ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ

ನಾವೆಲ್ಲಾ ಚಿಕ್ಕವರಿದ್ದಾಗ ನಾವೇನಾದರೂ ತಪ್ಪು ಮಾಡಿದಲ್ಲಿ ಅಥವಾ ಹಠ ಮಾಡಿದಲ್ಲಿ ಪೋಲೀಸರಿಗೆ ಹಿಡಿದು ಕೊಡ್ತೀವಿ ಎಂದು ಭಯ ಪಡಿಸುತ್ತಿದ್ದದ್ದು ಸಹಜವಾಗಿತ್ತು. ಇತ್ತೀಚೆಗೆ ಸಣ್ ವಯಸ್ಸಿನ ಮಗುವೊಂದು ದಾರಿಯಲ್ಲಿ ಹಠ ಮಾಡುತ್ತಿದ್ದಾಗ ಅಲ್ಲೇ ಹೋಗುತ್ತಿದ್ದ ಪೋಲೀಸರನ್ನು ತೋರಿಸಿ ಇದೇ ರೀತಿ ಗಲಾಟೆ ಮಾಡುತ್ತಿದ್ದರೆ, ಆ ಪೋಲೀಸರಿಗೆ ಹಿಡಿದು ಕೊಡುತ್ತೇನೇ ಎಂಬುದನ್ನು ಕೇಳಿಸಿಕೊಂಡ ಆ ಪೋಲಿಸರು ಅಮ್ಮಾ, ಸುಖಾ ಸುಮ್ಮನೇ ಮಕ್ಕಳಿಗೆ ಪೋಲೀಸರನ್ನು ಕಂಡರೆ ಭಯ ಹುಟ್ಟಿಸ ಬೇಡಿ. ನಾವೂ ಸಹಾ ಸಹಜವಾದ ಮನುಷ್ಯರೇ ಎಂದು ಹೇಳಿದ್ದಲ್ಲದೇ ತಮ್ಮ ಜೋಬಿನಲ್ಲಿದ್ದ… Read More ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ

ಕಾರ ಹುಣ್ಣಿಮೆ

ನವರಾತ್ರಿಯಲ್ಲಿ ಆಯುಧಗಳಿಗೆ ಪೂಜೆ ಮಾಡುವಂತೆ, ಜೇಷ್ಠ ಮಾಸದ ಹುಣ್ಣಿಮೆಯಂದು ಉತ್ತರ ಕರ್ನಾಟಕದ ರೈತಾಪಿ ಜನರು ಮಳೆಗಾಲದ ಮುಂಚೆ ಸಡಗರ ಸಂಭ್ರಮಗಳಿಂದ ತಮ್ಮ ದನ ಕರುಗಳೊಂದಿಗೆ ಆಚರಿಸುವ ಕಾರಹುಣ್ಣಿಮೆಯ ಬಗ್ಗೆ ಸವಿರವಾದ ವಿವರಗಳು ಇದೋ ನಿಮಗಾಗಿ… Read More ಕಾರ ಹುಣ್ಣಿಮೆ

ಬಿ ವಿಜಯಕೃಷ್ಣ

ಅದು ಎಪ್ಪತ್ತು ಮತ್ತು ಎಂಭತ್ತರ ದಶಕ. ಕರ್ನಾಟಕ ರಾಜ್ಯದ ರಣಜಿ ತಂಡದಲ್ಲಿ ಘಟಾನುಘಟಿಗಳು ಇದ್ದಂತಹ ಕಾಲ. ಕಾರ್ಲ್ಟನ್ ಸಲ್ಡಾನ, ಬಿನ್ನಿ, ಅಭಿರಾಂ, ಸುಧಾಕರ್ ರಾವ್, ಎ ವಿ ಜಯಪ್ರಕಾಶ್, ಬ್ರಿಜೇಶ್ ಪಟೇಲ್, ಅವಿನಾಶ್ ವೈದ್ಯ, ರಘುರಾಂ ಭಟ್ ಅವರುಗಳು ಇದ್ದ ಕಾಲ. ಅವರ ಜೊತೆಯಲ್ಲಿಯೇ ಮತ್ತೊಬ್ಬ ಸಧೃಢವಾದ ಚಂಡು ಇರುವುದೇ ಬಾರೀ ಹೊಡೆತಕ್ಕೇ ಎಂದು ಭರ್ಜರಿಯಾಗಿ ಸಿಕ್ಸರ್ ಗಳನ್ನು ಬಾರಿಸುತ್ತಿದ್ದ ಇನ್ನು ಚಂಡನ್ನು ಕೈಯಲ್ಲಿ ಹಿಡಿದು ಬೋಲಿಂಗ್ ಮಾಡಿದರೆ ದಾಂಡಿಗರನ್ನು ವಂಚಿಸಿ ಸೀದಾ ವಿಕೆಟ್ ಉರುಳಿಸುತ್ತಿದ್ದಂತಹ ಚಾಣಾಕ್ಷ… Read More ಬಿ ವಿಜಯಕೃಷ್ಣ

ಹಾರುವ ಸಿಖ್, ಮಿಲ್ಕಾ ಸಿಂಗ್

ಅದು 1960ರ ಸಮಯ ರೋಮ್‌ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಲಿದೆ. ಎಂದಿನಂತೆ ಭಾರತದಿಂದಲೂ ಕೆಲ ಆಟಗಾರರು ಹೋದಾ ಪುಟ್ಟಾ ಬಂದಾ ಪುಟ್ಟಾ ಎನ್ನುವಂತೆ ಬರಿಗೈಯಲ್ಲಿ ವಾವಾಸಾಗುತ್ತಿದ್ದ ದಿನಗಳಾದರೂ ಈ ಒಲಿಂಪಿಕ್ಸ್ ಭಾರತೀಯರ ಪಾಲಿಗೆ ಅತ್ಯಂತ ವಿಶೇಷವಾಗಿತ್ತು. ಭಾರತದ ಪರ 31ರ ತರುಣ ಅಥ್ಲೆಟಿಕ್ಸ್ ನಲ್ಲಿ ಏನಾದರೂ ಸಾಧಿಸಬಹುದು ಎಂಬ ನಿರೀಕ್ಷೆ ಇತ್ತು. ಏಕೆಂದರೆ 1956ರಲ್ಲಿ ನಡೆದ ಮೆಲ್ಬೊರ್ನ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಮೊದಲಬಾರಿಗೆ ಭಾಗವಹಿಸಿದ್ದ ಇದೇ ಓಟಗಾರ, ಸಾಕಷ್ಟು ಅನುಭವವಿಲ್ಲದ ಕಾರಣ ಅಷ್ಟೆನೂ ಸಾಧನೆ ಮಾಡಲಾಗದಿದ್ದರೂ, ಆ ಕ್ರೀಡಾಕೂಟದಿಂದ ಕಲಿತು,… Read More ಹಾರುವ ಸಿಖ್, ಮಿಲ್ಕಾ ಸಿಂಗ್

ನೀರು ಓಕೆ. ಕೃತಕ‌ ಪಾನೀಯ ಏಕೆ?

ಪೋರ್ಚುಗಲ್ ನಲ್ಲಿ ನಡೆಯುತ್ತಿರುವ ಯೂರೋ 2020 ಟೂರ್ನಿಯಲ್ಲಿ ಪೋರ್ಚುಗಲ್ ತನ್ನ ಮೊದಲ ಪಂದ್ಯವನ್ನು ಆಡುತ್ತಲಿತ್ತು. ಸಹಜವಾಗಿ ಪಂದ್ಯ ಆಡುವ ಮುನ್ನ ತಂಡದ ಮ್ಯಾನೇಜರ್ ಮತ್ತು ತಂಡದ ನಾಯಕರ ಪ್ರೆಸ್ ಕಾನ್ಫರೆನ್ಸ್ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ. ಈ ಸಂವಾದ ಪ್ರಪಂಚಾದ್ಯಂತ ಪ್ರಸಾರವಾಗುವ ಕಾರಣ, ಟೂರ್ನಿಯ ಪ್ರಾಯೋಜಕರಾದ ಕೋಕೋಕೋಲ ಇದರ ಪ್ರಯೋಜನವನ್ನು ಪಡೆಯುವ ಸಲುವಾಗಿ ಸಂವಾದ ನಡೆಸುವವರ ಟೇಬಲ್ ಮುಂದೆ ಸಣ್ಣದಾದ ಎರಡು ಕೋಕ್ ಬಾಟಲ್ ಗಳನ್ನು ಇಟ್ಟಿದ್ದರು. ಮೊದಲು ಈ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ ಪೋರ್ಚುಗಲ್ ತಂಡದ ಮ್ಯಾನೇಜರ್… Read More ನೀರು ಓಕೆ. ಕೃತಕ‌ ಪಾನೀಯ ಏಕೆ?

ಸಮಸ್ಯೆ ಒಂದು ಪರಿಹಾರ ನೂರು

ಕಳೆದ ಒಂದು ವರ್ಷದಿಂದಲೂ ಕೊರೋನಾ ಮಾಹಾಮಾರಿಯಿಂದಾಗಿ ಇಡೀ ಪ್ರಪಂಚವೇ online ಮೂಲಕ ನಡೆದುಕೊಂಡು ಹೋಗುತ್ತಿದೆ. ನಮ್ಮ ದೇಶದ ವಿದ್ಯಾರ್ಥಿಗಳೂ ಇದಕ್ಕೆ ಹೊರತಾಗಿಲ್ಲ. ಹಳ್ಳಿಗಾಡುಗಳಲ್ಲಂತೂ ಸ್ವಲ್ಪ ಜೋರಾದ ಗಾಳಿ ಇಲ್ಲವೇ ಮಳೆ ಬಂದಿತೆಂದರೂ ಸಾಕು, ವಿದ್ಯುತ್ ಕಡಿತವಾಗಿ ನೆಟ್ವರ್ಕ್ ಸಮಸ್ಯೆ ಕಾಣಿಸಿ ಕೊಳ್ಳುತ್ತದೆ. ಇಲ್ಲೊಂದು ಗುಡ್ಡಗಾಡಿನ ಹಳ್ಳಿಯ ಹುಡುಗಿ ತನ್ನ ತರಗತಿಗಳು ಆನ್‌ಲೈನ್ ‌ನಲ್ಲಿ ಆರಂಭವಾಗಿದೆ. ಜೋರಾದ ಮಳೆಯಿಂದಾಗಿ ಮನೆಯಲ್ಲಿ ನೆಟ್ವರ್ಕ್ ಇಲ್ಲ. ಅರೇ.. ನೆಟ್ವರ್ಕ್ ಇಲ್ಲಾ ಎಂದು ಗೊಣಗಾಡದೇ ಕೂಡಲೇ, ಅಪ್ಪಾ ಮತ್ತು ತಂಗಿಯ ಜೊತೆ ಮನೆಯ… Read More ಸಮಸ್ಯೆ ಒಂದು ಪರಿಹಾರ ನೂರು

ಮಾವಿನಕಾಯಿ, ಮೆಂತ್ಯ ಸೊಪ್ಪಿನ ತೊವ್ವೆ

ಅದೇ ಸಾರು ಹುಳೀ ಪಲ್ಯಗಳನ್ನು ತಿಂದು ಜಡ್ಡು ಹೋಗಿರುವ ನಾಲಿಗೆಗೆ ಸ್ವಲ್ಪ ಹುಳೀ ಮತ್ತು ಖಾರದ ಜೊತೆಗೆ ಒಗರು ಸೇರಿರುವ ಹುಳಿ ಮಾವಿನ ಕಾಯಿಯ ಜೊತೆಗೆ ವರ್ಷದ ಎಲ್ಲಾ ಕಾಲದದಲ್ಲಿಯೂ ಎಲ್ಲೆಡೆಯಲ್ಲಿಯೂ ಅತೀ ಸುಲಭದ ದರದಲ್ಲಿ ಸಿಗುವ, ಬಹಳ  ಔಷಧೀಯ ಗುಣಗಳಿರುವ ಮೆಂತ್ಯದ ಸೊಪ್ಪು ಸೇರಿಸಿ ಅತ್ಯಂತ ರುಚಿಕರವಾದ ಮಾವಿನಕಾಯಿ ಮೆಂತ್ಯ ಸೊಪ್ಪಿನ ತೊವ್ವೆ ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ  ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಮಾವಿನಕಾಯಿ ಮೆಂತ್ಯ ಸೊಪ್ಪಿನ ತೊವ್ವೆ ತಯಾರಿಸಲು ಬೇಕಾಗುವ ಪದಾರ್ಥಗಳು… Read More ಮಾವಿನಕಾಯಿ, ಮೆಂತ್ಯ ಸೊಪ್ಪಿನ ತೊವ್ವೆ

ಸಂಚಾರಿ ವಿಜಯ್

ಬದುಕು ಜಟಕಾಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು.| ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ || ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ… Read More ಸಂಚಾರಿ ವಿಜಯ್

ಡಾ. ಸುನೀಲ್ ಕುಮಾರ್ ಹೆಬ್ಬಿ

ಶರೀರೇ ಜುರ್ಜರೀ ಭೂತೇ ವ್ಯಾಧಿಗ್ರಸ್ತೇ ಕಳೇವರೇ | ಔಷಧೀ ಜಾಹ್ನವೀ ತೋಯಂ, ವೈದ್ಯೋ ನಾರಾಯಣೋಹರಿಃ|| ಎಂಬ ಶ್ಲೋಕವನ್ನು ಸಾಧಾರಣವಾಗಿ ಎಲ್ಲಾ ದೇವಾಲಯಗಳಲ್ಲಿ ಪುರೋಹಿತರು ತೀರ್ಥ ಕೊಡುವಾಗ ಹೇಳುವುದನ್ನು ಕೇಳಿರುತ್ತೇವೆ. ಇದರ ಅರ್ಥ ಹೀಗಿದೆ. ಶರೀರವು ವ್ಯಾಧಿಗ್ರಸ್ತವೂ ಜರ್ಜರಿತವೂ ಆಗಿ ಕಳೇಬರದಂತಾಗಿ ಹೋದಾಗಾ, ಗಂಗಾ ಜಲವೇ ಔಷಧಿ, ಹರಿ ಅರ್ಥಾತ್ ಶ್ರೀ ಮನ್ನಾರಾಯಣನೇ ವೈದ್ಯನಾಗುತ್ತಾನೆ ಎಂದು ಭಗವಂತನನ್ನು ಹಾಡಿ ಹೊಗಳುವುದೇ ಆಗಿದೆ. ಸದ್ಯದ ಕಲಿಗಾಲದಲ್ಲಿ ಭಗವಂತನನ್ನು ಮರೆತು ಲೌಕಿಕದಲ್ಲೇ ಕಾಲ ಹರಣ ಮಾಡುತ್ತಿರುವವರು ಕಾಯಿಲೆಗೆ ತುತ್ತಾಗಿ ಅವರ ಶರೀರ… Read More ಡಾ. ಸುನೀಲ್ ಕುಮಾರ್ ಹೆಬ್ಬಿ