#NoBindi_NoBusiness

ಅರೇ ಇದೇನಿದು ಇಂತಹ ಶೀರ್ಷಿಕೆ? ಜನರನ್ನು ಹೀಗೆ ಧರ್ಮಾಧಾರಿತವಾಗಿ ಕೆರಳುಸಿತ್ತಿದ್ದೀರಿ ಎಂದು ಭಾವಿಸುತ್ತಿದ್ದೀರಾ? ಅರೇ ಇದೇನಿದು ಹೀಗೆ ಕೋಮುವಾದವನ್ನು ಹರಡುತ್ತಿದ್ದೇನೆ ಎಂದು ಭಾವಿಸಿದ್ದೀರಾ? ಖಂಡಿತವಾಗಿಯೂ ಅಂತಹ ಪ್ರಯತ್ನವಾಗಿರದೇ ನಮ್ಮ ಸುತ್ತಮುತ್ತಲಿನವರು ನಮ್ಮ ಹಿಂದುಗಳ ಹೃದಯ ವೈಶಾಲ್ಯತೆಯನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತಿದ್ದಾರೆ ಎಂಬುದನ್ನು ಕೆಲವು ಉದಾಹರಣೆಯ ಮುಖಾಂತರ ವಿವರಿಸುತ್ತಿದ್ದೇನೆ ಅಷ್ಟೇ. ದಸರ ಮತ್ತು ದೀಪಾವಳಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬಗಳನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಹಿಂದೂಗಳು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಎಷ್ಟು ಚೆನ್ನಾಗಿ ಅಗುತ್ತದೆಯೋ? ಅದೇ… Read More #NoBindi_NoBusiness

ಹಲಸಿನ ಹಣ್ಣು

ವಸಂತ ಕಾಲದಲ್ಲಿ ಲಭ್ಯವಾಗುವಂತಹ ಹಲಸಿನ ಹಣ್ಣು ಎಲ್ಲರಿಗೂ ಅತ್ಯಂತ ಪ್ರಿಯವಾದ ಹಣ್ಣು ಎಂದರು ತಪ್ಪಾಗದು. ಹಲಸಿನ ಹಣ್ಣು ತನ್ನ ರುಚಿ, ಬಣ್ಣ ಮತ್ತು ಸುವಾಸನೆಗೆ ಹೆಸರುವಾಸಿಯಗಿದೆ. ಮಾಗಿದ ಹಲಸಿನ ಹಣ್ಣು ಹಾಗೇ ತಿನ್ನಲು ಯೋಗ್ಯವಾದರಲ್ಲಿ, ಹಲಸಿನ ಕಾಯಿ ಗ್ರಾಮೀಣ ಭಾಗದ ಅತ್ಯಂತ ಪ್ರಮುಖವಾದ ತರಕಾರಿಗಳಲ್ಲಿ ಒಂದಾಗಿದ್ದು ಇದನ್ನು ಬಳಸಿಕೊಂಡು ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಬಹುದಾಗಿದೆ. ಹಲಸಿನ ಹಣ್ಣು ಆರೋಗ್ಯಕ್ಕೂ ಬಹಳ ಒಳ್ಳೆಯದು ಎಂದು ಹೇಳಲಾಗುತ್ತಿದೆ. ಹಲಸಿನ ಕಾಯಿ ಬಳಸಿಕೊಂಡು ಪಲ್ಯ, ಹುಳಿ, ಗೊಜ್ಜನ್ನು ತಯಾರಿಸಿದರೆ, ಹಲಸಿನ ಹಣ್ಣಿನಿಂದ… Read More ಹಲಸಿನ ಹಣ್ಣು

ವಾಲ್ಮೀಕಿ ಮಹರ್ಷಿಗಳು

ರಾಮಾಯಣ ಎಂಬುದು ನಮ್ಮ ಸನಾತನ ಧರ್ಮದ ಪ್ರಮುಖ ಸಂಸ್ಕೃತ ಮಹಾಕಾವ್ಯಗಳಲ್ಲಿ ಒಂದಾಗಿದ್ದು ಜೀವನ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಮುಖ ಪಠ್ಯವಾಗಿದೆ ಎಂದರೂ ತಪ್ಪಾಗದು. ಆಶ್ವಯುಜ ಮಾಸದ ಹುಣ್ಣಿಮೆಯಂದು ಜನಿಸಿದ ಇಂತಹ ಮಹಾ ಗ್ರಂಥವನ್ನು ರಚಿಸಿದ ಮಹಾಕವಿ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಗಳು ಎಂದರೆ ಯಾರು? ಅವರ ಹಿನ್ನಲೆ ಏನು? ಅವರ ಸಾಧನೆಗಳೇನು? ಎಂಬುದರ ಮೆಲಕನ್ನು ಹಾಕೋಣ. ಮಹರ್ಷಿ ವಾಲ್ಮಿಕಿಗಳ ಮೂಲ ಹೆಸರು ರತ್ನಾಕರ ಎಂಬುದಾಗಿದ್ದು ಅವರು ಭಗವಾನ್‌ ಬ್ರಹ್ಮನ ಮಾನಸ ಪುತ್ರರಾಗಿದ್ದ ಪ್ರಚೇತ ಎಂಬುವರ ಮಗನಾಗಿದ್ದರು. ಆದರೆ… Read More ವಾಲ್ಮೀಕಿ ಮಹರ್ಷಿಗಳು

ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ನಮ್ಮ ಸನಾತ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ ಮತ್ತು ಆಚರಣೆಗಳು ನಮಗೆ ದೈವತ್ವದತ್ತ ಕೊಂಡೊಯ್ಯುತ್ತದೆ, ಅಂಥಾ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸ್ಥಳಾಂತರಗೊಳ್ಳುವ ಅವಧಿಯನ್ನು ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸವನ್ನು ಶೂನ್ಯ ಮಾಸ ಎಂದೂ ಸಹ ಕರೆಯಲಾಗುತ್ತದೆ. ಈ ಮಾಸದಲ್ಲಿ ಒಂದೇ ಒಂದು ದಿನ ಭಗವಾನ್ ವಿಷ್ಣುವನ್ನು ಪೂಜಿಸಿದರೂ ಅದು ಸಾವಿರಾರು ವರ್ಷಗಳ ಕಾಲ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇನ್ನು ನಮ್ಮ ತಿರುಪತಿ ತಿಮ್ಮಪ್ಪ ಬಹುಶಃ… Read More ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಶೃಂಗೇರಿ ದಸರಾ

ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ

ಮಡಿಕೇರಿ ದಸರಾ

ನಮ್ಮ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ದೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆ ಮತ್ತು ಆಚರಣೆಯ ಬಗ್ಗೆ ಸವಿಸ್ತಾರವಾಗಿ ತಿಳಿದು ಕೊಳ್ಳೋಣ. ಮೈಸೂರಿನ ದಸರಾಕ್ಕಿರುವ ಇತಿಹಾಸದಂತೆಯೇ ಮಡಿಕೇರಿ ದಸರಾಕ್ಕೂ ಪುರಾತನವಾದ ಇತಿಹಾಸವಿದ್ದು,… Read More ಮಡಿಕೇರಿ ದಸರಾ

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ