ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ನಮ್ಮ ಸನಾತ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ ಮತ್ತು ಆಚರಣೆಗಳು ನಮಗೆ ದೈವತ್ವದತ್ತ ಕೊಂಡೊಯ್ಯುತ್ತದೆ, ಅಂಥಾ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸ್ಥಳಾಂತರಗೊಳ್ಳುವ ಅವಧಿಯನ್ನು ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸವನ್ನು ಶೂನ್ಯ ಮಾಸ ಎಂದೂ ಸಹ ಕರೆಯಲಾಗುತ್ತದೆ. ಈ ಮಾಸದಲ್ಲಿ ಒಂದೇ ಒಂದು ದಿನ ಭಗವಾನ್ ವಿಷ್ಣುವನ್ನು ಪೂಜಿಸಿದರೂ ಅದು ಸಾವಿರಾರು ವರ್ಷಗಳ ಕಾಲ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇನ್ನು ನಮ್ಮ ತಿರುಪತಿ ತಿಮ್ಮಪ್ಪ ಬಹುಶಃ… Read More ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಶೃಂಗೇರಿ ದಸರಾ

ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ

ಮಡಿಕೇರಿ ದಸರಾ

ನಮ್ಮ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ದೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆ ಮತ್ತು ಆಚರಣೆಯ ಬಗ್ಗೆ ಸವಿಸ್ತಾರವಾಗಿ ತಿಳಿದು ಕೊಳ್ಳೋಣ. ಮೈಸೂರಿನ ದಸರಾಕ್ಕಿರುವ ಇತಿಹಾಸದಂತೆಯೇ ಮಡಿಕೇರಿ ದಸರಾಕ್ಕೂ ಪುರಾತನವಾದ ಇತಿಹಾಸವಿದ್ದು,… Read More ಮಡಿಕೇರಿ ದಸರಾ

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ

ಸಿರಿವಂತರ ಮಕ್ಕಳೇ ಹೀಗೇಕೇ?

ಅಕ್ಟೋಬರ್ 2, ಗಾಂಧಿ ಜಯಂತಿ. ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಟ್ಟವರಲ್ಲಿ ಮುಂಚೂಣಿಯಲ್ಲಿದ್ದ ನಾಯಕನಿಗೆ ಗೌರವ ಅರ್ಪಿಸುವ ಸಲುವಾಗಿ ಅವರು ಪಾಲಿಸುತ್ತಿದ್ದ ಅಹಿಂಸಾ ತತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಆ ದಿನ ದೇಶಾದ್ಯಂತ ಮಧ್ಯ ಮತ್ತು ಮಾಂಸದ ವ್ಯಾಪಾರವನ್ನು ನೀಷೇಧಿಸಲಾಗಿರುತ್ತದೆ ಮತ್ತು ಇಡೀ ದಿನ ಗಾಂಧಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸುವ ಕಾರ್ಯದಲ್ಲಿ ಬಹುತೇಕ ಎಲ್ಲರೂ ನಿರತರಾಗಿರುವಾಗಲೇ ಅದೇ ರಾತ್ರಿ ಮುಂಬೈಯ್ಯಿನ ಐಷಾರಾಮಿ ಹಡುಗೊಂದರಲ್ಲಿ ಬೆಚ್ಚಿ ಬೀಳುವ ಸಂಗತಿಯೊಂದು ನಡೆದಿದೆ. ಸಮಾಜದಲ್ಲಿ ಗಣ್ಯರೆನಿಸಿಕೊಂಡವರ ಮಕ್ಕಳು… Read More ಸಿರಿವಂತರ ಮಕ್ಕಳೇ ಹೀಗೇಕೇ?

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಲಾಲ್ ಬಹದ್ದೂರ್ ಶಾಸ್ತ್ರಿ

ನಮ್ಮ ದೇಶದಲ್ಲಿ ಅಧಿಕಾರವನ್ನು ಕೆಲವರು ಆಯ್ಕೆ ಮುಖಾಂತರ ದಕ್ಕಿಸಿಕೊಂಡು  ಹತ್ತಾರು ವರ್ಷಗಳ ಕಾಲ ದೇಶವನ್ನು ಆಳಿದರೂ ಹೇಳಿಕೊಳ್ಳುವ ಸಾಧನೆ ಮಾಡದೇ ಹೋಗುತ್ತಾರೆ. ಇನ್ನು ಹಲವರು ಜನರಿಂದ ರಾಜತಾಂತ್ರಿಕವಾಗಿ ಆಯ್ಕೆಯಾಗಿ ಅಧಿಕಾರದಲ್ಲಿ ಕೆಲವೇ ತಿಂಗಳುಗಳ ಕಾಲ ಇದ್ದರೂ ಇಡೀ ದೇಶವೇ ನೂರಾರು ವರ್ಷಗಳ ಕಾಲ ನೆನಪಿಸಿಕೊಳ್ಳುವಂತಹ ಸಾಧನೆಯನ್ನು ಮಾಡಿ ಎಲೆಮರೆ ಕಾಯಿಯಂತೆ ಹೋಗಿಬಿಡುತ್ತಾರೆ. ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ಗ್ರಿಗಳು ಎರಡನೇ ರೀತಿಯ ವ್ಯಕ್ತಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ಗ್ರಿಗಳು… Read More ಲಾಲ್ ಬಹದ್ದೂರ್ ಶಾಸ್ತ್ರಿ