂಜ್ಯರು‌ ವಂದಿತರು ಮತ್ತು ಆದರಣೀಯರೇ ಸರಿ. ಒಂಭತ್ತು ತಿಂಗಳು ತನ್ನ… Read More ಅಮ್ಮನ ಮಡಿಲು

ಸ್ಯಾಕ್ಸೊಫೋನ್ ಚಕ್ರವರ್ತಿ ಕದ್ರಿ ಗೋಪಾಲನಾಥ್

ನಮ್ಮ ಸನಾತನ ಧರ್ಮದಲ್ಲಿ ಪ್ರತಿಯೊಂದು ಶುಭಕಾರ್ಯಗಳಲ್ಲಿ ಮಂಗಳವಾದ್ಯದ್ದೇ ಮುಂದಾಳತ್ವ. ಮಂಗಳ ವಾದ್ಯಗಳಿಲ್ಲದೇ ದೇವರ ಉತ್ಸವಗಳೇ ಹೊರೊಡೋದಿಲ್ಲ. ಹಾಗಾಗಿ ನಾದಸ್ವರ ಮತ್ತು ಭಾಜಾಭಜಂತ್ರಿಗಳನ್ನು ಕರ್ನಾಟಕದ ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಕಾಣಬಹುದಾಗಿದೆ. ಇತ್ತೀಚೆಗೆ ದೇಸೀ ನಾದಸ್ವರಗಳ ಜಾಗದಲ್ಲಿ ನಿಧಾನವಾಗಿ ಪಾಶ್ಚಾತ್ಯ ವಾದನವಾದ ಸ್ಯಾಕ್ಸಾಫೋನ್ ಆವರಿಸಿಕೊಳ್ಳುತ್ತಿದೆ. ಹಾಗೆ ದೇಸೀ ಕರ್ನಾಟಕ ಸಂಗೀತ ಪದ್ಧತಿಗೆ ಪಾಶ್ಚ್ಯತ್ಯ ವಾದನವನ್ನು ಸುಲಲಿತವಾಗಿ ಅಳವಡಿಸಿಕೊಂಡು ಅತ್ಯಂತ ಸುಶ್ರಾವ್ಯವಾಗಿ ಸ್ಯಾಕ್ಸೋಫೋನ್ ನುಡಿಸುವುದರಲ್ಲಿ ಸಿದ್ಧಹಸ್ತರಾಗಿದ್ದ ಕರಾವಳಿ ಮೂಲದ ಕದ್ರಿ ಗೋಪಾಲನಾಥ್ ಅವರ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು… Read More ಸ್ಯಾಕ್ಸೊಫೋನ್ ಚಕ್ರವರ್ತಿ ಕದ್ರಿ ಗೋಪಾಲನಾಥ್

ದ್ವಾರಕೀಶ್

ದ್ವಾರಕೀಶ್ ಅವರು ಇನ್ನಿಲ್ಲಾ ಎಂಬ ಸುದ್ದಿ ಅದೆಷ್ಟೋ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾದಾಗ, ಅಯ್ಯೋ ನಾನು ಇನ್ನೂ ಗಟ್ಟಿ ಮುಟ್ಟಾಗಿಯೇ ಬದುಕಿದ್ದೇನೆ ಎಂದು ಎಲ್ಲರ ಮುಂದೇ ಹೇಳುತ್ತಿದ್ದಂತಹ ಕರ್ನಾಟಕದ ಕುಳ್ಳಾ ದ್ವಾರಕೀಶ್ ಅವರು ಇಂದು ಮಂಗಳವಾರ, ಏಪ್ರಿಲ್ 16, 2024 ರಂದು ತಮ್ಮ 81ನೇ ವಯಸ್ಸಿನಲ್ಲಿ ಈ ಲೋಕಕ್ಕೆ ಅಂತಿಮ ವಿದಾಯವನ್ನು ಹೇಳುವ ಮೂಲಕ ಕನ್ನಡ ಚಿತ್ರರಂಗವನ್ನು ಅಕ್ಷರಶಃ ಬಡವಾಗಿಸಿದ್ದಾರೆ ಎಂದರೂ ತಪ್ಪಾಗದು ಅಲ್ವೇ?… Read More ದ್ವಾರಕೀಶ್

ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರಸ್ವಾಮಿ (ತಿರುಕ)

ಮೂಲತಃ ಕೇರಳದ ಶ್ರೋತ್ರೀಯರು, ಜ್ಯೋತಿಷಿಗಳು ಹಾಗೂ ವೇದಪಾರಂಗತರಾಗಿದ್ದ ಶ್ರೀ ಅನಂತ ಪದ್ಮನಾಭ ನಂಬೂದರಿ ಮತ್ತು ಪದ್ಮಾಂಬಳ್ ಎಂಬ ದಂಪತಿಗಳಿಗೆ ಬಹಳ ದಿನಗಳ ಕಾಲ ಮಕ್ಕಳಾಗದೇ ನಂತರದಲ್ಲಿ ಭಗವಂತನ ಅನುಗ್ರಹದಿಂದ ಬಾಲಕನೊಬ್ಬನ ಜನನವಾಗಿ ಆತನಿಗೆ ಕುಮಾರಸ್ವಾಮಿ ಎಂದು ನಾಮಕರಣ ಮಾಡುತ್ತಾರೆ. ದುರಾದೃಷ್ಟವಷಾತ್ ಆ ಬಾಲಕ ಸುಮಾರು 10-12 ವರ್ಷಗಳ ಕಾಲ ಅಸ್ವಸ್ಥತೆಯಿಂದಲೇ ನರಳುತ್ತಾ ಮಾತನಾಡಲಾಗದೇ ನಡೆಯಲೂ ಅಗದೇ ಎಲ್ಲಾ ಕಡೆಯಲ್ಲೂ ಆತನನ್ನು ತಾಯಿಯೇ ಎತ್ತು ಕೊಂಡು ತಿರುಗಾಡ ಬೇಕಾದಂತಹ ಪರಿಸ್ಥಿತಿ ಇರುತ್ತದೆ. ಆಗ ಆ ವೃದ್ಧ ದಂಪತಿಗಳಿಬ್ಬರೂ ಕೊಲ್ಲೂರಿನ… Read More ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರಸ್ವಾಮಿ (ತಿರುಕ)

ಸಾವಿರ ಹಾಡಿನ ಸರದಾರ ಬಾಳಪ್ಪ ಹುಕ್ಕೇರಿ

ಎಂಭತ್ತರ ದಶಕದಲ್ಲಿ ಬೆಂಗಳೂರಿನ ಬಿಇಎಲ್ ಕಾರ್ಖಾನೆಯ ಕಲಾಕ್ಷೇತ್ರದಲ್ಲಿ ಪ್ರತೀ ವರ್ಷ ಸಾಂಸ್ಕೃತಿಕ ಚಟುವಟಿಕೆಗಳ ಬೇಸಿಗೆ ಮೇಳವನ್ನು 10-12 ದಿನಗಳ ಕಾಲ ಆಯೋಜಿಸಿ ನಾಡಿನ ಪ್ರಖ್ಯಾತ ಕಲಾವಿದರುಗಳಿಂದ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದಗೀತೆಗಳ ಜೊತೆಗೆ ಚಲನಚಿತ್ರ ಆರ್ಕೇಷ್ಟ್ರಾಗಳನ್ನು ಏರ್ಪಡಿಸುತ್ತಿದ್ದರು. ಆ ರೀತಿಯ ಬೇಸಿಗೆ ಮೇಳದಲ್ಲಿ ಅದೊಮ್ಮೆ ವಯಸ್ಸಾದ ಅಜಾನುಬಾಹು ವ್ಯಕ್ತಿ ತಲೆಗೆ ರುಮಾಲು ಕಟ್ಟಿಕೊಂಡು ಅಕ್ಕ ಪಕ್ಕದಲ್ಲಿ ಹಾರ್ಮೋನಿಯಂ ಮತ್ತು ತಬಲಗಳ ಪಕ್ಕವಾದ್ಯದೊಂದಿಗೆ ತಮ್ಮ ಕಂಚಿನ ಕಂಠದಲ್ಲಿ ಎತ್ತರದ ಧನಿಯಲ್ಲಿ ಹಾಡಲು ಶುರು ಮಾಡುತ್ತಿದ್ದಂತೆಯೇ ಗಜಿಬಿಜಿ ಎನ್ನುತ್ತಿದ್ದ… Read More ಸಾವಿರ ಹಾಡಿನ ಸರದಾರ ಬಾಳಪ್ಪ ಹುಕ್ಕೇರಿ