ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಸಾಮ್ಯಾನ್ಯವಾಗಿ ನಮ್ಮ ಹಿಂದಿನ ಕಾಲದವರು ಈಗಿನಷ್ಟು ಆರ್ಥಿಕವಾಗಿ ಸಧೃಡರಿಲ್ಲದಿದ್ದರೂ, ಸರಿಯಾಗಿ ಎರಡು ಹೊತ್ತು ಊಟ ಮಾಡಲು ಇರುತ್ತಿರದಿದ್ದರೂ, ಯಾವುದೇ ರೋಗ ರುಜಿನಗಳಿಲ್ಲದೇ ಆರಾಮವಾಗಿ 80-90 ವರ್ಷಗಳು ಜೀವಿಸುತ್ತಿದ್ದರು. ಅದೆಷ್ಟೋ ಜನ ಶತಾಯುಷಿಗಳಾಗಿಯೂ ಜೀವಿಸಿದ್ದರು. ಅವರ ನೆನಪಿನ ಶಕ್ತಿಯಂತೂ ಕೇಳುವುದೇ ಬೇಡ. ಹಾಗಾಗಿಯೇ ಸುಲಭವಾಗಿ ಐದಾರು ತಲೆಮಾರುಗಳನ್ನು ಸುಲಭವಾಗಿ ನೋಡಬಹುದಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವೆಲ್ಲವೂ ಮಾಯವಾಗಿದೆ. 20-30 ವರ್ಷಕ್ಕೇ ಕೂದಲೆಲ್ಲಾ ಬೆಳ್ಳಾಗಾಗಿ ಅದೆಷ್ಟೋ ಮಂದಿಗಳಿಗೆ ಕೂದಲೆಲ್ಲ ಉದುರಿ ಹೋಗಿ, ಹತ್ತಾರು ರೀತಿಯ ಖಾಯಿಲೆಗಳಿಗೆ ತುತ್ತಾಗಿ ಊಟಕ್ಕಿಂತಲೂ ಹೆಚ್ಚಾಗಿ… Read More ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಜಾಂಬವಂತನ ಗುಹೆ, ಪೋರ್ ಬಂದರ್

ತ್ರೇತಾಯುಗದಲ್ಲಿ ನಡೆದ ರಾಮಾಯಣ ಮತ್ತು ದ್ವಾಪರಯುಗದಲ್ಲಿ ನಡೆದ ಮಹಾಭಾರತ ಈ ಕಲಿಯುಗದಲ್ಲಿಯೂ ನಮ್ಮ ಶ್ರದ್ಧೇಯ ಮಹಾಕಾವ್ಯಗಳು . ಭಗವಾನ್ ವಿಷ್ಣುವಿನ ದಶಾವತಾರದ ಅಂಗವಾಗಿ ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಮನುಷ್ಯ ರೂಪದಲ್ಲಿ ಈ ಭೂಮಿಯ ಮೇಲೆ ಅವತಾರವೆತ್ತಿದ್ದ ಪ್ರಭು ಶ್ರೀ ರಾಮ ಮತ್ತು ಶ್ರೀ ಕೃಷ್ಣನನ್ನು ಇಂದಿಗೂ ನಾವು ದೇವರಂತೆ ಪೂಜಿಸುತ್ತೇವೆ. ಆದರೆ ಕೆಲವು ಸ್ವಘೋಷಿತ ಬುದ್ಧಿ ಜೀವಿಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳು ರಾಮಾಯಣ ಮತ್ತು ಮಹಾಭಾರತ ಎನ್ನುವುದು ನಡೆದೇ ಇಲ್ಲ. ಅದೊಂದು ಕಾಲ್ಪನಿಕ… Read More ಜಾಂಬವಂತನ ಗುಹೆ, ಪೋರ್ ಬಂದರ್

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಉಮಾ

ಆಗಷ್ಟೇ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿತ್ತು. ಕೆ.ಜಿ.ಎಫ್ ನಲ್ಲಿದ್ದ  ಅಂದಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ರಾಜಾರಾವ್ ಅವರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಸತವಾಗಿ ಏಳು ಗಂಡು ಮಕ್ಕಳ (ಅರು ಮಕ್ಕಳು ಹುಟ್ಟಿದ ಕೆಲವೇ ತಿಂಗಳುಗಳಲ್ಲಿ ಅಳಿದು ಹೋಗಿದ್ದವು) ನಂತರ ಅವರ  ಮನೆಯಲ್ಲಿ ಮೊತ್ತ ಮೊದಲಬಾರಿಗೆ  ಮಹಾಲಕ್ಷ್ಮಿಯ ಜನನವಾಗಿತ್ತು.  ರಾಯರ ಮನೆ ದೇವರು ಮೇಲುಕೋಟೆ ಯೋಗಾನರಸಿಂಹನಾಗಿದ್ದ ಕಾರಣ,  ಅವರಿಗೆ ತಮ್ಮ ಮಗಳ ಹೆಸರು  ಲಕ್ಷ್ಮಿಯ ಹೆಸರಿಡಬೇಕು ಎಂದಿತ್ತು. ಆದರೆ ಅವರ ಮಡದಿ ವಿಶಾಲಾಕ್ಷಿ ಅವರ ತಾಯಿಯವರು ತಮ್ಮ ಮನೆ ದೇವರು … Read More ಉಮಾ

ಕಲಾಸೀ ಪಾಳ್ಯದ ಬೆಂಕಿ ಕರಗ

ಬೆಂಗಳೂರಿನ ಆಸುಪಾಸಿನಲ್ಲಿ ಶತಶತಮಾನಗಳಿಂದಲೂ ಪ್ರಮುಖ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ದೇವಿಯ ದೇವಸ್ಥಾನಗಳಲ್ಲಿ ಕರಗ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕರಗಕ್ಕೇ ತನ್ನದೇ ಆದ ವೈಶಿಷ್ಟ್ಯವಿದೆ. ಆದಿಶಕ್ತಿಯನ್ನು ಗುರುತಿಸಿ ಆರಾಧಿಸುವ ಹಲವಾರು ಸಂಪ್ರದಾಯಗಳಲ್ಲಿ ಕರಗ ಮಹೋತ್ಸವವೂ ಒಂದು. ಕರಗ(ಕರಕ) ಎಂಬ ಮಾತಿಗೆ ಕುಂಭ ಎಂಬ ಅರ್ಥವೂ ಇದೆ. ಕರಗದ ಒಂದೊಂದು ಅಕ್ಷರವೂ ಒಂದೊಂದು ಸಂಕೇತವನ್ನು ಹೊಂದಿವೆ ಎನ್ನುವ ಪ್ರತೀತಿ ಇದೆ. ಕ-ಕೈಯಿಂದ ಮುಟ್ಟದೆ, ರ-ರುಂಡದ ಮೇಲೆ ಧರಿಸಿ, ಗ-ಗತಿಸುವುದು (ತಿರುಗುವುದು) ಎಂಬ ಅರ್ಥ ವಿವರಣೆ ಬಳಕೆಯಲ್ಲಿದೆ. ಕರಗ… Read More ಕಲಾಸೀ ಪಾಳ್ಯದ ಬೆಂಕಿ ಕರಗ

ಅಧ್ಭುತವಾದ ಇಡ್ಲಿಗಳು!

ಅದು ಸ್ವಾತಂತ್ರ್ಯ ಪೂರ್ವದ ದಿನಗಳು ಅದೊಂದು ದಿನ ಅಯ್ಯರ್ ಎಂಬ ವ್ಯಕ್ತಿ ಮತ್ತು ಬ್ರಿಟಿಷ್ ವ್ಯಕ್ತಿಯೊಬ್ಬ ಮದ್ರಾಸ್ನಿಂದ ಕಲ್ಕತ್ತಾಗೆ ಹೌರಾ ಮೇಲ್ ನಲ್ಲಿ ಮೊದಲನೇ ದರ್ಜೆಯ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದರು. ನಿಗಧಿಯಂತೆ ರೈಲು ರಾತ್ರಿ 8 ಗಂಟೆಗೆ ಮದ್ರಾಸ್ ಸೆಂಟ್ರಲ್‌ನಿಂದ ಹೊರಟಿತು. ಮಾರನೇ ದಿನ ಬೆಳಿಗ್ಗೆ 7 ಗಂಟೆಗೆಯ ಹೊತ್ತಿಗೆ ವಿಜಯವಾಡ ತಲುಪಿತ್ತು. ಇಬ್ಬರೂ ಸಹಾ ತಮ್ಮ ಪ್ರಾರ್ಥರ್ವಿಧಿಗಳನ್ನು ಮುಗಿಸಿ, ಬ್ರಿಟಿಷ್ ವ್ಯಕ್ತಿ ಅಲ್ಲಿಯೇ ಸ್ಟೇಷನ್ನಿನಲ್ಲಿ ಸಿಕ್ಕ ರುಚಿಕರವಾದ ಉಪಹಾರವನ್ನು ಮಾಡಿದರೆ, ಅಯ್ಯರ್ ತನ್ನ 4-ಹಂತದ ಟಿಫಿನ್… Read More ಅಧ್ಭುತವಾದ ಇಡ್ಲಿಗಳು!

ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ದುರಂತ – 1 : ಗಂಡ ಹೆಂಡತಿ ಮತ್ತು ವಯಸ್ಸಿಗೆ ಬಂದಂತಹ ಇದ್ದ ಸಣ್ಣ ಮಧ್ಯಮ ವರ್ಗದ ಕುಟುಂಬ. ಅದು ಹೇಗೋ ಗಂಡ ಮತ್ತು ಹೆಂಡತಿ ಇಬ್ಬರಿಗೂ ಕೊರೋನಾ ಮಹಾಮಾರಿ ವಕ್ಕರಿಸಿಕೊಂಡು ಇಬ್ಬರು ಅಸ್ಲತ್ರೆಗೆ ದಾಖಲಾಗುತ್ತಾರೆ ಈ ವಿಷಯ ತಿಳಿದ ಮಗ ಪಟ್ಟಣದಿಂದ ಓಡೋಡಿ ಬರುತ್ತಾನೆ. ಆ ಔಷಧಿ ನಮ್ಮಲ್ಲಿ ಸ್ಟಾಕ್ ಇಲ್ಲಾ.. ಆಮ್ಕಜನಕದ ಕೊರತೆ ಇದೆ. ಇಂತಹವರ ಹತ್ತಿರ ಕೆಲವೇ ಸ್ಟಾಕ್ ಔಷಧಿ ಇದೆಯಂತೆ ಪ್ರಯತ್ನಿಸಿ ನೋಡಿ ನಂಬರ್ ಕೊಡ್ತಾರೆ. ಅವರಿಗೆ ಕರೆ ಮಾಡಿದರೆ ಒಂದಕ್ಕೆ… Read More ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ಬೆಂಗಳೂರಿನಲ್ಲಿ ಮೊಟ್ಟ ಮೊದಲ ಆಟೋರಿಕ್ಷಾ

ಹಿಂದೆಲ್ಲಾ, ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗುವುದಕ್ಕೆ ನಡಿಗೆಯೇ ಮೂಲವಾಗಿದ್ದು ನಂತರದ ದಿನಗಳಲ್ಲಿ ಎತ್ತಿನ ಗಾಡಿಗಳು ಜನರನ್ನು ಮತ್ತು ವಸ್ತುಗಳನ್ನು ಸಾಗಿಸಲು ಬಳಸುತ್ತಿದ್ದರು. ಇನ್ನು ಕೆಲವರು ಸೈಕಲ್ ಮುಖಾಂತರ ಒಂದಿಬ್ಬರು ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತಲು ಹೆಚ್ಚಿನ ಜನರನ್ನು ಆರಾಮದಾಯಕವಾಗಿ ಪ್ರಯಾಣಿಸುವ ಸಲುವಾಗಿ ಕುದುರೇ ಗಾಡಿಗಳನ್ನು ಬಳಸಲು ಅರಂಭಿಸಿದರು ಇವು ಜಟಕಾಗಾಡಿಗಳು, ಟಾಂಗ, ಜಟ್ಕಾ (ಉರ್ದು ಭಾಷೆಯಿಂದ ಬಂದಿರುವ ಪದ) ಎಂದೇ ನಾಡಿನಾದ್ಯಂತ ಪ್ರಖ್ಯಾತವಾಯಿತು. ಎತ್ತಿನಗಾಡಿ ಮತ್ತು ಕುದುರೇ ಗಾಡಿಗಳನ್ನು ಸಂಭಾಳಿಸುವುದು ಬಹಳ ತ್ರಾಸದಾಯಕ ಮತ್ತು ಪ್ರಾಣಿಗಳಿಗೇಕೆ ತೊಂದರೆ ಕೊಡುವುದು… Read More ಬೆಂಗಳೂರಿನಲ್ಲಿ ಮೊಟ್ಟ ಮೊದಲ ಆಟೋರಿಕ್ಷಾ

ಅವಲಕ್ಕಿ ಪರೋಟ

ಸಾಧಾರಣವಾಗಿ ಎಲ್ಲರ ಮನೆಗಳಲ್ಲಿಯೂ ಅವಲಕ್ಕಿ ಒಗ್ಗರಣೆ, ಹುಳಿಯವಲಕ್ಕಿ, ಇಲ್ಲವೇ ಖಾರದ ಅವಲಕ್ಕಿ ಬೆಳಿಗ್ಗೆ ತಿಂಡಿಗೇ ಮಾಡಿದ್ರೇ, ಮಧ್ಯಾಹ್ನದ ಊಟಕ್ಕೋ ಇಲ್ಲವೇ ರಾತ್ರಿಯ ಊಟಕ್ಕೆ ಗೋಧಿ ಚಪಾತಿ ಮತ್ತು ಪರೋಟ ಇದ್ದೇ ಇರುತ್ತದೆ. ಹಾಗಾಗಿ ಇವತ್ತು ಅವಲಕ್ಕಿ ಮತ್ತು ಗೋಧಿ ಹಿಟ್ಟು ಎರಡೂ ಸೇರಿಸಿ ಗರಿಗರಿಯಾದ ವಿಭಿನ್ನ ರುಚಿಯ ಅವಲಕ್ಕಿ ಪರೋಟ ತಯಾರಿಸುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಅವಲಕ್ಕಿ ಪರೋಟ ತಯಾರಿಸಲು ಬೇಕಾಗುವ ಸಾಮಗ್ರಿಗಳು ಅವಲಕ್ಕಿ – 150ಗ್ರಾಂ ಗೋಧಿಹಿಟ್ಟು –… Read More ಅವಲಕ್ಕಿ ಪರೋಟ