ಜಟೋಲಿ ಶಿವ ಮಂದಿರ

ನಮ್ಮ ಭಾರತ ದೇಶ ದೇವಾಲಯಗಳ ಬೀಡು. ಪೂರ್ವದ ಅಟಕ್ ನಿಂದ ಪಶ್ಚಿಮದ ಕಟಕ್ ವರೆಗೂ ಮತ್ತು ದಕ್ಷಿಣದ ಕನ್ಯಾಕುಮಾರಿಯಿಂದ ಹಿಡಿದು ಉತ್ತರದ ಕಾಶ್ಮೀರದ ವರೆಗೂ ಎಲ್ಲೇ ಯಾವುದೇ ಹಳ್ಳಿಗಳಿಗೆ ಭೇಟಿ ನೀಡಿದರೂ ಅಲ್ಲೊಂದು ದೇವಾಲಯಗಳನ್ನು ಕಾಣಬಹುದಾಗಿದೆ. ಬಹುತೇಕ ದೇಲಯಗಳು ಸಹಸ್ರಾರು ವರ್ಷಗಳಿಂದಲೂ ಅಲ್ಲಿದ್ದು ಅನೇಕ ವೈಶಿಷ್ಟ್ಯತೆ ಮತ್ತು ನಿಗೂಢತೆಗಳಿಂದ ಕೂಡಿರುತ್ತದೆ ಇಂದೂ ಸಹಾ ಅಂತಹದೇ ಐತಿಹ್ಯವಿರುವ ನಿಗೂಢವೆಂದೇ ಪರಿಗಣಿಸಲಾದ ಶಿವನ ದೇವಾಲಯದ ದರ್ಶನ ಮಾಡುವುದರ ಜೊತೆಗೆ ಆ ದೇವಾಲಯದ ಐತಿಹ್ಯ, ಅಲ್ಲಿನ ಸ್ಥಳ ಪುರಾಣ ಮತ್ತು ವಿಶೇಷತೆಗಳನ್ನು… Read More ಜಟೋಲಿ ಶಿವ ಮಂದಿರ

ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ದೇವಸ್ಥಾನಗಳಿಗೆ ಏಕೆ ಹೋಗಬೇಕು?

ದೇವಾಲಯಗಳು ನಮ್ಮ ಸನಾತನ ಧರ್ಮದ ಶ್ರಧ್ಧಾ ಕೇಂದ್ರಗಳು. ನಮ್ಮ ಧರ್ಮದ ಬಹುತೇಕ ಧಾರ್ಮಿಕ ಚಟುವಟಿಕೆಗಳ ಮುಖ್ಯಕೇಂದ್ರವೇ ದೇವಸ್ಥಾನಗಳಾಗಿರುತ್ತವೆ. ಹಾಗಾಗಿಯೇ ಪ್ರತಿಯೊಂದು ಹಳ್ಳಿಗಳಲ್ಲಿಯೂ ಒಂದಲ್ಲಾ ಒಂದು ದೇವಾಲಯಗಳು ಇದ್ದೇ ಇರುತ್ತವೆ. ಅದು ಬ್ರಹ್ಮ, ವಿಷ್ಣು ಇಲ್ಲವೇ ಮಹೇಶ್ವರನ ದೇವಾಯಲಗಳು ಆಗಿರಬಹುದು ಇಲ್ಲವೇ ಎಲ್ಲರೂ ಇಷ್ಟ ಪಡುವ ಕಾಳೀ, ದುರ್ಗೇ,ಗಣೇಶ ಇಲ್ಲವೇ ಆಂಜನೇಯನ ದೇವಸ್ಥಾನವೇ ಆಗಿರಬಹುದು ಇಲ್ಲವೇ ಸ್ಥಳೀಯ ಗ್ರಾಮದೇವತೆಯೇ ಆಗಿರಬಹುದು. ಒಟ್ಟಿನಲ್ಲಿ ಹಿಂದೆಲ್ಲಾ ಊರಿಗೊಂದು ದೇವಸ್ಥಾನ, ಕೆರೆ, ಅರಳೀ ಕಟ್ಟೆಗಳು ಕಡ್ಡಾಯವಾಗಿದ್ದು, ಊರಿಗೆ ಬಂದವಳು ನೀರಿಗೆ ಬಾರದಿರುವಳೇ ಎನ್ನುವ… Read More ದೇವಸ್ಥಾನಗಳಿಗೆ ಏಕೆ ಹೋಗಬೇಕು?

ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಅವನೊಬ್ಬ ಅಸಾಧಾರಣ ಹುಡುಗನಾಗಿದ್ದ. ಓದಿನಲ್ಲಂತೂ ಸದಾಕಾಲವೂ ಚುರುಕು. ಗಣಿತ ಮತ್ತು ವಿಜ್ಞಾನದಲ್ಲಂತೂ ಸದಾಕಾಲವೂ 100% ಅಂಕಗಳನ್ನು ಗಳಿಸುತ್ತಿದ್ದ ಕಾರಣ ಸಹಜವಾಗಿ ಐಐಟಿ ಮದ್ರಾಸ್‌ಗೆ ಆಯ್ಕೆಯಾಗಿದ್ದಲ್ಲದೇ ಅಲ್ಲೂ ಸಹಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಉನ್ನತ ವಿದ್ಯಾಭ್ಯಾಸಕ್ಕೆಂದು ಅಮೇರಿಕಾದ ಕ್ಯಾಲಿಫೋರ್ನಿಯಾದ ವಿಶ್ವವಿದ್ಯಾಲಯ ಒಂದರಲ್ಲಿ ಎಂಬಿಎ ಪದವಿಯ ನಂತರ ಆರಂಕಿಯ ಸಂಬಳದ ಉದ್ಯೋಗವನ್ನು ಗಿಟ್ಟಿಸಿ ಅಲ್ಲಿಯೇ ನೆಲೆಸಿದ. ಕೆಲವು ವರ್ಷಗಳ ನಂತರ ಕರ್ನಾಟಕ್ಕೆ ಬಂದು, ಮನೆಯವರು ನೋಡಿದ ಕನ್ನಡತಿಯನ್ನೇ ವಿವಾಹವಾಗಿ ಅಮೇರಿಕಾದಲ್ಲಿ 5 ಕೊಠಡಿಗಳು ಇರುವಂತಹ ದೊಡ್ಡದಾದ ಮನೆ ಮತ್ತು ಐಷಾರಾಮಿ… Read More ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ

ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಸಂಸ್ಕೃತ ಪ್ರಪಂಚದ ಅತ್ಯಂತ ಪುರಾತನ ಭಾಷೆ ಎಂಬುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಬಹುತೇಕ ಭಾಷೆಗಳಿಗೆ ಮೂಲಭಾಷೆಯೇ ಸಂಸ್ಕೃತ ಎಂಬ ಅಗ್ಗಳಿಕೆಯೂ ಇದೆ. ಎಲ್ಲದ್ದಕ್ಕಿಂತಲೂ  ಸಂಸ್ಕೃತದ ಭಾಷೆಯ ಮೂಲ ನಮ್ಮ ಭಾರತ ಮತ್ತು ನಮ್ಮ ಸನಾತನ ಧರ್ಮದ ಅಷ್ಟೂ ವೇದಶಾಸ್ತ್ರಗಳು ಮತ್ತು ಪುರಾಣಗಳ ಮೂಲ ಕೃತಿಗಳು ಸಂಸ್ಕೃತದಲ್ಲಿಯೇ ಇದೆ ಎನ್ನುವುದು ಗಮನಾರ್ಹ.  ಹೀಗೆ ಪುರಾಣ ಗ್ರಂಥಗಳು ಸಂಸ್ಕೃತದಲ್ಲಿ ಇದೆ ಎಂದಾದಲ್ಲಿ ಅಂದಿನ ಕಾಲದಲ್ಲಿ ಎಲ್ಲಡೆಯೂ ಸಂಸ್ಕೃತ  ಆಡು ಭಾಷೆಯಾಗಿತ್ತು ಮತ್ತು ದೇವರು ಮತ್ತು ಮಾನವರ ನಡುವಿನ ವ್ಯಾವಹಾರಿಕ  ಸಂಭಾಷಣೆಯ… Read More ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಮಟ್ಟಿಗೆ ಕೇಳುತ್ತಿರುವುದು ಎರಡು ವಿಷಯ ಒಂದು ಕೊರೋನ ಕುರಿತಾದ ವಿಷಯವಾದರೆ, ಇನ್ನೊಂದು ಬ್ರಾಹ್ಮಣ್ಯ ಮತ್ತು ಬ್ರಾಹ್ಮಣರ ವಿರುದ್ಧ ಅನಾವಶ್ಯಕವಾಗಿ ತಮ್ಮ ತಮ್ಮ ತೆವಲುಗಳನ್ನು ತೀರಿಸಿಕೊಳ್ಳುವಷ್ಟು ವಾಚಾಮಗೋಚರವಾಗಿ ಕಂಡ ಕಡೆಗೆಳಲ್ಲಿ ಬೈದಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಮಂದಿಗಳೇ ಹೆಚ್ಚಾಗಿದ್ದಾರೆ. ಮೇಲೆ ತಿಳಿಸಿದ ಎರಡೂ ವಿಷಯಗಳೂ ಒಂದಕ್ಕೊಂದು ಪೂರಕವಾಗಿದೆ ಅಂದ್ರೇ ಆಶ್ಚರ್ಯವಾಗುತ್ತದೆ ಅಲ್ವೇ? ನಿಜ ಹೇಳ್ಬೇಕು ಅಂದ್ರೇ, ಬಹಳ ಹಿಂದಿನಿಂದಲೂ ನಮ್ಮಲ್ಲಿ ತಮ್ಮ ಕರ್ಮಾನುಸಾರವಾಗಿ ವರ್ಣಾಶ್ರಮಗಳು ರೂಢಿಯಲ್ಲಿ ಇತ್ತೇ ಹೊರತು ಅವು ಜನ್ಮತಃ ಆಚರಣೆಯಲ್ಲಿರಲಿಲ್ಲ, ಯಾರು ಬ್ರಹ್ಮತ್ವವನ್ನು… Read More ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಕೊರೋನಾ ಬಂದು ಇಡೀ ಪ್ರಪಂಚವೇ ಕಳೆದು ಒಂದೂವರೆ ವರ್ಷಗಳಿಂದ ಲಾಕ್ಡೌನ್ ಆಗಿರುವಾಗ ಅರೇ ಇದೇನಪ್ಪಾ ಇಂತಹ ಶೀರ್ಷಿಕೆ ಎಂದು ಆಶ್ಚರ್ಯ ಪಡುತ್ತಿದ್ದರೆ ನಿಮಗೊಂದು ಅಚ್ಚರಿಯ ಸಂಗತಿಗಳೊಂದಿಗೆ ನಿಮಗೆ ಸಾದರ ಪಡಿಸುವ ಸಣ್ಣದಾದ ಪ್ರಯತ್ನ ಕೊರೋನಾ ವಕ್ಕರಿಸುವುದಕ್ಕಿಂತಲೂ ಮುಂಚೆ, ಎಲ್ಲರ ಮನೆಗಳಲ್ಲಿ ನಡೆಯುತ್ತಿದ್ದ ಸಣ್ಣ ಪುಟ್ಟ ಸಮಾರಂಭಗಳೂ ಸಹಾ ಬಹಳ ಅದ್ದೂರಿಯಿಂದ ನೂರಾರು ಜನರ ಸಮ್ಮುಖದಲ್ಲಿ ನಡೆಯುತ್ತಿತ್ತು. ಇನ್ನೂ ಮದುವೆ ಮುಂಜಿ ಉಪನಯನಗಳಲ್ಲಂತೂ ಸಾವಿರಾರು ಜನರನ್ನು ಸೇರಿಸಿ ನಭೂತೋ ನ ಭವಿಷ್ಯತಿ ಎನ್ನುವಂತೆ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಜಾಂ… Read More ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ