ರಂಗನಾಥ ಮೇಷ್ಟ್ರು

ಸಾಧಾರಣವಾಗಿ ಹಿಂದಿನ ಕಾಲದಲ್ಲಿ ಆಷಾಢ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನೂ ಅಚರಿಸುತ್ತಿರಲಿಲ್ಲ. ಆದರೆ ಆಷಾಢ ಮಾಸದ ಹುಣ್ಣಿಮೆಯ ದಿನಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದದ್ದಂತೂ ಸುಳ್ಳಲ್ಲ. ಆಷಾಢ ಮಾಸದಲ್ಲಿ ನಾವೆಲ್ಲರೂ ಆಚರಿಸಬಹುದಾದಂತಹ ಅತ್ಯಂತ ಶ್ರೇಷ್ಠವಾದ ಹಬ್ಬವೆಂದರೆ ಗುರು ಪೂರ್ಣಿಮೆ. ಈ ಗುರು ಪುರ್ಣಿಮೆಯಂದು, ನಮ್ಮನ್ನು ತಿದ್ದಿ ತೀಡಿ ನಮ್ಮಲ್ಲಿ ಜ್ಞಾನ ದೀವಿಗೆಯನ್ನು ಹಚ್ಚಿ ಅದನ್ನು ಬೆಳಗಿ, ನಮಗೆ ವಿದ್ಯಾ ಬುದ್ಧಿಗಳನ್ನು ಕಲಿಸಿ ಕೊಟ್ಟ ಗುರುಗಳಿಗೆ ವಂದನೆ ಸಲ್ಲಿಸುವ ದಿನವಿದು. ಗುರುವಿನ ಮಹತ್ವವನ್ನು ಅರಿಯುವ ದಿನವಿದು. ಜನ್ಮ ಕೊಟ್ಟ ತಂದೆ ತಾಯಿಯರ… Read More ರಂಗನಾಥ ಮೇಷ್ಟ್ರು

ದೊಡ್ಡ ಆಲದ ಮರ

ಕಳೆದ ಒಂದುವರೆ ವರ್ಷದಿಂದ ಕೊರೋನಾ ಸಾಂಕ್ರಾಮಿಕ ಮಹಾಮಾರಿಯಿಂದ ಮನೆಯಲ್ಲಿ ಜಡ್ಡು ಹಿಡಿದು ಹೋಗಿರುವ ಮೈ ಮತ್ತು ಮನಗಳಿಗೆ ಮುದ ನೀಡುವ, ವೆಂಗಳೂರಿನ ಅತ್ಯಂತ ಸಮೀಪದಲ್ಲೇ ಇರುವ ಸುಂದರ ರಮಣೀಯ ಪ್ರಕೃತಿತಾಣವೊಂದರ ಕುರಿತಾಗಿ ತಿಳಿಯೋಣ ಬನ್ನಿ. ಬೆಂಗಳೂರು ಮೈಸೂರಿನ ಹೆದ್ದಾರಿಯಲ್ಲಿ ಸಾಗಿ ಕೆಂದೇರಿ ದಾಟಿ ಸ್ವಲ್ಪ ದೂರ ಹೊಗುತ್ತಿದ್ದಂತೆಯೇ ಎಡಗಡೆಯಲ್ಲಿ ನಮಗೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ ಸಿಗುತ್ತದೆ. ಅಲ್ಲಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆಯೇ ಬಲಗಡೆಯಲ್ಲಿ ಅದೇ ರಾಜರಾಜೇಶ್ವರಿ ಡೆಂಟಲ್ ಕಾಲೇಜು ಕಾಣಬಹುದಾಗಿದೆ. ಆ ಕಾಲೇಜಿನ ಪಕ್ಕದಲ್ಲಿಯೇ ಇರುವ ರಾಮಗೊಂಡನಹಳ್ಳಿ… Read More ದೊಡ್ಡ ಆಲದ ಮರ

ತಂಗಳನ್ನ

ಸಾಮನ್ಯವಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಬೆಳಗ್ಗೆ ಶುಚಿರುಚಿಯಾಗಿ ಅವರ ಕುಟುಂಬಕ್ಕೆ ಅವಶ್ಯಕತೆ ಇದ್ದಷ್ಟು ಅಡುಗೆಗಳನ್ನು ಮಾಡಿಕೊಂಡು ಬಿಸಿ ಬಿಸಿಯಾಗಿ ತಿನ್ನಲು ಬಯಸುತ್ತಾರೆ. ಎಷ್ಟೇ ಕಟ್ಟೆಚ್ಚೆರ ವಹಿಸಿದರೂ ಬಹುತೇಕ ಎಲ್ಲರ ಮನೆಗಳಲ್ಲಿಯೂ ಮಾಡಿದ ಆಹಾರ ಮಿಕ್ಕಿಬಿಡುತ್ತದೆ. ಹಾಗೆ ಮಿಕ್ಕಿ ಹೋದ ಆಹಾರವನ್ನು ತಂಗಳು ಆಹಾರ ಎಂದು ಅದನ್ನು ಮಾರನೆಯ ದಿನ ಉಪಯೋಗಿಸಿದೇ ಅದನ್ನು ಹೊರಗೆ ಚೆಲ್ಲುವ ಇಲ್ಲವೇ ಮನೆಯ ಸಾಕುಪ್ರಾಣಿಗಳಿಗೆ ಹಾಕುವ ಪದ್ದತಿಯು ಎಲ್ಲ ಕಡೆಯಲ್ಲಿಯೂ ರೂಢಿಯಲ್ಲಿದೆ. ಇನ್ನೂ ಕೆಲವರು ಆ ರೀತಿಯಾಗಿ ಚೆಲ್ಲಲು ಮನಸ್ಸು ಬಾರದೇ ಮಾರನೆಯ ದಿನ… Read More ತಂಗಳನ್ನ

ನಾವೆಲ್ಲರೂ ಒಂದೇ..

ಕೆಲ ವರ್ಷಗಳ ಹಿಂದೆ ನಮ್ಮ ಅಜ್ಜಿಯವರು ಇನ್ನೂ ಬದುಕಿದ್ದರು. ಅದಾಗಲೇ ಅವರಿಗೆ 90+ ವರ್ಷಗಳಷ್ಟು ವಯಸ್ಸಾಗಿತ್ತು. ಸುಮಾರು 80+ ವರ್ಷಗಳ ಕಾಲ ಬಹಳ ಸ್ವಾಭಿಮಾನಿಯಾಗಿ ತನ್ನೆಲ್ಲಾ ಕೆಲಸವನ್ನು ಮಾಡಿಕೊಳ್ಳುತ್ತಾ ನಮ್ಮೂರಿನಲ್ಲಿಯೇ ಇದ್ದವರನ್ನು ವಯೋಸಹಜ ಕಾರಣಗಳಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೆವು. ಮೂರು ಗಂಡು ಮಕ್ಕಳು ಇಬ್ಬರು ಹೆಣ್ಣುಮಕ್ಕಳ ಹೆಮ್ಮೆಯ ತಾಯಿ. ಬೆಂಗಳೂರಿನಲ್ಲಿ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದರೆ ಮೈಸೂರಿನಲ್ಲಿ ಒಬ್ಬ ಮಗ ಮತ್ತು ಶಿವಮೊಗ್ಗದಲ್ಲಿ ಮತ್ತೊಬ್ಬ ಮಗಳಿದ್ದ ಕಾರಣ, ಅಂತಹ ಇಳೀ ವಯಸ್ಸಿನಲ್ಲಿಯೂ ಸ್ವತಃ ಅವರೇ… Read More ನಾವೆಲ್ಲರೂ ಒಂದೇ..

ಬೆಂಗಳೂರು-ಮಂಗಳೂರು ವಿಸ್ಟೋಡಾಮ್ ರೈಲು

ನಾವೆಲ್ಲಾ ಚಿಕ್ಕವರಿದ್ದಾಗ ರೈಲಿನಲ್ಲಿ ಪ್ರಯಾಣಿಸುವುದೆಂದರೆ ಅದೇನೋ ಸಂಭ್ರಮ. ಪ್ರಯಾಣಕ್ಕೆ ಒಂದೆರಡು ದಿನಗಳ ಮಂಚೆಯೇ, ನಮ್ಮೆಲ್ಲಾ ಸ್ನೇಹಿತರಿಗೂ ರೈಲಿನಲ್ಲಿ ಹೋಗುತ್ತಿರುವುದನ್ನು ಹೇಳೀ ಅವರ ಹೊಟ್ಟೆಯನ್ನು ಉರಿಸುತ್ತಿದ್ದಲ್ಲದೇ, ರೈಲಿನಿಂದ ಪುನಃ ಹಿಂದಿರುಗಿದ ನಂತರ ಗೆಳೆಯರ ಬಳೀ ಅದೇ ಕುರಿತಾಗಿಯೇ ಮಾತು ಕತೆ. ಇನ್ನು ಎರಡು ಮೂರು ದಿನಗಳ ಮಟ್ಟಿಗೆ ಪ್ರಯಾಣಿಸಿದರಂತೂ ರೈಲಿನ ಕುಲುಕಾಟದ ಭಾಸವೇ ನಮಗಾಗುತ್ತಿತ್ತು. ಇನ್ನು ರೈಲಿನಲ್ಲಿ ಕುಳಿತುಕೊಳ್ಳಬೇಕಾದರೇ ನಾನು ಕಿಟಕಿ ಪಕ್ಕ ನಾನು ಕಿಟಕಿ ಪಕ್ಕ ಎಂದು, ಅಣ್ಣಾ ತಮ್ಮಾ, ಅಕ್ಕತಂಗಿಯರೊಂದಿಗೆ ಶರಂಪರ ಕಿತ್ತಾಡಿದ್ದೂ ಉಂಟು. ರೈಲಿನಲ್ಲಿ… Read More ಬೆಂಗಳೂರು-ಮಂಗಳೂರು ವಿಸ್ಟೋಡಾಮ್ ರೈಲು

ಪುರಿ ಜಗನ್ನಾಥ ರಥಯಾತ್ರೆ

ಒರಿಸ್ಸಾದ ಪುರಿಯಲ್ಲಿ ಪ್ರತೀ ವರ್ಷವೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವೈಭವವಾಗಿ ಶ್ರೀ ಜಗನ್ನಾಥ, ಬಲಭದ್ರ ಮತ್ತು ಸುಭದ್ರಯ ರಥಯಾತ್ರೆಯ ಸಡಗರ ಸಂಭ್ರಮಗಳನ್ನು ಕುಳಿತಲ್ಲಿಂದಲೇ ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಪುರಿ ಜಗನ್ನಾಥ ರಥಯಾತ್ರೆ

ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಬೇಂದ್ರ್ ತೀರ್ಥ ಬಿಸಿ ನೀರಿನ ಬುಗ್ಗೆ

ಸಾಧಾರಣವಾಗಿ ನಮಗೆ ಬಿಸಿ ನೀರಿನ ಬುಗ್ಗೆ ಎಂದಾಕ್ಷಣ ಥಟ್ ಅಂತಾ ನೆನಪಾಗೋದೇ ಉತ್ತರ ಭಾರತದ ಹಿಮಾಚಲ ಪ್ರದೇಶದಲ್ಲಿ ಇರುವ ಕುಲುವಿನ ವಶಿಷ್ಠ ಬಿಸಿನೀರಿನ ಬುಗ್ಗೆ, ಮಣಿಕರಣ್ ನ ಬಿಸಿ ನೀರಿನ ಬುಗ್ಗೆ, ಮಂಡಿ ಜಿಲ್ಲೆಯ ತಟ್ಟಪಾಣಿ, ಖಿರ್ಗಂಗಾ ಮತ್ತು ಕಸೋಲ್ ಬಿಸಿನೀರಿನ ಬುಗ್ಗೆಗಳು ಆದರೆ ಕರ್ನಾಟಕದ ದಕ್ಷಿಣ ಕನ್ನಡದ ಪುತ್ತೂರಿನ ಬಳಿಯೂ ಅದೇ ರೀತಿಯ ಬಿಸಿ ನೀರಿನ ಬುಗ್ಗೆಯಿದೆ ಎಂದರೆ ಆಶ್ಚರ್ಯವಾಗುತ್ತದೆ ಅಲ್ಲವೇ? ಹೌದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 60 ಕಿ.ಮೀ, ಪುತ್ತೂರಿಗೆ 15 ಕಿ. ಮಿ… Read More ಬೇಂದ್ರ್ ತೀರ್ಥ ಬಿಸಿ ನೀರಿನ ಬುಗ್ಗೆ

ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಇಪ್ಪತ್ತೊಂದು ವರ್ಷಗಳ ಹಿಂದೆ ಹಿಮಾಚಲ ಪ್ರದೇಶದ ಹಳ್ಳಿಯಿಂದ ನಿವೃತ್ತ ಶಿಕ್ಷಕರೊಬ್ಬರು 07/07/2000 ದಂದು ರಕ್ಷಣಾ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿದ್ದು ಅದರಲ್ಲಿ, ರಾಷ್ಟ್ರೀಯ ಭದ್ರತೆಗೆ ಯಾವುದೇ ತೊಂದರೆ ಇಲ್ಲದಿದ್ದಲ್ಲಿ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ಏಕೈಕ ಪುತ್ರ ವೀರ ಮರಣ ಪಡೆದ ಸ್ಥಳವನ್ನು ನಾನು ಮತ್ತು ನನ್ನ ಧರ್ಮಪತ್ನಿ ಭೇಟಿ ನೀಡಿ ನಮ್ಮ ಮಗನ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲು ಅನುಮತಿ ನೀಡಬಹುದೇ? ನಿಮಗೆ ತೊಂದರೆ ಎನಿಸಿದಲ್ಲಿ ನಮ್ಮ ಕೋರಿಕೆಯನ್ನು ಹಿಂಪಡೆಯುತ್ತೇವೆ ಎಂಬುದಾಗಿ ಬರೆದಿದ್ದರು. ಇಂತಹ ಭಾವಾನಾತ್ಮಕ ಪತ್ರವನ್ನು ಓದಿದ… Read More ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ