ಶಂಖನಾದ ಅರವಿಂದ್

ಜನರು ತಮ್ಮೆಲ್ಲಾ ದೈನಂದಿನದ ಕಷ್ಟ ಸುಖಃಗಳನ್ನು ಮರೆಯುವುದಕ್ಕಾಗಿ ಮನೋರಂಜನೆಗಾಗಿ ಕೆಲ ಕಾಲ ನಾಟಕ ಮತ್ತು ಚಲನಚಿತ್ರಗಳನ್ನು ನೋಡಿ ಅದರಲ್ಲಿ ಬರುವ ನಾಯಕ ಮತ್ತು ನಾಯಕಿಯರೊಂದಿಗೆ ತಮ್ಮ ಬದುಕನ್ನು ಹೋಲಿಸಿಕೊಂಡು ತಮ್ಮ ಕಷ್ಟಗಳನ್ನು ಮರೆಯುತ್ತಾರೆ. ಇವೆಲ್ಲವೂ ನಾಯಕ ನಾಯಕಿ ಪ್ರಧಾನವಾಗಿದ್ದರೂ ಅವರಿಬ್ಬರ ಕಥೆಯ ಏಕತಾನತೆಯನ್ನು ತಡೆಯುವ ಸಲುವಾಗಿ ನಾಯಕ ಮತ್ತು ನಾಯಕಿಯ ಕಥೆಗೆ ಸಮಾನಾಂತರವಾಗಿ ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡಿರುತ್ತಾರೆ. ಹಾಗಾಗಿ ಅಂದೂ ಇಂದು ಮತ್ತು ಮುಂದೆಯೂ ಹಾಸ್ಯನಟರ ಕಾಲ್ ಶೀಟ್ ಮೊದಲು ಪಡೆದುಕೊಂಡು ನಂತರ ನಾಯಕರನ್ನು ಆರಿಸಿಕೊಳ್ಳುವ ಸಂಪ್ರದಾಯ… Read More ಶಂಖನಾದ ಅರವಿಂದ್

ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು

ನಂಜನಗೂಡಿನ ರಸಬಾಳೆ, ತಂದಿಹೆ ಕೊಡಗಿನ ಕಿತ್ತೀಳೆ ಬೀದರ ಜಿಲ್ಲೆಯ ಸೀಬೆಯ, ಹಣ್ಣು ಬೆಂಗಳೂರಿನ ಸೇಬಿನ ಹಣ್ಣು || ಕೊಳ್ಳಿರಿ ಹಿಗ್ಗನು ಹರಿಸುವವು,ಕಲ್ಲುಸಕ್ಕರೆಯ ಮರೆಸುವವು ಕೊಳ್ಳಿರಿ ಮಧುಗಿರಿ ದಾಳಿಂಬೆ, ಬೆಳವಲ ಬಯಲಿನ ಸಿಹಿಲಿಂಬೆ || ಬೆಳಗಾವಿಯ ಸವಿ ಸಪೋಟ. ದೇವನಹಳ್ಳಿಯ ಚಕ್ಕೋತ ನಾಲಿಗೆ ಬರವನು ಕಳೆಯುವವು, ದೇಹದ ಬಲವನು ಬೆಳೆಸುವವು || ಗಂಜಾಮ್ ಅಂಜೀರ್, ತುಮಕೂರ್ ಹಲಸು, ಧಾರವಾಡದ ಆಪೂಸು, ಮಲೆನಾಡಿನ ಅನಾನಸು ಸವಿಯಿರಿ ಬಗೆಬಗೆ ಹಣ್ಣುಗಳ ಕನ್ನಡ ನಾಡಿನ ಹಣ್ಣುಗಳ || ಸದ್ಯಕ್ಕೆ ಆಡಳಿತಾತ್ಮಕವಾಗಿ ಕೇರಳದ ಭಾಗವಾಗಿದ್ದರೂ… Read More ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು

ಬಾಳೇ ದಿಂಡು ಕೋಸಂಬರಿ

ಹೇಳಿ ಕೇಳಿ ಇದು ಬೇಸಿಗೆ ಕಾಲ ಬಿಸಿಲು ಬಹಳವಿರುವ ಕಾರಣ ಈ ಸಮಯದಲ್ಲಿ ದೇಶವನ್ನು ತಂಪಾಗಿ ಮತ್ತು ಸಧೃಢವಾಗಿ ಇಟ್ಟುಕೊಳ್ಳಬೇಕಾಗಿದೆ. ಹಾಗಾಗಿ ತೆಂಗಿನ ಮರ ಕಲ್ಪವೃಕ್ಷವಾದರೆ, ಬಾಳೆ ಗಿಡವನ್ನು ಕಾಮಧೇನು ಎಂದರೂ ತಪ್ಪಾಗದು. ತೆಂಗಿನ ಮರದಂತೆಯೇ, ಬಾಳೇಗಿಡದ ಪ್ರತಿಯೊಂದು ಭಾಗವೂ ಹಲವಾರು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಬಾಳೇ ಹೂವು, ಬಾಳೇಕಾಯಿ, ಬಾಳೇಹಣ್ಣು, ಬಾಳೇ ದಿಂಡುಗಳ ಮೂಲಕ ಬಗೆ ಬಗೆಯ ಖಾದ್ಯವನ್ನು ತಯಾರಿಸಬಹುದಾದರೆ, ಬಾಳೇ ಪಟ್ಟೆಯಲ್ಲಿ ನಾರು ತೆಗೆಯುವುದಕ್ಕೆ, ಮತ್ತು ವಸ್ತುಗಳನ್ನು ಪ್ಯಾಕ್ ಮಾಡಲು ಬಳಸ ಬಹುದಾಗಿದೆ. ದಕ್ಷಿಣ… Read More ಬಾಳೇ ದಿಂಡು ಕೋಸಂಬರಿ

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ಉಲ್ಟೇ ಹನುಮಾನ್ ಮಂದಿರ್

ಭಕ್ತಿ ಅಂದ ತಕ್ಷಣ ನಮ್ಮ ಮನಸ್ಸಿಗೆ ಥಟ್ ಅಂತಾ ನೆನಪಿಗೆ ಬರುವುದೇ ರಾಮನ ಭಕ್ತಾಗ್ರೇಸರ ಅಂಜನೀ ಪುತ್ರ ಪವನಸುತ ಹನುಮಾನ್ ಎಂದರೆ ಅತಿಶಯೋಕ್ತಿಯೇನಲ್ಲ. ಸೀತಾಮಾತೆಯ ಅನ್ವೇಷಣೆಯ ಸಂದರ್ಭದಲ್ಲಿ ಸಮುದ್ರೋಲಂಘನವನ್ನು ಮಾಡಿ ಲಂಕೆಗೆ ಹೋಗಿ ಸೀತಾಮಾತೆಯನ್ನು ಹುಡುಕಿಕೊಂಡ ಬಂದ ಭಜರಂಗಬಲಿ ಇವನು. ಮಹಾನ್ ಪರಾಕ್ರಮಿಯಾದ ಕಾರಣಕ್ಕಾಗಿಯೇ, ಪ್ರಪಂಚಾದ್ಯಂತ ಹನುಮಂತನ ಬೃಹತ್ತಾದ ಪ್ರತಿಮೆಗಳನ್ನು ಎಲ್ಲೆಡೆಯಲ್ಲಿಯೂ ಕಾಣಬಹುದಾಗಿದೆ. ಶಕ್ತಿ, ಭಕ್ತಿ ಮತ್ತು ಬುದ್ಧಿವಂತಿಕೆಯ ಪ್ರತೀಕವೆಂದೇ ಪರಿಗಣಿಸಲ್ಪಟ್ಟ ಆಂಜನೇಯನ ನಿಂತಿರುವ ಇಲ್ಲವೇ ಸಂಜೀವಿನ ಪರ್ವತವನ್ನು ಹೊತ್ತಿರುವ ವಿಗ್ರಹವನ್ನು ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಮತ್ತು… Read More ಉಲ್ಟೇ ಹನುಮಾನ್ ಮಂದಿರ್

ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಹೇಳಿ ಕೇಳಿ ಇದು ಬೇಸಿಗೆ ಕಾಲ. ಬೇಸಿಗೆ ಕಾಲದಲ್ಲಿ ತಣ್ಣಗೆ ಇರುವ ಪದಾರ್ಥಗಳನ್ನು ತಿನ್ನುವ ಮತ್ತು ಕುಡಿಯುವ ಮೂಲಕ ದೇಹವನ್ನು ತಣ್ಣಗೆ ಇಟ್ಟುಕೊಳ್ಳಲು ಬಯಸುತ್ತೇವೆ. ಇದಕ್ಕೆ ಅನುಗುಣವಾಗಿ ನಮ್ಮ ಪ್ರಕೃತಿಯೂ ನಮ್ಮೊಂದಿಗೆ ಇದ್ದು ಬೇಸಿಗೆ ಕಾಲದಲ್ಲಿಯೇ ತಣ್ಣನೆ ಹಣ್ಣುಗಳಾದ ಕಲ್ಲಂಗಡಿ ಮತ್ತು ಕರ್ಬೂಜ (ಸಿದ್ದೋಟೆ ಹಣ್ಣು) ರಸ್ತೆಗಳ ಬದಿಗಳಲ್ಲಿಯೂ ಮತ್ತು ಮಾರುಕಟ್ಟೆಗಳಲ್ಲಿಯೂ ಸಿಗುತ್ತಿತ್ತು. ಉಳ್ಳವರು ಉಂಡೇ ಹಣ್ಣುಗಳನ್ನೇ ಕೊಂಡುಕೊಳ್ಳುತಿದ್ದರೆ, ಕೈಯ್ಯಲ್ಲಿ ಕಾಸಿಲ್ಲದವರು ಕತ್ತರಿಸಿಟ್ಟ ಹಣ್ಣುಗಳನ್ನು ತಿಂದು ತಮ್ಮ ನಾಲಿಗೆಯ ಬರವನ್ನು ಕಳೆದುಕೊಳ್ಳುತ್ತಿದ್ದರು. ಆಗೆಲ್ಲಾ ಬೇಸಿಗೆಯ ಸಮಯದಲ್ಲಿ ನದಿಗಳು… Read More ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಅಪ್ಪೆ ಸಾರು (ಮಾವಿನ ಸಾರು)

ಹೇಳಿ ಕೇಳಿ ಇದು ಮಾವಿನ ಕಾಯಿ ಕಾಲ. ಈಗಷ್ಟೇ ಮಾವಿನ ಕಾಯಿಗಳು ಚೆನ್ನಾಗಿ ಬಲಿತು ಇನ್ನೇನು ಕೆಲವೇ ದಿನಗಳಲ್ಲಿ ಬಗೆ ಬಗೆಯ ಮಾವಿನ ಹಣ್ಣುಗಳು ಲಗ್ಗೆ ಇಡಲು ಸಜ್ಜಾಗಿವೆ (ಈಗಾಗಲೇ ಕೆಲವು ಮಾವಿನ ಹಣ್ಣುಗಳು ಲಭ್ಯವಿದೆ) ಈ ಬಲಿತ ಮಾವಿನ ಕಾಯಿಯಲ್ಲಿ ಉಪ್ಪಿನಕಾಯಿ, ಮಾವಿನ ಕಾಯಿ ಚಿತ್ರಾನ್ನ, ಮಾವಿನಕಾಯಿ ಕಾಯಿ ಸಾಸಿವೆ ಮಾಡಿಕೊಂಡು ಚಪ್ಪರಿಸುತ್ತೇವೆ. ಇಂದು ಉತ್ತರ ಕನ್ನಡ ಮತ್ತು ಮಲೆನಾಡಿನ ಕಡೆಯಲ್ಲಿ ಇದೇ ಮಾವಿನ ಕಾಯಿಯನ್ನು ಬಳಸಿಕೊಂಡು ಮಾಡುವ ಧಿಡೀರ್ ಆಗಿ ಅಪ್ಪೆ ಸಾರು ಮಾಡುವ… Read More ಅಪ್ಪೆ ಸಾರು (ಮಾವಿನ ಸಾರು)

ಸಂಘ ಮತ್ತು ಸಂಘದ ಸ್ವಯಂಸೇವಕರು

ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು

ಹನುಮ ವರ್ಧಂತಿ

ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಪ್ರಭು ಶ್ರೀರಾಮನ ಪರಮ ಭಕ್ತ, ಅಂಜನಿಯ ಪುತ್ರ ಆಂಜನೇಯನು ಹುಟ್ಟಿದ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಈ ದಿನವನ್ನು ದೇಶಾದ್ಯಂತ ಹನುಮ ಜಯಂತಿ ಎಂದು ಆಚರಿಸುವಾಗ, ಇದೇನಿದು ಹನುಮ ವರ್ಧಂತಿ? ಎಂದು ಯೋಚಿಸುತ್ತಿರುವವರಿಗೆ ಇದೋ ಇಲ್ಲಿದೆ ಉತ್ತರ… Read More ಹನುಮ ವರ್ಧಂತಿ